ಕಾರವಾರ | ಕಾಡು ಪ್ರಾಣಿಗಳಿಗೆ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿ 7 ಎಮ್ಮೆಗಳು ಸಾವು

ಕಾರವಾರ: ಕಾಡು ಪ್ರಾಣಿಗಳಿಗೆ ಅಳವಡಿಸಿದ್ದ ವಿದ್ಯುತ್ ತಂತಿಗೆ ತಗುಲಿ ಇಬ್ಬರು ಕೃಷಿಕ ಮಹಿಳೆಯರ 7 ಜಾನುವಾರುಗಳು ದಾರುಣವಾಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕಿನ್ನರದಲ್ಲಿ ನಡೆದಿದೆ. ಈ ಬಗ್ಗೆ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗದ್ದೆ ಕೆಲಸದ ಜೊತೆ ಎಮ್ಮೆಗಳನ್ನು ಸಾಕಿ ಪಾಲನೆ ಮಾಡುತ್ತಿರುವ ಕಿನ್ನರದ ಮಸೀದಿ ಹತ್ತಿರದ … Continued

ಕಾರವಾರ | ತಲೆಮರೆಸಿಕೊಂಡಿದ್ದ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಮುಖ ಆರೋಪಿ ಬಂಧನ

ಕಾರವಾರ: 2020ರ ಕೆಜಿ ಹಳ್ಳಿ, ಡಿಜೆ ಹಳ್ಳಿ (KG Halli-DJ Halli) ಗಲಭೆ ಪ್ರಕರಣದ ಮೋಸ್ಟ್ ವಾಂಟೆಡ್ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಶಿರಸಿಯ ಟಿಪ್ಪು ನಗರ ನಿವಾಸಿ ಮೌಸೀನ್ ಅಲಿಯಾಸ್ ಇಮ್ತಿಯಾಝ್ ಶುಕುರ್ ಬಂಧಿತ ಆರೋಪಿ ಎಂದು ಹೇಳಲಾಗಿದೆ. ಆರೋಪಿ ಮೌಸೀನ್ ಪಿಎಫ್‌ಐ (PFI) ಕಾರ್ಯಕರ್ತನಾಗಿದ್ದ ಹಾಗೂ … Continued

ವಾಯು ವಿಹಾರಕ್ಕೆ ಹೋಗಿದ್ದ ಕಾರವಾರ ನಗರಸಭೆ ಮಾಜಿ ಸದಸ್ಯನ ಹತ್ಯೆ

ಕಾರವಾರ: ನಗರಸಭೆಯ ಮಾಜಿ ಸದಸ್ಯ ಸತೀಶ ಕೊಳಂಬಕರ ಅವರನ್ನು ನಡು ರಸ್ತೆಯಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಭಾನುವಾರ ನಗರದಲ್ಲಿ ಸಂಭವಿಸಿದೆ. ಸತೀಶ ಅವರು ಭಾನುವಾರ ಬೆಳಿಗ್ಗೆ ವಾಯು ವಿಹಾರಕ್ಕೆ ಮಾರುಕಟ್ಟೆ ಬಳಿ ಆಗಮಿಸಿದ್ದರು. ಇದನ್ನು ಗಮನಿಸಿದ ಹಂತಕ ನಗರದ ಬಿಎಸ್ ಎನ್ ಎಲ್ ಕಚೇರಿ ಸಮೀಪ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಇಬ್ಬರು … Continued

ಕಾರವಾರ ನೌಕಾನೆಲೆಯ ಮಾಹಿತಿ ಸೋರಿಕೆ: ಉತ್ತರ ಕನ್ನಡದ ಇಬ್ಬರು ಎನ್​ಐಎ ವಶಕ್ಕೆ

ಕಾರವಾರ : ಕಾರವಾರ ನೌಕಾನೆಲೆಯ ಮಾಹಿತಿ ಸೋರಿಕೆ ಮಾಡುತ್ತಿದ್ದ ಆರೋಪದಲ್ಲಿ ಉತ್ತರ ಕನ್ನಡ ಜಿಲ್ಲೆಯ ಇಬ್ಬರನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಾರವಾರ ತಾಲೂಕಿನ ಮುದುಗಾ ಗ್ರಾಮದ ವೇತನ ತಾಂಡೇಲ ಹಾಗೂ ಅಂಕೋಲಾ ತಾಲೂಕಿನ ಹಳವಳ್ಳಿಯ ಅಕ್ಷಯ ನಾಯ್ಕ ಎಂಬವರನ್ನು ಎನ್​ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಇಬ್ಬರ ಬಗ್ಗೆ … Continued

ವೀಡಿಯೊ…| ಕಾರವಾರ : ಮುರಿದುಬಿದ್ದ ಕಾಳಿ ನದಿಗೆ ಸೇತುವೆಯ ಕಂಬ

ಕಾರವಾರ: ಕಳೆದ ವರ್ಷ ಮಳೆಗಾಲದ ಸಮಯದಲ್ಲಿ ಕೆಲಭಾಗ ಕುಸಿದುಬಿದ್ದಿದ್ದ ಕಾರವಾರದ ಕಾಳಿ ನದಿಯ ಹಳೆಯ ಕಾಳಿ ಸೇತುವೆ ಸೇತುವೆ ಕಂಬ ದಿಢೀರ್​ ಕುಸಿದಿರುವ ಘಟನೆ ಗುರುವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಕಾರವಾರದ ರಾಷ್ಟ್ರೀಯ ಹೆದ್ದಾರಿ 66ಕ್ಕೆ ಸೇತುವೆ ಸಂಪರ್ಕ ಕಲ್ಪಿಸುವ ಈ ಸೇತುವೆಯ ರಾತ್ರಿಹೊತ್ತು ಕಂಬ​ ಮುರಿದು ಬಿದ್ದಿದ್ದರಿಂದ ಬಾರಿ ಅನಾಹುತ ತಪ್ಪಿದೆ. ತಡರಾತ್ರಿ … Continued

ದೀಪಾವಳಿ; ಕಾರವಾರ-ಬೆಂಗಳೂರು ವಿಶೇಷ ರೈಲು

ಬೆಂಗಳೂರು : ದೀಪಾವಳಿ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್ 30ರಂದು ಬೆಂಗಳೂರು- ಕಾರವಾರ ವಿಶೇಷ ರೈಲು ಸಂಚಾರವನ್ನು ಘೋಷಣೆ ಮಾಡಿದ್ದ ರೈಲ್ವೆ ಇದೀಗ ನವೆಂಬರ್ 3 ರಂದು ಕಾರವಾರದಿಂದ ಇನ್ನೊಂದು ವಿಶೇಷ ರೈಲು ಬಿಡಲಿದೆ. ನವೆಂಬರ್ 3 ರಂದು ಕಾರವಾರದಿಂದ ರೈಲು ಮಧ್ಯಾಹ್ನ 12ಕ್ಕೆ ಹೊರಟು ಮಾರನೇ ದಿನ ಬೆಳಗ್ಗೆ ನಾಲ್ಕು ಗಂಟೆಗೆ ಬೆಂಗಳೂರು ತಲುಪಲಿದೆ. … Continued

ಕಾರವಾರ : ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಉದ್ಯಮಿಯ ಹತ್ಯೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹಣಕೋಣದಲ್ಲಿ ಉದ್ಯಮಿಯೊಬ್ಬರ ಬರ್ಬರ ಹತ್ಯೆ ಮಾಡಿರುವ ಘಟನೆ ಭಾನುವಾರ ನಡೆದಿರುವುದು ವರದಿಯಾಗಿದೆ. ಘಟನೆಯಲ್ಲಿ ವಿನಾಯಕ ನಾಯ್ಕ (54) ಎಂಬವರು ಮೃತಪಟ್ಟಿರುವ ವ್ಯಕ್ತಿಯಾಗಿದ್ದಾರೆ. ಮನೆಯಲ್ಲಿದ್ದ ಪತಿ ಹಾಗೂ ಪತ್ನಿಯ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಉದ್ಯಮಿ ವಿನಾಯಕ ಸಾವಿಗೀಡಾಗಿದ್ದು, ಅವರ ಪತ್ನಿ ಗಂಭೀರಗಾಯಗೊಂಡಿದ್ದಾರೆ … Continued

ಕಾರವಾರ | ಗಣೇಶ ಚತುರ್ಥಿ ಖರ್ಚಿನ ವಿಚಾರವಾಗಿ ಸಹೋದರರ ನಡುವೆ ಗಲಾಟೆ; ಕೊಲೆಯಲ್ಲಿ ಅಂತ್ಯ…!

ಕಾರವಾರ : ಮನೆಯಲ್ಲಿ ಗಣೇಶನ ಪೂಜೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಹೋದರರ ನಡುವೆ ಜಗಳ ಕೊಲೆಯಲ್ಲಿ ಮುಕ್ತಾಯವಾದ ಘಟನೆ ಜಿಲ್ಲೆಯ ಕಾರವಾರದ ಸಾಯಿಕಟ್ಟಾ ಬಿಂದು ಮಾಧವ ದೇವಸ್ಥಾನದ ಬಳಿ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು ಸಂದೇಶ ಪ್ರಭಾಕರ ಬೋರ್ಕರ್ ಎಂದು ಗುರುತಿಸಲಾಗಿದೆ. ಮನೀಶ್ ಕಿರಣ ಬೋರ್ಕರ್ ಎಂಬಾತ ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ. ಸಂದೇಶ … Continued

ವೀಡಿಯೊ..| ಮುರಿದು ಬಿದ್ದ ರಾಷ್ಟ್ರೀಯ ಹೆದ್ದಾರಿ 66ರ ಕಾಳಿ ನದಿ ಸೇತುವೆ : ಕಾರವಾರ – ಗೋವಾ ಸಂಚಾರ ಸ್ಥಗಿತ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕಾರವಾರ ಬಳಿ ರಾಷ್ಟ್ರೀಯ ಹೆದ್ದಾರಿ 66 ರ ಕೋಡಿಭಾಗ್ ಸೇತುವೆ ಕುಸಿದು ಕಾಳಿ ನದಿಗೆ ಬಿದ್ದಿದೆ. ತಮಿಳುನಾಡು ಮೂಲದ ಲಾರಿ ನದಿಗೆ ಉರುಳಿದ್ದು, ಲಾರಿ ಚಾಲಕನನ್ನು ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಸದ್ಯ ಮತ್ತೊಂದು ಸೇತುವೆಯ ಮೇಲೆ  ಕಾರವಾರ-ಗೋವಾ  ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಸೇತುವೆಯಿಂದ … Continued

ಕಾರವಾರ : ಬೈತಖೋಲ-ಬಿಣಗಾ ಹಳೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ; ಸಂಚಾರ ಬಂದ್‌

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ನಗರದಿಂದ ಬೈತಖೋಲ ಮಾರ್ಗವಾಗಿ ಬಿಣಗಾದ ಕಡೆ ಸಾಗುವ ಹಳೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತವಾಗಿದ್ದು ಈ ಹಿನ್ನೆಲೆಯಲ್ಲಿ ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಅವರ ಆದೇಶ ಹೊರಡಿಸಿದ್ದಾರೆ. ಸುರಂಗಮಾರ್ಗದ ನಿರ್ಮಾಣದ ಬಳಿಕ ನಗರದಿಂದ ಬಿಣಗಾ ಸಂಪರ್ಕಿಸುತ್ತಿದ್ದ ಈ ಹಿಂದಿನ ರಾಷ್ಟ್ರೀಯ ಹೆದ್ದಾರಿಯಲ್ಲಿಯೂ … Continued