ಕಾರವಾರ : ಅಂಜದೀವ್ ಸಮೀಪ ಬೋಟ್ ಮುಳುಗಡೆ ; 24 ಮೀನುಗಾರರು ಬಚಾವ್‌

ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆಯಾಗುತ್ತಿದ್ದ ಬೋಟ್‌ನಿಂದ 24  ಮೀನುಗಾರರನ್ನು ರಕ್ಷಿಸಿದ ವಿದ್ಯಮಾನ ಕಾರವಾರ ಸಮೀಪದ ಅಂಜದೀವ್ ದ್ವೀಪದಲ್ಲಿ ಭಾನುವಾರ ನಡೆದಿದೆ ಎಂದು ವರದಿಯಾಗಿದೆ.  ಬೋಟ್‌ ಮುಳುಗುತ್ತಿರುವ ಮಾಹಿತಿ ಸಿಕ್ಕ ತಕ್ಷಣ ಸಮೀಪದಲ್ಲಿದ್ದ ಇತರೆ ಬೋಟ್‌ಗಳು ಧಾವಿಸಿ ಬಂದು ಅದರಲ್ಲಿದ್ದ ಮೀನುಗಾರರನ್ನು ರಕ್ಷಿಸಿವೆ. ಬೆಳ್ಳಂಬಾರ ಮೂಲದ ನೀಲಕಂಠ ಖಾರ್ವಿ ಎಂಬವರಿಗೆ ಸೇರಿದ ‘ಶ್ರೀ ಮಾತಾ’ … Continued

ಕಾರವಾರ: ಬೋಟ್‌ನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

ಕಾರವಾರ:ಅರಬ್ಬಿ ಸಮುದ್ರದ ಅಲೆಗಳ ನಡುವೆ ಮೀನುಗಾರಿಕೆ ನಡೆಸುತ್ತಿದ್ದ ಬೋಟ್‌ನಲ್ಲಿ ಮೀನು ಬಲೆ ಎಳೆಯುತ್ತಿದ್ದ ಮೀನುಗಾರನೊಬ್ಬ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಸಾವಿಗೀಡಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸಮುದ್ರದಲ್ಲಿನ ಲೈಟ್‌ಹೌಸ್ ಸಮೀಪ ನಡೆದಿದೆ. ಮೃತ ಮೀನನುಗಾರನನ್ನು ಕುಮಟಾ ತಾಲೂಕಿನ ಸಸಿಹಿತ್ಲು ಗ್ರಾಮದ ವೆಂಕಟೇಶ ಹರಿಕಂತ್ರ (32) ಎಂದು ಗುರುತಿಸಲಾಗಿದೆ. ಬೋಟ್‌ ಮೀನುಗಾರಿಕೆಯಲ್ಲಿ ತೊಡಗಿಕೊಂಡಿದ್ದಾಗ ಮೀನು ಬಲೆ … Continued

ಗೋವಾ ಭೂ ಕಬಳಿಕೆ-ಹಣ ಅಕ್ರಮ ವರ್ಗಾವಣೆ ಪ್ರಕರಣ; ಆರೋಪಿಯ ಕಾರವಾರದ ನಿವಾಸದ ಮೇಲೆ ಇ.ಡಿ. ದಾಳಿ

ಕಾರವಾರ : ಗೋವಾದ ಬಹುಕೋಟಿ ರೂಪಾಯಿ ಮೌಲ್ಯದ ಭೂ ಕಬಳಿಕೆ ಹಾಗೂ ಹಣ ಅಕ್ರಮ ವರ್ಗಾವಣೆ (ಮನಿ ಲಾಂಡರಿಂಗ್) ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮಂಗಳವಾರ ಕಾರವಾರದ ಕೊಡಿಬಾಗ್‌ನಲ್ಲಿರುವ ಸುಲೈಮಾನ್ ಖಾನ್ ಸಿದ್ದೀಕ್ ಅವರ ನಿವಾಸದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಕೊಡಿಬಾಗ್‌ನ ಮಿಡ್‌ಮ್ಯಾಕ್ ಆರ್ಕಿಡ್ ಅಪಾರ್ಟ್‌ಮೆಂಟ್‌ನಲ್ಲಿರುವ ಸಿದ್ದೀಕ್ ಅವರ ಮನೆಗೆ ಭೇಟಿ ನೀಡಿದ … Continued

ಕಾರವಾರದಲ್ಲಿ ಕಡಲತೀರದಲ್ಲಿ ಕಡಲಾಮೆ ಮೃತದೇಹ ಪತ್ತೆ

ಕಾರವಾರ: ಉತ್ತರ ಕನ್ನಡಜಿಲ್ಲೆಯ ಕಾರವಾರ ನಗರದ ಟಾಗೋರ ಕಡಲತೀರದಲ್ಲಿ ಅಪರೂಪದ ಆಲಿವ್ ರಿಡ್ಲಿ ಜಾತಿಯ ಕಡಲಾಮೆಯೊಂದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಚಾಪೆಲ್ ವಾರ್ಶಿಪ್ ಮ್ಯೂಸಿಯಂ ಹಿಂಭಾಗದ ಕಡಲತೀರದಲ್ಲಿ ಬುಧವಾರ ಕಡಲಾಮೆ ಪತ್ತೆಯಾಗಿದ್ದು, ಮಾಹಿತಿ ತಿಳಿದ ಅರಣ್ಯ ಇಲಾಖೆ ಹಾಗೂ ಮರೈನ್ ಎಸ್‌ಪಿಎಸ್ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ. ಕಡಲಾಮೆ ಕೆಲ ದಿನಗಳ ಹಿಂದೆಯೇ ಮೃತಪಟ್ಟಿರುವ ಸಾಧ್ಯತೆಯಿದ್ದು, … Continued

ಕಾರವಾರ | ಸ್ವಾತಂತ್ರ್ಯ ದಿನಾಚರಣೆ : ಮೊಬೈಲ್ ಟಾರ್ಚ್ ಹಿಡಿದು ಭಾಷಣ ಓದಿದ ಸಚಿವ ಲಕ್ಷ್ಮಣ ಸವದಿ

 ಕಾರವಾರ: ಉತ್ತರ ಕನ್ನಡ ಜಿಲ್ಲಾ ಕೇಂದ್ರವಾದ ಕಾರವಾರದ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ಮಂದ ಬೆಳಕಿದ್ದ ಕಾರಣ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಲಕ್ಷ್ಮಣ ಸವದಿ ಅವರು ಮೊಬೈಲ್ ಟಾರ್ಚ್ ಬೆಳಕನ್ನು ಬಳಸಿ ಭಾಷಣ ಮಾಡಬೇಕಾಯಿತು. ನಗರದ ಕಾಜುಭಾಗದಲ್ಲಿರುವ ಪೊಲೀಸ್ ಪರೇಡ್ ಮೈದಾನದಲ್ಲಿ ಶನಿವಾರ 80ನೇ ಸ್ವಾತಂತ್ರ್ಯೋತ್ಸವವನ್ನು ಸಡಗರದಿಂದ ಆಚರಿಸಲಾಯಿತು. … Continued

ಕಾರವಾರ : ಬೀದಿ ಗೂಳಿಗಳ ಕಾಳಗಕ್ಕೆ ಪಾದಾಚಾರಿ ಮಹಿಳೆ ಸಾವು

ಕಾರವಾರ: ಬೀದಿ ಗೂಳಿಗಳ ಕಾಳಗಕ್ಕೆ ಸಿಲುಕಿ ಅಮಾಯಕ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಮಲ್ಲಾಪುರ ಗ್ರಾಮದ ನಿವಾಸಿ ರಾಜೇಶ್ವರಿ (29) ಎಂದು ಗುರುತಿಸಲಾಗಿದೆ. ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ವೇಳೆ ಗ್ರಾಮದ ಸುಭದ್ರಾ ಹೋಟೆಲ್ ಸಮೀಪ ರಸ್ತೆಯಲ್ಲಿ ಕಾದಾಡುತ್ತಿದ್ದ ಎರಡು ಗೂಳಿಗಳು … Continued

ಮಗನ ಅಪಘಾತದಿಂದ ನೊಂದು ದಂಪತಿಯ ದುರಂತ ಅಂತ್ಯ ; ತಾಯಿ-ತಂದೆ ಕಳೆದುಕೊಂಡ 10 ವರ್ಷದ ಬಾಲಕ ಅನಾಥ

ಕಾರವಾರ: ಕುಟುಂಬದಲ್ಲಿ ಸಂಭವಿಸಿದ ಅಪಘಾತವೊಂದು ಇಡೀ ಕುಟುಂಬವನ್ನೇ ದುರಂತಕ್ಕೆ ದೂಡಿದ ಕರುಣಾಜನಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಶಿರವಾಡದ ಬಂಗಾರಪ್ಪ ನಗರದಲ್ಲಿ ನಡೆದಿದೆ. ಮಗನಿಗೆ ಸಂಭವಿಸಿದ ಅಪಘಾತದಿಂದ ಆತನ ಆರೋಗ್ಯದ ಬಗ್ಗೆ ಆತಂಕಗೊಂಡ ತಾಯಿ ಆತ್ಮಹತ್ಯೆಗೆ ಶರಣಾದರೆ, ಪತ್ನಿಯ ಸಾವಿನ ಸುದ್ದಿ ಕೇಳಿ ಆಘಾತಕ್ಕೊಳಗಾದ ಪತಿಯೂ ಕಾಳಿ ನದಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ … Continued

ವಿಡಿಯೊ | ಕಾರವಾರದಲ್ಲಿ ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡ ಸ್ವದೇಶಿ ನಿರ್ಮಿತ ಯುದ್ಧ ನೌಕೆ ಮಾಲ್ವನ್

ಕಾರವಾರ: ಭಾರತೀಯ ನೌಕಾಪಡೆಯ ಸಮುದ್ರ ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಅತ್ಯಾಧುನಿಕ ಜಲಾಂತರ್ಗಾಮಿ ವಿರೋಧಿ ಸ್ವದೇಶಿ ನಿರ್ಮಿತ ಯುದ್ಧನೌಕೆ ಐಎನ್‌ಎಸ್‌ ಮಾಲ್ವನ್ ಅನ್ನು ಕಾರವಾರದಲ್ಲಿರುವ ಐಎನ್‌ಎಸ್‌ ಕದಂಬ ನೌಕಾನೆಲೆಯಲ್ಲಿ ಅಧಿಕೃತವಾಗಿ ಸೇವೆಗೆ ಸೇರ್ಪಡೆಗೊಳಿಸಲಾಗಿದೆ. ಭಾರತದ ಸ್ವದೇಶಿ ಹಡಗು ನಿರ್ಮಾಣ ಯೋಜನೆಯಡಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನಿರ್ಮಿಸಿರುವ ಐಎನ್‌ಎಸ್‌ ಮಾಲ್ವನ್, ಕರಾವಳಿ ಹಾಗೂ ಆಳ ಸಮುದ್ರ … Continued

ವಿಡಿಯೋ | ಕಾರವಾರದಿಂದ ಹೊರಟಿದ್ದ ತೈಲ ಸಾಗಣೆ ಹಡಗಿಗೆ ಒಮಾನ್‌ ಕರಾವಳಿಯಲ್ಲಿ ಹೊತ್ತಿಕೊಂಡ ಬೆಂಕಿ

ಮಸ್ಕತ್ (ಓಮನ್): ಕಾರವಾರದಿಂದ ಹೊರಟಿದ್ದ ಓಮನ್ ಕರಾವಳಿಯ ಸಮುದ್ರ ಪ್ರದೇಶದಲ್ಲಿ ಹೋಗುತ್ತಿದ್ದ  ‘ಮಾರಿವೆಕ್ಸ್’ (Marivex) ಎಂಬ ತೈಲ ಸಾಗಣೆ ಹಡಗಿನಲ್ಲಿ (ಆಯಿಲ್ ಟ್ಯಾಂಕರ್) ಸೋಮವಾರ ಭಾರಿ ಅಗ್ನಿ ಅವಘಡ ಸಂಭವಿಸಿದೆ ಎಂದುವರದಿಯಾಗಿದೆ.  ಅದೃಷ್ಟವಶಾತ್, ಹಡಗಿನಲ್ಲಿದ್ದ ಎಲ್ಲಾ 24 ಭಾರತೀಯ ನಾವಿಕರು ಸುರಕ್ಷಿತವಾಗಿದ್ದಾರೆ ಎಂದು ಹೇಳಲಾಗಿದೆ. ಇರಾನ್ ಮತ್ತು ಇಸ್ರೇಲ್ ಗಳು ಕದನ ವಿರಾಮವನ್ನು ಉಲ್ಲಂಘಿಸಿ ಮತ್ತೆ … Continued

ಗೋವಾ ಕರಾವಳಿಯಲ್ಲಿ ಕಾರವಾರದ ಬೋಟ್ ಮುಳುಗಡೆ : 22 ಮೀನುಗಾರರ ರಕ್ಷಣೆ

ಬೆತುಲ್ (ಗೋವಾ): ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಕಾರವಾರ ಮೂಲದ ಪರ್ಶಿಯನ್ ಮಾದರಿಯ ಮೀನುಗಾರಿಕಾ ಬೋಟ್ ಗೋವಾದ ಬೆತುಲ್ ಕರಾವಳಿ ಪ್ರದೇಶದಲ್ಲಿ ಮುಳುಗಡೆಯಾಗಿದೆ. ಬೋಟ್‌ನಲ್ಲಿದ್ದ ಎಲ್ಲಾ 22 ಮೀನುಗಾರರನ್ನು ಹತ್ತಿರದಲ್ಲಿದ್ದ ಇತರ ಮೀನುಗಾರರು ರಕ್ಷಿಸಿದ್ದು, ಭಾರಿ ದುರಂತವೊಂದು ತಪ್ಪಿದಂತಾಗಿದೆ. ಕಾರವಾರದ ಮುದಗಾ ನಿವಾಸಿ ದಿನೇಶ ಕಾಂಚನ್ ಎಂಬವರಿಗೆ ಸೇರಿದ “ಶ್ರೀ ಅಮ್ಮ” ಹೆಸರಿನ ಬೋಟ್ ಸುಮಾರು … Continued