ಕದ್ರಾ ಜಲಾಶಯದಿಂದ 67000 ಕ್ಯೂಸೆಕ್ ನೀರು ಬಿಡುಗಡೆ ; ಅನೇಕ ಗ್ರಾಮಗಳಿಗೆ ಮುಳಗಡೆ ಭೀತಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು ವಿವಿಧ ಜಲಾಶಯಗಳು ಭರ್ತಿಯಾಗಿದೆ. ಹೀಗಾಗಿ ಕದ್ರಾ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದ್ದು, ಜಲಾಶಯದ ಕೆಳಗಿನ ಪ್ರದೇಶಗಳಿಗೆ ಮುಳುಗಡೆ ಭೀತಿ ಎದುರಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು ವಿವಿಧ ತಗ್ಗು ಪ್ರದೇಶಗಳು ಜಲಾವೃಗೊಂಡಿದೆ. ಕಾಳಿ ನದಿಯ ಹಿನ್ನಿರಿನ ಪ್ರದೇಶದಲ್ಲಿ ಸತತವಾಗಿ ಮಳೆಯಾಗುತ್ತಿದ್ದರಿಂದ … Continued

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸದೆ ಟೋಲ್ ಸಂಗ್ರಹಿಸುತ್ತೀರಿ ಏಕೆ : ಎನ್‌ಎಚ್‌ಎಐ ಅಧಿಕಾರಿಗಳ ವಿರುದ್ಧ ಸಿಎಂ ಗರಂ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ರಾಷ್ಟ್ರಿಯ ಹೆದ್ದಾರಿ ಕಾಮಗಾರಿಯನ್ನು ಪೂರ್ಣ ಗೊಳಿಸದೇ ಸಾರ್ವಜನಿಕರಿಂದ ಟೋಲ್ ಏಕೆ ಸಂಗ್ರಹ ಮಾಡುತ್ತಿದ್ದೀರಿ. ಕಾಮಗಾರಿಯು 2016 ಕ್ಕೆ ಮುಕ್ತಾಯಗೊಳಿಸಬೇಕಿದ್ದರೂ ಈವರೆಗೂ ಮುಕ್ತಾಯಗೊಳಿಸದೆ, ಕಾಮಗಾರಿ ಬಗ್ಗೆ ಕೇಂದ್ರ ಸಚಿವರಿಗೂ ಮಿಸ್ ಲೀಡಿಂಗ್ ಮಾಡುವುದಲ್ಲದೆ ರಾಜ್ಯ ಸರ್ಕಾರಕ್ಕೂ ತಪ್ಪು ಮಾಹಿತಿ ನೀಡುತ್ತಿದ್ದೀರಿ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ … Continued

ಕಾರವಾರ : ಕದ್ರಾ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಡುಗಡೆ

ಕಾರವಾರ: ಕಾಳಿ ನದಿಯ ಹಿನ್ನಿರಿನ ಪ್ರದೇಶದಲ್ಲಿ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಗುರುವಾರ ಕದ್ರಾ ಜಲಾಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಬಿಡುಗಡ ಮಾಡಲಾಗಿದೆ. ಕದ್ರಾ ಜಲಾಶಯದ 8 ಗೇಟುಗಳನ್ನು ತೆರೆಯಲಾಗಿದ್ದು, 61 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಅಪಾರ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿದ್ದರಿಂದ ಕದ್ರಾದ ಮಹಾಮಾಯಾ ದೇವಸ್ಥಾನದ ಪ್ರದೇಶ ಮುಳುಗಡೆಯಾಗಿದೆ … Continued

ಭಾರಿ ಮಳೆ : ಜುಲೈ 6ರಂದು ಉತ್ತರ ಕನ್ನಡ ಜಿಲ್ಲೆ 5 ತಾಲೂಕುಗಳ ಶಾಲೆ-ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಸುರಿಯುತ್ತಿದ್ದು, ಹಲವೆಡೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಶನಿವಾರ (ಜುಲೈ 6) ಜಿಲ್ಲೆಯ ಕರಾವಳಿ ಭಾಗದ ಐದು ತಾಲೂಕಿನ ಶಾಲೆ- ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ … Continued

ಕಾರವಾರ : ಮಳೆಗೆ ಮಣ್ಣಿನ ಗೋಡೆ ಕುಸಿದು ವೃದ್ಧೆ ಸಾವು

ಕಾರವಾರ: ಭಾರಿ ಮಳೆಗೆ ಮಣ್ಣಿನ ಗೋಡೆ ಕುಸಿದು ವೃದ್ಧೆ ಮೃತಪಟ್ಟಿರುವ ಘಟನೆ ಉತ್ತರ ಕನ್ನಡದ ಕಾರವಾರದ ಅಸ್ನೋಟಿಯ ಆರವ ಗ್ರಾಮದ ತೋರ್ಲೆಭಾಗದಲ್ಲಿ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ವೃದ್ಧೆಯನ್ನು ರುಕ್ಮಾ ಗುಲಾಬಿ  ಮಾಳ್ಸೇಕರ (70) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದ ವೃದ್ಧೆ, ಚಿತ್ತಾಕುಲದಲ್ಲಿ ಹಣ್ಣಿನ ವ್ಯಾಪಾರ ಮಾಡಿ ಜೀವನ ಸಾಗಿಸುತ್ತಿದ್ದರು. . ಭಾರಿ … Continued

ಬಿಜೆಪಿ ಅಭ್ಯರ್ಥಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ನಾಮಪತ್ರ ಸಲ್ಲಿಕೆ

ಕಾರವಾರ : ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಅಪಾರ ಬೆಂಬಲಿಗರೊಂದಿಗೆ ಕಾರವಾರ ನಗರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಕಾಗೇರಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಅವರು ಒಟ್ಟು ಮೂರು ನಾಮಪತ್ರ ಸಲ್ಲಿಕೆ ಮಾಡಿದರು. ಪತ್ನಿ, ಪುತ್ರಿ ಹಾಗೂ … Continued

ಕಾರವಾರ: ಮೋದಿ ಮತ್ತೆ ಪ್ರಧಾನಿಯಾಗಲೆಂದು ಬೆರಳನ್ನೇ ಕತ್ತರಿಸಿ ಕಾಳಿ ಮಾತೆಗೆ ಅರ್ಪಿಸಿದ ಅಭಿಮಾನಿ..!

ಕಾರವಾರ: ಅಭಿಮಾನಿಯೊಬ್ಬ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂದು ಪ್ರಾರ್ಥಿಸಿ ಕಾಳಿ ಮಾತೆಗೆ ತನ್ನ ಬೆರಳನ್ನೇ ತುಂಡು ಮಾಡಿ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸೋನಾರವಾಡದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಸೋನಾರವಾಡದ ಅರುಣ ವರ್ಣೇಕರ ಎಂಬವರು ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ತನ್ನ ಎಡಗೈನ ಬೆರಳನ್ನೇ ಕಾಳಿ ಮಾತೆಗೆ ಅರ್ಪಿಸಿದ್ದಾರೆ. ಎಡಗೈ ತೋರು ಬೆರಳು … Continued

ಕಾರವಾರ: ಬಸ್‌ ಅಡ್ಡಗಟ್ಟಿ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ ಮಾಡಿದ ವ್ಯಕ್ತಿ

ಕಾರವಾರ: ತನಗೆ ಬಸ್ ಚಾಲಕ ಸೈಡ್ ಬಿಟ್ಟಿಲ್ಲ ಎನ್ನುವ ಕಾರಣಕ್ಕೆ ಬೈಕ್ ಸವಾರನೊಬ್ಬ ಸಾರಿಗೆ ಬಸ್ ಅಡ್ಡಗಟ್ಟಿ ಬಸ್‌ ಚಾಲಕ, ನಿರ್ವಾಹಕ ಹಾಗೂ ಪ್ರಯಾಣಿಕನಿಗೆ ಹಲ್ಲೆ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸಮೀಪದ ಶಿರವಾಡದ ಜಾಂಬಾ ಕ್ರಾಸ್ ಬಳಿ ನಡೆದಿದೆ. ಸಾರಿಗೆ ಬಸ್‌ ಕಾರವಾರ ನಗರದಿಂದ ಸಿದ್ದರಕ್ಕೆ ಪ್ರಯಾಣಿಸುತ್ತಿತ್ತು. ಬಸ್ ಶಿರವಾಡಕ್ಕೆ ತಲುಪುತ್ತಿದ್ದಂತೆ … Continued

ಮಂಗಳೂರು- ಮಡಗಾಂವಗೆ ವಂದೇ ಭಾರತ ರೈಲು ಸಂಚಾರಕ್ಕೆ ಚಾಲನೆ : ಕಾರವಾರದಲ್ಲಿ ಹರ್ಷೋದ್ಗಾರಗಳೊಂದಿಗೆ ಸ್ವಾಗತ

ಕಾರವಾರ: ಭಾರತೀಯ ರೈಲ್ವೆ ಇಲಾಖೆಯ ಅತಿ ವೇಗ ಸುಸಜ್ಜಿತ ರೈಲು ಎನಿಸಿರುವ ವಂದೇ ಭಾರತ ರೈಲು ಮಂಗಳೂರಿನಿಂದ ಮಡಗಾಂವಗೆ ಓಡಾಟ ಆರಂಭಿಸಿದ್ದು ಜಿಲ್ಲಾ ಕೇಂದ್ರ ಕಾರವಾರ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ವಂದೇ ಭಾರತ ರೈಲಿಗೆ ಹರ್ಷೋದ್ಗಾರಗಳೊಂದಿಗೆ ಸ್ವಾಗತ ಕೋರಲಾಯಿತು. ಕಾರವಾರ ರೈಲ್ವೆ ನಿಲ್ದಾಣಕ್ಕೆ ರೈಲು ಆಗಮಿಸುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಯಕಾರ ಕೂಗಿದರು. ಕಾರವಾರ-ಅಂಕೋಲಾ … Continued

ಕಾರವಾರ: ಚಕ್ರವರ್ತಿ ಸೂಲೆಬೆಲೆ ವಿರುದ್ಧ ದೂರು ದಾಖಲು

ಕಾರವಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ವಿಷಯಕ್ಕೆ ಸಂಬಂಧಿಸಿ ಯುವ ಬ್ರೀಗೇಡ್‌ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಾರವಾರದ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ವರದಿಯಾಗಿದೆ. ಕೆಲವು ದಿನಗಳ ಹಿಂದೆ ಕಾರವಾರಕ್ಕೆ ಆಗಮಿಸಿದ್ದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದಕ್ಕಾಗಿ ಕಾರವಾರ ಗ್ರಾಮೀಣ ಪೊಲೀಸರು ಸುಮೊಟೋ ಪ್ರಕರಣ … Continued