ಕಾರವಾರ: ಭಾರೀ ಗಾಳಿ-ಮಳೆ ಮುನ್ಸೂಚನೆ, ಸಮುದ್ರ ಪ್ರಕ್ಷುಬ್ಧ, ಕಡಲತೀರಕ್ಕೆ ಮರಳಿದ ಮೀನುಗಾರಿಕಾ ಬೋಟ್‌ಗಳು

ಕಾರವಾರ : ವಾಯುಭಾರ ಕುಸಿತದಿಂದ ಹವಮಾನ ವೈಪರೀತ್ಯದಿಂದಾಗಿ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ಮೀನುಗಾರಿಕಾ ಬೋಟ್‌ಗಳು ಕರಾವಳಿ ತೀರದ ಕಡಲತೀರಗಳಲ್ಲಿ ಲಂಗರು ಹಾಕಿ ಆಶ್ರಯ ಪಡೆದುಕೊಂಡಿದೆ. ಹಾಗೂ ಮೀನುಗಾರಿಕೆಗೆ ತೆರಳಿದ ಬೋಟ್‌ಗಳು ಸಹ ವಾಪಸ್ಸಾಗುತ್ತಿವೆ. ಸಮುದ್ರದಲ್ಲಿ ಅಲೆಗಳ ಭೋರ್ಗರೆತ ಜೋರಾಗಿದ್ದು, ಪ್ರವಾಸಿಗರಿಗೆ ಎಚ್ಚರಿಕೆಯಾಗಿ ರೆಡ್ ಫ್ಲ್ಯಾಗ್‌ಗಳನ್ನು ಅಳವಡಿಸಲಾಗಿದೆ. ಎರಡ್ಮೂರು ದಿನಗಳಿಂದ ಕರಾವಳಿಯಲ್ಲಿ ಮಳೆಯಾಗುತ್ತಿರುವ ಕಾರಣ … Continued

ಕಾರವಾರ : ಬಾರೆ ರಸ್ತೆಯಲ್ಲಿ ವಾಹನದ ಪಕ್ಕವೇ ಕಾಣಿಸಿಕೊಂಡ ಹುಲಿ : ಜನರತ್ತ ನೋಡಿ ಘರ್ಜನೆ | ವೀಕ್ಷಿಸಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮಲ್ಲಾಪುರ-ಕೈಗಾ-ಬಾರೆ-ಯಲ್ಲಾಪುರ ರಸ್ತೆಯಲ್ಲಿ ಹುಲಿಯೊಂದು ಕಾರಿನ ಪಕ್ಕದಲ್ಲಿಯೇ ಕಾಣಿಸಿಕೊಂಡಿದ್ದು, ಇದರ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೈಗಾ ಎನ್‌ಪಿಸಿಐಎಲ್‌ ಉದ್ಯೋಗಿ ಚೇತನ ತೇಲ್ಕರ ಎಂಬವರು ಹುಲಿ ಕಾಣಿಸಿಕೊಂಡಿದ್ದನ್ನು ವೀಡಿಯೊ ಚಿತ್ರೀಕರಣ ಮಾಡಿದ್ದಾರೆ. ಬೃಹತ್‌ ಗಾತ್ರದ ಹುಲಿ ರಸ್ತೆ ಬದಿಯಲ್ಲೇ ನಿಂತು ಕಾರಿನಲ್ಲಿದ್ದವರನ್ನು ನೋಡಿ ಘರ್ಜಿಸುವುದನ್ನು ವೀಡಿಯೊದಲ್ಲಿ ನೋಡಬಹುದಾಗಿದೆ. ಕಾರನ್ನು ಹಿಂಬಾಲಿಸಿದಂತೆ … Continued

ಕಾರವಾರ : ಆಟವಾಡುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದು 3 ವರ್ಷದ ಮಗು ಸಾವು

ಕಾರವಾರ: ಮೂರು ವರ್ಷದ ಬಾಲಕಿಯೊಬ್ಬಳು ಮನೆಯ ಪಕ್ಕದಲ್ಲೇ ಇದ್ದ ಬಾವಿಯಲ್ಲಿ ಬಿದ್ದು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕಾರವಾರ ನಗರದ ಹರಿದೇವ ನಗರದಲ್ಲಿ ಈ ಘಟನೆ ನಡೆದಿದ್ದು, ಬಾಲಕಿ ಬಾವಿಯ ಸಮೀಪ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಮೃತಳನ್ನು ಮೂರುವರ್ಷದ ಬಾಲಕಿ ಸ್ತುತಿ ಎಂದು ಗುರುತಿಸಲಾಗಿದೆ. ಈಕೆ … Continued

ಕಾರವಾರ : ಮನೆ ಮುಂದೆ ನಿಲ್ಲಿಸಿದ್ದ ಬೈಕಿನೊಳಗೆ ಅಡಗಿಕೊಂಡಿದ್ದ ಬೃಹತ್‌ ಕಾಳಿಂಗ ಸರ್ಪದ ರಕ್ಷಣೆ | ವೀಕ್ಷಿಸಿ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಶೇಜವಾಡ ಬಳಿ ಮನೆಯಂಗಳದಲ್ಲಿ ನಿಲ್ಲಿಸಿದ್ದ ಬೈಕ್‌ನಲ್ಲಿ ಕಾಳಿಂಗ ಸರ್ಪ ಪತ್ತೆಯಾದ ವಿದ್ಯಮಾನ ವರದಿಯಾಗಿದೆ…! ಶೇಜವಾಡದ ಮಂಜುನಾಥ ನಾಯ್ಕ ಎಂಬವರ ಬೈಕ್‌‌ನ ಒಳಗೆ ಕಾಳಿಂಗ ಸರ್ಪ ಸೇರಿಕೊಂಡಿತ್ತು. ಬೈಕ್ ಹಿಂಬದಿಯ ಚೈನ್ ಪಾಕೆಟ್‌ ಬಳಿ ಈ ಬೃಹತ್‌ ಕಾಳಿಂಗ ಸರ್ಪ ಅಡಗಿಕೊಂಡಿತ್ತು. ಇದನ್ನು ಗಮನಿಸಿದ ಮನೆಯವರು  ಅದನ್ನು … Continued

ಕಾರವಾರ: ಜನರ ಜೊತೆ ಬೆರೆಯುತ್ತಿದ್ದ ಕಾಡು ಹಂದಿಗೆ ಆಹಾರದಲ್ಲಿ ಸ್ಫೋಟಕ ಇಟ್ಟು ಸಾಯಿಸಿದ ದುಷ್ಕರ್ಮಿಗಳು

ಕಾರವಾರ: ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲೂಕಿನ ಚಂಡಿಯಾ ಗ್ರಾಮದಲ್ಲಿ ಜನರೊಂದಿಗೆ ಸ್ನೇಹದಿಂದ ಇದ್ದು ಅವರು ಕೊಟ್ಟ ಆಹಾರ ತಿಂದು ಬದುಕಿದ್ದ ಕಾಡುಹಂದಿಯನ್ನು ಕೋಳಿ ಮಾಂಸದಲ್ಲಿ ನಾಡಬಾಂಬ್ ಇಟ್ಟು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ. ವರದಿ ಪ್ರಕಾರ, ಈ ಹಂದಿ ಊರಿನಲ್ಲಿ ಜನರು ನೀಡಿದ ಆಹಾರವನ್ನ ಸೇವಿಸುತ್ತ ಜನರ ಪ್ರೀತಿ ಗಳಿಸಿತ್ತು. ಕಾಂತಾರ ಸಿನೆಮಾ … Continued

ಕಾರವಾರ: ಮೊಬೈಲ್ ಚಾರ್ಜರ್ ವೈರ್ ಬಾಯಿಗೆ ಹಾಕಿಕೊಂಡ 8 ತಿಂಗಳ ಮಗು ಸಾವು

ಕಾರವಾರ: ಸ್ವಿಚ್ ಬೋರ್ಡಿಗೆ ಹಾಕಿದ್ದ ಮೊಬೈಲ್ ಚಾರ್ಜರ್ ವೈಯರ್ ಅನ್ನು ಮಗು ಬಾಯಲ್ಲಿ ಕಚ್ಚಿದ ನಂತರ ವಿದ್ಯುತ್ ಪ್ರಹರಿಸಿ 8 ತಿಂಗಳ ಮಗು ಸಾವಿಗೀಡಾದ ಘಟನೆ ಕಾರವಾರ ತಾಲ್ಲೂಕಿನ ಸಿದ್ದರದಲ್ಲಿ ಇಂದು, ಬುಧವಾರ ನಡೆದಿದೆ. ಸಿದ್ದರದ ಸಂತೋಷ ಕಲ್ಗುಟಕರ, ಸಂಜನಾ ಕಲ್ಗುಟಕರ ದಂಪತಿಯ ಏಂಟು ತಿಂಗಳ ಹೆಣ್ಣು ಮಗು ಸಾನಿಧ್ಯ ಎಂಬ ಪುಟ್ಟ ಮಗು ಮೃತಪಟ್ಟಿದೆ. … Continued

ಕಾರವಾರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

ಕಾರವಾರ: ತಾಲೂಕಿನ ಗೋಪಶಿಟ್ಟಾದ ಮೂಲದ ಉದ್ಯಮಿಯೊಬ್ಬರ ಕುಟುಂಬದ ಮೂವರು ಸದಸ್ಯರು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಮೂಲತಃ ಗೋಪಶಿಟ್ಟಾದ ನಿವಾಸಿ ಹಾಗೂ ಹಾಲಿ ಗೋವಾದಲ್ಲಿ ವಾಸವಾಗಿದ್ದ ಶ್ಯಾಮ ಪಾಟೀಲ(45), ಅವರ ಪತ್ನಿ ಜ್ಯೋತಿ ಪಾಟೀಲ(38) ಹಾಗೂ ಮಗ ದಕ್ಷ (12) ಎಂದು ಗುರುತಿಸಲಾಗಿದೆ. ಜ್ಯೋತಿ ಹಾಗೂ ದಕ್ಷ ಅವರ ಮೃತದೇಹ ಕಾರವಾರದ ದೇವಭಾಗ … Continued

ಸುಪ್ರೀಂಕೋರ್ಟ್‌ ತೀರ್ಪು ಬರುವವರೆಗೆ ಬೆಳಗಾವಿ, ಕಾರವಾರ, ನಿಪ್ಪಾಣಿಯನ್ನು ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸಿ: ಉದ್ಧವ್‌ ಠಾಕ್ರೆ

ಮುಂಬೈ: ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ಕುರಿತು ಮತ್ತೆ ಮಹಾರಾಷ್ಟ್ರದ ರಾಜ್ಯ ವಿಧಾನ ಪರಿಷತ್ತಿನಲ್ಲಿ ಸೋಮವಾರ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ , “ಕರ್ನಾಟಕ ಆಕ್ರಮಿತ ಮಹಾರಾಷ್ಟ್ರ” ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ವಿವಾದಿತ ಪ್ರದೇಶದ ನಿವಾಸಿಗಳು ಮರಾಠಿ ಮಾತನಾಡುವ ಜನರು ಎಂದು ಠಾಕ್ರೆ ಹೇಳಿದ್ದಾರೆ. ‘ಪ್ರಾದೇಶಿಕ ಭಾಷೆಗಳನ್ನಾಧರಿಸಿ ರಾಜ್ಯಗಳು … Continued

ಕಾರವಾರ: ಕಾರಿನಲ್ಲಿ ಬರುತ್ತಿದ್ದಾಗ ಬಾನೆಟ್‌ ಒಳಗೆ ನುಗ್ಗಿದ ಕಾಳಿಂಗ ಸರ್ಪ, 4 ತಾಸು ಕಾರ್ಯಾಚರಣೆ ನಂತರ ಕೊನೆಗೂ ಸೆರೆ | ವೀಕ್ಷಿಸಿ

ಕಾರವಾರ: ಕೈಗಾದಿಂದ ಬರುತ್ತಿದ್ದಾಗ ಕಾರಿನ ಬಾನೆಟ್‌ ಒಳಗೆ ಅಚಾನಕ್‌ ನುಗ್ಗಿ ಆತಂಕ ಸೃಷ್ಟಿಸಿದ್ದ ಕಾಳಿಂಗ ಸರ್ಪವನ್ನು ಅರಣಯ ಇಲಾಖೆ ಸಿಬ್ಬಂದಿ ನಾಲ್ಕು ತಾಸುಗಳ ಕಾಲ ಕಾರ್ಯಾಚರಣೆ ನಡೆಸಿ ಸೆರೆ ಹಿಡಿದು ಅದನ್ನು ಕಾಡಿಗೆ ಬಿಟ್ಟ ವಿದ್ಯಮಾನ ವರದಿಯಾಗಿದೆ. ಕೈಗಾದಿಂದ ಕಾರವಾರದ ಮಲ್ಲಾಪುರಕ್ಕೆ ಜೈ ಸಿಂಗ್‌ ಎಂಬವರು ಕಾರಿನಲ್ಲಿ ಬರುತ್ತಿದ್ದರು. ಅವರು ಕುಚೇಗಾರ್‌ ಸಮೀಪ ಬರುತ್ತಿರುವಾಗ ಅಚಾನಕ್‌ … Continued

ಜೊಯಿಡಾ : ತೂಗು ಸೇತುವೆ ಮೇಲೆ ಕಾರು ಚಲಾಯಿಸಿ ಹುಚ್ಚಾಟ ಮಾಡಿದ್ದ ಯುವಕನ ಬಂಧನ

ಕಾರವಾರ: ಯಲ್ಲಾಪುರ ಹಾಗೂ ಜೋಯಿಡಾ ತಾಲೂಕಿನ ಗಡಿಯ ಶಿವಪುರ ಗ್ರಾಮದಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ತೂಗು ಸೇತುವೆಯ ಮೇಲೆ ಕಾರನ್ನು ಚಲಾಯಿಸಿಕೊಂಡು ಹೋಗಿ ಹುಚ್ಚಾಟ ಮಾಡಿದ್ದ ಯುವಕನನ್ನು ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಜೊಯಿಡಾ ತಾಲೂಕಿನ ಉಳವಿ ಗ್ರಾಮದ ನಿವಾಸಿ ಮುಜಾಹಿದ್ ಆಜಾದ್ ಸಯ್ಯದ್(25) ಬಂಧಿತ ಎಂದು ತಿಳಿದುಬಂದಿದೆ. ಈ ಘಟನೆಯ ವೀಡಿಯೊ ಸಾಮಾಜಿಕ … Continued