ಕಾರವಾರ | ಅಮದಳ್ಳಿಯಲ್ಲಿ ಸುಟ್ಟು ಕರಕಲಾದ ಆಟೋ, ಎರಡು ಕಾರು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಅಮದಳ್ಳಿಯಲ್ಲಿತಡರಾತ್ರಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಆಟೋ  ಮತ್ತು ಎರಡು ಕಾರುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ ಎಂದು ವರದಿಯಾಗಿದೆ. ಮಧ್ಯರಾತ್ರಿ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಬೆಂಕಿ ವಾಹನಗಳನ್ನು ಆವರಿಸಿಕೊಂಡಿದೆ. ಬೆಂಕಿಯ ತೀವ್ರತೆಯಿಂದಾಗಿ ಸ್ಥಳದಲ್ಲಿದ್ದ ಕಾರುಗಳು ಮತ್ತು ಆಟೋ ರಿಕ್ಷಾ ಸಂಪೂರ್ಣವಾಗಿ ನಾಶವಾಗಿವೆ. ಈ ಅವಘಡದಿಂದ … Continued

ಕಾರವಾರ | ಮಾದಕ ವಸ್ತುಗಳನ್ನು ನಿರ್ಬಂಧಿಸಿದ್ದಕ್ಕೆ ಕೈದಿಗಳಿಂದ ಜೈಲು ಸಿಬ್ಬಂದಿ ಮೇಲೆ ಹಲ್ಲೆ

ಕಾರವಾರ: ಜಿಲ್ಲಾ ಕಾರಾಗೃಹದಲ್ಲಿ ಮಾದಕ ವಸ್ತುಗಳ ಪೂರೈಕೆಗೆ ಅವಕಾಶ ನೀಡದೆ ಕಠಿಣ ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ, ಜೈಲರ್ ಹಾಗೂ ಮೂವರು ಸಿಬ್ಬಂದಿ ಮೇಲೆ ವಿಚಾರಣಾಧೀನ ಕೈದಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಗಂಭೀರ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಮಂಗಳೂರು ಮೂಲದ ಕುಖ್ಯಾತ ರೌಡಿಗಳಾದ ಮೊಹ್ಮದ್ ಅಬ್ದುಲ್ ಫಯಾನ್ ಹಾಗೂ ಕೌಶಿಕ ನಿಹಾಲ್ ಎಂಬವರು … Continued

ಕಾರವಾರ : ಡಿಸೆಂಬರ್ 22 ರಿಂದ 7 ದಿನಗಳ ಕರಾವಳಿ ಉತ್ಸವ

ಕಾರವಾರ : ನಗರದ ರವೀಂದ್ರನಾಥ ಠಾಗೂರ್ ಕಡಲತೀರದಲ್ಲಿ ಡಿಸೆಂಬರ್ 22 ರಿಂದ 28 ರ ವರೆಗೆ 7 ದಿನಗಳ ಕಾಲ ಕರಾವಳಿ ಉತ್ಸವ ಆಯೋಜಿಸಲಾಗುವುದು ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ. ಡಿಸೆಂಬರ್ 22 ರಂದು ಮುಖ್ಯಮಂತ್ರಿಗಳು ಕಾರ್ಯಕ್ರಮ ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ವಿವಿಧ ಸಚಿವರು, ಜಿಲ್ಲೆಯ ಎಲ್ಲ … Continued

ಕಾರವಾರ : ಕೈಗಾ ಅಣು ಸ್ಥಾವರದಲ್ಲಿ ಗೇಟ್‌ ಕುಸಿದು ಸಿಐಎಸ್ಎಫ್ ಸಿಬ್ಬಂದಿ ಸಾವು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕೈಗಾ ಅಣು ವಿದ್ಯುತ್ ಸ್ಥಾವರದ (Kaiga Nuclear Power Plant) ಅಣು ತ್ಯಾಜ್ಯ ಘಟಕದಲ್ಲಿ ಕಾವಲಿಗೆ ನಿಂತಿದ್ದ ಕೇಂದ್ರೀಯ ಕೈಗಾರಿಕೆ ಭದ್ರತಾ ಪಡೆಯ (CISF) ಹೆಡ್‌ಕಾನ್ಸ್‌ಟೇಬಲ್ ಒಬ್ಬರು ಮೈಮೇಲೆ ಕಬ್ಬಿಣದ ಗೇಟ್ ಬಿದ್ದು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ಮಹಾರಾಷ್ಟ್ರದ ಮಹಿಮಾನಗಢ ಮೂಲದ ಶೇಖರ ಜಗದಾಲೆ (48)‌ … Continued

ವೀಡಿಯೊ..| ಕಾರವಾರ : ಇದ್ದಕ್ಕಿದ್ದಂತೆ ಹೊತ್ತಿ ಉರಿದ ಗೂಡ್ಸ್‌ ಟೆಂಪೊ

ಕಾರವಾರ: ಗೂಡ್ಸ್ ಟೆಂಪೋ ವಾಹನಕ್ಕೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಕಾರವಾರ ನಗರದ ನಗರದ ಬಿಲ್ಟ್ ಸರ್ಕಲ್ ಬಳಿ ನಿಂತಿದ್ದ ಗೂಡ್ಸ್ ವಾಹನ ಬೆಂಕಿಹೊತ್ತಿಕೊಂಡ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಬೆಂಕಿ ಹೊತ್ತಿಕೊಂಡ ಸಮಯದಲ್ಲಿ ಚಾಲಕ ವಾಹನದಲ್ಲಿ ಇರಲಿಲ್ಲ, ನಿಲ್ಲಿಸಿಟ್ಟ ವಾಹನದಲ್ಲಿ ಇದ್ದಕ್ಕಿದ್ದಂತೆ … Continued

ಕಾರವಾರ ಚೆಕ್‌ಪೋಸ್ಟ್‌ ನಲ್ಲಿ ದಾಖಲೆ ರಹಿತ ₹1 ಕೋಟಿ ನಗದು ವಶ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಗೋವಾ ಗಡಿಭಾಗದ ಮಾಜಾಳಿ ಚೆಕ್‌ಪೋಸ್ಟ್ ಬಳಿ ಗೋವಾದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್‌ನಲ್ಲಿ ದಾಖಲೆಯಿಲ್ಲದ ₹1 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ. ಚಿತ್ತಾಕುಲ ಪೊಲೀಸರು ನಡೆಸಿದ ತಪಾಸಣೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಸೋಮವಾರ ತಡರಾತ್ರಿ ಕಾರ್ಯಾಚರಣೆಯಲ್ಲಿ, ಪೊಲೀಸರು ಖಾಸಗಿ ಬಸ್ ಪರಿಶೀಲನೆ ಮಾಡುವ ಒಂದು ಕೋಟಿ … Continued

ವೀಡಿಯೊ….| ಕಾರವಾರದಲ್ಲಿ ವಿಶ್ವದ ಅತಿ ದೊಡ್ಡ ಪತಂಗದ ಪ್ರಭೇದ ಪತ್ತೆ

ಕಾರವಾರ : ವಿಶ್ವದ ಅತಿದೊಡ್ಡ ಪತಂಗ ಪ್ರಭೇದಗಳಲ್ಲಿ ಒಂದಾದ ಅಟ್ಲಾಸ್ ಪತಂಗದ (Attacus atlas) ಅಸಾಧಾರಣ ಮಾದರಿಯನ್ನು ಇತ್ತೀಚೆಗೆ ಕಾರವಾರ ನಗರದ ಮಿತಿಯಲ್ಲಿರುವ ಗುಡ್ಡೆಹಳ್ಳಿಯಲ್ಲಿ ಗುರುತಿಸಲಾಗಿದೆ. ಈ ಗಮನಾರ್ಹವಾದ ಆವಿಷ್ಕಾರವನ್ನು ಸ್ಥಳೀಯರಾದ ರವಿಗೌಡ ಅವರು ಈ ಪ್ರದೇಶದಲ್ಲಿ ಚಾರಣ ದಂಡಯಾತ್ರೆಯ ಸಮಯದಲ್ಲಿ ಮಾಡಿದ್ದಾರೆ . ಸಾಮಾನ್ಯವಾಗಿ ಅದರ ಗಮನಾರ್ಹ ನೋಟದಿಂದಾಗಿ ಚಿಟ್ಟೆ ಎಂದು ತಪ್ಪಾಗಿ ಭಾವಿಸುವ … Continued

ಕಾರವಾರ : ಮೀನು ಚುಚ್ಚಿ ಗಾಯಗೊಂಡು ಮೀನುಗಾರ ಸಾವು

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮಾಜಾಳಿ ದಂಡೇಭಾಗ ಪ್ರದೇಶದ ಬಳಿ ಮೀನುಗಾರಿಕೆಗೆ ತೆರಳಿದ್ದ ವೇಳೆ 24 ವರ್ಷದ ಮೀನುಗಾರ ಹಾರುವ ತೊಳೆ ಕಾಂಡೆ ಮೀನು (Flying fish) ಚುಚ್ಚಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಕ್ಟೋಬರ್ 14, ಮಂಗಳವಾರ ಅಕ್ಷಯ ಮಾಜಾಳೀಕರ ಎಂಬವರು ದೋಣಿಯಲ್ಲಿ ಮೀನುಗಾರಿಕೆಗೆ ಹೋಗಿದ್ದರು. … Continued

ಕಾರವಾರ: ಹೊಟೇಲ್‌ ಬಾಲ್ಕನಿಯಿಂದ ಬಿದ್ದು ರಷ್ಯಾದ ವ್ಯಕ್ತಿಗೆ ಗಂಭೀರ ಗಾಯ

ಕಾರವಾರ : ಹೊಟೇಲ್‌ ಮೊದಲನೇ ಮಹಡಿಯಿಂದ ಕೆಳಗೆ ಬಿದ್ದು ರಷ್ಯಾದ ವ್ಯಕ್ತಿಯೊಬ್ಬರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬಿದ್ದು ಗಾಯಗೊಂಡ ವ್ಯಕ್ತಿಯನ್ನು ರಷ್ಯಾದ ಪ್ರಜೆ ಇವಾನ್‌ ಡೆನೆವಾ (೪೦) ಎಂದು ಗುರುತಿಸಲಾಗಿದ್ದು, ರಾತ್ರಿ ವೇಳೆ ಹೊಟೇಲಿನ ಬಾಲ್ಕನಿ ಮೇಲೆ ನಿಂತಿದ್ದಾಗ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. … Continued

ಕಾರವಾರ : ಕೈಗಾ-ಬಾರೆ ರಸ್ತೆಯಲ್ಲಿ ಆರಾಮವಾಗಿ ನಡೆದುಕೊಂಡು ಹೋದ ಹುಲಿ; ವೀಡಿಯೊ ವೈರಲ್‌

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕೈಗಾ-ಬಾರೆ ರಸ್ತೆಯಲ್ಲಿ ಹುಲಿಯೊಂದು ಆರಾಮವಾಗಿ ನಡೆದುಕೊಂಡು ಹೋಗುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾರವಾರ ತಾಲೂಕಿನ ಕೈಗಾ-ಬಾರೆ ರಸ್ತೆಯಲ್ಲಿ ಶನಿವಾರ ಬೆಳಗ್ಗೆ 11ರ ಸುಮಾರು ಹುಲಿ ಶಾಂತವಾಗಿ ನಡೆದುಕೊಂಡು ಹೋಗಿರುವ ವೀಡಿಯೊ ವೈರಲ್‌ ಆಗಿದೆ. ಇದೇ ರಸ್ತೆಯ ಮೂಲಕ ಸಂಚಾರ ಮಾಡುವ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್ ಮೂಲಕ … Continued