ಕಾರವಾರ ಶಾಸಕ ಸತೀಶ ಸೈಲ್ ಬಂಧಿಸಿದ ಇ.ಡಿ.

ಕಾರವಾರ: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾರವಾರ ಕ್ಷೇತ್ರದ ಶಾಸಕ ಸತೀಶ ಸೈಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬೆಂಗಳೂರಿನಲ್ಲಿ ಬಂಧಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ವಿಚಾರಣೆಗಾಗಿ ಇ.ಡಿ. ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಶಾಸಕ ಸತೀಶ್ ಸೈಲ್ ಹಾಜರಾಗಿದ್ದರು. ವಿಚಾರಣೆ ನಡೆಸಿದ ಬಳಿಕ ಇ.ಡಿ. ಅಧಿಕಾರಿಗಳು … Continued

ವೀಡಿಯೊ..| ಕಾರವಾರ : ಸಮುದ್ರದ ಅಲೆಗಳ ಅಬ್ಬರಕ್ಕೆ ತೀರಕ್ಕೆ ಬಂದುಬಿದ್ದ ಡಾಲ್ಫಿನ್ ಮೀನು : ರಕ್ಷಿಸಿ ಪುನಃ ನೀರಿಗೆ ಬಿಟ್ಟ ಜನ

ಕಾರವಾರ : ಅರಬ್ಬಿ ಸಮುದ್ರದಲ್ಲಿ ಬಿರುಗಾಳಿಯ ಪರಿಣಾಮದಿಂದ ಉಂಟಾದ ಅಲೆಗಳ ಅಬ್ಬರಕ್ಕೆ ಕಡಲತೀರಕ್ಕೆ ಬಂದು ಸಿಲುಕ್ಕಿದ್ದ ಇಂಡೋ-ಪೆಸಿಫಿಕ್ ಹಂಪ್‌ಬ್ಯಾಕ್‌ ತಳಿಯ ಡಾಲ್ಫಿನ್ ಮೀನನ್ನು ಕಾರವಾರ ತಾಲೂಕಿನ ದೇವಬಾಗ ಕಡಲತೀರದಲ್ಲಿ ರಕ್ಷಣೆ ಮಾಡಲಾಗಿದೆ. ಸೋಮವಾರ ಮಧ್ಯಾಹ್ನ 12ರ ಸುಮಾರಿಗೆ ಡಾಲ್ಫಿನ್‌ ಮೀನಿನ ಮರಿಯನ್ನು ರಕ್ಷಿಸಲಾಗಿದೆ. ಸಮುದ್ರಕ್ಕೆ ಹಿಂತಿರುಗಲು ಡಾಲ್ಫಿನ್ ಒದ್ದಾಡುತ್ತಿರುವುದು ಕಂಡು ಬಂದ ನಂತರ ಅಲ್ಲಿದ್ದ ಜಂಗಲ್ … Continued

ಶಾಸಕ ಸತೀಶ ಸೈಲ್ ಮನೆ ಮೇಲೆ ಇಡಿ ದಾಳಿ ವೇಳೆ ಕೋಟಿಗೂ ಹೆಚ್ಚು ನಗದು, ಕೆಜಿಗಟ್ಟಲೆ ಚಿನ್ನ ಜಪ್ತಿ

ಕಾರವಾರ: ಬೇಲೇಕೇರಿ ಬಂದರಿನಿಂದ ಕಬ್ಬಿಣದ ಅದಿರು ಕಳ್ಳ ಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕ ಸತೀಶ ಸೈಲ್ ಅವರಿಗೆ ಸೇರಿದ ಹಲವು ಸ್ಥಳಗಳ ಮೇಲೆ ದಾಳಿ ನಡೆಸಿದ್ದ ವೇಳೆ ಅಪಾರ ನಗದು, ಚಿನ್ನ ಮತ್ತು ಬ್ಯಾಂಕ್ ಠೇವಣಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ (ED) ತಿಳಿಸಿದೆ. ಈ ಕುರಿತು … Continued

ಕಾರವಾರ | ನಿಂತಿದ್ದ ಬಸ್ಸಿಗೆ ಬೈಕ್ ಡಿಕ್ಕಿ ; ಬೈಕಿಗೆ ಪಿಕ್‌ಅಪ್‌ ಡಿಕ್ಕಿ ; ಬೈಕ್‌ ಸವಾರ ಸಾವು

ಕಾರವಾರ: ಸರಣಿ ಅಪಘಾತದಿಂದ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ದಿವೇಕರ ಕಾಲೇಜಿನ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಭವಿಸಿದೆ ಎಂದು ವರದಿಯಾಗಿದೆ. ಸದಾಶಿವಗಡ ಮೂಲದ ಮೈಕಲ್ ಮಾರ್ಷಲ್ ನರೋನಾ (42) ಎಂಬವರು ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಅವರು ಸದಾಶಿವಗಡದಿಂದ ಕಾರವಾರಕ್ಕೆ ಬರುತ್ತಿದ್ದ ವೇಳೆ, ದಿವೇಕರ ಕಾಲೇಜಿನ ಬಳಿ … Continued

ಕಾರವಾರ : ಶಾಸಕ ಸತೀಶ ಸೈಲ್ ನಿವಾಸದ ಮೇಲೆ ಇ.ಡಿ. ದಾಳಿ

ಕಾರವಾರ: ವಿಧಾನಮಂಡಲದ ಅಧಿವೇಶನ ನಡೆಯುತ್ತಿರುವಾಗಲೇ ಕಾರವಾರ-ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ ಸೈಲ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದ್ದು, ಸದಾಶಿವಗಡದಲ್ಲಿರುವ ಅವರ ಮನೆ ಮೇಲೆ ಇಂದು ಬುಧವಾರ ಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೇಲೆಕೇರಿ ಅದಿರು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತಪಾಸಣೆ ನಡೆದಿದೆ ಎನ್ನಲಾಗಿದೆ. ನಾಲ್ಕು ಕಾರುಗಳಲ್ಲಿ ಬಂದಿರುವ ಇ.ಡಿ.ಅಧಿಕಾರಿಗಳ ತಂಡವು … Continued

ಕಾರವಾರ | ರೈಲು ಡಿಕ್ಕಿ ಹೊಡೆದು ಚಿರತೆ ಸಾವು

ಕಾರವಾರ: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಚಿರತೆ ಸಾವಿಗೀಡಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಅಮದಳ್ಳಿ ಜಡಿಗದ್ದಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಶುಕ್ರವಾರ ತಡರಾತ್ರಿ ಈ ದುರ್ಘಟನೆ ಸಂಭವಿಸಿದೆ ಎಂದು ಅರಣ್ಯಾಧಿಕಾರಿಗಳು ಶಂಕಿಸಿದ್ದಾರೆ. ರೈಲಿಗೆ ಡಿಕ್ಕಿಯಾಗಿ ಚಿರತೆ ಮೃತಪಟ್ಟಿರಬಹುದು ಎಂದು ಹೇಳಲಾಗಿದೆ. ಸುಮಾರು 8 ವರ್ಷದ ಗಂಡು ಚಿರತೆ ಹಲವು ದಿನಗಳಿಂದ ತೋಡೂರು … Continued

ವೀಡಿಯೊ…| ಕಾರವಾರ: ಮನೆಯಲ್ಲಿ ಹಚ್ಚಿದ್ದ ದೀಪದಿಂದ ಧಗಧಗನೆ ಹೊತ್ತಿ ಉರಿದ ಮನೆ

ಕಾರವಾರ: ಮನೆಯೊಂದಕ್ಕೆ ಶನಿವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದರಿಂದ ಹೊತ್ತಿ ಉರಿದು ಅಪಾರ ಹಾನಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ನಂದಗದ್ದಾದಲ್ಲಿ ಶನಿವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಕಾರವಾರ ನಗರದ ನಂದನಗದ್ದಾ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಬಳಿ ಇರುವ ಶಾಂತಾರಾಮ ದೇಸಾಯಿ ಎಂಬುವರ ಹಂಚಿನ ಮನೆಗೆ ಶನಿವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗುಲಿ … Continued

ಕಾರವಾರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ ಪರವಾನಗಿ ರದ್ದುಗೊಳಿಸಿದ ಆರ್‌ಬಿಐ

ಮುಂಬೈ: ದಿ ಕಾರವಾರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ ಪರವಾನಗಿಯನ್ನು ರದ್ದುಗೊಳಿಸಲಾಗಿದೆ ಎಂದು ರಿಸರ್ವ್ ಬ್ಯಾಂಕ್ ಬುಧವಾರ ತಿಳಿಸಿದೆ, ಏಕೆಂದರೆ ಬ್ಯಾಂಕಿನಲ್ಲಿ ಸಾಕಷ್ಟು ಬಂಡವಾಳ ಇಲ್ಲ ಮತ್ತು ಗಳಿಕೆಯ ನಿರೀಕ್ಷೆಗಳನ್ನು ಹೊಂದಿಲ್ಲ ಎಂದು ಆರ್‌ಬಿಐ (RBI) ತಿಳಿಸಿದೆ. ಜುಲೈ 23, 2025 ರಂದು ವ್ಯವಹಾರ ಮುಕ್ತಾಯವಾಗುವಾಗ ಜಾರಿಗೆ ಬರುವಂತೆ ಬ್ಯಾಂಕ್ ಬ್ಯಾಂಕಿಂಗ್ ವ್ಯವಹಾರವನ್ನು ಮುಂದುವರಿಸುವುದನ್ನು ಅದು ಸ್ಥಗಿತಗೊಳಿಸಲಿದೆ. … Continued

ಕಾರವಾರ: ಕಾರಿನ ಮೇಲೆ ಮರ ಬಿದ್ದು ಮಹಿಳೆ ಸಾವು

ಕಾರವಾರ : ಗಾಳಿ ಮಳೆಗೆ ಬೃಹತ್ ಮರವೊಂದು ಕಾರಿನ ಮೇಲೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಜಿಲ್ಲಾಧಿಕಾರಿ ಸನಿಹದ ಆಸ್ಪತ್ರೆಯ ಮುಂಭಾಗದಲ್ಲಿ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಭಾನುವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದೆ. ಸಂತೆಯ ದಿ‌ನವಾದ ಕಾರಣ ಪಿಕಳೆ ರಸ್ತೆಯಲ್ಲಿ ಜನ ಸಂಚಾರ ಹೆಚ್ಚಾಗಿತ್ತು‌. ಮರದ ಕೆಳಗಿದ್ದ … Continued

ಭಾರಿ ಮಳೆ; ಕದ್ರಾ ಜಲಾಶಯದಿಂದ ನೀರು ಬಿಡುಗಡೆ

ಕಾರವಾರ : ಉತ್ತರ ಕನ್ನಡ ಜಿಲ್ಲಾದ್ಯಂತ ಭಾರಿ ಮಳೆಯಾಗುತ್ತಿದ್ದು ಜಲಾಶಯಗಳು ಭರ್ತಿಯಾಗುತ್ತಿವೆ. ಕಾರವಾರ ತಾಲೂಕಿನ ಕದ್ರಾ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು ಭರ್ತಿಯಾಗುವ ಸನಿಹಕ್ಕೆ ತಲುಪಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ 4 ಕ್ರಸ್ಟ್ ಗೇಟ್ ಗಳನ್ನು ತೆರೆದು ನೀರು ಹೊರಬಿಡಲಾಗುತ್ತಿದೆ. ಜಲಾಶಯದಿಂದ ನೀರು ಹೊರಬಿಡಲು ಜಿಲ್ಲಾಡಳಿತ ನಿಗದಿತ ಪಡಿಸಿದ 30 ಮೀಟರ್‌ ಮಟ್ಟ … Continued