ಕಾರವಾರ: ಮೊಬೈಲ್ ಜಾಸ್ತಿ ಬಳಸಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಯುವತಿ

ಕಾರವಾರ: ಮೊಬೈಲ್ ಜಾಸ್ತಿ ಬಳಕೆ ಮಾಡದಂತೆ ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಹಬ್ಬುವಾಡದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಮೇಘ (20) ಎಂದು ಗುರುತಿಸಲಾಗಿದೆ. ಈ ಯುವತಿ ಮೂಲತಃ ಸಿದ್ದಾಪುರದವಳಾಗಿದ್ದು, ಕಾರವಾರದ ಹಬ್ಬುವಾಡದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದಳು ಎಂದು ಹೇಳಲಾಗಿದೆ. ಪ್ಯಾರಾಮೇಡಿಕಲ್ ಕೋರ್ಸ್ … Continued

ಕಾರವಾರದಲ್ಲಿ ಗಾಳಕ್ಕೆ ಸಿಕ್ಕಿಬಿದ್ದ ಅಪರೂಪದ ಡಿಸ್ಕೊ ಫಿಶ್…ವೀಕ್ಷಿಸಿ

ಕಾರವಾರ: ನಗರದ ಬೈತಕೋಲದ ಮೀನುಗಾರನ ಗಾಳಕ್ಕೆ ಅಪರೂಪದ ಮೀನು ಸಿಕ್ಕಿದ್ದು, ಇದಕ್ಕೆ ಡಿಸ್ಕೊ ಮೀನು (ತಂಬೂಸ್ ಮೀನು) ಎಂದು ಕರೆಯುತ್ತಾರಂತೆ. ಇದು ವಇವಿಧ ಬಣ್ಣಗಳಿಂದ ಕೂಡಿದ ಅತ್ಯಂತ ಸುಂದರ ಮೀನು. ಮಾಣಿಗೌಡ ಎಂಬ ಮೀನುಗಾರನ ಗಾಳಕ್ಕೆ ಈ ಅಪರೂಪದ ಮೀನು ಸಿಕ್ಕಿ ಬಿದ್ದಿದೆ. ಇದು ಹೆಚ್ಚಾಗಿ ಅಮೆಜಾನ್ ನದಿಯಲ್ಲಿ ಕಂಡುಬರುತ್ತದೆಯಂತೆ ಹಾಗೂ ಇದರ ಜೀವಿತಾವಧಿ ಸುಮಾರು12 … Continued

‘ಫೋನ್ ಮೂಲಕ ಪಿಂಚಣಿ’ ಮನೆಬಾಗಿಲೆಗೆ ಯೋಜನೆಗೆ ಹತ್ತು ದಿನದಲ್ಲಿ ಚಾಲನೆ: ಕಂದಾಯ ಸಚಿವ ಅಶೋಕ

ಕಾರವಾರ: ಫೋನ್ ಮೂಲಕ ಪಿಂಚಣಿಯನ್ನು ಫಲಾನುಭವಿಗಳಿಗೆ ತಲುಪಿಸುವ ಯೋಜನೆ ರೂಪಿಸಲಾಗುತ್ತಿದ್ದು, 10 ದಿನಗಳಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಚವೆ ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾದ ‘ಕಂದಾಯ ಸಚಿವರ ಗ್ರಾಮ ವಾಸ್ತವ್ಯ’ ಕಾರ್ಯಕ್ರಮದ ಸಂದರ್ಭದಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಫೋನ್ ಕರೆ ಮಾಡಿದವರ … Continued

ಕಾರವಾರ: ಕೆಡಿಪಿ ಸಭೆಯಲ್ಲಿ ಸಚಿವದ್ವಯರ ಸಮ್ಮುಖದಲ್ಲೇ ಬಿಜೆಪಿ ಶಾಸಕರಿಬ್ಬರ ವಾಕ್ಸಮರ..!

ಕಾರವಾರ: ಕಾರವಾರದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಸಚಿವರೆದುರೇ ಬಿಜೆಪಿ ಶಾಸಕರು ಪರಸ್ಪರ ವಾಗ್ವಾದ ಮಾಡಿಕೊಂಡ ವಿದ್ಯಮಾನ ನಡೆದಿದೆ. ಉತ್ತರಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಸಚಿವರಾದ ಶಿವರಾಮ ಹೆಬ್ಬಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಸಮ್ಮುಖದಲ್ಲೇ ನೆರೆ ಪರಿಹಾರ ಅನುದಾನ ವಿಚಾರಕ್ಕಾಗಿ ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ್ … Continued

ಶಿರಸಿ ಬ್ಲ್ಯಾಕ್‌ ಮೇಲ್‌ ಪ್ರಕರಣ: ಮತ್ತೊಬ್ಬ ಆರೋಪಿಗಾಗಿ ಶೋಧ, ಶೀಘ್ರವೇ ಸತ್ಯ ಬಯಲಿಗೆ

ಕಾರವಾರ: ಉದ್ಯೋಗ ಕೊಡಿಸುವುದಾಗಿ ನಂಬಿಸಿ ಬ್ಲ್ಯಾಕ್ ಮೇಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 24 ತಾಸಿನೊಳಗೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನೊಬ್ಬ ಆರೋಪಿ ಬಂಧನಕ್ಕೆ ಶೋಧನಾ ಕಾರ್ಯ ನಡೆಯುತ್ತಿದೆ. ಶೀಘ್ರವೇ ಸತ್ಯಾಂಶ ಬಯಲಿಗೆಳೆಯಲಾಗುವುದು ಎಂದು ಉತ್ತರ ಕನ್ನಡ ಜಿಲ್ಲಾ ಎಸ್‌ಪಿ ಡಾ. ಸುಮನ್ ಡಿ. ಪೆನ್ನೇಕರ್ ತಿಳಿಸಿದ್ದಾರೆ. ಈ ಬಗ್ಗೆ ಎಸ್ಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, … Continued

ಕಾರವಾರ: ಡೆತ್ ನೋಟ್ ಬರೆದಿಟ್ಟು ಹೊಟೇಲಿನಲ್ಲಿ ಸಹಾಯಕ ಕಮಿಷನರ್ ಕಚೇರಿ ನೌಕರ ಆತ್ಮಹತ್ಯೆ

ಕಾರವಾರ: ನಗರದ ಉಪ ವಿಭಾಗಾಧಿಕಾರಿಗಳ ಕಚೇರಿ ನೌಕರನೋರ್ವ ಖಾಸಗಿ ಹೊಟೇಲಿನ ಕೊಠಡಿಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ. ಹೊನ್ನಾವರ ಮೂಲದ ಈಶ್ವರ ಭಟ್ಟ (38) ನೇಣಿಗೆ ಶರಣಾದ ಎಂದು ಗುರುತಿಸಲಾಗಿದೆ. ಇವರು ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಅಕೌಂಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ನನ್ನ ಅನಾರೋಗ್ಯದಿಂದ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ನನ್ನ ಸಾವಿಗೆ ನಾನೇ … Continued

ಕಾರವಾರ: ಗಣರಾಜ್ಯೋತ್ಸವ ಧ್ವಜಾರೋಹಣ ಮುಗಿದ ನಂತರ ಎಎಸ್‌ಐ ಹೃದಯಾಘಾತದಿಂದ ಸಾವು

.ಕಾರವಾರ: ಗಣರಾಜ್ಯೋತ್ಸವ ಧ್ವಜಾರೋಹಣದಲ್ಲಿ ಪಾಲ್ಗೊಂಡ ನಂತರ ಸಂಚಾರಿ ಪೊಲೀಸ್ ಠಾಣೆಯ ಎಎಸ್ಐ ಹೃದಯಾಘಾತದಿಂದ ಮೃತಪಟ್ಟ ಘಟನೆ ಕಾರವಾರದಲ್ಲಿ ಇಂದು, ಮಂಗಳವಾರ ನಡೆದಿದೆ. ನಗರದ ಸಂಚಾರಿ ಠಾಣೆಯಲ್ಲಿ ಎಎಸ್​ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಬ್ದುಲ್ ಖಾದರ್ ಮಹ್ಮದ್ ಶೇಖ್ (57) ಮೃತ ಅಧಿಕಾರಿಯಾಗಿದ್ದಾರೆ. ಸಂಚಾರಿ ಠಾಣೆಯಲ್ಲಿ ಬೆಳಗ್ಗೆ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದ್ದರು. ಧ್ವಜಾರೋಹಣ ಮುಗಿದ ಕೆಲ ಸಮಯದ … Continued

ಕಾರವಾರ: ಶಾಲೆಗೆ ಹೋಗುತ್ತಿದ್ದ ಮಕ್ಕಳ ಮೇಲೆ ಜೇನು ದಾಳಿ: 16 ಮಂದಿ ಆಸ್ಪತ್ರೆಗೆ ದಾಖಲು

ಕಾರವಾರ: ಶಾಲೆಗೆ ಹೋಗುತ್ತಿದ್ದ 20ಕ್ಕೂ ಹೆಚ್ಚು ಮಕ್ಕಳಿಗೆ ಜೇನು ನೊಣ ದಾಳಿ ಮಾಡಿ ಕಡಿದ ಘಟನೆ ಕಾರವಾರ ತಾಲೂಕಿನ ಕಿನ್ನರ ಗ್ರಾಮದ ನ್ಯೂ ಹೈಸ್ಕೂಲಿನಲ್ಲಿ ಮಂಗಳವಾರ ನಡೆದ ಬಗ್ಗೆ ವರದಿಯಾಗಿದೆ. ಜೇನು ಕಡಿತದಿಂದ 16 ಮಕ್ಕಳು ಅಸ್ವಸ್ಥರಾಗಿದ್ದು, ಕೆಲ ಮಕ್ಕಳ ಬೆನ್ನು, ಕುತ್ತಿಗೆ, ಮುಖ, ತಲೆಗೆ ಗಾಯಗಳಾಗಿವೆ. ಗಾಯಗೊಂಡಿರುವ ಮಕ್ಕಳನ್ನು ಊರವರ ಸಹಾಯದಿಂದ ಕಾರವಾರ ಜಿಲ್ಲಾಸ್ಪತ್ರೆಗೆ … Continued

ಕಾರವಾರ: ತಂದೆಗೆ ಅಂತ್ಯ ಸಂಸ್ಕಾರ ನೆರವೇರಿಸಿದ ಮಗಳು..!

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ತಂದೆಯ ಚಿತೆಗೆ ಮಗಳೇ ಅಗ್ನಿ ಸ್ಪರ್ಶ ಮಾಡಿದ ವಿದ್ಯಮಾನ ವರದಿಯಾಗಿದೆ. ಕಾರವಾರ ತಾಲೂಕಿನಲ್ಲಿ ಮಹಿಳೆಯೋರ್ವಳು ತನ್ನ ತಂದೆಗೇ ತಾನೇ ಅಂತ್ಯಕ್ರಿಯೆ ವಿಧಿವಿಧಾನ ನೆರವೇರಿಸಿ ಅಗ್ನಿಸ್ಪರ್ಶ ಮಾಡಿ ಹೊಸ ಪರಂಪರೆಗೆ ನಾಂದಿ ಹಾಡಿದ್ದಾರೆ. ತಾಲೂಕಿನ ಮುಡಗೇರಿಯಲ್ಲಿ ಇದು ನಡೆದಿದ್ದು, . ಹಿಂದೂ ಧಾರ್ಮಿಕ ವಿಧಿ-ವಿಧಾನದಂತೆ ತಂದೆಗೆ ಅಂತ್ಯಸಂಸ್ಕಾರ ಮಾಡಿದ್ದಾರೆ. ಹಿಂದೂ ಧರ್ಮದಲ್ಲಿ … Continued

ಪ್ರಧಾನಿ ಮೋದಿ 71ನೇ ಜನ್ಮದಿನ: ಕಾರವಾರದ ಕಡಲತೀರದ ಮರಳಿನಲ್ಲಿ ಮೂಡಿದ ಕಲಾಕೃತಿ

ಕಾರವಾರ : ನರೇಂದ್ರ ಮೋದಿಯವರ 71 ನೇ ಜನ್ಮದಿನದ ಅಂಗವಾಗಿ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ರವೀಂದ್ರನಾಥ ಠಾಗೋರ್ ಕಡಲತೀರದಲ್ಲಿ, ಮರಳಿನಲ್ಲಿ ಮೋದಿ ಕಲಾಕೃತಿ ಮೂಡಿಬಂದಿದೆ. ಮೋದಿಯವರ ಅಭಿಮಾನಿ ವಿಷ್ಟು ಎಂಬವರು ಮೋದಿಯವರ ಮರಳಿನ ಕಲಾಕೃತಿ ರಚಿಸಿ ವಿಶಿಷ್ಟವಾಗಿ ಮೋದಿ ಜನ್ಮದಿನವನ್ನು ಆವರಿಸಿದರು. ಅಂಕೋಲದ ವಿಷ್ಟು ಅವರ ಜೊತೆಗೆ ಮೂರು ಜನ ಕಲಾವಿದರು ಆರು ತಾಸುಗಳ … Continued