ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದಿಂದ 50 ಲಕ್ಷ ರೂ. ದರೋಡೆ

ಕಾಸರಗೋಡು : ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದಿಂದ 50 ಲಕ್ಷ ರೂ.ಗಳನ್ನು ದರೋಡೆ ಮಾಡಿದ ಘಟನೆ ಬುಧವಾರ ಮಧ್ಯಾಹ್ನ ಕೇರಳ ಕಾಸರಗೋಡಿನ ಉಪ್ಪಳ ಪೇಟೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ವಾಹನದ ಗಾಜನ್ನು ಒಡೆದು ಹಣ ದರೋಡೆ ಮಾಡಿದ್ದಾರೆ. ಉಪ್ಪಳ ಪೇಟೆಯಲ್ಲಿರುವ ಆಕ್ಸಿಸ್ ಬ್ಯಾಂಕಿನ ಎಟಿಎಂ ಯಂತ್ರಕ್ಕೆ ಹಣ ತುಂಬಿಸಲು ಬಂದಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. … Continued

ಕಾಸರಗೋಡು : ಎದೆಹಾಲು ಗಂಟಲಲ್ಲಿ ಸಿಲುಕಿ ಹಸುಳೆ ಸಾವು

ಕಾಸರಗೋಡು : ತಾಯಿಯ ಎದೆಹಾಲು ಕುಡಿಯುವ ವೇಳೆ ಹಾಲು ಗಂಟಲಲ್ಲಿ ಸಿಲುಕಿ ಮೂರು ತಿಂಗಳ ಮಗು ಮೃತಪಟ್ಟ ಘಟನೆ  ಕೇರಳ ಕಾಸರಗೋಡು ಜಿಲ್ಲೆಯ ಗಡಿಭಾಗವಾದ ಕುಂಬಳೆ ಸಮೀಪದ ಬಂಬ್ರಾಣ ಎಂಬಲ್ಲಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಅಬ್ದುಲ್ ಅಜೀಜ್ – ಖದೀಜಾ ದಂಪತಿ ಪುತ್ರಿ ಸುಮಾರು ಮೂರು ತಿಂಗಳ ಮಗು ಮೃತಪಟ್ಟಿರುವುದಾಗಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. … Continued

ಸಾಲದ ಸುಳಿಯಲ್ಲಿ ಸಿಲುಕಿ ಹಣಕ್ಕಾಗಿ ಮನೆ ಮಾರಾಟ ಮಾಡಲು ನಿಗದಿಯಾದ ಸಮಯದ ಎರಡು ತಾಸು ಮೊದಲು ₹ 1 ಕೋಟಿ ಲಾಟರಿ ಗೆದ್ದ ವ್ಯಕ್ತಿ…!

ಕಾಸರಗೋಡು (ಕೇರಳ): ಆರ್ಥಿಕ ಸಂಕಷ್ಟದಲ್ಲಿ ಸಿಲುಕಿರುವ 50ರ ಹರೆಯದ ಮೊಹಮ್ಮದ್ ಬಾವ ಅವರು ತಮ್ಮ ಜೀವನದಲ್ಲಿ ಸ್ವಲ್ಪ ಅದೃಷ್ಟ ಬರಲಿ ಎಂದು ಪ್ರಾರ್ಥಿಸಿದ್ದಕ್ಕೆ ಫಲ ಸಿಕ್ಕಿದೆ. ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದ ಅವರು, ಸಾಲ ತೀರಿಸಲು ಅನನಿವಾರ್ಯವಾಗಿ ನೂತನವಾಗಿ ನಿರ್ಮಿಸಿದ ತಮ್ಮ ಮನೆಯನ್ನು ಮಾರಾಟ ಮಾಡಲು ಟೋಕನ್ ಮುಂಗಡ ಹಣ ಸ್ವೀಕರಿಸುವ ಕೇವಲ ಎರಡು ಗಂಟೆಗಳ ಮೊದಲು … Continued