ಡಿಸಿಎಂ ಡಿಕೆ ಶಿವಕುಮಾರ ಹೂಡಿಕೆ ವಿವರ ನೀಡಿ : ಕೇರಳದ ಜೈಹಿಂದ್ ಚಾನೆಲ್ ​ಗೆ ಸಿಬಿಐ ನೋಟಿಸ್

ನವದೆಹಲಿ : ಕಾಂಗ್ರೆಸ್ ನಾಯಕ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅವರ ವಿರುದ್ಧದ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಕೇರಳ ಮೂಲದ ಜೈಹಿಂದ್ ವಾಹಿನಿಯಲ್ಲಿ ಮಾಡಿರುವ ಹೂಡಿಕೆಯ ವಿವರಗಳನ್ನು ನೀಡುವಂತೆ ಸಿಬಿಐ ನೋಟಿಸ್ ಜಾರಿಮಾಡಿದೆ. ಜೈಹಿಂದ್ ಕಮ್ಯುನಿಕೇಷನ್ಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಬಿ.ಎಸ್.ಶಿಜು ಅವರಿಗೆ ಜನವರಿ 11 ರಂದು ತನಿಖಾಧಿಕಾರಿಗಳು ಕೋರಿದ ಅಗತ್ಯ ದಾಖಲೆಗಳೊಂದಿಗೆ … Continued

ಕೋವಿಡ್‌-19: ದೇಶದಲ್ಲಿ ಸಕ್ರಿಯ ಪ್ರಕರಣಗಳು 2,311ಕ್ಕೆ ಏರಿಕೆ

ನವದೆಹಲಿ: ದೇಶದಾದ್ಯಂತ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 614 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಕೇರಳದಲ್ಲಿ ಮೂರು ಸಾವುಗಳು ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,311ಕ್ಕೆ ಏರಿಕೆಯಾಗಿದೆ. ಮೇ 21ರ ನಂತರ ಇದೇ ಮೊದಲ ಬಾರಿಗೆ ದಿನವೊಂದರಲ್ಲಿ ಅತಿ ಹೆಚ್ಚು ಪ್ರಕರಣ ವರದಿಯಾಗಿದೆ. ಕೇರಳದಲ್ಲಿ … Continued

ಕೋವಿಡ್‌ ಸೋಂಕು ಹೆಚ್ಚಳದ ನಂತರ ರಾಜ್ಯಗಳಿಗೆ ಕೋವಿಡ್‌ ಸಲಹೆ ನೀಡಿದ ಕೇಂದ್ರ

ನವದೆಹಲಿ: ಕೇರಳದ ತಿರುವನಂತಪುರಂನ 79 ವರ್ಷದ ಮಹಿಳೆ ಮಾದರಿಯಲ್ಲಿ ಕೊರೊನಾ ವೈರಸ್ ಉಪ-ರೂಪಾಂತರಿ JN.1 ಮೊದಲ ಪ್ರಕರಣ ಪತ್ತೆಯಾದ ನಂತರ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಸಲಹೆಯನ್ನು ನೀಡಿದೆ. ಈ ಹಿಂದೆ, ತಮಿಳುನಾಡಿನ ತಿರುಚಿರಾಪಳ್ಳಿ ಜಿಲ್ಲೆಯ ಪ್ರಯಾಣಿಕರಲ್ಲಿ ಸಿಂಗಾಪುರದಲ್ಲಿ ಜೆಎನ್.1 ಉಪ-ರೂಪಾಂತರಿ ಪತ್ತೆಯಾಗಿತ್ತು. ಹೀಗಾಗಿ “ಮುಂಬರುವ ಹಬ್ಬದ ಋತುವನ್ನು ಪರಿಗಣಿಸಿ, ನೈರ್ಮಲ್ಯ ಅನುಸರಿಸುವ ಮೂಲಕ ರೋಗ ಹರಡುವ … Continued

ಕೇರಳದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳ : ಕರ್ನಾಟಕದಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾಸ್ಕ್‌ ಧರಿಸಲು ಸಲಹೆ

ಬೆಂಗಳೂರು : ಕೇರಳದಲ್ಲಿ ಕೋವಿಡ್ -19 ಪ್ರಕರಣಗಳ ಹೆಚ್ಚಳದ ಮಧ್ಯೆ ಹಿರಿಯ ನಾಗರಿಕರು ಮತ್ತು ಕೊಮೊರ್ಬಿಡಿಟಿ ಇರುವವರು ಮಾಸ್ಕ್ ಧರಿಸುವಂತೆ ರಾಜ್ಯ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಸೋಮವಾರ ಸಲಹೆ ನೀಡಿದ್ದಾರೆ. ಕೊಡಗಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಯಪಡುವ ಅಗತ್ಯವಿಲ್ಲ. ನಾವು ಸಭೆ ನಡೆಸಿದ್ದೇವೆ, ಅಲ್ಲಿ ನಾವು ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಚರ್ಚಿಸಿದ್ದೇವೆ. ನಾವು … Continued

ಕೇರಳದಲ್ಲಿ ಕೋವಿಡ್ ಪ್ರಕರಣಗಳಲ್ಲಿ ಹೆಚ್ಚಳ : ಕರ್ನಾಟಕದ ಆಸ್ಪತ್ರೆಗಳ ಪೂರ್ವ ಸಿದ್ಧತೆ ಪರಿಶೀಲನೆ

ಬೆಂಗಳೂರು: ಕೇರಳದಲ್ಲಿ ಹೊಸ ಕೋವಿಡ್ ಪ್ರಕರಣಗಳ ವರದಿಗಳಿಂದ ಎಚ್ಚೆತ್ತಿಕೊಂಡಿರುವ ಕರ್ನಾಟಕ ಸರ್ಕಾರ ರಾಜ್ಯದಲ್ಲಿನ ಆಸ್ಪತ್ರೆಗಳಲ್ಲಿ ಪೂರ್ವ ಸಿದ್ಧತೆಯನ್ನು ಪರಿಶೀಲಿಸಲು ನಿರ್ಧರಿಸಿದೆ. ಮಂಗಳವಾರ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿ ಸಭೆಯನ್ನು ಸರ್ಕಾರ ಕರೆದಿದೆ. ಶನಿವಾರ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮದ ಮೂಲಕ ಪರೀಕ್ಷಾ ಕಿಟ್‌ಗಳನ್ನು ಖರೀದಿಸಲು ನಿರ್ದೇಶನಗಳನ್ನು ನೀಡಲಾಗಿದೆ. ಸಭೆಯ ನಂತರ ಮಾಧ್ಯಮದವರ … Continued

ಕೇರಳದಲ್ಲಿ ಕೋವಿಡ್ ಉಪ ತಳಿ JN.1 ಪತ್ತೆ ; ಕೋವಿಡ್-19 ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳ

ನವದೆಹಲಿ: ಕೇರಳವು ಕೋವಿಡ್‌-19 ಉಪ-ತಳಿ JN.1 ಸೋಂಕಿನ ಪ್ರಕರಣವನ್ನು ಪತ್ತೆ ಮಾಡಿದೆ ಎಂದು ಅಧಿಕೃತ ಮೂಲಗಳು ಶನಿವಾರ ದೃಢಪಡಿಸಿವೆ. ನವೆಂಬರ್ 18 ರಂದು ಆರ್‌ಟಿ-ಪಿಸಿಆರ್‌ (RT-PCR) ಪರೀಕ್ಷೆಯಲ್ಲಿ 79 ವರ್ಷದ ಮಹಿಳೆಯ ಮಾದರಿಯಲ್ಲಿ ಇದು ಪತ್ತೆಯಾಗಿದೆ ಎಂದು ಅದು ತಿಳಿಸಿದೆ. ಶೀತ-ಜ್ವರ ಮಾದರಿಯ ಅನಾರೋಗ್ಯ ಸಮಸ್ಯೆ (ಐಎಲ್‌ಐ) ಹೊಂದಿದ್ದ ರೋಗಿಯು ಈಗ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು … Continued

ʼಕೆಎಸ್‌ಆರ್‌ಟಿಸಿʼ ಹೆಸರು ಬಳಕೆ : ಕೇರಳದ ತಕರಾರು ಅರ್ಜಿ ತಿರಸ್ಕರಿಸಿದ ಮದ್ರಾಸ್‌ ಹೈಕೋರ್ಟ್‌, ಕರ್ನಾಟಕಕ್ಕೆ ಗೆಲುವು

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ‘ಕೆಎಸ್‌ಆರ್‌ಟಿಸಿ’ ಸಂಕ್ಷೇಪಣಾ ಗುರುತು ಬಳಸಬಾರದು ಎಂದು ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಲ್ಲಿಸಿದ ಮನವಿಯನ್ನು ಮದ್ರಾಸ್‌ ಹೈಕೋರ್ಟ್‌ ವಜಾಗೊಳಿಸಿದೆ. ಹಾಗೂ ಕೆಎಸ್ಆಆರ್​ಟಿಸಿ ಹೆಸರು ಬಳಕೆಗೆ ಯಾವುದೇ ಅಭ್ಯಂತರವಿಲ್ಲ ಎಂದು ಹೇಳಿದೆ. ಈ ಹಿನ್ನೆಲೆಯಲ್ಲಿ ‘ಕೆಎಸ್ಆರ್ ಟಿ ಸಿ’ಕಾನೂನು ಹೋರಾಟದಲ್ಲಿ ಕರ್ನಾಟಕಕ್ಕೆ ಜಯ ಸಿಕ್ಕಿದೆ, ಕೇರಳಕ್ಕೆ ಹಿನ್ನಡೆಯಾಗಿದೆ. … Continued

ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಲು ಅವಕಾಶ : ತಾಯಿಗೆ 40 ವರ್ಷ ಜೈಲು ಶಿಕ್ಷೆ; “ತಾಯ್ತನಕ್ಕೆ ಅವಮಾನʼ ಎಂದ ಕೋರ್ಟ್‌

ತಿರುವನಂತಪುರಂ: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಪ್ರಕರಣದಲ್ಲಿ ಮಹಿಳೆಗೆ ಕೇರಳ ವಿಶೇಷ ಫಾಸ್ಟ್ ಟ್ರ್ಯಾಕ್ ಕೋರ್ಟ್ ಸೋಮವಾರ 40 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ₹ 20,000 ದಂಡ ವಿಧಿಸಿದೆ. ಏಳು ವರ್ಷದ ತನ್ನ ಮಗಳ ಮೇಲೆ ತನ್ನ ಪ್ರೇಮಿ ಅತ್ಯಾಚಾರ ಮಾಡಲು ಸಹಾಯ ಮಾಡಿದ್ದಕ್ಕಾಗಿ ಈ ಶಿಕ್ಷೆ ವಿಧಿಸಲಾಗಿದೆ. ತಿರುವನಂತಪುರಂ … Continued

ಕೊಚ್ಚಿ ವಿಶ್ವವಿದ್ಯಾನಿಲಯದಲ್ಲಿ ಸಂಗೀತ ರಸಮಂಜರಿ ಕಾರ್ಯಕ್ರಮದ ವೇಳೆ ಕಾಲ್ತುಳಿತ : 4 ವಿದ್ಯಾರ್ಥಿಗಳು ಸಾವು, 60ಕ್ಕೂ ಹೆಚ್ಚು ಮಂದಿಗೆ ಗಾಯ

ಕೊಚ್ಚಿ : ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾನಿಲಯದಲ್ಲಿ (CUSAT) ಶನಿವಾರ ಸಂಜೆ ನಡೆದ ಸಂಗೀತ ರಸಮಂಜರಿ ಕಾರ್ಯಕ್ರಮದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಮತ್ತು ಕನಿಷ್ಠ 64 ಮಂದಿ ಗಾಯಗೊಂಡಿದ್ದಾರೆ. ಹಾಗೂ ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಲ್ವರು ವಿದ್ಯಾರ್ಥಿಗಳಲ್ಲಿ ಇಬ್ಬರು ಹುಡುಗಿಯರು ಮತ್ತು ಇಬ್ಬರು ಹುಡುಗರು, … Continued

ಕ್ರಿಕೆಟಿಗ ಶ್ರೀಶಾಂತ್ ವಿರುದ್ಧ 18.70 ಲಕ್ಷ ರೂ. ವಂಚನೆ ಆರೋಪ: ದೂರು ದಾಖಲು

ತಿರುವನಂತಪುರಂ: ಕ್ರೀಡಾ ಅಕಾಡೆಮಿಯಲ್ಲಿ ಪಾಲುದಾರನಾಗುವುದಾಗಿ ಭರವಸೆ ನೀಡಿ ವ್ಯಕ್ತಿಯೊಬ್ಬರಿಂದ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಮಾಜಿ ಕ್ರಿಕೆಟಿಗ ಶ್ರೀಶಾಂತ್ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ. ರೆಸಾರ್ಟ್‌ನಲ್ಲಿ ದೂರುದಾರರ ಹೆಸರಿನಲ್ಲಿ ಕಟ್ಟಡ ನಿರ್ಮಿಸುವುದಾಗಿ ಹೇಳಿ ಉಡುಪಿ ಮೂಲದ ರಾಜೀವಕುಮಾರ ಮತ್ತು ಕೆ ವೆಂಕಟೇಶ ಕಿಣಿ ಎಂಬವರು 18.70 ಲಕ್ಷ ರೂ.ಗಳನ್ನು ಪಡೆದು ಮೋಸ ಮಾಡಿದ್ದಾರೆ ಎಂದು … Continued