ವೀಡಿಯೊ..| ಕಾಸರಗೋಡು : ದೇವಸ್ಥಾನ ಉತ್ಸವದ ವೇಳೆ ಪಟಾಕಿ ದುರಂತ, 150ಕ್ಕೂ ಹೆಚ್ಚು ಮಂದಿಗೆ ಗಾಯ, 10 ಜನರ ಸ್ಥಿತಿ ಗಂಭೀರ

ಕಾಸರಗೋಡು: ಕೇರಳದ ಕಾಸರಗೋಡು ಜಿಲ್ಲೆಯ ದೇವಸ್ಥಾನವೊಂದರಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ಪಟಾಕಿ ಅಪಘಾತದಲ್ಲಿ 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರಲ್ಲಿ 10 ಮಂದಿ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಘಟನೆ ಕಾಸರಗೋಡು ಜಿಲ್ಲೆಯ ನೀಲೇಶ್ವರದಲ್ಲಿ ದೇವಸ್ಥಾನವೊಂದರ ಉತ್ಸವ ವೇಳೆ ಸೋಮವಾರ ಮಧ್ಯರಾತ್ರಿ ನಡೆದಿದೆ. ದೀಪಾವಳಿ ಹಬ್ಬದ ಋತುವಿನ ಆರಂಭದ ಆಚರಣೆಯ ಸಂದರ್ಭದಲ್ಲಿ ಕಾಸರಗೋಡು ಜಿಲ್ಲೆಯ ಅಂಜುತಂಬಲಂ … Continued

ಕುಡಿದು ವಾಹನ ಚಲಾಯಿಸಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಆರೋಪ : ಖ್ಯಾತ ಮಲಯಾಳಂ ನಟ ಬೈಜು ಸಂತೋಷ ಬಂಧನ

ತಿರುವನಂತಪುರಂ: ಕುಡಿದು ವಾಹನ ಚಲಾಯಿಸಿದ ಆರೋಪದ ಮೇಲೆ ಖ್ಯಾತ ಮಲಯಾಳಂ ನಟ ಬೈಜು ಸಂತೋಷ ಅವರನ್ನು ಕೇರಳ ಪೊಲೀಸರು ಸೋಮವಾರ (ಅಕ್ಟೋಬರ್ 14) ಬಂಧಿಸಿದ್ದಾರೆ. ಭಾನುವಾರ ರಾತ್ರಿ 11:45 ರ ಸುಮಾರಿಗೆ ನಟ ಕುಡಿದ ಅಮಲಿನಲ್ಲಿ ತನ್ನ ಕಾರನ್ನು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಒಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅವರು ತಿರುವನಂತಪುರಂನ ಮ್ಯೂಸಿಯಂ ಪೊಲೀಸ್ … Continued

ಬೈಕ್ ಮೆಕಾನಿಕ್ ಬೆಳಗಾಗೋದ್ರೊಳಗೆ ಕೋಟ್ಯಧಿಪತಿ : ಕೇರಳ ಲಾಟರಿಯಲ್ಲಿ 25 ಕೋಟಿ ರೂ. ಬಹುಮಾನ ಗೆದ್ದ ʻಮಂಡ್ಯ ವ್ಯಕ್ತಿʼ…!

ಮಂಡ್ಯ : ಕರ್ನಾಟಕದ ಬೈಕ್ ಮೆಕಾನಿಕ್​ ರಾತ್ರಿ ಬೆಳಗಾಗುವುದರ ಒಳಗೆ ಕೋಟ್ಯಾಧಿಪತಿಯಾಗಿದ್ದಾರೆ. ಅವರು ಲಾಟರಿಯಲ್ಲಿ‌ 25 ಕೋಟಿ ರೂ.‌ಜಾಕ್ಪಾಟ್‌ ಗೆದಿದ್ದಾರೆ…! ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದ ಅಲ್ತಾಫ್ ಪಾಷಾ ಅವರು ಕೇರಳದ ಲಾಟರಿಯಲ್ಲಿ 25 ಕೋಟಿ ರೂ.ಬಹುಮಾನ ಗೆದ್ದಿದ್ದಾರೆ. ಕೇರಳ ಲಾಟರಿಯ ತಿರುವೋಣಂ ಬಂಪರ್ ಬಹುಮಾನ ವಿಜೇತ ವಯನಾಡಿನಿಂದ ಟಿಕೆಟ್‌ ಖರೀದಿಸಿದ್ದಾರೆ. ಅವರು ವಯನಾಡಿನಲ್ಲಿರುವ ಸಂಬಂಧಿಕರ … Continued

ಕುಮಟಾ | ಲಾರಿಯಲ್ಲಿ ಸಾಗಿಸುತ್ತಿದ್ದ 27 ಕೋಣಗಳ ರಕ್ಷಣೆ ; ನಾಲ್ವರ ಬಂಧನ

ಕುಮಟಾ : ಲಾರಿಯೊಂದರಲ್ಲಿ ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 27 ಕೋಣಗಳನ್ನು ಉತ್ತರ ಕನ್ನಡ ಜಿಲ್ಲೆಯ ಕುಮಟಾ ಎಪಿಎಂಸಿ ಬಳಿ ರಕ್ಷಣೆ ಮಾಡಿರುವ ಪೊಲೀಸರು ಈ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಮಹಾರಾಷ್ಟ್ರದ ಕೊಲ್ಲಾಪುರದಿಂದ ಕೇರಳದ ಕಸಾಯಿಖಾನೆಗೆ ಸಾಗಾಟ ಮಾಡಲಾಗುತ್ತಿತ್ತು ಎಂದು ಹೇಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ವಾಹವನ್ನು ನಿಲ್ಲಿಸಿ ತಪಾಸಣೆ ಮಾಡಿದಾಗ … Continued

ನಟ ಮೋಹನಲಾಲ್‌ ಆಸ್ಪತ್ರೆಗೆ ದಾಖಲು

ಕೊಚ್ಚಿ: ಹಿರಿಯ ನಟ ಮೋಹನಲಾಲ್ ಅವರನ್ನು ಕೊಚ್ಚಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರತರವಾದ ಜ್ವರ, ಉಸಿರಾಟದ ತೊಂದರೆ ಮತ್ತು ಸ್ನಾಯು ನೋವು ಸೇರಿದಂತೆ ವಿವಿಧ ರೋಗಲಕ್ಷಣಗಳಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಧಿಕೃತ ವೈದ್ಯಕೀಯ ಹೇಳಿಕೆಯ ಪ್ರಕಾರ, ನಟನಿಗೆ ವೈರಲ್ ಉಸಿರಾಟದ ಸೋಂಕು ಇದೆ ಎಂದು ಶಂಕಿಸಲಾಗಿದೆ. 64 ವರ್ಷ ವಯಸ್ಸಿನ ನಟನಿಗೆ ಐದು ದಿನಗಳವರೆಗೆ ಸಾರ್ವಜನಿಕ ಸಂಪರ್ಕ … Continued

ಇದು ಸಾಮಾನ್ಯ ಅನಾಹುತವಲ್ಲ… : ವಯನಾಡು ಭೂಕುಸಿತ ಪೀಡಿತ ಪ್ರದೇಶಗಳಿಗೆ ಪ್ರಧಾನಿ ಮೋದಿ ಭೇಟಿ

ವಯನಾಡು: ವಿನಾಶಕಾರಿ ಭೂಕುಸಿತದಿಂದ ತತ್ತರಿಸಿರುವ ಕೇರಳದ ವಯನಾಡಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವೈಮಾನಿಕ ಸಮೀಕ್ಷೆ ಕೈಗೊಂಡಿದ್ದಾರೆ. 400 ಕ್ಕೂ ಹೆಚ್ಚು ಜನರು ಸಾವಿಗೀಡಾಗಿ ನೂರಾರು ಜನ ಗಾಯಗೊಂಡಿರುವ ಕೇರಳದ ವಯನಾಡು ಜಿಲ್ಲೆಯ ಮುಂಡಕೈ-ಚೂರಲ್‌ಮಲ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಕಲ್ಪೆಟ್ಟಾದ ಎಸ್.ಕೆ.ಎಂ.ಜೆ. ಶಾಲಾ … Continued

ವೀಡಿಯೊ | ವಯನಾಡು ಭೂ ಕುಸಿತ : 10 ದಿನಗಳಿಂದ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದ ಸೇನೆಗೆ ಜನರಿಂದ ಭಾವನಾತ್ಮಕ ಬೀಳ್ಕೊಡುಗೆ

ವಯನಾಡು : ಇತ್ತೀಚಿನ ಭೂಕುಸಿತ ರಕ್ಷಣಾ ಕಾರ್ಯಾಚರಣೆಗಳ ಸಮಯದಲ್ಲಿ ಭಾರತೀಯ ಸೈನಿಕರ ಧೀರ ಪ್ರಯತ್ನಗಳನ್ನು ಗುರುತಿಸಿ, ಕೇರಳದ ವಯನಾಡ್‌ನಲ್ಲಿ ಭಾರತೀಯ ಸೇನಾ ಸಿಬ್ಬಂದಿಗೆ ಜನರು ಹೃತ್ಪೂರ್ವಕ ಮತ್ತು ಭಾವನಾತ್ಮಕ ವಿದಾಯ ಹೇಳಿದರು. ಇತರರನ್ನು ರಕ್ಷಿಸಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟ ಸೈನಿಕರಿಗೆ ಸ್ಥಳೀಯ ಸಮುದಾಯ ಮತ್ತು ಹೊರಗಿನವರು ಕೃತಜ್ಞತೆ ಮತ್ತು ಮೆಚ್ಚುಗೆಯ ಸುರಿಮಳೆಗೈದರು. ಕೊಚ್ಚಿ ರಕ್ಷಣಾ ಸಾರ್ವಜನಿಕ … Continued

ವಯನಾಡು ಭೂ ಕುಸಿತದ ಬಗ್ಗೆ ತುರ್ತು ಸೇವೆಗಳಿಗೆ ಮೊದಲು ಕರೆ ಮಾಡಿದ್ದ ನೀತು ಜೊಜೊ ಅದೇ ದುರಂತದಲ್ಲಿ ಸಾವು

ವಯನಾಡು: ಜುಲೈ 30 ರಂದು ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ವಿನಾಶಕಾರಿ ಭೂಕುಸಿತದ ಬಗ್ಗೆ ತುರ್ತು ಸೇವೆಗಳಿಗೆ ಎಚ್ಚರಿಕೆ ನೀಡಿದವರಲ್ಲಿ ವಯನಾಡಿನ ಖಾಸಗಿ ಆಸ್ಪತ್ರೆಯ ಮಹಿಳಾ ಸಿಬ್ಬಂದಿ ನೀತು ಜೊಜೊ ಮೊದಲಿಗರು, ಆದರೆ ರಕ್ಷಣಾ ತಂಡಗಳು ತಲುಪುವ ಮೊದಲೇ ಅವರು ಪ್ರಾಣ ಕಳೆದುಕೊಂಡಿದ್ದಾರೆ. ಜಿಲ್ಲೆಯ ಚೂರಲ್ಮಲಾದಲ್ಲಿ ಸಂಭವಿಸಿದ ವಿನಾಶಕಾರಿ ಭೂ ಕುಸಿತದ ಸರಣಿಯ ಮೊದಲ ಭೂಕುಸಿತದ ನಂತರ … Continued

ಪ್ರೀತಿಯ ಭಾರತೀಯ ಸೇನೆ…: ವಯನಾಡಿನ ಭೂಕುಸಿತದಲ್ಲಿ ಸಂತ್ರಸ್ತರ ರಕ್ಷಣೆಗೆ ನಿಂತ ಯೋಧರಿಗೆ ಹೃದಯಸ್ಪರ್ಶಿ ಪತ್ರ ಬರೆದ 3ನೇ ತರಗತಿ ಬಾಲಕ

ತಿರುವನಂತಪುರಂ : ವಿನಾಶಕಾರಿ ಭೂಕುಸಿತದಿಂದ ತತ್ತರಿಸಿರುವ ವಯನಾಡಿನಲ್ಲಿ ಅವಶೇಷಗಳಡಿ ಸಿಲುಕಿದವರು ಹಾಗೂ ಸಂತ್ರಸ್ತರ ರಕ್ಷಣೆಗೆ ಟೊಂಕ ಕಟ್ಟಿ ನಿಂತ ಭಾರತೀಯ ಯೋಧರಿಗೆ 3ನೇ ತರಗತಿ ಬಾಲಕನೊಬ್ಬ ಹೃದಯಸ್ಪರ್ಶಿ ಪತ್ರ ಬರೆದಿದ್ದಾನೆ ಹಾಗೂ ಮುಂದೊಂದು ದಿನ ತಾನೂ ಭಾರತೀಯ ಸೇನೆ ಸೇರಲು ಇಚ್ಛಿಸುತ್ತೇನೆ ಎಂದು ಹೇಳಿದ್ದಾನೆ. ಮಂಗಳವಾರ ಬೆಳಗಾಗುವ ಮುನ್ನ ವಯನಾಡು ಜಿಲ್ಲೆಯಲ್ಲಿ ಅವಳಿ ಭೂಕುಸಿತಗಳು ಸಂಭವಿಸಿ … Continued

ವಯನಾಡು ಭೂಕುಸಿತ| ಸಾವಿನ ಸಂಖ್ಯೆ 344ಕ್ಕೆ ಏರಿಕೆ ; ಬದುಕುಳಿದವರನ್ನು ಹುಡುಕಲು ಆಳದ ವರೆಗೆ ಶೋಧ ಮಾಡುವ ರಾಡಾರ್‌ ಬಳಕೆ

ವಯನಾಡು: ಕೇರಳದ ವಯನಾಡು ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 344 ಕ್ಕೆ ಏರಿದೆ. ರಕ್ಷಣಾ ತಂಡಗಳು ಸಮಯಕ್ಕೆ ವಿರುದ್ಧವಾಗಿ ಓಡುತ್ತಿದ್ದು, ರಾಜ್ಯ ಸರ್ಕಾರದ ಇತ್ತೀಚಿನ ನವೀಕರಣದ ಪ್ರಕಾರ ಅವಶೇಷಗಳ ಅಡಿಯಲ್ಲಿ ಮತ್ತು ಕುಸಿದ ಮನೆಗಳಲ್ಲಿ ಸಿಲುಕಿರುವ ಬದುಕುಳಿದವರನ್ನು ಹುಡುಕುವ ಪ್ರಯತ್ನದಲ್ಲಿ ರಾಡಾರ್‌ಗಳನ್ನು ಬಳಸುತ್ತಿದ್ದಾರೆ. . ರಕ್ಷಣಾ ಕಾರ್ಯಾಚರಣೆಗೆ ನೆರವಾಗಲು ಡೀಪ್ ಸರ್ಚ್ ರಾಡಾರ್‌ಗಳನ್ನು ಕಳುಹಿಸುವಂತೆ ಕೇರಳ ಸರ್ಕಾರ … Continued