ಕೇರಳ ಸ್ಫೋಟದ ಕುರಿತು ಹೇಳಿಕೆ: ಕೇಂದ್ರ ಸಚಿವರ ವಿರುದ್ಧ ಪ್ರಕರಣ ದಾಖಲು

ಕೇರಳದಲ್ಲಿ ಭಾನುವಾರ ನಡೆದ ಸರಣಿ ಸ್ಫೋಟದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಕೇಂದ್ರ ಸಚಿವ ರಾಜೀವ ಚಂದ್ರಶೇಖರ ವಿರುದ್ಧ ಪ್ರಕರಣ ದಾಖಲಾಗಿದೆ. ಸಾಮಾಜಿಕ ದ್ವೇಷವನ್ನು ಹರಡಿದ ಆರೋಪದಡಿ ಸಚಿವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. “ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಅವರ ಮೇಲೆ ಆರೋಪ ಹೊರಿಸಲಾಗಿದೆ ಎಂದು … Continued

ವೀಡಿಯೊ | ನಾನೇಕೆ ಸ್ಫೋಟಿಸಿದ್ದೇನೆಂದರೆ, ಅವರು..: ಕೊಚ್ಚಿ ತ್ರಿವಳಿ ಸ್ಫೋಟಕ್ಕೆ ಹೊಣೆ ಹೊತ್ತ ಮಾರ್ಟಿನ್ ಎಂಬಾತನಿಂದ ವೀಡಿಯೊ ಬಿಡುಗಡೆ

ತಿರುವನಂತಪುರ: ಕೊಚ್ಚಿಯ ಕಲಮಸ್ಸೇರಿ ಕ್ರಿಶ್ಚಿಯನ್ ಧಾರ್ಮಿಕ ಸಮಾವೇಶದಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ಸ್ಫೋಟ ಮಾಡಿದ ಹೊಣೆ ಹೊತ್ತಿದ್ದು, ಈ ಸಂಬಂಧ ವೀಡಿಯೊ ಬಿಡುಗಡೆ ಮಾಡಿದ್ದಾನೆ. ಡೊಮಿನಿಕ್ ಮಾರ್ಟಿನ್ ಎಂದು ಗುರುತಿಸಲಾದ ವ್ಯಕ್ತಿಯೊಬ್ಬ ಸರಣಿ ಸ್ಫೋಟದ ಹೊಣೆ ಹೊತ್ತುಕೊಂಡು ಪೊಲೀಸರ ಮುಂದೆ ಶರಣಾಗಿದ್ದಾನೆ. ಹಲವಾರು ಟಿವಿ ಚಾನೆಲ್‌ಗಳಲ್ಲಿ ಪ್ರಸಾರವಾದ ವೀಡಿಯೊ ಪ್ರಕಾರ, … Continued

ಕೇರಳದ ಧಾರ್ಮಿಕ ಸಭೆಯಲ್ಲಿ ಸರಣಿ ಸ್ಫೋಟ : 1 ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ

ಭಾನುವಾರ ಬೆಳಗ್ಗೆ ಕೇರಳದ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಸರಣಿ ಸ್ಫೋಟಗಳು ಸಂಭವಿಸಿದ್ದು. ಒಬ್ಬ ಮಹಿಳೆ ಸಾವಿಗೀಡಾಗಿದ್ದಾರೆ ಮತ್ತು50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಚ್ಚಿಯಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿರುವ ಕಲಮಸ್ಸೆರಿಯ ಕೇಂದ್ರದಲ್ಲಿ ನಡೆದ ಯೆಹೋವನ ಸಾಕ್ಷಿಗಳ ಸಮಾವೇಶದಲ್ಲಿ ಈ ಘಟನೆ ನಡೆದಿದೆ. ಪ್ರಾರ್ಥನಾ ಸಭೆಯಲ್ಲಿ ಸುಮಾರು 2,000 ಜನರು ಭಾಗವಹಿಸಿದ್ದರು. … Continued

ಪ್ಯಾಲೆಸ್ತೀಯನ್ನರ ಬೆಂಬಲಿಸಿ ನಡೆದ ಐಯುಎಂಎಲ್‌ ಸಮಾವೇಶದಲ್ಲಿ ಹಮಾಸ್ ‘ಭಯೋತ್ಪಾದಕ ಗುಂಪು’ ಎಂದ ಶಶಿ ತರೂರ್ : ಹಲವರ ವಿರೋಧದ ನಂತರ‌ ಸ್ಪಷ್ಟನೆ

ತಿರುವನಂತಪುರಂ: ಅಕ್ಟೋಬರ್ 7ರಂದು ಇಸ್ರೇಲ್ ಮೇಲಿನ ಹಮಾಸ್‌ ದಾಳಿಯನ್ನು ʼಭಯೋತ್ಪಾದಕರ ದಾಳಿʼ ಎಂದು ಪ್ಯಾಲೆಸ್ತೀನ್ ಬೆಂಬಲಿಸಿ ನಡೆದ ರ್ಯಾಲಿಯಲ್ಲಿ ಹೇಳಿದ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಕೇರಳದ ಐಯುಎಂಎಲ್ ಮತ್ತು ಹಮಾಸ್ ಪರ ಕೆಲವು ಗುಂಪುಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ನಂತರ ಈ ಬಗ್ಗೆ ತರೂರ್‌ ಸ್ಪಷ್ಟನೆ ನೀಡಿದ್ದು, ನಾನು ಯಾವಾಗಲೂ ಪ್ಯಾಲೆಸ್ತೀನ್ ಜನರೊಂದಿಗೆ … Continued

ಚಹಾ ಮಾರುವ ಸೂಪರ್‌ ಸ್ಟಾರ್‌ ರಜನಿಕಾಂತ : ದಂಗಾದ ಅಭಿಮಾನಿಗಳು ; ನಿಜವಾದ ವಿಷ್ಯ ಏನಂದ್ರೆ… | ವೀಡಿಯೊ ವೀಕ್ಷಿಸಿ

ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋವೊಂದು ವೈರಲ್‌ ಆಗಿತ್ತು. ಎಲ್ಲಿಯವರೆಗೆ ಅಂದರೆ ಅನೇಕರು ಇದು ರಜನಿಕಾಂತ್ ಅವರ ಚಿತ್ರೀಕರಣದ ವೇಳೆಗಿನ ವೀಡಿಯೊ ಎಂದುಕೊಂಡಿದ್ದರು. ಮುಖ, ಕೂದಲು, ನೋಟ, ಹಾವಭಾವ ಎಲ್ಲವೂ ರಜಿನಿಕಾಂತ ರಂತೆಯೇ ಇತ್ತು. ಹಾಗಾಗಿ ಇದು ರಜನಿಕಾಂತ್‌ ಎಂದೇ ಬಹುತೇಕರು ಭಾವಿಸಿದ್ದರು. ನಂತರ ಅವರು ಕೇರಳದ ಕೊಚ್ಚಿನ್‌ನಲ್ಲಿರುವ ವೆಂಕಟೇಶ್ವರ ಹೋಟೆಲ್‌ ಮಾಲೀಕ ಸುಧಾಕರ ಪ್ರಭು ಎಂದು … Continued

ವೀಡಿಯೊ…: ಹೆಲ್ಮೆಟ್‌ನೊಳಗೆ ಅಡಗಿಕೊಂಡಿತ್ತು ವಿಷಪೂರಿತ ನಾಗರಹಾವು…ಅದೃಷ್ಟವಶಾತ್‌ ವ್ಯಕ್ತಿ ಕಡಿತದಿಂದ ಪಾರು | ವೀಕ್ಷಿಸಿ

ಕೇರಳದ ವ್ಯಕ್ತಿಯೊಬ್ಬರು ತಮ್ಮ ದ್ವಿಚಕ್ರ ವಾಹನದಲ್ಲಿಟ್ಟಿದ್ದ ಹೆಲ್ಮೆಟ್‌ನಲ್ಲಿ ನಾಗರಹಾವನ್ನು ಪತ್ತೆಯಾಗಿದೆ. ವಾಹನ ಸವಾರ ಈ ವಿಷಕಾರಿ ಹಾವಿನ ಕಡಿತದಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡಿದ್ದಾರೆ. ತ್ರಿಶೂರ್ ಮೂಲದ ಸೋಜನ್, ತನ್ನ ಕೆಲಸದ ಸ್ಥಳದಲ್ಲಿ ನಿಲ್ಲಿಸಿದ್ದ ಸ್ಕೂಟರ್ ಪಕ್ಕದ ಪ್ಲಾಟ್‌ಫಾರ್ಮ್‌ನಲ್ಲಿ ಹೆಲ್ಮೆಟ್ ಇರಿಸಿದ್ದರು. ಸಂಜೆ ಅವರು ಹೊರಡುವಾಗ ತಮ್ಮ ಹೆಲ್ಮೆಟ್‌ ತೆಗೆದಾಗ ಅವರಿಗೆ ಹೆಲ್ಮೆಟ್‌ ಒಳಗೆ ಏನೋ ಪ್ರವೇಶಿಸಿದೆ ಎಂಬುದು … Continued

ಚರ್ಚ್‌ ಪಾದ್ರಿ ಬಿಜೆಪಿಗೆ ಸೇರ್ಪಡೆಯಾದ ನಂತರ ಕರ್ತವ್ಯದಿಂದ ಅಮಾನತುಗೊಳಿಸಿದ ಚರ್ಚ್

ತಿರುವನಂತಪುರ: ಕ್ಯಾಥೋಲಿಕ್‌ ಪಾದ್ರಿಯೊಬ್ಬರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡ ಕೆಲವೇ ಗಂಟೆಗಳಲ್ಲಿ ಅವರನ್ನು ಕ್ಯಾಥೋಲಿಕ್‌ ಚರ್ಚ್‌ ನ ವಿಕಾರ್‌ ಹುದ್ದೆಯಿಂದ ವಜಾಗೊಳಿಸಿರುವ ಘಟನೆ ಇಡುಕ್ಕಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಸೋಮವಾರ (ಅಕ್ಟೋಬರ್‌ 2) ಇಡುಕ್ಕಿಯ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎಸ್.ಅಜಿ ಅವರಿಂದ ಫಾ. ಕುರಿಯಕೋಸೆ ಮಟ್ಟಂ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಸ್ವೀಕರಿಸಿದ್ದರು. ಈ ವಿಷಯ ತಿಳಿದ … Continued

45,000 ರೂ.ಗಳಲ್ಲಿ ಮಾರುತಿ 800 ಕಾರನ್ನು ಐಶಾರಾಮಿ ‘ರೋಲ್ಸ್ ರಾಯ್ಸ್’ ಕಾರ್‌ ಆಗಿ ಪರಿವರ್ತಿಸಿದ ಕೇರಳದ ಈ ಹುಡುಗ | ವೀಕ್ಷಿಸಿ

ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ವೀಡಿಯೊವೊಂದು ಹರಿದಾಡುತ್ತಿದೆ, ಅದರಲ್ಲಿ ಕೇರಳದ ಹದಿಹರೆಯದ ಹುಡುಗ ಹೆಡ್‌ ಲೈನ್‌ ಪಡೆದಿದ್ದಾನೆ. ಆತ ಐಕಾನಿಕ್ ಮಾರುತಿ-800 ಕಾರನ್ನು ಅತ್ಯಂತ ದುಬಾರಿ ಕಾರಾದ ರೋಲ್ಸ್ ರಾಯ್ಸ್ ಆಗಿ ಪರಿವರ್ತಿಸಿದ್ದಾನೆ. 18 ವರ್ಷದ ಹದಿಫ್ ಎಂಬವರು ಫಾಜಿಲ್ ಬಶೀರ್ ಒಡೆತನದ ಟ್ರಿಕ್ಸ್ ಟ್ಯೂಬ್ ಹೆಸರಿನ ಯೂಟ್ಯೂಬ್ ಚಾನೆಲ್‌ನಲ್ಲಿ ಈ ಬಗ್ಗೆ ತನ್ನ ವಿವರಗಳನ್ನು ಹಂಚಿಕೊಂಡಿದ್ದಾರೆ. … Continued

ನಿಪಾ ವೈರಸ್: ಕೇರಳದ ಕೋಝಿಕ್ಕೋಡ್‌ನಲ್ಲಿ ಶಾಲಾ-ಕಾಲೇಜುಗಳಿಗೆ 2 ದಿನ ರಜೆ ಘೋಷಣೆ

ಕೋಝಿಕ್ಕೋಡ್ : ಕೇರಳದಲ್ಲಿ ಕೋಝಿಕ್ಕೋಡಿನಲ್ಲಿ ʼನಿಪಾʼ ವೈರಸ್‌ ಹರಡಿದ ಹಿನ್ನೆಲೆಯಲ್ಲಿ ಗುರುವಾರ ಮತ್ತು ಶುಕ್ರವಾರ ಕೋಝಿಕೋಡ್‌ನ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಕೋಝಿಕ್ಕೋಡ್ ಜಿಲ್ಲಾಧಿಕಾರಿ ಎ. ಗೀತಾ ಅವರು ಫೇಸ್‌ಬುಕ್ ಪೋಸ್ಟ್‌ನಲ್ಲಿ ರಜೆ ಘೋಷಿಸಿದ್ದು, ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಎರಡು ದಿನಗಳಲ್ಲಿ ಆನ್‌ಲೈನ್ ತರಗತಿಗಳನ್ನು ನಡೆಸಬಹುದು ಎಂದು ಹೇಳಿದ್ದಾರೆ. ಆದರೆ, ವಿಶ್ವವಿದ್ಯಾನಿಲಯದ ಪರೀಕ್ಷಾ ವೇಳಾಪಟ್ಟಿಯಲ್ಲಿ … Continued

ಕೇರಳದಲ್ಲಿ ನಿಪಾ ವೈರಸ್ ಪ್ರಕರಣಗಳು ದೃಢ : ಕೇಂದ್ರದಿಂದ ತಜ್ಞರ ತಂಡ ರವಾನೆ

ಕೋಝಿಕ್ಕೋಡ್‌ : ಕೋಝಿಕ್ಕೋಡ್‌ನಲ್ಲಿ ಇಬ್ಬರು ನಿಪಾಹ್ ವೈರಸ್‌ನಿಂದ ಮೃತಪಟ್ಟಿದ್ದಾರೆ ಎಂದು ಖಚಿತಪಡಿಸಿದ ನಂತರ ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಜ್ಞರ ತಂಡವನ್ನು ಕೇರಳಕ್ಕೆ ಕಳುಹಿಸಿದೆ. ಒಬ್ಬ ವ್ಯಕ್ತಿ ಸೆಪ್ಟೆಂಬರ್ 11 ರಂದು ಸಾವಿಗೀಡಾದರೆ, ಇನ್ನೊಬ್ಬರು ಆಗಸ್ಟ್ 30 ರಂದು ಮೃತಪಟ್ಟಿದ್ದಾರೆ. ಸೋಮವಾರ (ಸೆಪ್ಟೆಂಬರ್ 11) ಮೃತಪಟ್ಟ ವ್ಯಕ್ತಿಯ 9 ವರ್ಷದ ಮಗು ಮತ್ತು 24 ವರ್ಷದ … Continued