‘ನರಭಕ್ಷಕ’ ಹುಲಿಯ ಶವಪತ್ತೆ ; ಅದರ ಹೊಟ್ಟೆಯೊಳಗಿತ್ತು ಮಹಿಳೆಯ ಕಿವಿಯೋಲೆ, ಕೂದಲು, ಬಟ್ಟೆ…!

ವಯನಾಡು: ಎರಡು ದಿನಗಳ ಹಿಂದೆ ಮಹಿಳೆಯೊಬ್ಬರನ್ನು ಕೊಂದು ಹಾಕಿದ್ದ ‘ನರಭಕ್ಷಕ’ ಹುಲಿ ಕೇರಳದ ವಯನಾಡು ಜಿಲ್ಲೆಯಲ್ಲಿ ಸೋಮವಾರ ಶವವಾಗಿ ಪತ್ತೆಯಾಗಿದೆ. ಸತ್ತ ಹುಲಿಯ ಹೊಟ್ಟೆಯೊಳಗೆ ಸತ್ತ ಮಹಿಳೆಯ ಉಡುಗೆ ಮತ್ತು ಒಂದು ಜೋಡಿ ಕಿವಿಯೋಲೆಗಳು ಸಿಕ್ಕಿವೆ. ಎರಡು ದಿನಗಳ ಹಿಂದೆ ರಾಧಾ ಎಂಬ ಆದಿವಾಸಿ ಮಹಿಳೆಯನ್ನು ಕೊಂದ ಹುಲಿ ಇದೇ ಎಂದು ಅರಣ್ಯ ಇಲಾಖೆ ಖಚಿತಪಡಿಸಿದೆ. … Continued

ಶರೋನ್ ರಾಜ್ ಹತ್ಯೆ ಪ್ರಕರಣ: ಪ್ರೇಯಸಿಗೆ ಮರಣದಂಡನೆ ಶಿಕ್ಷೆ ನೀಡಿದ ಕೋರ್ಟ್‌

ತಿರುವನಂತಪುರಂ : 2022 ರಲ್ಲಿ ತನ್ನ ಬಾಯ್ ಫ್ರೆಂಡ್ ಶರೋನ್ ರಾಜ್‌ಗೆ ಮಾರಕ ಕಳೆನಾಶಕ ಬೆರೆಸಿದ ಆಯುರ್ವೇದ ಮಿಶ್ರಣವನ್ನು ಕುಡಿಸಿ ಕೊಲೆ ಮಾಡಿದ ಆರೋಪದ ಮೇಲೆ ಕನ್ಯಾಕುಮಾರಿ ಜಿಲ್ಲೆಯ ರಾಮವರ್ಮಂಚಿರದ 24 ವರ್ಷದ ಮಹಿಳೆಗೆ ನೆಯ್ಯಟ್ಟಿಂಕರಗೆ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ. ತೀರ್ಪು ಕೇಳಲು ಶರೋನ್ ಪೋಷಕರನ್ನು ನ್ಯಾಯಾಲಯವು ಕರೆಸಿಕೊಂಡಿತ್ತು. ವಾದ ವಿವಾದ … Continued

ಪವಾಡ….| ಆಸ್ಪತ್ರೆಯಲ್ಲಿ ‘ಮೃತ’ ವ್ಯಕ್ತಿ ಶವಾಗಾರಕ್ಕೆ ಸ್ಥಳಾಂತರಿಸುವಾಗ ಜೀವಂತ…!

ಕಣ್ಣೂರು : ಕೇರಳದ ಕಣ್ಣೂರಿನ 67 ವರ್ಷದ ವ್ಯಕ್ತಿಯೊಬ್ಬರು ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದ್ದ ವ್ಯಕ್ತಿಯೊಬ್ಬರು ಸೋಮವಾರ ತಡರಾತ್ರಿ ಶವಾಗಾರದಲ್ಲಿ ಜೀವಂತವಾಗಿರುವುದು ಕಂಡುಬಂದಿದೆ…! ಕಣ್ಣೂರಿನ ಪಚ್ಚಪೊಯಿಕಾ ಮೂಲದ ವೆಳ್ಳುವಕ್ಕಂಡಿ ಪವಿತ್ರನ್ ಎಂದು ಗುರುತಿಸಲಾದ ವ್ಯಕ್ತಿಯನ್ನು ಪಾರ್ಶ್ವವಾಯು ಮತ್ತು ಉಸಿರಾಟದ ಸಮಸ್ಯೆಗಳ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್‌ನಲ್ಲಿ ಇರಿಸಲಾಗಿದ್ದರೂ, ಅವರ ಸ್ಥಿತಿಯು ಹದಗೆಟ್ಟಿತು, ಅರೋಗ್ಯ ಸುಧಾರಣೆಯಾಗದ … Continued

5 ವರ್ಷಗಳಿಂದ 60 ಕ್ಕೂ ಹೆಚ್ಚು ವ್ಯಕ್ತಿಗಳಿಂದ ಲೈಂಗಿಕ ದೌರ್ಜನ್ಯ: ಅಪ್ರಾಪ್ತೆ ಅಥ್ಲೀಟ್ ಆರೋಪ ; 15 ಜನರ ಬಂಧನ

ಪತನಂತಿಟ್ಟ: 18 ವರ್ಷದ ಕ್ರೀಡಾಪಟುವಿನ ಮೇಲೆ ಐದು ವರ್ಷಗಳಿಗೂ ಹೆಚ್ಚು ಕಾಲ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 60 ಕ್ಕೂ ಹೆಚ್ಚು ವ್ಯಕ್ತಿಗಳ ವಿರುದ್ಧ ಪತನಂತಿಟ್ಟ ಜಿಲ್ಲಾ ಪೊಲೀಸರು ತನಿಖೆ ಆರಂಭಿಸಿದ ನಂತರ ಕೇರಳದಲ್ಲಿ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಕೇರಳ ಪೊಲೀಸರು ಶುಕ್ರವಾರ ಆಕೆಯ ತರಬೇತುದಾರರು ಮತ್ತು ಸಹ ಕ್ರೀಡಾಪಟುಗಳ ವಿರುದ್ಧ ನಾಲ್ಕು … Continued

ಕನ್ನಡವೂ ಸೇರಿ ಬಹುಭಾಷೆಗಳ ಖ್ಯಾತ ಹಿನ್ನೆಲೆ ಗಾಯಕ ಪಿ ಜಯಚಂದ್ರನ್ ಇನ್ನಿಲ್ಲ

ತಿರುವನಂತಪುರಂ : ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಹಿನ್ನೆಲೆ ಗಾಯಕ ಪಿ ಜಯಚಂದ್ರನ್ ಅವರು ಗುರುವಾರ ನಿಧನರಾಗಿದ್ದಾರೆ. ಕ್ಯಾನ್ಸರಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ತ್ರಿಶೂರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.. ಮಲಯಾಳಂ ಅಷ್ಟೇ ಅಲ್ಲ, ಜಯಚಂದ್ರನ್ ಅವರು, ಕನ್ನಡ, ತಮಿಳು, ತೆಲುಗು ಹಿಂದಿಯಲ್ಲೂ ಅನೇಕ ಗೀತೆಗಳನ್ನು ಹಾಡಿ ಅಳಿಸಲಾಗದ ಛಾಪು ಮೂಡಿಸಿದ್ದರು. 16000 ಕ್ಕೂ … Continued

ಭಯಾನಕ ವೀಡಿಯೊ…| ಉತ್ಸವದಲ್ಲಿ ಪಾಲ್ಗೊಂಡಿದ್ದ ವ್ಯಕ್ತಿಯನ್ನು ಮೇಲಕ್ಕೆತ್ತಿ ಒಗೆದ ಕೋಪಗೊಂಡ ಆನೆ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಮಂಗಳವಾರ ತಡರಾತ್ರಿ ಉತ್ಸವದ ವೇಳೆ ಆನೆಯೊಂದು ಕೋಪಗೊಂಡ ನಂತರ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಸೇರಿದಂತೆ ಕನಿಷ್ಠ 17 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ತಿರುರ್‌ನ ಪುತಿಯಂಗಡಿ ಉತ್ಸವದಲ್ಲಿ ಈ ಘಟನೆ ಸಂಭವಿಸಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರು. ಕಾರ್ಯಕ್ರಮದ ದೃಶ್ಯಗಳು ಐದು ಆನೆಗಳು ಉತ್ಸವದಲ್ಲಿ ಪಾಲ್ಗೊಂಡಿರುವುದನ್ನು ತೋರಿಸುತ್ತವೆ. ಆನೆಗಳನ್ನು ಅಲಂಕರಿಸಲಾಗಿದೆ. ಉತ್ಸವದಲ್ಲಿ … Continued

ವೀಡಿಯೊ…| ಭೀಕರ ಅಪಘಾತ : ನಾಲ್ಕೈದು ಪಲ್ಟಿ ಹೊಡೆದ ಶಾಲಾ ಬಸ್ ; ಓರ್ವ ವಿದ್ಯಾರ್ಥಿನಿ ಸಾವು, 14 ಮಂದಿಗೆ ಗಾಯ

ಕಣ್ಣೂರು : ಶಾಲಾ ಬಸ್ ಪಲ್ಟಿಯಾದ ಪರಿಣಾಮ 5 ನೇ ತರಗತಿ ವಿದ್ಯಾರ್ಥಿನಿ ಸಾವಿಗೀಡಾಗಿದ್ದು, 14 ಮಂದಿ ಗಾಯಗೊಂಡ ಘಟನೆ ಕೇರಳದ ಕಣ್ಣೂರಿನಲ್ಲಿ ಬುಧವಾರ ನಡೆದಿದೆ. ಕುರುಮತ್ತೂರು ಪಂಚಾಯತದ ಚಿನ್ಮಯ ವಿದ್ಯಾಲಯದ 15 ವಿದ್ಯಾರ್ಥಿಗಳಿದ್ದ ಬಸ್ಸು ಹೆದ್ದಾರಿಗೆ ಹೋಗಲು ಇಳಿಜಾರಿನಲ್ಲಿ ಚಲಿಸುತ್ತಿದ್ದಾಗ ಶ್ರೀಕಂಠಪುರಂನ ವಳಕ್ಕೈ ಎಂಬಲ್ಲಿ ಸಂಜೆ 4 ಗಂಟೆಗೆ ಸುಮಾರಿಗೆ ನಾಲ್ಕೈದು ಸುತ್ತು ಪಲ್ಟಿಯಾಗಿದೆ. … Continued

ವೇದಿಕೆಯಿಂದ ಕೆಳಗೆ ಬಿದ್ದು ಗಾಯಗೊಂಡ ಕಾಂಗ್ರೆಸ್‌ ಶಾಸಕಿ ಸ್ಥಿತಿ ಗಂಭೀರ

ಕೊಚ್ಚಿ: ಕಾರ್ಯಕ್ರಮದ ವೇದಿಕೆಯಿಂದ ಕೆಳಗೆ ಬಿದ್ದು ಕಾಂಗ್ರೆಸ್‌ ಶಾಸಕಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕೇರಳದ ಕೊಚ್ಚಿ ಜವಾಹರ್​ಲಾಲ್ ನೆಹರು ಸ್ಟೇಡಿಯಂನಲ್ಲಿ ನಡೆದಿದೆ. ಶಾಸಕಿ ಉಮಾಥಾಮಸ್ ಅವರು ಗಂಭೀರ ಸ್ಥಿತಿಯಲ್ಲಿದ್ದು, ಅವರಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಚ್ಚಿಯ ಜವಾಹರ್​ಲಾಲ್ ನೆಹರು ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್​ ಶಾಸಕಿ ಉಮಾ ಥಾಮಸ್ ಅಲ್ಲಿಂದ ಕೆಳಗೆ … Continued

ವೀಡಿಯೊ…| ಕಾರಿನ ಬಾಗಿಲಿಗೆ ಹೆಬ್ಬೆರಳು ಸಿಕ್ಕಿಬಿದ್ದರೂ ವ್ಯಕ್ತಿಯನ್ನು ರಸ್ತೆಯಲ್ಲಿ ಅರ್ಧ ಕಿಮೀ ಎಳೆದೊಯ್ದ ಚಾಲಕ…!

ವಯನಾಡು: ಎರಡು ಗುಂಪುಗಳ ನಡುವಿನ ಜಗಳ ಬಿಡಿಸಲು ಹೋದ ಆದಿವಾಸಿ ವ್ಯಕ್ತಿಯೊಬ್ಬರನ್ನು ಕಾರಿನಲ್ಲಿ ರಸ್ತೆಯುದ್ದಕ್ಕೂ ಅಮಾನುಷವಾಗಿ ಎಳೆದೊಯ್ದ ಘಟನೆ ವಯನಾಡಿನ ಮಾನಂತವಾಡಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ವ್ಯಕ್ತಿಯನ್ನು ಮಥನ್ ಎಂದು ಗುರುತಿಸಲಾಗಿದ್ದು, ಕಾರಿನ ಬಾಗಿಲಿಗೆ ಕೈ ಸಿಕ್ಕಿಕೊಂಡ ಆತನನ್ನು ಸುಮಾರು ಅರ್ಧ ಕಿಲೋಮೀಟರ್ ಎಳೆದೊಯ್ದಿದ್ದಾರೆ ಎಂದು ಹೇಳಲಾಗಿದೆ. ಪೊಲೀಸರು ಆರೋಪಿಗಳನ್ನು ಗುರುತಿಸಿದ್ದು, ಕೃತ್ಯದಲ್ಲಿ … Continued

ವೀಡಿಯೊ..| ನಿಲ್ದಾಣದಲ್ಲಿ ಕುಳಿತಿದ್ದ ಪ್ರಯಾಣಿಕನ ಮೇಲೆ ಹರಿದ ಬಸ್‌ ; ಪವಾಡಸದೃಶ ರೀತಿಯಲ್ಲಿ ಪಾರಾದ ಪ್ರಯಾಣಿಕ…!

ಕೇರಳದ ಟರ್ಮಿನಲ್ ಬಸ್‌ ಸ್ಟ್ಯಾಂಡ್‌ನಲ್ಲಿ ಕುಳಿತಿದ್ದಾಗ ಬಸ್ ಡಿಕ್ಕಿ ಹೊಡೆದರೂ ಯುವಕನೊಬ್ಬ ಪವಾಡಸದೃಶ ರೀತಿಯಲ್ಲಿ ಬದುಕುಳಿದಿದ್ದಾನೆ. ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಡುಕ್ಕಿ ಜಿಲ್ಲೆಯ ಕುಮಲಿ ಮೂಲದ ವಿಷ್ಣು ಎಂದು ಗುರುತಿಸಲಾದ ವ್ಯಕ್ತಿ ಡಿಸೆಂಬರ್ 1 ರಂದು ಕಟ್ಟಪ್ಪನ ಹೊಸ ಬಸ್ ನಿಲ್ದಾಣ ಟರ್ಮಿನಲ್‌ನಲ್ಲಿ ಬಸ್‌ಗಾಗಿ ಕಾಯುತ್ತಿದ್ದಾಗ ಈ ಘಟನೆ ನಡೆದಿದೆ. ವೀಡಿಯೋದಲ್ಲಿ, … Continued