ಬೆಳಗಾವಿ | ಉದ್ಯಮಿ ಅಪಹರಣ ; ಬಿಡುಗಡೆ ಮಾಡಲು ₹ 5 ಕೋಟಿ ಬೇಡಿಕೆ

ಬೆಳಗಾವಿ: ಸಿನಿಮೀಯ ರೀತಿಯಲ್ಲಿ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಅಪಹರಿಸಿದ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ದಂಡಾಪುರ ಕ್ರಾಸ್ ಬಳಿ ನಡೆದಿದ್ದು, ಅಪಹರಣಕಾರರು 5 ಕೋಟಿ ರೂ.ಗಳಿಗೆ ಬೇಡಿಕೆ ಇಟ್ಟಿದ್ದಾರೆ. ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಬಸವರಾಜ ನೀಲಪ್ಪ ಅಂಬಿ(48) ಎಂಬ ವ್ಯಕ್ತಿಯನ್ನು ಅಪಹರಿಸಲಾಗಿದೆ. ಬಸವರಾಜ ಅವರ ಫೋನ್ ನಿಂದ ಅವರ ಪತ್ನಿ ಶೋಭಾ ಅವರಿಗೆ ಕರೆ … Continued

ಬಳ್ಳಾರಿ | ಬೆಳ್ಳಂಬೆಳಿಗ್ಗೆ ಜಿಲ್ಲಾ ಆಸ್ಪತ್ರೆ ಮಕ್ಕಳ ವೈದ್ಯರ ಕಿಡ್ನಾಪ್: 3 ಕೋಟಿ ರೂ. ಹಣದ ಬೇಡಿಕೆ

ಬಳ್ಳಾರಿ: ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ ಅವರನ್ನು ಅಪಹರಿಸಲಾಗಿದೆ ಎಂದುವರದಿಯಾಗಿದೆ. ನಗರದ ಸತ್ಯನಾರಾಯಣ ಪೇಟೆಯಲ್ಲಿನ ಶನೈಶ್ವರ ದೇವಸ್ಥಾನದ ಬಳಿ ಶನಿವಾರ ಮುಂಜಾನೆ ಅವರು ವಾಕಿಂಗ್ ಮಾಡುತ್ತಿದ್ದಾಗ ಅಪರಿಚಿತ ವ್ಯಕ್ತಿಗಳು ಅಪಹರಣ ಮಾಡಿದ್ದು, ಅಪಹಾರಣಕಾರರು ಮೂರು ಕೋಟಿ ರೂ.ಗಳ ಹಣದ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಟಾಟಾ ಇಂಡಿಗೋ ಕಾರಿನಲ್ಲಿ ಬಂದಿದ್ದ ಅಪಹರಣಕಾರರು ವೈದ್ಯರ ಬಾಯಿಮುಚ್ಚಿ … Continued

ವೀಡಿಯೊ : ಶಾಲೆಗೆ ತೆರಳುತ್ತಿದ್ದ ಶಿಕ್ಷಕನ ಅಪಹರಿಸಿ ಗನ್ ತೋರಿಸಿ ಯುವತಿ ಜೊತೆ ಬಲವಂತದ ಮದುವೆ..!

ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರನ್ನು ಅಪಹರಿಸಿ ‘ಪಕಡುವಾ ವಿವಾಹ’ ಎಂಬ ಪದ್ಧತಿಯಂತೆ ಗನ್‌ ತೋರಿಸಿ ಯುವತಿಯೊಬ್ಬಳ ಜೊತೆ ಬಲವಂತವಾಗಿ ಮದುವೆ ಮಾಡಿದ ಘಟನೆ ಬಿಹಾರದ ಬೇಗುಸರಾಯ್ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಗಂಡಸರ ಗುಂಪೊಂದು ತನ್ನನ್ನು ಅಪಹರಿಸಿ ಬಲವಂತವಾಗಿ ಮದುವೆ ಮಾಡಿದ್ದಾರೆ ಎಂದು ಶಿಕ್ಷಕ ಅವ್ನಿಶ್ ಆರೋಪಿಸಿದ್ದಾರೆ. ಆದರೆ ವಧು ಗುಂಜನ್ ಎಂಬವಳು ನಾವಿಬ್ಬರು ನಾಲ್ಕು ವರ್ಷಗಳಿಂದ … Continued

ಚನ್ನಮ್ಮನ ಕಿತ್ತೂರು : ಅಪಹರಣವಾಗಿದ್ದ ಪ.ಪಂ ಸದಸ್ಯ ನಾಗರಾಜ ಪತ್ತೆ

ಚನ್ನಮ್ಮನ ಕಿತ್ತೂರು: ಆರು ದಿನಗಳ ಹಿಂದೆ ಅಪಹರಣಕ್ಕೆ ಒಳಗಾಗಿದ್ದ ಬಿಜೆಪಿ ಸದಸ್ಯ ನಾಗರಾಜ ಅಸುಂಡಿ ಅವರು ಕೊನೆಗೂ ಪತ್ತೆಯಾಗಿದ್ದಾರೆ. ನಾಗರಾಜ ಅಸುಂಡಿ ಅವರನ್ನು ಬೈಲಹೊಂಗಲ ಕೋರ್ಟ್ ಗೆ ಹಾಜರುಪಡಿಸಲು ಪೊಲೀಸರು ಕರೆತಂದಿದ್ದಾರೆ. ಸೆಪ್ಟೆಂಬರ್ 3 ರಂದು ಚನ್ನಮ್ಮನ ಕಿತ್ತೂರು ಪಟ್ಟಣ ಪಂಚಾಯತ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಿಗದಿಯಾಗಿತ್ತು. ಸಂಖ್ಯಾಬಲ ಹೆಚ್ಚಿಸಿಕೊಂಡು ಅಧಿಕಾರ ಹಿಡಿಯಬೇಕು ಎಂದು … Continued

ಚನ್ನಮ್ಮನ ಕಿತ್ತೂರು | ಪಪಂ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ : ಬಿಜೆಪಿ ಸದಸ್ಯನ ಅಪಹರಣ..!

ಬೆಳಗಾವಿ : ಜಿಲ್ಲೆಯ ಚನ್ನಮ್ಮನ ಕಿತ್ತೂರು ಪಟ್ಟಣ ಪಂಚಾಯತದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯರೊಬ್ಬರನ್ನು ಗುರುವಾರ ರಾತ್ರಿ ತಂಡವೊಂದು ಅಪಹರಣ ಮಾಡಿದೆ ಎಂದು ವರದಿಯಾಗಿದೆ. ಬಿಜೆಪಿ ಸದಸ್ಯರಾದ ನಾಗರಾಜ ಅಸುಂಡಿ ಅವರು ಪಟ್ಟಣದ ಚೌಕಿಮಠದ ಬಳಿ ನಿಂತಿದ್ದಾಗ ಸ್ಕಾರ್ಪಿಯೊ ವಾಹನದಲ್ಲಿ ಬಂದ ಕೆಲವರು ಬಲವಂತವಾಗಿ ನಾಗರಾಜ ಅವರನ್ನು ಎಳೆದುಕೊಂಡು ವಾಹನದಲ್ಲಿ … Continued

ದರ್ಶನ್‌ ಪ್ರಕರಣ : ರೇಣುಕಾಸ್ವಾಮಿ ಅಪಹರಣಕ್ಕೆ ಬಳಕೆಯಾಗಿದ್ದ ಕಾರು ಜಪ್ತಿ

ಚಿತ್ರದುರ್ಗ : ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿಕೊಂಡು ಬೆಂಗಳೂರಿಗೆ ಕರೆದುಕೊಂಡ ಬರಲಾಗಿದ್ದ ಕಾರನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿಕೊಂಡು ಬೆಂಗಳೂರಿಗೆ ಕರೆದುಕೊಂಡು ಬರಲು ಪ್ರಕರಣದ 8ನೇ ಆರೋಪಿ ರವಿಶಂಕರ ಎಂಬಾತನ ಕಾರು ಬಳಸಲಾಗಿತ್ತು. ಚಿತ್ರದುರ್ಗದಲ್ಲಿರುವ ರವಿ ಮನೆಯಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದು, ನಂತರ ಆತನ ಕಾರನ್ನು ಜಪ್ತಿ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ … Continued

ಒಲ್ಲೆ ಎಂದಿದ್ದಕ್ಕೆ ಸೇಡು : ತನ್ನ ಮದುವೆ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಟಿವಿ ನಿರೂಪಕನನ್ನು ಅಪಹರಿಸಿದ ಮಹಿಳಾ ಉದ್ಯಮಿ…!

ಹೈದರಾಬಾದ್‌ ; ಹೈದರಾಬಾದ್‌ನಲ್ಲಿ ಬೆಳಕಿಗೆ ಬಂದ ವಿಸ್ಮಯಕಾರಿ ಘಟನೆಯೊಂದರಲ್ಲಿ, ಮಹಿಳಾ ಉದ್ಯಮಿಯೊಬ್ಬರು ತನ್ನ ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿದ ನಂತರ ಟಿವಿ ನಿರೂಪಕನನ್ನು ಅಪಹರಿಸಿದ ಆರೋಪ ಎದುರಿಸುತ್ತಿದ್ದಾರೆ…! ಪೊಲೀಸ್ ವರದಿಗಳ ಪ್ರಕಾರ, ಭೋಗಿರೆಡ್ಡಿ ತ್ರಿಶಾ ಎಂದು ಗುರುತಿಸಲ್ಪಟ್ಟ ಉದ್ಯಮಿ ಮಹಿಳೆಯನ್ನು ಟಿವಿ ನಿರೂಪಕನನ್ನು ಹಿಂಬಾಲಿಸಿದ ಆರೋಪದ ಮೇಲೆ ಮತ್ತು ಆತನ ಅಪಹರಣವನ್ನು ಆಯೋಜಿಸಿದ ಆರೋಪದ ಮೇಲೆ ಬಂಧಿಸಲಾಗಿದೆ. … Continued

ಆನ್ಲೈನ್ ಗೇಮ್ ಮೂಲಕ ಕೋಟ್ಯಂತರ ಹಣ ಗೆದ್ದವನ ಕಿಡ್ನ್ಯಾಪ್‌ ಮಾಡಿ 1 ಕೋಟಿ‌ ರೂ. ಬೇಡಿಕೆ ಇಟ್ಟಿದ್ದ ಅಪಹರಣಕಾರರ ಬಂಧನ

ಹುಬ್ಬಳ್ಳಿ: ಆನ್‌ಲೈನ್‌ ಗೇಮ್‌ನಲ್ಲಿ ಹಣ ಗೆದ್ದಿದ್ದ ಹುಬ್ಬಳ್ಳಿಯ ಮಂಟೂರ ರಸ್ತೆಯ ನ್ಯಾಷನಲ್ ಟೌನ್ ನಿವಾಸಿ ಗರೀಬ್ ನವಾಜ್ ಮುಲ್ಲಾ ಅಪಹರಣ‌‌‌ ಪ್ರಕರಣ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಗರೀಬ್ ನವಾಜ್ ಮುಲ್ಲಾ ಅವರನ್ನು ಆಗಸ್ಟ್ 6 ರಂದು ಅಪಹರಿಸಿ ಒಂದು ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಏಳು ಆರೋಪಿಗಳನ್ನೂ ಹುಬ್ಬಳ್ಳಿ ಪೊಲೀಸರು … Continued