ಅಮೆರಿಕ ಪೊಲೀಸ್ ಅಧಿಕಾರಿ ಕಾರು ಡಿಕ್ಕಿ ಹೊಡೆದು ಮೃತಪಟ್ಟ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 260 ಕೋಟಿ ರೂ. ಪರಿಹಾರ

ಸಿಯಾಟಲ್: 2023ರಲ್ಲಿ ಅತಿವೇಗವಾಗಿ ಬಂದ ಪೊಲೀಸ್ ವಾಹನ ಡಿಕ್ಕಿಯಾಗಿ ಮೃತಪಟ್ಟಿದ್ದ ಭಾರತೀಯ ಮೂಲದ ವಿದ್ಯಾರ್ಥಿನಿ ಜಾಹ್ನವಿ ಕಂಡುಲ ಅವರ ಕುಟುಂಬಕ್ಕೆ ಸಿಯಾಟಲ್ ನಗರ ಆಡಳಿತವು 29 ಮಿಲಿಯನ್ ಡಾಲರ್ (ಸುಮಾರು 262 ಕೋಟಿ ರೂಪಾಯಿ) ಪರಿಹಾರ ನೀಡಲು ಒಪ್ಪಿಕೊಂಡಿದೆ. 2023ರಲ್ಲಿ ಸಿಯಾಟಲ್‌ನ ಈಶಾನ್ಯ ವಿಶ್ವವಿದ್ಯಾಲಯದಲ್ಲಿ ಮಾಹಿತಿ ವ್ಯವಸ್ಥೆ (Information Systems) ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದ … Continued

ಮಗನನ್ನು ರಕ್ಷಿಸಲು ಕುಡಗೋಲಿನಿಂದ ಚಿರತೆಯನ್ನೇ ಬಡಿದು ಕೊಂದ 60 ವರ್ಷದ ವೃದ್ಧ…!

ಗಿರ್ ಸೋಮನಾಥ: ಗುಜರಾತಿನ ಗಿರ್ ಸೋಮನಾಥ್ ಜಿಲ್ಲೆಯ ಗಂಗ್ಡಾ ಗ್ರಾಮದ ಹೊರವಲಯದಲ್ಲಿ ಗುರುವಾರ ಮಧ್ಯಾಹ್ನ ಭೀಕರ ಘಟನೆಯೊಂದು ಸಂಭವಿಸಿದೆ. ದಾಳಿ ಮಾಡಲು ನುಗ್ಗಿ ಬಂದ ಚಿರತೆಗೆ ಹೆದರದ ವೃದ್ಧರೊಬ್ಬರು, ತಮ್ಮ ಮಗನ ಪ್ರಾಣ ಉಳಿಸಲು ಅದ್ಭುತ ಶೌರ್ಯ ತೋರಿ ಚಿರತೆಯನ್ನೇ ಸಾಯಿಸಿದ್ದಾರೆ….! ಸ್ಥಳೀಯ ಮೂಲಗಳ ಪ್ರಕಾರ, ಈ ಘಟನೆಯು ಬುಧವಾರ ಸಂಜೆ ಗಿರ್ ಸೋಮನಾಥ್‌ನ ಉನಾ ಎಂಬ … Continued

ದೆಹಲಿಯಲ್ಲಿ ಎನ್‌ಕೌಂಟರ್ : ‘ಸಿಗ್ಮಾ ಗ್ಯಾಂಗ್’ ನ ನಾಲ್ವರು ʼಮೋಸ್ಟ್ ವಾಂಟೆಡ್ʼ ಗ್ಯಾಂಗ್‌ಸ್ಟರ್‌ ಗಳು ಹತ

ನವದೆಹಲಿ: ದೆಹಲಿಯಲ್ಲಿ ಬಿಹಾರ ಪೊಲೀಸರ ಸಹಯೋಗದೊಂದಿಗೆ ನಡೆದ ಪ್ರಮುಖ ಎನ್‌ಕೌಂಟರ್‌ನಲ್ಲಿ ನಾಲ್ವರು ಮೋಸ್ಟ್‌ ವಾಂಟೆಡ್‌ ಗ್ಯಾಂಗ್‌ಸ್ಟರ್‌ಗಳು ಹತರಾಗಿದ್ದಾರೆ. ಈ ಘಟನೆ ಗುರುವಾರ ಮುಂಜಾನೆ ದೆಹಲಿಯ ರೋಹಿಣಿಯಲ್ಲಿ ನಡೆದಿದೆ. ದೆಹಲಿ ಪೊಲೀಸರ ಪ್ರಕಾರ, ಗುರುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಬಹದ್ದೂರ್ ಶಾ ರಸ್ತೆಯಲ್ಲಿ ಗುಂಡಿನ ಚಕಮಕಿ ಆರಂಭವಾಯಿತು. ಹತರಾದವರನ್ನು ರಂಜನ್ ಪಾಠಕ್ (25), ಬಿಮಲೇಶ್ … Continued

ಮಾನವ ಜಿಪಿಎಸ್‌ ಎಂದೇ ಕುಖ್ಯಾತನಾಗಿದ್ದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಬಾಗು ಖಾನ್ ಎನ್‌ಕೌಂಟರಿನಲ್ಲಿ ಹತ…!

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್ ಸೆಕ್ಟರ್‌ನ ನಿಯಂತ್ರಣ ರೇಖೆಯ (ಎಲ್‌ಒಸಿ) ಬಳಿ ‘ಮಾನವ ಜಿಪಿಎಸ್‌ (GPS)’ ಎಂದೇ ಕುಖ್ಯಾತನಾಗಿದ್ದ ಭಯೋತ್ಪಾದಕ ಬಾಗು ಖಾನ್‌ ಎಂಬಾತನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಅಧಿಕಾರಿಗಳು ಆತನ ಗುರುತಿನ ಚೀಟಿಯನ್ನು ಸಹ ಪತ್ತೆಹಚ್ಚಿದ್ದಾರೆ. ಭದ್ರತಾ ಸಂಸ್ಥೆಗಳ ಪಟ್ಟಿಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್‌ನ ಮೋಸ್ಟ್ ವಾಂಟೆಡ್ ಭಯೋತ್ಪಾದಕನಾಗಿದ್ದ . ಮೂಲಗಳ … Continued

ವೀಡಿಯೊ…| ವೈಮಾನಿಕ ದಾಳಿಯಲ್ಲಿ ಐಸಿಸ್‌ ಭಯೋತ್ಪಾದಕ ಗುಂಪಿನ ನಂ.2 ನಾಯಕನ್ನು ಕೊಂದು ಹಾಕಿದ ಅಮೆರಿಕ

ನವದೆಹಲಿ: ಇರಾಕಿನ ಗುಪ್ತಚರ ಮತ್ತು ಭದ್ರತಾ ಪಡೆಗಳ ಸಮನ್ವಯದಲ್ಲಿ, ಇರಾಕ್‌ನ ಅಲ್ ಅನ್ಬರ್ ಪ್ರಾಂತ್ಯದಲ್ಲಿ ನಡೆಸಿದ ವೈಮಾನಿಕ ದಾಳಿಯಲ್ಲಿ “ಅಬು ಖದೀಜಾ” ಎಂದೂ ಕರೆಯಲ್ಪಡುವ ಇಸ್ಲಾಮಿಕ್ ಸ್ಟೇಟ್ (ISIS)ನ ನಂ.2 ನಾಯಕನಾದ ಅಬ್ದುಲ್ಲಾ ಮಕ್ಕಿ ಮುಸ್ಲಿಹ್ ಅಲ್-ರಿಫಾಯಿಯನ್ನು ಕೊಂದಿರುವುದಾಗಿ ಅಮೆರಿಕ ಘೋಷಿಸಿದೆ. ಅಬು ಖದೀಜಾ ಇಸ್ಲಾಮಿಕ್ ಸ್ಟೇಟ್ (ISIS) ಭಯೋತ್ಪಾದಕ ಗುಂಪಿನ ಜಾಗತಿಕ ಕಾರ್ಯಾಚರಣೆಗಳ ಮುಖ್ಯಸ್ಥನಾಗಿದ್ದ … Continued

ಕಾಶ್ಮೀರ ; ಪಾಕಿಸ್ತಾನದ 7 ನುಸುಳುಕೋರರ ಹತ್ಯೆ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಶುಕ್ರವಾರ ಏಳು ಪಾಕಿಸ್ತಾನಿ ನುಸುಳುಕೋರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಜಮ್ಮು ಮತ್ತು ಕಾಶ್ಮೀರದ ಕೃಷ್ಣ ಘಾಟಿ ಪ್ರದೇಶದ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ನುಸುಳುಕೋರರು ಹತರಾಗಿದ್ದಾರೆ ಎಂದು ವರದಿಯಾಗಿದೆ. ಅಲ್-ಬದ್ರ್ ಉಗ್ರಗಾಮಿಗಳು ಮತ್ತು ಪಾಕಿಸ್ತಾನಿ ಸೇನಾ ಸಿಬ್ಬಂದಿ ಸೇರಿದಂತೆ ಏಳು ಪಾಕಿಸ್ತಾನಿ ನುಸುಳುಕೋರರು ಕೊಲ್ಲಲ್ಪಟ್ಟರು. ಫೆಬ್ರವರಿ 4 ಮತ್ತು … Continued

ಕುಪ್ವಾರಾದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾದಲ್ಲಿ “ಆಪರೇಷನ್ ಗುಗಲ್ಧಾರ್” ಅಡಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿವೆ ಎಂದು ಎಂದು ಸೇನೆ ಶನಿವಾರ ಬೆಳಿಗ್ಗೆ ತಿಳಿಸಿದೆ. ಉಗ್ರರನ್ನು ಹತ್ಯೆ ಮಾಡುವ ಮೊದಲು ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಇಬ್ಬರನ್ನು ಹತ್ಯೆ ಮಾಡಲಾಗಿದ್ದು ಅವರಿಗೆ ಸೇರಿದ ವಸ್ತುಗಳನ್ನು … Continued

8 ಗಂಟೆಗಳ ಕಾಲ ನಡೆದ ಎನ್‌ಕೌಂಟರ್‌ನಲ್ಲಿ 13 ಮಾವೋವಾದಿಗಳ ಹತ್ಯೆ

ರಾಯ್ಪುರ: ಛತ್ತೀಸ್‌ಗಢದ ಬಿಜಾಪುರದಲ್ಲಿ ಎಂಟು ಗಂಟೆಗಳ ಕಾಲ ನಡೆದ ಭದ್ರತಾ ಎನ್‌ಕೌಂಟರ್‌ನಲ್ಲಿ ಹತರಾದ ಮಾವೋವಾದಿಗಳ ಸಾವಿನ ಸಂಖ್ಯೆ 13 ಕ್ಕೆ ಏರಿದೆ. ಬುಧವಾರ ಬೆಳಿಗ್ಗೆ ಸಿಬ್ಬಂದಿ ಮತ್ತೆ ಮೂರು ಮೃತದೇಹಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳವಾರ ಬೆಳಗ್ಗೆ 6 ಗಂಟೆಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ಲೆಂಡಾ ಗ್ರಾಮದ ಅರಣ್ಯದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ … Continued

ಇಸ್ರೇಲ್-ಹಮಾಸ್ ಯುದ್ಧ : ತಪ್ಪಾಗಿ ತಿಳಿದು ಮೂವರು ಇಸ್ರೇಲಿ ಒತ್ತೆಯಾಳುಗಳನ್ನು ಕೊಂದ ಇಸ್ರೇಲಿ ಪಡೆಗಳು

ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್) ಉತ್ತರ ಗಾಜಾದ ಶೆಜೈಯಾ ಪ್ರದೇಶದಲ್ಲಿ ನಡೆದ ಹೋರಾಟದ ಸಮಯದಲ್ಲಿ ತಮಗೆ ಬೆದರಿಕೆ ಎಂದು ತಪ್ಪಾಗಿ ಗುರುತಿಸಿ ಮೂವರು ಇಸ್ರೇಲಿ ಒತ್ತೆಯಾಳುಗಳ ಮೇಲೆ ಗುಂಡು ಹಾರಿಸಿದರು ಎಂದು ಮಿಲಿಟರಿ ವಕ್ತಾರ ಡೇನಿಯಲ್ ಹಗರಿ ಶುಕ್ರವಾರ ಹೇಳಿದ್ದಾರೆ. “ಸೈನಿಕರು ಆತ್ಮಹತ್ಯಾ ಬಾಂಬರ್‌ಗಳು ಸೇರಿದಂತೆ ಅನೇಕ ಭಯೋತ್ಪಾದಕರನ್ನು ಎದುರಿಸಿದ ಪ್ರದೇಶದಲ್ಲಿ ಈ ಘಟನೆ ನಡೆದಿದೆ … Continued

ಹೊನ್ನಾವರ : ಟಿಪ್ಪರ್ ಹಾಯ್ದು ವ್ಯಕ್ತಿ ಸಾವು, ಇಬ್ಬರಿಗೆ ಗಾಯ

ಹೊನ್ನಾವರ : ಟಿಪ್ಪರ್ ಹಾಯಿಸಿ ವ್ಯಕ್ತಿಯೊಬ್ಬನನ್ನು ಸಾಯಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಅರೆಅಂಗಡಿಯ ಜನತಾ ಕಾಲೋನಿಯ ಬಳಿ ಮಂಗಳವಾರ ರಾತ್ರಿ ನಡೆದಿದೆ. ಇನ್ನಿಬ್ಬರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅರೆಅಂಗಡಿಯ ಓಲ್ವಿನ್ ರವಿ ಲೋಬೋ ಎಂಬವರು ಸಾವಿಗೀಡಾಗಿದ್ದಾರೆ. ಸಾಲ್ಕೋಡಿನಲ್ಲಿ ವಾಸವಿರುವ ಕುಮಟಾ ತಾಲೂಕಿನ ಕೋನಳ್ಳಿ ಮೂಲದ ಜನಾರ್ಧನ ನಾಯ್ಕ ಹಾಗೂ ಹೊಸಾಕುಳಿಯ … Continued