ಮಡಿಕೇರಿ ; ಸಾಕಾನೆಗಳ ನಡುವೆ ಭೀಕರ ಕಾದಾಟ; ಕೆಳಗೆ ಬಿದ್ದ ಆನೆಯಡಿ ಸಿಲುಕಿ ಮಹಿಳೆ ಸಾವು

ಮಡಿಕೇರಿ: ಕರ್ನಾಟಕದ ಪ್ರಸಿದ್ಧ ಪ್ರವಾಸಿ ತಾಣವಾದ ಕೊಡಗು ಜಿಲ್ಲೆಯ ದುಬಾರೆ ಆನೆ ಶಿಬಿರದಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ದಿಢೀರ್‌ ಸಂಭವಿಸಿದ ಸಾಕಾನೆಗಳ ನಡುವಿನ ಕಾಳಗದ ಮಧ್ಯೆ ಸಿಲುಕಿದ ತಮಿಳುನಾಡಿನ ಮಹಿಳಾ ಪ್ರವಾಸಿಗರೊಬ್ಬರು ಆನೆಯಡಿ ಸಿಲುಕಿ ಅತ್ಯಂತ ದಾರುಣವಾಗಿ ಮೃತಪಟ್ಟಿದ್ದಾರೆ. ಚೆನ್ನೈ ಮೂಲದ ಜ್ಯುನೇಶ್ (33) ಮೃತಪಟ್ಟ ದುರ್ದೈವಿ ಮಹಿಳಾ ಪ್ರವಾಸಿ ಎಂದು ಗುರುತಿಸಲಾಗಿದೆ. ಮೃತ ಜ್ಯುನೇಶ್ … Continued

ಕೊಡಗು : ಚಾರಣಕ್ಕೆ ಹೋಗಿ ನಾಪತ್ತೆಯಾಗಿದ್ದ ಕೇರಳ ಯುವತಿ 4 ದಿನಗಳ ಬಳಿಕ ಪತ್ತೆ ; ಅರಣ್ಯದಲ್ಲಿ ಆಹಾರವಿಲ್ಲದೆ ಇದ್ದಿದ್ದು ಹೇಗೆ ?

ಮಡಿಕೇರಿ: ಕೊಡಗಿನ ಅತ್ಯುನ್ನತ ಶಿಖರ ‘ತಡಿಯಂಡಮೋಲ್’ ಚಾರಣಕ್ಕೆ ತೆರಳಿ ದಾರಿ ತಪ್ಪಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಜಿ.ಎಸ್ (36) ಅವರು ನಾಲ್ಕು ದಿನಗಳ ಭೀಕರ ಸವಾಲುಗಳ ನಂತರ ಭಾನುವಾರ (ಏಪ್ರಿಲ್ 5) ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ಆದಿವಾಸಿಗಳು ಮತ್ತು ಜಿಲ್ಲಾಡಳಿತ ನಡೆಸಿದ ತೀವ್ರ ಶೋಧ ಕಾರ್ಯದ ಫಲವಾಗಿ ಅವರು ಪತ್ತೆಯಾಗಿದ್ದು, ಕುಟುಂಬಸ್ಥರು ನಿಟ್ಟುಸಿರು … Continued

ವಿಪರೀತ ಮಳೆ ಮುನ್ನೆಚ್ಚರಿಕೆ : ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳ ಶಾಲೆಗಳಿಗೆ ಇಂದು (ಜುಲೈ 25) ರಜೆ ಘೋಷಣೆ

ಮಂಗಳೂರು/ಮಡಿಕೇರಿ : ಹವಾಮಾನ ಇಲಾಖೆ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೊಡಗು ಜಿಲ್ಲೆಗಳ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಶುಕ್ರವಾರ, ಜುಲೈ 25 ರಂದು ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಎಚ್ಚರಿಕೆ ನೀಡಿರುವ … Continued

ಪತ್ನಿ ಕೊಲೆ ಪ್ರಕರಣದಲ್ಲಿ 1.5 ವರ್ಷ ಜೈಲಲ್ಲಿದ್ದ ಪತಿ ; ಪತ್ನಿ ಕೋರ್ಟ್‌ ಮುಂದೆ ಹಾಜರು…!

 ಮೈಸೂರು : ಹೆಂಡತಿ ಕೊಲೆ ಆರೋಪದ ಮೇಲೆ  ಗಂಡ ಸುಮಾರು 1.5 ವರ್ಷ ಜೈಲಿನಲ್ಲಿದ್ದ ಪ್ರಕರಣಕ್ಕೆ ಥ್ರಿಲ್ಲರ್‌ ಸಿನೆಮಾದಲ್ಲಿ ನಡೆಯುವಂತೆ ಟ್ವಿಸ್ಟ್​ ಸಿಕ್ಕಿದೆ. ಕೊಲೆಯಾಗಿದ್ದಾಳೆ ಎಂದು ತಿಳಿದಿದ್ದ ಪತ್ನಿ ನ್ಯಾಯಾಲಯಕ್ಕೆ ಹಾಜರಾದ ನಂತರ ಪ್ರಕರಣದ ಬಗ್ಗೆ ಸರಿಯಾದ ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ಮೈಸೂರು ಸೆಷನ್ಸ್​ ನ್ಯಾಯಾಲಯ ಪೊಲೀಸರಿಗೆ ಆದೇಶಿಸಿದೆ. ಕೊಲೆಯಾಗಿದ್ದಾಳೆಂದು ನಂಬಲಾಗಿದ್ದ ಮಹಿಳೆ ಈಗ … Continued

ಕೊಡಗು : ಪೊನ್ನಂಪೇಟೆ ಬಳಿ ಒಂದೇ ಕುಟುಂಬದ ‌ನಾಲ್ವರ ಭೀಕರ ಹತ್ಯೆ

ಮಡಿಕೇರಿ : ಒಂದೇ ಕುಟುಂಬದ ನಾಲ್ವರನ್ನು ಮಾರಕಾಸ್ತ್ರದಿಂದ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬೇಗೂರು ಗ್ರಾಮದ ಕರಿಯ(75), ಗೌರಿ (70) ದಂಪತಿ ಹಾಗೂ ನಾಗಿ (30) ಮತ್ತು ಮಗಳು ಕಾವೇರಿ(5) ಕೊಲೆಯಾದವರು ಎಂದು ಗುರುತಿಸಲಾಗಿದೆ. ಇಂದು, ಗುರುವಾರ ರಾತ್ರಿ ಸಮಯದಲ್ಲಿ ಈ ಘಟನೆ … Continued

ಕರ್ನಾಟಕದಲ್ಲೇ ಅತಿ ಹೆಚ್ಚು 42.9°C ಉಷ್ಣಾಂಶ ಉತ್ತರ ಕನ್ನಡದಲ್ಲಿ ದಾಖಲು…! ಕರಾವಳಿಯ 27 ಕಡೆ 38°Cಗಿಂತ ಹೆಚ್ಚು ತಾಪಮಾನ…!!

ಬೆಂಗಳೂರು : ಕರ್ನಾಟಕದ ಕರಾವಳಿ ಭಾಗ ತಾಪಮಾನ ಹೆಚ್ಚಳದಿಂದ ಬಿಸಿ ಕೆಂಡವಾಗಿ ಮಾರ್ಪಟ್ಟಿದೆ. ಕರಾವಳಿ ಭಾಗದ ಅನೇಕ ಪ್ರದೇಶಗಳಲ್ಲಿ ತಾಪಮಾನ ಬುಧವಾರ ತಾಪಮಾನ 1.6°C ನಿಂದ 3.0°Cರಷ್ಟು ಹೆಚ್ಚಳವಾಗಿದೆ. ಬುಧವಾರ (ಮಾರ್ಚ್ 12) ಬೆಳಿಗ್ಗೆ 8:30ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಾವಂತವಾಡ ಹೋಬಳಿಯಲ್ಲಿ ಕರ್ನಾಟಕದಲ್ಲೇ ಅತಿ ಹೆಚ್ಚು ಅಂದರೆ ಗರಿಷ್ಠ 42.9 … Continued

8 ಕೋಟಿ ರೂ. ಕೊಡಲು ನಿರಾಕರಿಸಿದ್ದಕ್ಕೆ ಪತಿಯನ್ನು ಕೊಂದ ಮಹಿಳೆ… ದೇಹ ಸುಡಲು 800 ಕಿ.ಮೀ. ಪ್ರಯಾಣ…ಕರ್ನಾಟಕದಲ್ಲಿ ಮೂವರ ಬಂಧನ

ಬೆಂಗಳೂರು : ಕೊಡಗು ಜಿಲ್ಲೆಯ ಎಸ್ಟೇಟ್‌ ಒಂದರಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾದ ತೆಲಂಗಾಣ ಉದ್ಯಮಿಯ ಹತ್ಯೆ ಪ್ರಕಣವನ್ನು ಕರ್ನಾಟಕ ಪೊಲೀಸರು ಭೇದಿಸಿದ್ದಾರೆ. ಆತನ ಎರಡನೇ ಪತ್ನಿ ಹಾಗೂ ಇತರ ಇಬ್ಬರನ್ನು ಪೊಲೀಸರು ಬಂಧಿಸಿದ್ದು, 8 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಕಬಳಿಸಲು ಮಹಿಳೆ ಆತನನ್ನು ಕೊಂದಿದ್ದಾಳೆ ಎಂದು ತನಿಖೆಯಿಂದ ತಿಳಿದುಬಂದಿದೆ. ಮೃತ ಉದ್ಯಮಿಯನ್ನು ರಮೇಶ … Continued

ಸೋಮವಾರಪೇಟೆ : ಎಸ್​ಎಸ್​​ಎಲ್​ಸಿ ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಕೊಲೆ ; ರುಂಡದೊಂದಿಗೆ ಆರೋಪಿ ಪರಾರಿ

ಮಡಿಕೇರಿ: ಬೆಳಿಗ್ಗೆಯಷ್ಟೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣಳಾದ ಖುಷಿಯಲ್ಲಿದ್ದ ಬಾಲಕಿಯೊಬ್ಬಳ ರುಂಡ ಕಡಿದ ಘಟನೆ ಸೋಮವಾರಪೇಟೆ ತಾಲ್ಲೂಕಿನ ಸೂರ್ಲಬ್ಬಿ ಬಳಿ ಗುರುವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದ್ದು, ಆರೋಪಿ ರುಂಡದೊಂದಿಗೆ ಪರಾರಿಯಾಗಿದ್ದಾ‌ನೆ ಎನ್ನಲಾಗಿದೆ. ಗುರುವಾರವೇ ಅಪ್ರಾಪ್ತ ಬಾಲಕಿಯನ್ನು ಆರೋಪಿ ಪ್ರಕಾಶ ಎಂಬಾತನ ಜೊತೆ ವಿವಾಹ ಮಾಡುವುದಕ್ಕೆ ಪೋಷಕರು ಮುಂದಾಗಿದ್ದರು. ಇದು ಗ್ರಾಮಸ್ಥರ ಗಮನಕ್ಕೆ ಬಂದಿತ್ತು. ಅವರು ಮಹಿಳಾ … Continued

ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು : ಅಪಘಾತಕ್ಕೆ ನಾನೇ ಕಾರಣವೆಂದು ಮನನೊಂದು ಮತ್ತೊಬ್ಬ ಬೈಕ್‌ ಸವಾರ ಆತ್ಮಹತ್ಯೆ..

ಮಡಿಕೇರಿ : ಮಡಿಕೇರಿಯಲ್ಲಿ ಶುಕ್ರವಾರ ನಡೆದ ಎರಡು ಬೈಕ್‌ಗಳ ನಡುವಿನ ಅಪಘಾತದಲ್ಲಿ ಪದವೀಧರ ವಿದ್ಯಾರ್ಥಿ ಮೃತಪಟ್ಟ ನಂತರ ಈ ಅಪಘಾತಕ್ಕೆ ತಾನೇ ಕಾರಣ, ನನ್ನಿಂದಾಗಿ ಒಂದು ಜೀವ ಹೋಯಿತು ಎಂದು ಮನನೊಂದ ಮತ್ತೊಬ್ಬ ಬೈಕ್ ಸವಾರ ಆತ್ಮಹತ್ಯೆಗೆ ಶರಣಾದ ಘಟನೆ ವರದಿಯಾಗಿದೆ. ಮಮನೊಂದು ಆತ್ಮಹತ್ಯೆ ಮಾಡಿಕೊಂಡ ಬೈಕ್‌ ಸವಾರನನ್ನು ಹೆರವನಾಡಿನ ತಮ್ಮಯ್ಯ (57) ಎಂದು ಗುರುತಿಸಲಾಗಿದೆ. … Continued

ಕೊಡಗು: ನದಿಗೆ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು

ಕೊಡಗು: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಅರ್ಜಿ ಗ್ರಾಮದ ಬರಪೊಳೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ರಷಿಕ್ ಕುಶಾಲಪ್ಪ(20), ಆಕಾಶ ಬಿದ್ದಪ್ಪ (20), ಸುದೀಶ ಅಯ್ಯಪ್ಪ(20) ಎಂದು ಹೇಳಲಾಗಿದೆ. ಮೂವರು ಕೊಡಗಿನ ಪೊನ್ನಂಪೇಟೆ ಸಿಇಟಿ ಕಾಲೇಜಿನಲ್ಲಿ 2ನೇ ವರ್ಷದ ಎಂಜಿನಿಯರಿಂಗ್ ಓದುತ್ತಿದ್ದರು ಎನ್ನಲಾಗಿದೆ. ಐವರು ಸ್ನೇಹಿತರು ಪೊನ್ನಂಪೇಟೆ ಸಮೀಪದ … Continued