ಕೊಡಗು: ಇಬ್ಬರನ್ನು ಕೊಂದಿದ್ದ ನರಭಕ್ಷಕ ಹುಲಿಯನ್ನು ಸೆರೆ ಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ

  ಕೊಡಗು: 24 ತಾಸಿನೊಳಗೆ ಇಬ್ಬರನ್ನು ಕೊಂದಿದ್ದ ನರ ಭಕ್ಷಕ ಹುಲಿಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ. ಇಂದು, ಮಂಗಳವಾರ (ಫೆ.14) ಪೊನ್ನಂಪೇಟೆ ತಾಲೂಕಿನ ನಾಣಚ್ಚಿಗೇಟ್ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಕೆಲವು ದಿನಗಳಿಂದ ಕೊಡಗಿನಲ್ಲಿ ಜನರು ನರಭಕ್ಷಕ ಹುಲಿಯ ಭಯದಲ್ಲಿ ಜನರು ಓಡಾಡುತ್ತಿದ್ದರು. ಇದೀಗ ಆ ಹುಲಿ ಸೆರೆಯಾಗಿದ್ದು ಎಲ್ಲರೂ ನಿಟ್ಟುಸಿರು ಬಿಡುವಂತಾಗಿದೆ. … Continued

ಕೊಡಗು: ಹುಲಿ ದಾಳಿಗೆ ಮತ್ತೊಬ್ಬ ಕಾರ್ಮಿಕ ಸಾವು, 24 ತಾಸಿನಲ್ಲಿ ಇದು 2ನೇ ಪ್ರಕರಣ

ಮಡಿಕೇರಿ: 24 ಗಂಟೆಗಳ ಅವಧಿಯಲ್ಲಿ ಹುಲಿ ದಾಳಿ(Tiger Attack)ಗೆ ಸಿಲುಕಿ ಮತ್ತೊಬ್ಬರು ಮೃತಪಟ್ಟಿದ್ದಾರೆ. ಹುಲಿ ದಾಳಿಗೆ ಸೋಮವಾರ ಬೆಳಿಗ್ಗೆ ಕೊಡಗು ಹಾಗೂ ಕೇರಳ ಗಡಿಭಾಗದ ಪಲ್ಲೇರಿ ಗ್ರಾಮದಲ್ಲಿ ಮತ್ತೊಬ್ಬರು ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಕೃಷಿ ಕಾರ್ಮಿಕ ರಾಜು (75) ಎಂದು ಗುರುತಿಸಲಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಹುಲಿ ದಾಳಿಗೆ ಸಿಲುಕಿ ಮೃತಪಟ್ಟವರ ಸಂಖ್ಯೆ 2ಕ್ಕೆ ಏರಿದೆ. … Continued

ಹುಲಿ ದಾಳಿಗೆ ಹದಿಹರೆಯದ ಕಾರ್ಮಿಕ ಸಾವು

ಮಡಿಕೇರಿ: ನರಭಕ್ಷಕ ಹುಲಿ ದಾಳಿಗೆ ಸಿಲುಕಿ ಹದಿಹರೆಯದ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಕೊಡಗು-ಕೇರಳ ಗಡಿಭಾಗವಾದ ಚೂರಿಕಾಡು ಬಳಿ ನಡೆದ ವರದಿಯಾಗಿದೆ. ಪಿರಿಯಾಪಟ್ಟಣ ತಾಲೂಕಿನ ಪಂಚವಳ್ಳಿ ಗ್ರಾಮದ ಕಾರ್ಮಿಕ ಚೇತನ್ (18) ಹುಲಿ ದಾಳಿಗೆ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಭಾನುವಾರ ಮಧ್ಯಾಹ್ನದ ವೇಳೆ ಈತ ಕಾಫಲಿ ಪ್ಲಾಂಟ್‌ನಲ್ಲಿ ತನ್ನ ದೈನಂದಿನ ಕೆಲಸದಲ್ಲಿ ನಿರತನಾಗಿದ್ದಾಗ ತೋಟದಲ್ಲಿದ್ದ ಹುಲಿ … Continued

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣ: 9 ಮಂದಿ ಆರೋಪಿಗಳ ಬಂಧನ

ಮಡಿಕೇರಿ: ರಾಜ್ಯ ವಿಧಾನಸಭೆ ವಿಪಕ್ಷ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಕೋಳಿ ಮೊಟ್ಟೆ ಎಸೆದ ಘಟನೆ ಸಂಬಂಧಿಸಿದಂತೆ 9 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿರುವ ಕೊಡಗು ಜಿಲ್ಲೆಯ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ತಡರಾತ್ರಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಳೆಹಾನಿ ಪ್ರದೇಶಗಳ ವೀಕ್ಷಣೆಗೆಂದು ಗುರುವಾರ ಇಲ್ಲಿಗೆ ಬಂದಿದ್ದ … Continued

ಸಿದ್ದರಾಮಯ್ಯ ಕಾರಿಗೆ ಘೇರಾವ್: ಗೋ ಬ್ಯಾಕ್ ಸಿದ್ದರಾಮಯ್ಯ ಎಂದು ಘೋಷಣೆ, ಕಾರಿನೊಳ ಸಾವರ್ಕರ್ ಫೋಟೋ ಹಾಕಿದರು

ಮಡಿಕೇರಿ : ಮಡಿಕೇರಿ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಕೊಡಗು ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದ ವೇಳೆ ಇಲ್ಲಿನ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಘೇರಾವ್  ಹಾಕಿ ಘೋಷಣೆ ಕೂಗಿದ್ದಾರೆ ಕೊಡಗಿನ ಗಡಿ ಭಾಗದ ಪೋನ್ನಂಪೇಟೆ ತಾಲೂಕಿನ ತಿತಿಮತಿಯಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ನೇತೃತ್ವದಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರು ಪ್ರತಿಭಟಿಸಿ … Continued

ಪ್ರೇಯಸಿ-ಸಹಚರನಿಗೆ ಚಾಕುವಿನಿಂದ ಇರಿದ ಪ್ರೇಮಿ

ಮಡಿಕೇರಿ: ಕೊಡಗು ಸಮೀಪದ ಕುಶಾಲನಗರದ ಜನಪ್ರಿಯ ಪ್ರವಾಸಿ ತಾಣ ನಿಸರ್ಗಧಾಮದಲ್ಲಿ ತ್ರಿಕೋನ ಪ್ರೇಮ ರಕ್ತಪಾತದಲ್ಲಿ ಅಂತ್ಯವಾಗಿದೆ. ಕೊಪ್ಪ ಗ್ರಾಮದ ವಿಜಯಕುಮಾr (22) ಎಂಬಾತ ತನ್ನ ಗೆಳತಿ ಮತ್ತು ಆಕೆಯ ಸಹಚರನಿಗೆ ಚಾಕುವಿನಿಂದ ಇರಿದಿದ್ದಾನೆ ಎಂದು ಮೂಲಗಳು ತಿಳಿಸಿವೆ. ಕುಶಾಲನಗರದ ರೆಸ್ಟೋರೆಂಟ್‌ನಲ್ಲಿ ವೇಟರ್ ಆಗಿ ಕೆಲಸ ಮಾಡುತ್ತಿದ್ದ ವಿಜಯಕುಮಾರ್, ಮಾದಪಟ್ಟಣದ ಕಾಲೇಜು ಯುವತಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದು, … Continued

ಕೊಡಗಿನಲ್ಲಿ ಭಾರೀ ಶಬ್ದದೊಂದಿಗೆ ಮತ್ತೆ ಭೂಕುಸಿತ :18 ಕುಟುಂಬಗಳ ಸ್ಥಳಾಂತರ

ಕೊಡಗು: ಭಾರೀ ಶಬ್ದದೊಂದಿಗೆ ಕೊಡಗಿನಲ್ಲಿ ಮತ್ತೆ ಭೂ ಕುಸಿತ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಬೆಟ್ಟದ ತಪ್ಪಲಿನ 18 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಮದೆನಾಡು ಸುತ್ತಮುತ್ತ ಇಂದು, ಶನಿವಾರ ಬೆಳಿಗ್ಗೆ ಕಂಪನದ ಅನುಭವ ಉಂಟಾಗಿದೆ. ಇಂದು (ಜುಲೈ 23) ಮಡಿಕೇರಿ ತಾಲೂಕಿನ ಮದೆನಾಡು ಸಮೀಪದ ಸೀಮೆಹುಲ್ಲುಕಜೆ ಬೆಟ್ಟದಲ್ಲಿ ಭೂಕುಸಿತ ಆಗಿದ್ದು, ಭೂಮಿಯೊಳಗೆ ಭಾರಿ ಶಬ್ದದೊಂದಿಗೆ ಕೆಸರು ಕೊಚ್ಚಿ … Continued

ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಕಂಪಿಸಿದ ಭೂಮಿ

ಮಡಿಕೇರಿ/ಮಂಗಳೂರು: ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳ ಗಡಿ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ಭೂಕಂಪನದ ಅನುಭವವಾಗಿದ್ದು, ದಕ್ಷಿಣ ಕನ್ನಡಕ್ಕೆ ಹೊಂದಿಕೊಂಡಿರುವ ಕೇರಳದ ಕಾಸರಗೋಡು ಜಿಲ್ಲೆಯಲ್ಲಿಯೂ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಹೇಳಲಾಗಿದೆ. ಈ ಭೂಕಂಪನದಲ್ಲಿ ಯಾರಿಗೂ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಆದರೆ, ಹಲವು ಸೆಕೆಂಡ್ ಗಳಷ್ಟು ಸಮಯ ಕಂಪನದ ಅನುಭವವಾಗಿದೆ. ಸುಮಾರು 50 ಕಿ.ಮೀ ಪ್ರದೇಶದವರೆಗೂ … Continued

ಕೊಡಗಿನಲ್ಲಿ ಹುಲಿ ದಾಳಿಗೆ ವ್ಯಕ್ತಿ ಸಾವು

ಮಡಿಕೇರಿ: ದಕ್ಷಿಣ ಕೊಡಗಿನಲ್ಲಿ ಸೋಮವಾರ ಹುಲಿ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಜಿಲ್ಲೆಯ ವಿರಾಜಪೇಟೆ ತಾಲೂಕಿನ ರುದ್ರಗುಪ್ಪೆ ಗ್ರಾಮದ ತೋಟದಲ್ಲಿ  ಸಮೀಪದ ಕಾಫಿತೋಟದಲ್ಲಿ ಈ ಘಟನೆ ನಡೆದಿದೆ. ಹುಲಿ ದಾಳಿಗೆ ಮೃತ ಪಟ್ಟ ವ್ಯಕ್ತಿಯನ್ನು ಗಣೇಶ (29) ಗುರುತಿಸಲಾಗಿದೆ. ಕಾಫಿತೋಟದಲ್ಲಿ ಯುವಕನು ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಹುಲಿಯೊಂದು ಏಕಾಏಕಿ ದಾಳಿ ನಡೆಸಿದೆ. ಈ ವೇಳೆ … Continued

ಕೊನೆಗೂ ಕೊಡಗು ಬಾಲಕಿ ಕೈಸೇರಿದ ಕಳೆದುಹೋಗಿದ್ದ ಅಮ್ಮನ ನೆನಪಿನ ಮೊಬೈಲ್..!

ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರದ ಪುಟ್ಟ ಬಾಲಕಿ ಹೃತಿಕ್ಷಾ ಪ್ರಾರ್ಥನೆ ಕೊನೆಗೂ ಫಲಿಸಿದೆ. ಕೋವಿಡ್‌ನಿಂದ ಮೃತಪಟ್ಟ ತಾಯಿಯ ನೆನಪು ಇರುವ ಮೊಬೈಲ್ ಮೂರು ತಿಂಗಳ ನಂತರ ಆಕೆಯ ಕೈ ಸೇರಿದೆ. ಮಡಿಕೇರಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ಹೃತಿಕ್ಷಾ ತಾಯಿ ಮೇ 16ರಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು. ಆದರೆ ತಾಯಿಯ ಜೊತೆಗಿದ್ದ ಮೊಬೈಲ್ ಕಳೆದುಹೋಗಿತ್ತು. ತಾಯಿಯ ನೆನಪು … Continued