ಕಬ್ಬು ಬೆಲೆ ನಿಗದಿ ಸಭೆಗೆ ಕೋಡಿಹಳ್ಳಿ ಉಪಸ್ಥಿತಿಗೆ ರೈತ ಮುಖಂಡರ ಆಕ್ಷೇಪ, ಹೊರಹಾಕುವಂತೆ ಪಟ್ಟು

ಬೆಂಗಳೂರು: ಭ್ರಷ್ಟಾಚಾರದ ಆರೋಪ ಹೊತ್ತಿರುವ ಕೋಡಿಹಳ್ಳಿ ಚಂದ್ರಶೇಖರ ಅವರನ್ನು ಸಭೆಗೆ ಆಹ್ವಾನಿಸಿದ್ದಕ್ಕೆ ಆಕ್ರೋಶಗೊಂಡ ರೈತ ಮುಖಂಡರು ಸಚಿವರ ಎದುರೇಅವರನ್ನು ಸಭೆಯಿಂದ ಹೊರ ಹಾಕುವಂತೆ ಸಚಿವರ ಎದುರೇ ಒತ್ತಾಯಿಸುವ ಘಟನೆ ನಡೆಯಿತು. ಕಬ್ಬು ಬೆಲೆ ನಿಗದಿ ಹಾಗೂ ಬೆಳೆಗಾರರ ಸಮಸ್ಯೆಗಳನ್ನು ಚರ್ಚಿಸಲು ವಿಧಾನಸೌಧದಲ್ಲಿ ಸಕ್ಕರೆ ಖಾತೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ರೈತ ಮುಖಂಡರ ಸಭೆ … Continued

ಬೆಂಗಳೂರಿನಲ್ಲಿ ರೈತ ಮುಖಂಡ ಟಿಕಾಯತ್‌ ಮೇಲೆ ಹಲ್ಲೆ ನಡೆಸಿ, ಮುಖಕ್ಕೆ ಮಸಿ: ವ್ಯಕ್ತಿಗೆ ಥಳಿತ

ಬೆಂಗಳೂರು: ರೈತ ಮುಖಂಡ ರಾಕೇಶ್ ಟಿಕಾಯತ್ ಮತ್ತು ಯುದ್ಧ್​ವೀರ್​ ಸಿಂಗ್ ಅವರ ಮೇಲೆ ಕಪ್ಪು ಮಸಿ ಎರಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸೋಮವಾರ ಕೋಡಿಹಳ್ಳಿ‌ ಚಂದ್ರಶೇಖರ ಮೇಲಿನ ಭ್ರಷ್ಟಾಚಾರ ಆರೋಪದ ಬಗ್ಗೆ ಗಾಂಧಿ ಭವನದಲ್ಲಿ ಸಭೆ ಕರೆಯಲಾಗಿತ್ತು. ರಾಷ್ಟ್ರೀಯ ಕಿಸಾನ್ ಮೊರ್ಚಾ ಅಧ್ಯಕ್ಷ ರಾಕೇಶ್ ಸಿಂಗ್ ಟಿಕಾಯತ್, ಯುದ್ದವೀರ ಸಿಂಗ್ , ಪ್ರೊಫೆಸರ್ ರವಿ ವರ್ಮಕುಮಾರ್, … Continued

ಮುಷ್ಕರಕ್ಕೆ ಬಗ್ಗುವುದಿಲ್ಲ, ಪರ್ಯಾಯ ವ್ಯವಸ್ಥೆ ಮಾಡ್ತೇವೆ, ಕೆಲಸಕ್ಕೆ ಗೈರಾದವ್ರಿಗೆ ಸಂಬಳ ಕೊಡಲ್ಲ: ಸಿಎಂ ಖಡಕ್‌ ಎಚ್ಚರಿಕೆ

ಬೆಂಗಳೂರು: ಸಾರಿಗೆ ನೌಕರರು ಯುಗಾದಿ ಸಮಯದಲ್ಲೂ ಮುಷ್ಕರ ಹಿಂತೆಗೆದುಕೊಂಡಿಲ್ಲ, ಇದೇ ಸಮಯದಲ್ಲಿ ಸರ್ಕಾರ ಯಾವುದೇ ಕಾರಣಕ್ಕೂ ಬಗ್ಗುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಅವರು ಮಂಗಳವಾರ ನಗರದಲ್ಲಿ ಮಾತನಾಡಿದ ಅವರು, ಮುಷ್ಕರ ಮುಂದುವರಿಸಿರುವ ಸಾರಿಗೆ ನೌಕರರ ಜೊತೆ ಮಾತುಕತೆ ನಡೆಸುವ ಪ್ರಶ್ನೆಯೇ ಇಲ್ಲ. ಮುಷ್ಕರ ನಡೆಸಿದವರಿಗೆ ಮಾರ್ಚ್‌ ತಿಂಗಳ ಸಂಬಳವನ್ನೂ ಕೊಡುವುದಿಲ್ಲ. ಜೊತೆಗೆ ಕೆಲಸಕ್ಕೆ ಗೈರಾದವರ … Continued

ಕೋಡಿಹಳ್ಳಿ ಚಂದ್ರಶೇಖರ ಅವರನ್ನು ವಶಕ್ಕೆ ಪಡೆದ ಪೊಲೀಸರು..!

ಬೆಳಗಾವಿ : ರೈತ ಮುಖಂಡ, ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬೆಳಗಾವಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ನಗರದ ಖಾಸಗಿ ಹೋಟೆಲ್ ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಅವರು ರೈತ ಮುಖಂಡರ ಹಾಗೂ ಸಾರಿಗೆ ನೌಕರರ ಜೊತೆಗೆ ಸಭೆ ಮಾಡಲು ಮುಂದಾಗಿದ್ದ  ಹಿನ್ನೆಲೆಯಲ್ಲಿ ಬೆಳಗಾವಿ ಪೊಲೀಸರು ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಶಕ್ಕೆ ಪಡೆದಿದ್ದಾರೆ. … Continued