ಕರ್ನಾಟಕದಲ್ಲಿ ಸಿಎಂ ಬದಲಾವಣೆ ವಿಚಾರ ; ಕೋಡಿಮಠದ ಸ್ವಾಮೀಜಿ ಭವಿಷ್ಯ

ಬೆಳಗಾವಿ: ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ತಿಕ್ಕಾಟ ಜೋರಾಗಿದ್ದು, ಇದರ ಮಧ್ಯೆ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಭವಿಷ್ಯ ನುಡಿದಿದ್ದಾರೆ. ಬೆಳಗಾವಿಯಲ್ಲಿ ರಾಜ್ಯ ರಾಜಕೀಯದ ಬಗ್ಗೆ ಪ್ರತಿಕ್ರಿಯಿಸಿದ ಕೋಡಿಮಠ ಶ್ರೀಗಳು, ಸಂಕ್ರಾಂತಿ ನಂತರ ಈ ಬಗ್ಗೆ ಸ್ಪಷ್ಟವಾಗಿ ಹೇಳಬಹುದು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಹುದ್ದೆ ಕಿತ್ತುಕೊಳ್ಳುವುದು ಅಷ್ಟು ಸುಲಭವಲ್ಲ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ … Continued

ಯಗಾದಿ ನಂತರ ಉತ್ತಮ ಮಳೆ-ಬೆಳೆ : ಎಲ್ಲರಿಗೂ ಒಳ್ಳೆಯ ಸುದ್ದಿ ನೀಡಿದ ಕೋಡಿಮಠದ ಶ್ರೀಗಳು

ಕೋಲಾರ: ಈ ವರ್ಷ ಯುಗಾದಿ ಕಳೆದ ನಂತರ ಜಾಗತಿಕವಾಗಿ ಹಾಗೂ ದೇಶದಲ್ಲಿ ಹಲವಾರು ರೀತಿಯ ಬದಲಾವಣೆಗಳಾಗಲಿವೆ. ಮಳೆ ಬೆಳೆ ಉತ್ತಮ ರೀತಿಯಲ್ಲಿ ಆಗುತ್ತದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಕೋಲಾರದ ಜಿಲ್ಲೆ‌ ಮಾಲೂರು ಪಟ್ಟಣದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಯುಗಾದಿಯ ನಂತರದಲ್ಲಿ ನಿಸರ್ಗದ ಅನೇಕ ವಲಯಗಳಲ್ಲಿ ಬದಲಾವಣೆಯಾಗಲಿದೆ. ಮೋಡಗಳು ಕವಿಯುತ್ತವೆ, … Continued