ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದ ಮಮತಾ ಬ್ಯಾನರ್ಜಿ…

ಕೋಲ್ಕತ್ತಾ: ಆರ್.​ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದು ಹೇಳಿದ್ದಾರೆ. ನನಗೆ ಹುದ್ದೆಯ ಬಗ್ಗೆ ಕಾಳಜಿ ಇಲ್ಲ. ನ್ಯಾಯ ಖಾತ್ರಿ ಪಡಿಸುವುದಾದರೆ ಹುದ್ದೆಗೆ ರಾಜೀನಾಮೆ ಕೊಡಲು ಸಿದ್ಧ ಎಂದು ಹೇಳಿದ್ದಾರೆ. ಕಳೆದ ತಿಂಗಳು … Continued

ಕೋಲ್ಕತ್ತಾ ಆರ್‌.ಜಿ. ಕರ್ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ಬಂಧಿಸಿದ ಸಿಬಿಐ

ಕೋಲ್ಕತ್ತಾ: ಕಳೆದ ತಿಂಗಳು ವೈದ್ಯೆಯೊಬ್ಬರ ಅತ್ಯಾಚಾರ ಮತ್ತು ಹತ್ಯೆಗೈದ ಕೋಲ್ಕತ್ತಾ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ಅವರನ್ನು ಸಿಬಿಐ ಸೋಮವಾರ ಬಂಧಿಸಿದೆ. ಅತ್ಯಾಚಾರ-ಕೊಲೆ ಪ್ರಕರಣದ ಜೊತೆಗೆ ಸಿಬಿಐ ತನಿಖೆ ನಡೆಸುತ್ತಿರುವ ಸಂದೀಪ ಘೋಷ್ ಅಧಿಕಾರಾವಧಿಯಲ್ಲಿ ನಡೆದಿದೆ ಎನ್ನಲಾದ ಹಣಕಾಸಿನ ಅಕ್ರಮಗಳ ಆರೋಪಗಳಿಗೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ. ಸಂದೀಪ್ ಘೋಷ್ ಜೊತೆ ಮಾರಾಟಗಾರರಾದ ಬಿಪ್ಲವ್ ಸಿಂಘಾ … Continued

ಅಸ್ವಸ್ಥ, ಗಂಭೀರ, ಆತ್ಮಹತ್ಯೆ..’: ಅತ್ಯಾಚಾರ-ಕೊಲೆಯಾದ ವೈದ್ಯೆ ಪೋಷಕರಿಗೆ ಆರ್‌ಜಿ ಕರ್ ಆಸ್ಪತ್ರೆಯಿಂದ ಮಾಡಿದ 3 ಫೋನ್‌ ಕರೆಗಳ ವಿವರ ಬಹಿರಂಗ…!

ಕೋಲ್ಕತ್ತಾ : ಅತ್ಯಾಚಾರ ಮತ್ತು ಹತ್ಯೆಗೀಡಾದ ವೈದ್ಯ ವಿದ್ಯಾರ್ಥಿನಿಯ ತಂದೆ-ತಾಯಿಗೆ, ಆರ್.ಜಿ. ಕರ್ ವೈದ್ಯಕೀಯ ಕಾಲೇಜಿನ ಸಿಬ್ಬಂದಿ ಆಗಸ್ಟ್‌ 9ರ ಬೆಳಿಗ್ಗೆ ಮಾಡಿದ್ದು ಎನ್ನಲಾದ ದೂರವಾಣಿ ಕರೆಯ ವಿವರಗಳು ಗುರುವಾರ ಬಹಿರಂಗವಾಗಿವೆ. ಆಗಸ್ಟ್ 9 ರ ಬೆಳಿಗ್ಗೆ, ಅರ್ಧ ಗಂಟೆಯೊಳಗೆ ಮೂರು ಕರೆಗಳು ಅವರ ಹತ್ಯೆಗೀಡಾದ ವೈದ್ಯೆಯ ಕುಟುಂಬದ ಪುಟ್ಟ ಪ್ರಪಂಚವನ್ನು ಛಿದ್ರಗೊಳಿಸಿದವು. ಕೋಲ್ಕತ್ತಾ ಆಸ್ಪತ್ರೆಯಲ್ಲಿ … Continued

ಕಿರಿಯ ವೈದ್ಯೆ ಅತ್ಯಾಚಾರ-ಕೊಲೆ | ಕೋಲ್ಕತ್ತಾದ ಬೀದಿಗಳಲ್ಲಿ ಆಕ್ರೋಶ ; ಪ್ರತಿಭಟನಾಕಾರರ ಮೇಲೆ ಪೊಲೀಸರಿಂದ ಜಲಫಿರಂಗಿ, ಅಶ್ರುವಾಯು ಪ್ರಯೋಗ

ಕೋಲ್ಕತ್ತಾ : ಆರ್‌ಜಿ ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಮೇಲೆ ಅತ್ಯಾಚಾರ-ಕೊಲೆ ಪ್ರಕರಣವನ್ನು ಖಂಡಿಸಿ ಮಂಗಳವಾರ ಕೋಲ್ಕತ್ತಾದಲ್ಲಿ ‘ನಬಣ್ಣ ಅಭಿಜನ’ ಪ್ರತಿಭಟನಾ ಮೆರವಣಿಗೆ ವೇಳೆ ಪರಿಸ್ಥಿತಿ ವಿಕೋಪಕ್ಕೆ ಹೋದ ನಂತರ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಜಲಫಿರಂಗಿ, ಅಶ್ರುವಾಯು ಮತ್ತು ಲಾಠಿ ಚಾರ್ಜ್ ನಡೆಸಿದರು. ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ಎಸೆದರು ಮತ್ತು … Continued

‘ಸಾಕಷ್ಟು ಇದೆ…’: ಸಂದೀಪ ಘೋಷ್‌ ಭ್ರಷ್ಟಾಚಾರ ಪ್ರಕರಣದ ಸಾಕ್ಷ್ಯಾಧಾರಗಳ ಬಗ್ಗೆ ಸಿಬಿಐ ಅಧಿಕಾರಿ

ಕೋಲ್ಕತ್ತಾ : 31 ವರ್ಷದ ಸ್ನಾತಕೋತ್ತರ ತರಬೇತಿ ವೈದ್ಯೆಯ ಭೀಕರ ಅತ್ಯಾಚಾರ-ಕೊಲೆ ನಡೆದ ಕೋಲ್ಕತ್ತಾದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ವಿರುದ್ಧದ ಭ್ರಷ್ಟಾಚಾರ ತನಿಖೆ ವೇಳೆ ಸಾಕಷ್ಟು ಪುರಾವೆಗಳು ಸಿಕ್ಕಿವೆ ಎಂದು ಕೇಂದ್ರ ತನಿಖಾ ದಳ (ಸಿಬಿಐ) ಭಾನುವಾರ ತಿಳಿಸಿದೆ. “ಸಾಕಷ್ಟು ಇದೆ” ಎಂದು ಸಿಬಿಐ ಅಧಿಕಾರಿಯೊಬ್ಬರು … Continued

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಆರ್‌ಜಿ ಕರ್ ಆಸ್ಪತ್ರೆ ಪ್ರಾಂಶುಪಾಲೆ, ಉಪ ಪ್ರಾಂಶುಪಾಲರು ಹುದ್ದೆಯಿಂದ ವಜಾ

ಕೋಲ್ಕತ್ತಾ : ಕೋಲ್ಕತ್ತಾದಲ್ಲಿ ಟ್ರೇನಿ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಂತರದ ಪ್ರಮುಖ ಬೆಳವಣಿಗೆಯಲ್ಲಿ, ಬುಧವಾರ ಮಹತ್ವದ ಆಡಳಿತಾತ್ಮಕ ಬದಲಾವಣೆಗಳನ್ನು ಮಾಡಲಾಗಿದೆ. ಆರ್‌.ಜಿ. ಕರ್ ಆಸ್ಪತ್ರೆಯ ನೂತನ ಪ್ರಾಂಶುಪಾಲರಾದ ಸುಹೃತಾ ಪಾಲ್ ಅವರನ್ನು ಅವರ ಸ್ಥಾನದಿಂದ ವಜಾಗೊಳಿಸಲಾಗಿದೆ. ಹೆಚ್ಚುವರಿಯಾಗಿ, ವೈದ್ಯಕೀಯ ಕಾಲೇಜಿನ ಉಪ ಪ್ರಾಂಶುಪಾಲರಾದ, ಎಂಎಸ್‌ವಿಪಿ ಬುಲ್‌ಬುಲ್ ಮುಖೋಪಾಧ್ಯಾಯ ಮತ್ತು ಎದೆಯ ಔಷಧ … Continued

ವೈದ್ಯೆ ಭೀಕರ ಅತ್ಯಾಚಾರ-ಹತ್ಯೆ ಪ್ರಕರಣ ; ಕೋಲ್ಕತ್ತಾ ವೈದ್ಯಕೀಯ ಕಾಲೇಜು-ಆಸ್ಪತ್ರೆ ಹೊಣೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಹೆಗಲಿಗೆ

ಕೋಲ್ಕತ್ತಾ: ವಿಮಾನ ನಿಲ್ದಾಣಗಳು ಮತ್ತು ಸಂಸತ್ತಿನ ಭದ್ರತೆ ನೋಡಿಕೊಳ್ಳುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್‌ಎಫ್) ಉನ್ನತ ಅಧಿಕಾರಿಗಳು ಇಂದು, ಬುಧವಾರ ಬೆಳಿಗ್ಗೆ ಕೋಲ್ಕತ್ತಾದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ರಾಷ್ಟ್ರವನ್ನು ಬೆಚ್ಚಿಬೀಳಿಸಿದ 31 ವರ್ಷದ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ನಂತರ ಆಘಾತಕಾರಿ ವಿಧ್ವಂಸಕ ಘಟನೆಯ ನಂತರ ಸರ್ಕಾರಿ … Continued

ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣ : 70ಕ್ಕೂ ಹೆಚ್ಚು ಪದ್ಮ ಪ್ರಶಸ್ತಿ ಪುರಸ್ಕೃತ ವೈದ್ಯರಿಂದ ಪ್ರಧಾನಿ ಮೋದಿಗೆ ಪತ್ರ

ನವದೆಹಲಿ: ಕೋಲ್ಕತ್ತಾದ ಅತ್ಯಾಚಾರ-ಕೊಲೆ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿರುವ 70 ಕ್ಕೂ ಹೆಚ್ಚು ಪದ್ಮ ಪ್ರಶಸ್ತಿ ಪುರಸ್ಕೃತ ವೈದ್ಯರು, ಆರೋಗ್ಯ ಸಿಬ್ಬಂದಿ ವಿರುದ್ಧದ ಹಿಂಸಾಚಾರ ತಡೆಗೆ ವಿಶೇಷ ಕಾನೂನನ್ನು ತ್ವರಿತವಾಗಿ ಜಾರಿಗೊಳಿಸಬೇಕು ಮತ್ತು ವೈದ್ಯಕೀಯ ಸೌಲಭ್ಯಗಳಲ್ಲಿ ಸುಧಾರಿತ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಅಶೋಕ್ ವೈದ್, … Continued

ಕೋಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ-ಕೊಲೆ : ಸಿಬಿಐಗೆ ಶಂಕಿತರ ಮಾಹಿತಿ ನೀಡಿದ ಪೋಷಕರು ; ವರದಿ

ಕೋಲ್ಕತ್ತಾ: ಕೋಲ್ಕತ್ತಾದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅತ್ಯಾಚಾರ ಮತ್ತು ಹತ್ಯೆಗೀಡಾದ ಟ್ರೇನಿ ವೈದ್ಯೆಯ ಪೋಷಕರು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಆಸ್ಪತ್ರೆಯ ಹಲವಾರು ಇಂಟರ್ನ್‌ಗಳು ಮತ್ತು ವೈದ್ಯರು ಅಪರಾಧದಲ್ಲಿ ಭಾಗಿಯಾಗಿರಬಹುದು ಎಂದು ಹೇಳಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ತಮ್ಮ ಮಗಳ ಅತ್ಯಾಚಾರ ಮತ್ತು ಕೊಲೆಯಲ್ಲಿ ಭಾಗಿಯಾಗಿರುವ ಶಂಕಿತ … Continued

ವೈದ್ಯೆ ಅತ್ಯಾಚಾರ-ಕೊಲೆ ಖಂಡಿಸಿ ಇಂದು ದೇಶಾದ್ಯಂತ ವೈದ್ಯರ ಮುಷ್ಕರ ; ಯಾವೆಲ್ಲ ಸೇವೆ ಇರಲ್ಲ ?

ನವದೆಹಲಿ: ಕೋಲ್ಕತಾ ನಗರದ ಆರ್‌.ಜಿ. ಕರ್‌ ಸರಕಾರಿ ವೈದ್ಯಕೀಯ ಹಾಗೂ ಕಾಲೇಜು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದಿರುವ ಅತ್ಯಾಚಾರ ಹಾಗೂ ಹತ್ಯೆಯನ್ನು ಖಂಡಿಸಿ ಶನಿವಾರ (ಆಗಸ್ಟ್ 17) ದೇಶಾದ್ಯಂತ ವೈದ್ಯರು ಸೇವೆ ಬಹಿಷ್ಕರಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಶನಿವಾರ (ಆಗಸ್ಟ್ 17) ಬೆಳಗ್ಗೆ 6 ಗಂಟೆಯಿಂದ ಮರುದಿನ ಭಾನುವಾರ ಬೆಳಗ್ಗೆ 6 ಗಂಟೆ … Continued