ಗಂಗಾವತಿ | ಆನ್‌ಲೈನ್‌ ಗೇಮ್‌ ಆಡದಂತೆ ಬುದ್ಧಿಮಾತು ಹೇಳಿದಕ್ಕೆ ತಂದೆ-ಅಕ್ಕನನ್ನು ಕೊಲೆಗೈದ ಮಗ ; ತಾಯಿಗೂ ಗಂಭೀರ ಗಾಯ

ಕೊಪ್ಪಳ: ಮೊಬೈಲ್‌ ಗೇಮ್‌ ಆಡದಂತೆ ಬುದ್ಧಿವಾದ ಹೇಳಿದ್ದಕ್ಕೆ ಮಗ ತನ್ನ ತಂದೆ-ತಾಯಿ ಹಾಗೂ ಸಹೋದರಿ ಮೇಲೆಯೇ ಚಾಕುವಿನಿಂದ ದಾಳಿ ಮಾಡಿದ್ದು, ಇಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ತಾಲೂಕಿನ ಅಯೋಧ್ಯೆ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಪಿಯುಸಿ ಓದುತ್ತಿರುವ ಸಾಯಿ ವೆಂಕಟ ಮಣಿದೀಪ (18) ಆರೋಪಿಯಾಗಿದ್ದಾನೆ. ಶನಿವಾರ ರಾತ್ರಿ ಈ ಘಟನೆ … Continued

ಗಂಗಾವತಿ : ಭರತನಾಟ್ಯ ಮಾಡುತ್ತಲೇ ಅಂಜನಾದ್ರಿ ಬೆಟ್ಟದ 574 ಮೆಟ್ಟಿಲುಗಳನ್ನು ಏರಿದ ಕಲಾವಿದೆ ; ವೀಡಿಯೊ ವೈರಲ್‌

ಕೊಪ್ಪಳ : ಭರತನಾಟ್ಯ ಕಲಾವಿದೆಯೊಬ್ಬರು ಭರತನಾಟ್ಯ ಮಾಡುತ್ತಲೇ 575 ಮೆಟ್ಟಿಲುಗಳನ್ನು ಏರಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ನಿವಾಸಿಯಾಗಿರುವ ಹರ್ಷಿತಾ ಎಂಬವರು 8 ನಿಮಿಷ 54 ಸೆಕೆಂಡ್​ನಲ್ಲಿ ನೃತ್ಯ ಮಾಡುತ್ತಾ ಅಂಜನಾದ್ರಿ ಬೆಟ್ಟವನ್ನು ಏರಿದ್ದಾರೆೆಂದು ವರದಿಯಾಗಿದೆ. ಹನುಮ ವ್ರತಾಚರಣೆ ಸಂದರ್ಭದಲ್ಲಿ, ಪಾಲಕರ ಮಾರ್ಗದರ್ಶನದಲ್ಲಿ 574 ಮೆಟ್ಟಿಲುಗಳ ಮೇಲೆ ವಿವಿಧ ಭಂಗಿಯಲ್ಲಿ ನಾಟ್ಯ ನಡೆಸುತ್ತ ಅವರು ಶಿಖರವನ್ನು … Continued

ಗಂಗಾವತಿ | ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಹತ್ಯೆ

ಕೊಪ್ಪಳ: ಜಿಲ್ಲೆಯ ಗಂಗಾವತಿಯಲ್ಲಿ ಸಿನಿಮಿಯ ರೀತಿಯಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳವಾರ ಮಧ್ಯರಾತ್ರಿಯ ನಂತರ ನಡೆದಿದೆ ಎಂದು ವರದಿಯಾಗಿದೆ. ಗಘಾವತಿ ನಗರದ ಕೊಪ್ಪಳ ರಸ್ತೆಯ ಲೀಲಾವತಿ ಆಸ್ಪತ್ರೆಯ ಮುಂದುಗಡೆ ಈ ಘಟನೆ ನಡೆದಿದ್ದು, ನಸುಕಿನ ಜಾವ 2 ಗಂಟೆ ಸುಮಾರಿಗೆ ಕಾರಿನಲ್ಲಿ ಆಗಮಿಸಿದ್ದ ಗ್ಯಾಂಗ್ ಕೊಲೆ ಮಾಡಿದೆ ಎನ್ನಲಾಗಿದೆ. … Continued

ವೀಡಿಯೊ..| ರಸ್ತೆ ಬೇಕಂದ್ರೆ ಗ್ಯಾರಂಟಿ ಯೋಜನೆಗಳು ಬಂದ್ ಆಗ್ತವೆ : ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಹೇಳಿಕೆ ಚರ್ಚೆಗೆ ಗ್ರಾಸ

ಕೊಪ್ಪಳ: ”ಗ್ರಾಮೀಣ ಭಾಗದಲ್ಲಿ ರಸ್ತೆ ನಿರ್ಮಿಸಬೇಕೆಂದರೆ ಅನ್ನಭಾಗ್ಯ ಯೋಜನೆಯ ಅಕ್ಕಿ ಸೇರಿ ಎಲ್ಲ ಬಂದ್‌ ಆಗುತ್ತವೆ,” ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿಕೆ ನೀಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಜಿಲ್ಲೆಯ ಕುಕನೂರು ತಾಲೂಕಿನ ಗ್ರಾಮವೊಂದರಲ್ಲಿ ಶನಿವಾರ ನಡೆದ ಸರಕಾರಿ ಪ್ರೌಢಶಾಲೆ ಉದ್ಘಾಟನೆ ಕಾರ್ಯಕ್ರಮದಲ್ಲಿ ರೈತರೊಬ್ಬರು, ” ಮಹಿಳೆಯರಿಗೆ ಹಣ ಕೊಡ್ತೀರಿ, ಸೌಲಭ್ಯ ಕೊಡ್ತೀರಿ. … Continued

ಇಸ್ರೇಲಿ ಪ್ರವಾಸಿ, ಹೋಂ ಸ್ಟೇ ಮಾಲೀಕಳ ಮೇಲೆ ಅತ್ಯಾಚಾರ ; ನಾಲೆಗೆ ತಳ್ಳಿದ್ದ ಒಡಿಶಾದ ಪ್ರವಾಸಿಗನ ಮೃತದೇಹ ಪತ್ತೆ

ಕೊಪ್ಪಳ: ಗುರುವಾರ ರಾತ್ರಿ ಕರ್ನಾಟಕದ ಹಂಪಿ ಬಳಿ 27 ವರ್ಷದ ಇಸ್ರೇಲಿ ಪ್ರವಾಸಿ ಮತ್ತು 29 ವರ್ಷದ ಹೋಂಸ್ಟೇ ಮಾಲೀಕರು ಸೇರಿದಂತೆ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಮಹಿಳೆಯರೊಂದಿಗೆ ಇದ್ದ ಮೂವರು ಪುರುಷ ಸಹಚರರ ಮೇಲೂ ದಾಳಿಕೋರರು ಹಲ್ಲೆ ನಡೆಸಿ ನಂತರ ಅವರನ್ನು ಕಾಲುವೆಗೆ ಎಸೆದಿದ್ದಾರೆ. ಇಂದು, ಶನಿವಾರ ಬೆಳಗ್ಗೆ ಕಾಲುವೆ ನೀರಿನಲ್ಲಿ ಒಬ್ಬರ … Continued

ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಅನುದಾನ ಬೇಕು ; ಇದರಿಂದ ಅಭಿವೃದ್ಧಿ ಯೋಜನೆಗಳಿಗೆ ಹಣದ ಕೊರತೆ ; ಸಿಎಂ ಆರ್ಥಿಕ ಸಲಹೆಗಾರ

ಕೊಪ್ಪಳ : ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಅನುಷ್ಠಾನ ಮಾಡಿರುವ ಪಂಚ ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಅನುದಾನ ಬೇಕಾಗುತ್ತದೆ. ಇದರಿಂದ ಬೇರೆ ಯೋಜನೆಗಳಿಗೆ ಅನುದಾನದ ಕೊರತೆಯಾಗುತ್ತಿದೆ.‌ ಮುಖ್ಯಮಂತ್ರಿಗಳ ಜೊತೆಗೆ ಇರುವ ನನಗೆ ಮಾತ್ರ ಒಳಗಿನ ಸಮಸ್ಯೆ ಏನು ಎಂಬುದು ಗೊತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಕೊಪ್ಪಳದ‌ ಕುಕನೂರು … Continued

ಏಪ್ರಿಲ್‌ 28, 29 ರಂದು ಉತ್ತರ ಕರ್ನಾಟಕದಲ್ಲಿ ಪ್ರಧಾನಿ ಮೋದಿ ಭರ್ಜರಿ ಪ್ರಚಾರ : ಬೆಳಗಾವಿಯಲ್ಲಿ ತಂಗುವ ಸಾಧ್ಯತೆ

ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿ ಈ ಬಾರಿ ಚುನಾವಣಾ ಪ್ರಚಾರದಲ್ಲಿ ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ ವ್ಯಾಪ್ತಿಯ ಲೋಕಸಭಾ ಮತಕ್ಷೇತ್ರಗಳಲ್ಲಿ ಬಿರುಸಿನ ಚುನಾವಣಾ ಪ್ರಚಾರಕ್ಕೆ ಮುಂದಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್​ 28 ಮತ್ತು 29 ಎರಡೂ ದಿನಗಳ ಕಾಲ ಕರ್ನಾಟಕದಲ್ಲಿ ಮತಯಾಚಿಸಲಿದ್ದಾರೆ. ಚುನಾವಣಾ ಪ್ರಚಾರ ಸಂದರ್ಭದಲ್ಲಿ ಅವರು ಬೆಳಗಾವಿಯಲ್ಲೇ ತಂಗುವ ಸಾಧ್ಯತೆ ಇದೆ. … Continued

ಬಸ್‌ ನಿಲ್ಲಿಸಲಿಲ್ಲವೆಂದು ಕೋಪದಿಂದ ಬಸ್ಸಿಗೆ ಕಲ್ಲೆಸೆದ ಮಹಿಳೆಗೆ 5 ಸಾವಿರ ದಂಡ…!

ಕೊಪ್ಪಳ: ಕೊಪ್ಪಳದಿಂದ ಹೊಸಪೇಟೆಗೆ ಹೋಗುತ್ತಿದ್ದ ಬಸ್‌ಗಳು ತಾಲೂಕಿನ ಹೊಸ ಲಿಂಗಾಪುರ (ಹುಲಿಗಿ ಕ್ರಾಸ್‌) ಬಳಿ ನಿಲ್ಲಿಸದ ಕಾರಣ ರೊಚ್ಚಿಗೆದ್ದ ಮಹಿಳೆಯೊಬ್ಬರು ಸರ್ಕಾರಿ ಬಸ್‌ಗೆ ಕಲ್ಲು ತೂರಿದ್ದಾರೆ ಎಂದು ವರದಿಯಾಗಿದೆ. ವರದಿ ಪ್ರಕಾರ, ಭಾನುವಾರ ಈ ಘಟನೆ ನಡೆದಿದ್ದು, ಬಸ್‌ನ ಚಾಲಕ ಕಂ ನಿರ್ವಾಹಕ ಮುಕ್ಕಣ್ಣ ಕುಕನೂರು ಅವರು ಕಲ್ಲು ಎಸೆದ ಮಹಿಳೆಯನ್ನು ಎಲ್ಲ ಪ್ರಯಾಣಿಕರ ಸಮೇತ … Continued

ಗಂಗಾವತಿ: ಧಾರ್ಮಿಕ ಕಾರ್ಯಕ್ರಮದ ಪೆಂಡಾಲ್ ಕುಸಿದು ಮಹಿಳೆ ಸಾವು

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮುಸ್ಟೂರು ಕ್ಯಾಂಪ್ ನಲ್ಲಿ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮಕ್ಕೆ ಆಗಮಿಸಿದ ಭಕ್ತರಿಗೆ ಅಡುಗೆ ತಯಾರಿಸುತ್ತಿದ್ದ ಮಹಿಳೆಯ ಮೇಲೆ ಪೆಂಡಾಲ್ ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ ಎಂದು ವರದಿಯಾಗಿದೆ. ಮೃತ ಮಹಿಳೆಯನ್ನು ಅಂಜಿನಮ್ಮ( 51) ಎಂದು ಗುರುತಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸಿದ ಭಕ್ತರಿಗೆ ಊಟದ ವ್ಯವಸ್ಥೆ ಮಾಡಲು ಕಾರ್ಯಕ್ರಮದ ವೇದಿಕೆಯ … Continued

ಕಂಟೇನರ್​ಗೆ ಹಿಂಬದಿಯಿಂದ ಗುದ್ದಿದ ಕಾರು: ಮೂವರ ಸಾವು

ಕೊಪ್ಪಳ: ಜಿಲ್ಲೆಯ ಕುಷ್ಟಗಿ ಪಟ್ಟಣದ ಹೊರವಲಯದಲ್ಲಿ ಇಂದು, ಮಂಗಳವಾರ ಬೆಳಗಿನ ಜಾವ ಕಂಟೇನರ್​ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಮೂವರು ಸಾವಿಗೀಡಾಗಿದ್ದಾರೆ. ಮೃತರನ್ನು ಪ್ರವೀಣಕುಮಾರ ಭೋಜಪ್ಪ (27), ಸುರೇಶ ಈರಸಂಗಪ್ಪ ಹಂಡರಗಲ್ (43) ಹಾಗೂ ಗೌರಮ್ಮ ಹನುಮಗೌಡ ಕನ್ನೂರು (60) ಎಂದು ಗುರುತಿಸಲಾಗಿದೆ. ಮೃತರು ಮುದ್ದೇಬಿಹಾಳ ಮೂಲದವರು ಎನ್ನಲಾಗಿದೆ. ಇವರು ಮದುವೆ ಮುಗಿಸಿಕೊಂಡು ವಾಪಸ್ ಊರಿಗೆ ಹೋಗುತ್ತಿದ್ದಾಗ … Continued