ವಿಚಿತ್ರ…ತನಗೆ ಹೊಡೆದವರನ್ನು ಮಾತ್ರ ಬೆನ್ನು ಬಿಡದೆ ಅಟ್ಟಾಡಿಸಿಕೊಂಡು ಹೋಗುವ ದೇವಿಯ ಹರಕೆಯ ಕೋಣ…!

ಕೊಪ್ಪಳ: ವಿಚಿತ್ರ ಘಟನೆಯೊಂದರಲ್ಲಿ ಕೊಪ್ಪಳ ಜಿಲ್ಲೆಯ ಶ್ರೀಕಂಟೆಮ್ಮ ದುರ್ಗಾ ದೇವಿಯ ಹರಕೆಯ ಕೋಣವೆಂದರೆ ಎಲ್ಲರೂ ಹೆದರುತ್ತಾರೆ…! ಕೊಪ್ಪಳ ತಾಲೂಕಿನ ಹಳೇ ಬಂಡಿಹರ್ಲಾಪುರ ಗ್ರಾಮದ ಈ ಹರಕೆಯ ಕೋಣ, ತನಗೆ ಬೈದು ಹೊಡೆದವರನ್ನು ಹಿಡಿದು ಬಿಡದೆ ಕಾಡುತ್ತದೆಯಂತೆ. ಜಿಲ್ಲೆಯಲ್ಲಿರುವ ಪ್ರಸಿದ್ಧ ದೇವರಾದ ಶ್ರೀಕಂಟೆಮ್ಮ ದುರ್ಗಾ ದೇವಿಯ ಹರಕೆಗೆಂದು ಕೋಣವನ್ನು ಬಿಡಲಾಗಿದೆ.. ಈ ಕೋಣ ಗ್ರಾಮದಲ್ಲಿ ಮೇವು ತಿನ್ನುತ್ತಿದ್ದ … Continued

ಕೊಪ್ಪಳ: ಸಿಡಿಲು ಬಡಿದು ಇಬ್ಬರು ಮಹಿಳೆಯರು ಸಾವು

ಕೊಪ್ಪಳ: ಕೊಪ್ಪಳ ಜಿಲ್ಲಾದ್ಯಂತ ಭಾನುವಾರ ಗುಡುಗು- ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಈ ವೇಳೆ ಸಿಡಿಲಿಗೆ ರೈತ ಮಹಿಳೆಯರಿಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ದೇವಮ್ಮ (55) ಮತ್ತು ರೇಷ್ಮಾ (27) ಎಂದು ಗುರುತಿಸಲಾಗಿದೆ. ಜಿಲ್ಲೆಯ ಯಲಬುರ್ಗಾ ತಾಲೂಕಿನ ಚಿಕ್ಕಮ್ಯಾಗೇರಿಯಲ್ಲಿ ಮಹಿಳೆಯರಿಬ್ಬರು ಭಾನುವಾರ ಹೊಲದಲ್ಲಿ ಕೃಷಿ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಮಳೆ ಬಂದ ಕಾರಣ … Continued

ಆನೆಗೊಂದಿ: ತಡರಾತ್ರಿ ಊಟ ಇಲ್ಲ ಎಂದಿದ್ದಕ್ಕೆ ಅಡುಗೆ ಸಿಬ್ಬಂದಿ ಕೂಡಿಹಾಕಿ ಡಾಬಾಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು…!

ಕೊಪ್ಪಳ: ರಾತ್ರಿ ಹನ್ನೊಂದುವರೆ ಗಂಟೆಯ ಬಳಿಕ ಊಟ ಇಲ್ಲ ಎಂದು ಹೇಳಿದ್ದಕ್ಕೆ ಆಕ್ರೋಶಗೊಂಡ ಅಪರಿಚಿತರು ಡಾಬಾಕ್ಕೆ ಬೆಂಕಿ ಹಚ್ಚಿದ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ತಡರಾತ್ರಿ ಊಟ ನಿರಾಕರಿಸಿದ್ದರಿಂದ ಸಿಟ್ಟುಗೊಂಡ ಕಿಡಿಗೇಡಿ ಯುವಕರು ಅಡುಗೆ ಸಿಬ್ಬಂದಿಗೆ ಗೊತ್ತಾಗದಂತೆ ಕೋಣೆಯ ಹೊರಗಿನಿಂದ ಚಿಲಕ ಹಾಕಿ ಕೂಡಿಹಾಕಿದ್ದಾರೆ. ಬಳಿಕ ಡಾಬಾಕ್ಕಿದ್ದ ನೀರಿನ ಸಂಪರ್ಕ … Continued

ವಿದ್ಯುತ್ ಅವಘಡ: ತಾಯಿ-ಇಬ್ಬರು ಮಕ್ಕಳು ಸಾವು

ಕೊಪ್ಪಳ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ತಾಯಿ ಮತ್ತು ಇಬ್ಬರು ಮಕ್ಕಳು ಸಾವಿಗೀಡಾದ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ಸಂಭವಿಸಿದೆ. ಮೃತರನ್ನು 28 ವರ್ಷದ ಶೈಲಾ, ಮಕ್ಕಳಾದ ಪವನ್ (2) ಮತ್ತು ಸಾನ್ವಿ (3) ಎಂದು ಗುರುತಿಸಲಾಗಿದೆ. ವಿದ್ಯುತ್ ವೈರ್‌ ಸ್ಪರ್ಷಿಸಿದ ಕಾರಣ ತಾಯಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ ಎಂದು … Continued

ಕೊರೊನಾ ಸೋಂಕು ತಗುಲಿ 154 ದಿನಗಳ ಹೋರಾಟದ ನಂತರ ಆಸ್ಪತ್ರೆಯಿಂದ ಬಿಡುಗಡೆಯಾದ ಕೊಪ್ಪಳದ ಮಹಿಳೆ

ಕೊಪ್ಪಳ: ಕೊರೊನಾ ಸೋಂಕಿಗೆ ತುತ್ತಾಗಿರುವ ಮಹಿಳೆಯೊಬ್ಬರು 158 ದಿನಗಳ ಕಾಲ ಚಿಕಿತ್ಸೆ ಪಡೆದು ಗುಣಮುಖರಾಗಿ ಇಂದು, ಮಂಗಳವಾರ ಕೊಪ್ಪಳದ ಜಿಲ್ಲಾಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ..! ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಬೋದೂರು ಗ್ರಾಮದ ಗೀತಾ (45) ಎಂಬವರು ಸೋಂಕಿತ ಮಹಿಳೆಯು ಒಟ್ಟು 108 ದಿನ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಕಳೆದ ಜುಲೈ 13 ರಂದು ಕೋವಿಡ್ ದೃಢಪಟ್ಟು ಆಸ್ಪತ್ರೆಗೆ … Continued

ಕೋವಿಡ್‌ ಲಸಿಕೆ ನಿರಾಕರಿಸಿ ಮನೆ ಏರಿದ ವ್ಯಕ್ತಿ, ದೇವರು ಮೈಮೇಲೆ ಬಂದಂತೆ ವರ್ತಿಸಿದ ಮತ್ತೊಬ್ಬ

ಕೊಪ್ಪಳ:ರಾಜ್ಯದಲ್ಲಿ ಕೋವಿಡ್‌ ಲಸಿಕೆ ಪಡೆಯಲು ಜನ ನಿರಾಕರಿಸುತ್ತಿದ್ದಾರೆ. ಕೊಪ್ಪಳದಲ್ಲಿ ಅಧಿಕಾರಿಗಳು ವಿವಿಧ ರೀತಿಯ ಸವಾಲು ಎದುರಿಸುತ್ತಿದ್ದಾರೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಬೂದಗುಂಪಾದಲ್ಲಿ ಹುಚ್ಚಪ್ಪ ಛಲವಾದಿ ಎಂಬ ವ್ಯಕ್ತಿ ಲಸಿಕೆಗೆ ಹೆದರಿ ಮನೆಯ ಮೇಲೆ ಏರಿದ್ದಾರೆ…! ಮತ್ತೊಂದೆಡೆ ಕೊರೊನಾ ಲಸಿಕೆ ಹಾಕಲು ಹೋಗುತ್ತಿದ್ದಂತೆ ವ್ಯಕ್ತಿಯೊಬ್ಬ ದೇವರು ಬಂದಂತೆ ವಿಲಕ್ಷಣ ವರ್ತನೆ ತೋರಿದ್ದಾರೆ. ಇನ್ನೊಂದು ಕಡೆ ನಾನು … Continued

ಕೊಲೆ ಆರೋಪಿ ಮದುವೆಯಲ್ಲಿ ಪೊಲೀಸರ ಉಪಸ್ಥಿತಿ: ಮೂವರಿಗೆ ಕಡ್ಡಾಯ ರಜೆಯಲ್ಲಿ ತೆರಳಲು ಆದೇಶಿಸಿದ ಎಸ್ಪಿ

ಕೊಪ್ಪಳ:ರಾಜ್ಯದಲ್ಲಿ ಅತಿ ಹೆಚ್ಚು ಸದ್ದು‌ ಮಾಡಿದ್ದ ಕನಕಾಪುರದ ಯಲ್ಲಾಲಿಂಗ ಕೊಲೆ ಪ್ರಕರಣದ ಆರೋಪಿಯ ಮದುವೆಗೆ ಗಂಗಾವತಿಯ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದರು, ಅಧಿಕಾರಿಗಳು ಮದುವೆಯಲ್ಲಿ ಪೊಲೀಸ್‌ ಡ್ರೆಸ್ ನೊಂದಿಗೆ ಭಾಗಿಯಾಗಿರುವ ಕುರಿತು ಸಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಯಾಗಿತ್ತು. ಮಾಧ್ಯಮಗಳಲ್ಲಿಯೂ ಭಾರೀ ಸುದ್ದಿಯಾಗಿತ್ತು. ಇದು ಪೊಲೀಸ್ ಇಲಾಖೆಗೆ ಮುಜುಗರ ತಂದಿದ್ದರಿಂದ ಮದುವೆಯಲ್ಲಿ ಭಾಗಿಯಾದ ಅಧಿಕಾರಿಗಳನ್ನು ತಕ್ಷಣದಿಂದ ಕಡ್ಡಾಯ … Continued