ಕೆಪಿಎಸ್‌ಸಿ ಅಧ್ಯಕ್ಷರ ಹುದ್ದೆಯಿಂದ ಶಿವಶಂಕರಪ್ಪ ಸಾಹುಕಾರ ಅಮಾನತುಗೊಳಿಸಿದ್ದ ರಾಜ್ಯಪಾಲರ ಆದೇಶ ರದ್ದುಗೊಳಿಸಿದ ಹೈಕೋರ್ಟ್‌

ಬೆಂಗಳೂರು : ಅಧಿಕಾರ ದುರುಪಯೋಗ ಹಾಗೂ ಸ್ವಜನಪಕ್ಷಪಾತದ ಆರೋಪದಡಿ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಮಂಗಳವಾರ ರದ್ದುಪಡಿಸಿದೆ. ಕೆಪಿಎಸ್‌ಸಿ ಅಧ್ಯಕ್ಷ ಹುದ್ದೆಯಿಂದ ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಶಿವಶಂಕರಪ್ಪ ಎಸ್. ಸಾಹುಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು … Continued

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ : 21 ಕಡೆ ಇ.ಡಿ. ದಾಳಿ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ)ದ  ವಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ), ಕೆಪಿಎಸ್‌ಸಿ ಅಧ್ಯಕ್ಷ ಹುದ್ದೆಯಿಂದ ಅಮಾನತುಗೊಂಡಿರುವ ಶಿವಶಂಕರಪ್ಪ ಎಸ್.ಸಾಹುಕಾರ ಅವರ ಮನೆ ಸೇರಿದಂತೆ 21 ಕಡೆಗಳಲ್ಲಿ ಬೆಂಗಳೂರು ವಲಯದ ಜಾರಿ ನಿರ್ದೇಶನಾಲಯ(ಇ.ಡಿ) ಅಧಿಕಾರಿಗಳು ಇಂದು, ಮಂಗಳವಾರ ಬೃಹತ್ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. .ಕೆಪಿಎಸ್‌ಸಿ ಅಧ್ಯಕ್ಷ ಹುದ್ದೆಯಿಂದ ಅಮಾನತುಗೊಂಡಿರುವ … Continued

ಸುಳ್ಳು ಆದಾಯ ಪ್ರಮಾಣಪತ್ರ ಪ್ರಕರಣ : ಸುಮಾ ಸಾಹುಕಾರಗೆ ಹೈಕೋರ್ಟ್ ತರಾಟೆ

ಬೆಂಗಳೂರು : ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ ಅಕ್ರಮವಾಗಿ ನೇಮಕವಾಗಲು ಸುಳ್ಳು ಆದಾಯ ಪ್ರಮಾಣಪತ್ರ ಸಲ್ಲಿಸಿದ ಆರೋಪ ಸಂಬಂಧ ತಮ್ಮ ವಿರುದ್ಧ ದಾಖಲಾದ ಎಫ್ಐಆರ್ ರದ್ದು ಕೋರಿ ಅರ್ಜಿ ಸಲ್ಲಿಸಿದ್ದ ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದ ಶಿವಶಂಕರಪ್ಪ ಸಾಹುಕಾರ ಅವರ ಪುತ್ರಿಯ ವಿರುದ್ಧ ಕರ್ನಾಟಕ ಹೈಕೋರ್ಟ್ ಸೋಮವಾರ ಕಿಡಿಕಾರಿತು. ಹಿಂದುಳಿದ ವರ್ಗಗಳ 3ಬಿ ಕೆಟಗರಿ ಕೋಟಾದಡಿ ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ … Continued

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅಮಾನತು

ಬೆಂಗಳೂರು: ರಾಜ್ಯ ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರ ವಹಿಸುವ ಕರ್ನಾಟಕ ಲೋಕಸೇವಾ ಆಯೋಗ (KPSC)ದ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರು ಭಾನುವಾರ (ಜುಲೈ 13) ಆದೇಶ ಹೊರಡಿಸಿದ್ದಾರೆ. ಅಧ್ಯಕ್ಷರ ವಿರುದ್ಧ ಗಂಭೀರ ಸ್ವರೂಪದ ಅಧಿಕಾರ ದುರುಪಯೋಗ ಮತ್ತು ಸ್ವಜನಪಕ್ಷಪಾತದ ಆರೋಪಗಳು ಕೇಳಿಬಂದಿರುವ … Continued

ಕೆ ಪಿ ಎಸ್‌ ಸಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ – ಎ ಮತ್ತು ಗ್ರೂಪ್ – ಬಿ ವೃಂದದ 384 ಹುದ್ದೆಗಳ ನೇಮಕಾತಿ ಮುಖ್ಯ ಪರೀಕ್ಷೆಯನ್ನು (KAS Mains exam) ಕರ್ನಾಟಕ ಲೋಕಸೇವಾ ಆಯೋಗ ಮುಂದೂಡಿದೆ. ಆಯೋಗವು ಫೆ.13ರಂದು ಮುಖ್ಯ ಪರೀಕ್ಷೆಗೆ ಅಧಿಸೂಚನೆ ಪ್ರಕಟಿಸಿತ್ತು ಮಾರ್ಚ್‌ 28, 29, ಏಪ್ರಿಲ್ 1, ಮತ್ತು 2ರಂದು ಪರೀಕ್ಷೆ ನಡೆಸಲಾಗುವುದು … Continued

ಕೆಪಿಎಸ್​​ಸಿ ಪರೀಕ್ಷೆಯಲ್ಲಿ ಗೊಂದಲ : ಮರುಪರೀಕ್ಷೆ ನಡೆಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಇತ್ತೀಚೆಗೆ ನಡೆದ ಕರ್ನಾಟಕ ಲೋಕ ಸೇವಾ ಆಯೋಗದ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಹುದ್ದೆ ಪರೀಕ್ಷೆಯಲ್ಲಿನ ಎಡವಟ್ಟುಗಳ ಹಿನ್ನೆಲೆಯಲ್ಲಿ ಮರುಪರೀಕ್ಷೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ Xನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ”ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು … Continued

384 ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗೆ ಕೆಪಿಎಸ್‌ಸಿಯಿಂದ ಅಧಿಸೂಚನೆ

ಬೆಂಗಳೂರು : 2023–24 ನೇ ಸಾಲಿನ 384 ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ (KAS) ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ. ಕೆಪಿಎಸ್‌ಸಿ ಪ್ರಭಾರಿ ಕಾರ್ಯದರ್ಶಿ ಡಾ. ರಾಕೇಶಕುಮಾರ ಕೆ ಸೋಮವಾರ ಅಧಿಸೂಚನೆ ಹೊರಡಿಸಿದ್ದು, ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳೂ (ಹೈದರ್‌ಬಾದ್‌ ಕರ್ನಾಟಕ) ಸೇರಿದಂತೆ ಒಟ್ಟಾರೆ 384 ಹುದ್ದೆಗಳಲ್ಲಿ ‘ಗ್ರೂಪ್ –ಎ’ 159, ‘ಗ್ರೂಪ್ –ಬಿ’ … Continued

ಕೆಪಿಎಸ್‌ಸಿ ನೇಮಕಾತಿ: 242 ಲೆಕ್ಕ ಸಹಾಯಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಕೆಪಿಎಸ್‌ಸಿ ಗ್ರೂಪ್‌ ಸಿ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ ಮಾಡಿದ್ದು, ಕರ್ನಾಟಕ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಡಿಪಾರ್ಟ್‌ಮೆಂಟ್‌ನ ಲೆಕ್ಕ ಸಹಾಯಕರು ಪೋಸ್ಟ್‌ಗಳನ್ನು ಭರ್ತಿ ಮಾಡಲು ನೇಮಕಾತಿ ನೋಟಿಫಿಕೇಶನ್‌ ಬಿಡುಗಡೆ ಮಾಡಿದ್ದು, ಲೆಕ್ಕ ಸಹಾಯಕರ 242 ಹುದ್ದೆಗಳಿಗೆ ನೇಮಕಾತಿಗೆ ಆನ್‌ಲೈನ್‌ (On-line) ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆಯೋಗವು ಕರ್ನಾಟಕ ನಾಗರೀಕ ಸೇವೆಗಳು (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು … Continued

ಕೆಪಿಎಸ್‌ಸಿಯಿಂದ 332 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕೆಪಿಎಸ್‌ಸಿ (KPSC) ಜಲಸಂಪನ್ಮೂಲ ಇಲಾಖೆಯ 169 ಕಿರಿಯ ಎಂಜಿನಿಯರ್ ಗಳು ಹಾಗೂ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ 105 ನಿರೀಕ್ಷಕರು ಮತ್ತು 58 ಸಹಾಯಕ ಸಾಂಖ್ಯಿಕ ಅಧಿಕಾರಿ ಸೇರಿ ಒಟ್ಟು 332 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಜಲಸಂಪನ್ಮೂಲ ಇಲಾಖೆಯ ಒಟ್ಟು 166 (ಸಿವಿಲ್) ಹಾಗೂ 03 (ಮೆಕ್ಯಾನಿಕಲ್) ಕಿರಿಯ ಎಂಜಿನಿಯರ್‌ಗಳ ಹುದ್ದೆಗಳಿಗೆ … Continued

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ : 5050 ಸಿವಿಲ್, ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕರ್ನಾಟಕದಲ್ಲಿ ಖಾಲಿ ಇರುವ ಒಟ್ಟು 5050 ಸಿವಿಲ್, ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗವು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು, ದ್ವಿತೀಯ ಪಿಯುಸಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಏಪ್ರಿಲ್ 30ರ ಒಳಗೆ ಆನ್​ಲೈನ್ ಮೂಲಕ ಅರ್ಜಿ ಹಾಕಬೇಕಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಉತ್ತಮ ವೇತನ ನೀಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು 30.04.2022 (ತಾತ್ಕಾಲಿಕ) … Continued