ಬಾಗಲಕೋಟೆ | ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು

ಬಾಗಲಕೋಟೆ: ಯುಗಾದಿ ಹಬ್ಬದ ದಿನ ಜಿಲ್ಲೆಯಲ್ಲಿ ದುರಂತವೊಂದು ಸಂಭವಿಸಿದೆ. ಕೃಷ್ಣಾ ನದಿಯಲ್ಲಿ ಮುಳುಗಿ ಮೂವರು ಬಾಲಕರು ನೀರು ಪಾಲಾದ ಘಟನೆ ಬಾಗಲಕೋಟೆ ತಾಲೂಕಿನ ಸೀತಿಮನಿ ಗ್ರಾಮದ ಬಳಿ ನಡೆದಿದೆ ಎಂದು ವರದಿಯಾಗಿದೆ. ಕೃಷ್ಣಾ ನದಿಯಲ್ಲಿ ಈಜಲು ಹೋಗಿದ್ದ ವೇಳೆ ಬಾಲಕರು ನೀರುಪಾಲಾಗಿದ್ದಾರೆ. ಬಾಲಕರನ್ನು ಸೋಮಶೇಖರ ದೇವರಮನಿ (17), ಪರನಗೌಡ ಬೀಳಗಿ (15) ಹಾಗೂ ಮಲ್ಲಪ್ಪ ಬಗಲಿ … Continued

ಬೆಳಗಾವಿ | ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಬೆಳಗಾವಿ: ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ (Belagavi) ಜಿಲ್ಲೆ ರಾಯಬಾಗ ತಾಲೂಕಿನ ಚಿಂಚಲಿ ಬಳಿ ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಶಾರದಾ ಡಾಲೆ(38), ಅನುಷಾ (10), ಅಮೃತಾ (14), ಆದರ್ಶ (8) ಎಂದು ಗುರುತಿಸಲಾಗಿದೆ. ಅನುಷಾ ಡಾಳೆ ಎಂಬ ಮಗಳನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು. … Continued

ಕೃಷ್ಣಾ ನದಿಯಲ್ಲಿ ಮುಳುಗಿಸಿ ವ್ಯಕ್ತಿ ಕೊಲೆ ಪ್ರಕರಣವನ್ನು 1 ವರ್ಷದ ನಂತರ ಭೇದಿಸಿದ ಪೊಲೀಸರು : ಪತ್ನಿ ಸೇರಿ ಮೂವರು ಅರೆಸ್ಟ್‌

 ಬೆಳಗಾವಿ: ಅಥಣಿ ತಾಲೂಕಿನಲ್ಲಿ ಹರಿಯುವ ಕೃಷ್ಣಾ ನದಿಯಲ್ಲಿ ಬರೋಬ್ಬರಿ ಸುಮಾರು ಒಂದು ವರ್ಷದ  ಹಿಂದೆ ವ್ಯಕ್ತಿಯೊಬ್ಬರನ್ನು ಮುಳುಗಿಸಿ ಕೊಲೆ ಮಾಡಿದ ಪ್ರಕರಣವನ್ನು ಭೇದಿಸುವಲ್ಲಿ ಹಾರೂಗೇರಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಮೃತನ ಪತ್ನಿ, ಆಕೆಯ ಪ್ರಯಕರ ಸೇರಿ ಮೂವರನ್ನು ಬಂಧಿಸಲಾಗಿದೆ. ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. … Continued

ಬೀಳಗಿ : ಮೊಸಳೆ ದಾಳಿಯಿಂದ ಮಾಲೀಕನ ಪ್ರಾಣ ಉಳಿಸಿದ ಎತ್ತು…!

ಬಾಗಲಕೋಟೆ : ಮೊಸಳೆ ದಾಳಿಯಿಂದ ತನ್ನ ಮಾಲೀಕನನ್ನು ಎತ್ತು ಕಾಪಾಡಿದೆ. ಬಾಗಲಕೋಟೆ (Bagalkot) ‌ಜಿಲ್ಲೆ ಬೀಳಗಿ ತಾಲೂಕಿನ ಹೊನ್ಯಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಧರಿಯಪ್ಪ ಮೇಟಿ (32) ಎಂಬ ರೈತ ಎತ್ತಿನ ಮೈತೊಳೆಯಲು ಹೋದಾಗ ಈ ಘಟನೆ ನಡೆದಿದೆ. ಎತ್ತಿನ‌ ಮೈ ತೊಳೆಯಲು ಆಲಮಟ್ಟಿ ಜಲಾಶಯದ ಹಿನ್ನೀರು ಕೃಷ್ಣಾ ನದಿಗೆ ಧರಿಯಪ್ಪ … Continued

ಕೊಲ್ಹಾರ : ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ 6 ಮಂದಿ ನೀರುಪಾಲು

ವಿಜಯಪುರ: ಕೃಷ್ಣಾ ನದಿಯಲ್ಲಿ ತೆಪ್ಪ ಮುಗುಚಿ ಆರು ಜನ ನೀರು ಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಬಳೂತಿ ಜಾಕವೆಲ್ ಬಳಿ ಮಂಗಳವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಆರು ಮಂದಿ ತೆಪ್ಪದಲ್ಲಿ ನದಿ ಪಕ್ಕದ ನಡುಗಡ್ಡೆಗೆ ಹೋಗುತ್ತಿದ್ದಾಗ ಏಕಾಏಕಿ ತೆಪ್ಪ ಮಗುಚಿ ನೀರು ಪಾಲಾಗಿದ್ದಾರೆ ಎನ್ನಲಾಗಿದೆ. ಅದರಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದ್ದು, … Continued

ಕೃಷ್ಣಾ ನದಿಗೆ ತೆರಳಿದ್ದ ಇಬ್ಬರು ಬಾಲಕರು ನೀರು ಪಾಲು

ವಿಜಯಪುರ: ಯುಗಾದಿ ಅಮಾವಾಸ್ಯೆ ನಿಮಿತ್ತ ಸೋಮವಾರ ದೇವರ ಪಲ್ಲಕ್ಕಿಯೊಂದಿಗೆ ನದಿಗೆ ಸ್ನಾನಕ್ಕೆ ತೆರಳಿದ್ದ ಇಬ್ಬರು ಬಾಲಕರು ನದಿ ಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಲಾರ ಬಳಿಯ ಕೃಷ್ಣಾ ನದಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ನದಿ ಪಾಲಾದ ಬಾಲಕರನ್ನು ಕಾರಜೋಳ ಗ್ರಾಮದ ಸುದೀಪ ದೊಡ್ಡಮನಿ (12) ಹಾಗೂ ಶ್ರೀಧರ ದೊಡ್ಡಮನಿ (10) ಎಂದು ಗುರುತಿಸಲಾಗಿದೆ. ಯುಗಾದಿ ಅಮಾವಾಸ್ಯೆ … Continued