ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ಗಾಂಜಾ ಮಾರುತ್ತಿದ್ದ ಬಿಎಂಟಿಸಿ ಚಾಲಕ, ನಿರ್ವಾಹಕನ ಬಂಧನ

ಬೆಂಗಳೂರು: ಕೆಎಸ್ಆರ್​ಟಿಸಿ ಬಸ್ಸುಗಳಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಆರೋಪದಡಿ ಬಿಎಂಟಿಸಿ ಬಸ್ ಚಾಲಕ, ನಿರ್ವಾಹಕರನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ವಿಠ್ಠಲ್ ಭಜಂತ್ರಿ ಮತ್ತು ಶರಣಬಸಪ್ಪ ಎಂಬುವವರೇ ಬಂಧಿತರು ಬಂಧಿತರಿಂದ 9.800 ಕೆಜಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಕಳೆದ ಮೂರು ವರ್ಷಗಳಿಂದ ಕೆಂಗೇರಿ ಬಳಿ ತುರಹಳ್ಳಿ ಅರಣ್ಯ ಪ್ರದೇಶದಲ್ಲಿಯೂ ಗಾಂಜಾ ಮಾರಾಟ ಮಾಡುತ್ತಿದ್ದರು. … Continued