ಸಾರಿಗೆ ಸಂಸ್ಥೆ ಬಸ್‌ ಟಿಕೆಟ್‌ ದರ ಹೆಚ್ಚಳ ? : ಸಿಎಂ ಡಿಕೆ ಶಿವಕುಮಾರ ಹೇಳಿದ್ದೇನು ?

ಬೆಂಗಳೂರು : ಡೀಸೆಲ್‌ ದರ ಏರಿಕೆ ಹಿನ್ನೆಲೆಯಲ್ಲಿ ಬಸ್‌ ಪ್ರಯಾಣ ದರ ಹೆಚ್ಚಳ ಮಾಡಲು ಸಾರಿಗೆ ನಿಗಮಗಳು ಪ್ರಸ್ತಾವನೆ ಸಲ್ಲಿಸಿದ್ದು, ಸಾರ್ವಜನಿಕರ ಹಿತದೃಷ್ಟಿ ಮತ್ತು ಸಾರಿಗೆ ನಿಗಮಗಳು ಉಳಿಯಬೇಕು. ಇವೆರಡನ್ನೂ ಪರಿಗಣಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, … Continued

ರಾಜ್ಯ ರಸ್ತೆ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್‌ ನಿರ್ಬಂಧ

ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಸಿಬ್ಬಂದಿ ಟ್ರೇಡ್‌ ಯೂನಿಯನ್‌ಗಳ ಜಂಟಿ ಕ್ರಿಯಾ ಸಮಿತಿ ಬುಧವಾರ (ಮೇ 20)ರಿಂದ ಕರೆದಿದ್ದ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್‌ ನಿರ್ಬಂಧ ವಿಧಿಸಿದೆ. ವಿವಿಧ ಯೂನಿಯನ್‌ಗಳ ನೇತೃತ್ವ ವಹಿಸಿರುವ ಜಂಟಿ ಕ್ರಿಯಾ ಸಮಿತಿಯು 29.04.2026ರ ನೋಟಿಸ್‌ ಆಧರಿಸಿ ಮುಷ್ಕರ ನಡೆಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ” ಎಂದು ಪೀಠ ಆದೇಶಿಸಿತು. ಮುಷ್ಕರ … Continued

ಬೆಳ್ತಂಗಡಿ : ಚಲಿಸುತ್ತಿದ್ದ ಬಸ್ಸಿನಿಂದ ರಸ್ತೆಗೆ ಬಿದ್ದ ವಿದ್ಯಾರ್ಥಿನಿಯರು ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಂಗಳೂರು: ವೇಗವಾಗಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್‌ನ ಬಾಗಿಲು ಏಕಾಏಕಿ ತೆರೆದುಕೊಂಡ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ. ವರದಿಯ ಪ್ರಕಾರ, ಗೇರುಕಟ್ಟೆಯಿಂದ ಬೆಳ್ತಂಗಡಿ ಕಡೆ ಸರ್ಕಾರಿ ಬಸ್ ಸಂಚರಿಸುತ್ತಿತ್ತು. ಗೇರುಕಟ್ಟೆ ಪ್ರದೇಶದಲ್ಲಿ ಅಕ್ಕ-ತಂಗಿಯರಾದ ಇಬ್ಬರು ವಿದ್ಯಾರ್ಥಿನಿಯರು ಬಸ್‌ ಹತ್ತಿದ್ದರು.  … Continued

ಹೈಕೋರ್ಟ್ ಎಚ್ಚರಿಕೆ ಬೆನ್ನಲ್ಲೇ ಸಾರಿಗೆ ಮುಷ್ಕರ ಮುಂದೂಡಿಕೆ; ರಸ್ತೆಗೆ ಇಳಿದ ಬಸ್‌ ಗಳು

ಬೆಂಗಳೂರು: ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿ 4 ಸಾರಿಗೆ ನಿಗಮಗಳ ನೌಕರರ ಸಂಘಗಳ ಒಕ್ಕೂಟವು ಅನಿರ್ದಿಷ್ಟಾವಧಿ ಮುಷ್ಕರವನ್ನು ಮುಂದೂಡಿದೆ. ಇಂದಿನಿಂದ (ಆಗಸ್ಟ್‌ ೫ರಿಂದ) ಕರೆಕೊಟ್ಟಿದ್ದ ಮುಷ್ಕರವನ್ನು ಹಿಂದಕ್ಕೆ ಪಡೆಯಲಾಗಿದೆ. ತಕ್ಷಣದಿಂದ ಬಸ್‌ಗಳ ಸಂಚಾರ ಆರಂಭಿಸಲು ಸಂಘಟನೆಗಳ ಮುಖಂಡರು ಸೂಚನೆ ನೀಡಿದ್ದಾರೆ. ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿದ್ದ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ … Continued

ಸಾರಿಗೆ ಸಿಬ್ಬಂದಿ ಮುಷ್ಕರ 1 ದಿನ ಮುಂದೂಡುವಂತೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು : ಹಿಂಬಾಕಿ ಪಾವತಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೆಎಸ್ಆರ್‌ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮಂಗಳವಾರ(ಆಗಸ್ಟ್‌ ೫)ದಿಂದ ನಡೆಸಲು ಉದ್ದೇಶಿಸಿರುವ ಉಪವಾಸ ಸತ್ಯಾಗ್ರಹಕ್ಕೆ ಕರ್ನಾಟಕ ಹೈಕೋರ್ಟ್‌ ಒಂದು ದಿನದ ಮಟ್ಟಿಗೆ ಒಂದು ದಿನದ ಮಟ್ಟಿಗೆ ಮುಂದೂಡುವಂತೆ ನಿರ್ದೇಶನ ನೀಡಿದೆ.  ಸೋಮವಾರ ಮುಖ್ಯಮಂತ್ರಿ ಮತ್ತು ಸಾರಿಗೆ ಸಿಬ್ಬಂದಿ … Continued

ಕೆಎಸ್​ಆರ್​ಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ; ಆಗಸ್ಟ್ 5ರಿಂದ ಸ್ತಬ್ಧವಾಗುತ್ತಾ ಬಸ್ಸುಗಳ ಓಡಾಟ..?

ಬೆಂಗಳೂರು : 38 ತಿಂಗಳ ಹಿಂಬಾಕಿ, ಹೊಸ ವೇತನ ಪರಿಷ್ಕರಣೆ, 2021 ರ ಮುಷ್ಕರದ ವೇಳೆ ವಜಾ ಮಾಡಲಾದ ನೌಕರರ ಮರು ನೇಮಕಾತಿಗೆ ಆಗ್ರಹಿಸಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಆಗಸ್ಟ್ 5 ರಿಂದ ಮುಷ್ಕರ ನಡೆಸಲು ನಿರ್ಧರಿಸಿದೆ. ನಾಲ್ಕು ಸಾರಿಗೆ ನಿಗಮಗಳ ನೌಕರರು ಆಗಸ್ಟ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ನಿರ್ಧಾರ … Continued

ಬಸ್‌ ನಲ್ಲೇ ಎಲೆ ಅಡಿಕೆ ತಿಂದು ಉಗಿದ ಮಹಿಳೆ ; ಪ್ರಶ್ನೆ ಮಾಡಿದ್ದಕ್ಕೆ ಕಂಡಕ್ಟರಗೆ ಹಿಗ್ಗಾಮುಗ್ಗಾ ಥಳಿತ…!

ತುಮಕೂರು : ಕ್ಷುಲ್ಲಕ ಕಾರಣಕ್ಕೆ ಸಾರಿಗೆ ಬಸ್ ನಿರ್ವಾಹಕ ಮತ್ತು ಪ್ರಯಾಣಿಕರ ಮಧ್ಯೆ ಜಗಳ ನಡೆದು, ನಿರ್ವಾಹಕನನ್ನು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ನಡೆದಿದೆ. ಕೆಎಸ್ಆರ್‌ಟಿಸಿ ಬಸ್ಸಿನಲ್ಲಿ ಎಲೆ ಅಡಿಕೆ ತಿಂದ ಮಹಿಳೆ ಅದನ್ನು ಬಸ್ಸಿನ ಒಳಗೆ ಉಗಿದಿದ್ದರು. ಇದನ್ನು ನೋಡಿ ಪ್ರಶ್ನೆ ಮಾಡಿದ ಕಂಡಕ್ಟರ್‌ ಮೇಲೆ ಹಲ್ಲೆ ನಡೆಸಿ ಹಿಗ್ಗಾಮುಗ್ಗಾ … Continued

ಮಹಾರಾಷ್ಟ್ರ- ಕರ್ನಾಟಕದ ನಡುವೆ ಬಸ್‌ ಸಂಚಾರ ಸ್ಥಗಿತ

ಬೆಳಗಾವಿ : ಕನ್ನಡದಲ್ಲಿ ಮಾತನಾಡಿ ಎಂದು ಹೇಳಿದ್ದಕ್ಕೆ ಬಸ್ ನಿರ್ವಾಹಕನ ಮೇಲೆ ಕೆಲವು ಮರಾಠಿ ಭಾಷಿಕರು ಹಲ್ಲೆ ನಡೆಸಿದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಂಡಕ್ಟರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ. ಇದು ರಾಜಕೀಯ ಪ್ರೇರಿತವಾದದ್ದು, ಕೂಡಲೇ ಈ ಕೇಸನ್ನು ವಾಪಸ್ ಪಡೆಯಬೇಕೆಂದು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನೆ ಪ್ರತಿಭಟನೆ ಮಾಡುತ್ತಿದೆ. … Continued

ಬೆಳಗಾವಿ | ಕನ್ನಡದಲ್ಲಿ ಮಾತಾಡಿ ಎಂದಿದ್ದಕ್ಕೆ ಹಲ್ಲೆಗೊಳಗಾದ ನಿರ್ವಾಹಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಬೆಳಗಾವಿ: ಮರಾಠಿ ಮಾತನಾಡದ ನಿರ್ವಾಹಕನ ಮೇಲೆ ಪುಂಡರು ಹಲ್ಲೆ ನಡೆಸಿದ ಪ್ರಕರಣದಲ್ಲಿ ಹಲ್ಲೆಗೊಳಗಾದ ನಿರ್ವಾಹಕನ ವಿರುದ್ಧವೇ ಪೋಕ್ಸೋ (POCSO) ಪ್ರಕರಣ ದಾಖಲಿಸಲಾಗಿದೆ. ಬೆಳಗಾವಿಯ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ನನಗೆ ಮರಾಠಿ ಅರ್ಥವಾಗಲ್ಲ, ಕನ್ನಡದಲ್ಲಿ ಮಾತನಾಡು ಎಂದು ಹೇಳಿದ್ದಕ್ಕೆ ನಿರ್ವಾಹಕನ ಮೇಲೆ ಶುಕ್ರವಾರ ಹಲ್ಲೆ ನಡೆಸಲಾಗಿತ್ತು, ನಿರ್ವಾಹಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ದಾಖಲಾಗಿದ್ದರು. ಈಗ ನಿರ್ವಾಹಕ ಮಹಾದೇವ … Continued

ಬೆಳಗಾವಿ : ಮರಾಠಿ ಬರಲ್ಲ , ಕನ್ನಡದಲ್ಲಿ ಮಾತನಾಡಿ ಎಂದಿದ್ದಕ್ಕೆ ಬಸ್‌ ಕಂಡಕ್ಟರ್‌ ಮೇಲೆ ಹಲ್ಲೆ

ಬೆಳಗಾವಿ: ತನಗೆ ಮರಾಠಿಯಲ್ಲಿ ಮಾತನಾಡಲು ಬರುವುದಿಲ್ಲ, ಕನ್ನಡದಲ್ಲಿ ಹೇಳಿ ಎಂದಿದ್ದಕ್ಕೆ ಜನರನ್ನು ಕರೆಸಿ ರಾಜ್ಯ ಸಾರಿಗೆ ಸಂಸ್ಥೆ ಕಂಡಕ್ಟ‌ರ್ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ತಾಲೂಕಿನ ಬಾಳೆಕುಂದ್ರಿ ಕೆ.ಎಚ್‌.ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬೆಳಗಾವಿಯ ಮಾರಿಹಾಳ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸರ್ಕಾರಿ ಬಸ್ ಕಂಡಕ್ಟರ್ ಮಹದೇವ ಹಲ್ಲೆಗೊಳಗಾದವರು. ಇವರಿಗೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ … Continued