ಮಾ.೨ರಂದು ರಾಜ್ಯ ಸಾರಿಗೆ ನೌಕರರ ಒಕ್ಕೂಟದಿಂದ ಸತ್ಯಾಗ್ರಹ

ಬೆಂಗಳೂರು: ಸರ್ಕಾರ ವಿರುದ್ಧದ ಹೋರಾಟಕ್ಕೆ ಮತ್ತೆ ರಾಜ್ಯ ಸಾರಿಗೆ ನೌಕರರ ಒಕ್ಕೂಟ ಮುಂದಾಗಿದ್ದು, ವಿವಿಧ ಬೇಡಿಕೆಗೆ ಆಗ್ರಹಿಸಿ ಮಾರ್ಚ್​ 2ರಂದು ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಿದೆಧರಣಿಯ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾಹಿತಿ ನೀಡಿದ್ದು, ‘ಈ ಹಿಂದೆ ನಡೆಸಿದ ಧರಣಿ ವೇಳೆ ಸರ್ಕಾರ ಕೊಟ್ಟ ಭರವಸೆ ವಿಳಂಬವಾದ … Continued

ಕೆಸ್ಸಾರ್ಟಿಸಿ ಪಾರ್ಸಲ್‌-‌ ಕಾರ್ಗೊ ಸೇವೆಗೆ ಸಿಎಂ ಬಿಎಸ್‌ವೈ ಚಾಲನೆ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಪಾರ್ಸಲ್ ಕಾರ್ಗೊ ಸೇವೆ ಮತ್ತು ಕೆಎಸ್‍ಆರ್‍ಟಿಸಿ, ಕಿದ್ವಾಯಿ, ರೋಟರಿ ಸಹಯೋಗದೊಂದಿಗೆ ನಿರ್ಮಿಸಿರುವ ಮೊಬೈಲ್ ರಕ್ತದಾನದ ಬಸ್ಸನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಉದ್ಘಾಟಿಸಿದರು. ವಿಧಾನಸೌಧ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಕಾರ್ಗೊ ಸೇವೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕೋವಿಡ್‍ನಿಂದಾಗಿ ಸಾರಿಗೆ ಸಂಸ್ಥೆಗಳು ತೀವ್ರ ಸಂಕಷ್ಟದಲ್ಲಿದ್ದು, ಪರ್ಯಾಯ ಮಾರ್ಗದ ಆದಾಯ ಕಂಡುಕೊಂಡಿರುವುದು … Continued

ಬಸ್‌ ಪ್ರಯಾಣ ದರ ಹೆಚ್ಚಳವಿಲ್ಲ: ಸಾರಿಗೆ ಸಚಿವ ಸವದಿ

ಡೀಸೆಲ್‌ ಬೆಲೆ ಹೆಚ್ಚಳಗೊಂಡಿದ್ದರೂ ಬಸ್‌ ಪ್ರಯಾಣ ದರವನ್ನು ಹೆಚ್ಚಿಸುವುದಿಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಬಸ್‌ ಪ್ರಯಾಣ ದರ ಹೆಚ್ಚಿಸುವಂತೆ ಈಗಾಗಲೇ ಸಾರಿಗೆ ಸಂಸ್ಥೆಗಳಿಂದ ಪ್ರಸ್ತಾಪ ಬಂದಿದೆ. ಆದರೆ ಕೊರೊನಾ, ನೈಸರ್ಗಿಕ ವಿಕೋಪದ ಕಾರಣದಿಂದಾಗಿ ಈಗಾಗಲೇ ಜನರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಬಸ್‌ ಪ್ರಯಾಣ ದರ ಹೆಚ್ಚಿಸಿದರೆ ಜನರಿಗೆ ಇನ್ನಷ್ಟು … Continued