ಭಾರಿ ಮಳೆಗೆ ಪ್ರವಾಹ : ಎರಡು ದಿನ ಭಕ್ತರು ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳದಂತೆ ಸೂಚನೆ

ಸುಬ್ರಹ್ಮಣ್ಯ: ಭಾರಿ ಮಳೆ ಸುರಿಯುತ್ತಿರುವ ಕಾರಣ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು ಆದಿ ಸುಬ್ರಹ್ಮಣ್ಯ ದೇಗುಲದ ಒಳಗೆ ನೀರು ಹೊಕ್ಕಿದೆ. ಹೀಗಾಗಿ ಮುಂದಿನ ಎರಡು ದಿನಗಳ ಕಾಲ ಹೊರ ಜಿಲ್ಲೆಗಳ ಭಕ್ತರು ದೇವಾಲಯಕ್ಕೆ ಭೇಟಿ ನೀಡದಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಕುಮಾರಧಾರ ನದಿ ಉಕ್ಕಿ ಹರಿದು ಆದಿ ಸುಬ್ರಹ್ಮಣ್ಯ ದೇವಾಲಯಕ್ಕೆ ನೀರು ಒಳಹೊಕ್ಕಿದೆ. … Continued