ಮುರೂರು ರಾಮಲೀಲಾ ಮೈದಾನದಲ್ಲಿ ಐದು ದಿನಗಳ ರಾಮಕಥೆಗೆ ಅದ್ಧೂರಿ ಚಾಲನೆ-ರಾಮನ ಸೀತಾ ಪ್ರೀತಿ ಪ್ರಶ್ನಾತೀತ: ರಾಘವೇಶ್ವರ ಶ್ರೀ

ಕುಮಟಾ: ಅಗ್ನಿಪರೀಕ್ಷೆ ಹಿನ್ನೆಲೆಯಲ್ಲಿ ಸೀತೆಯ ಬಗೆಗಿನ ರಾಮನ ಪ್ರೀತಿಯನ್ನು ಪ್ರಶ್ನಿಸುವವರಿದ್ದಾರೆ. ಆದರೆ ಈ ಎಲ್ಲ ಪ್ರಶ್ನೆಗಳಿಗೆ ರಾಮಸೇತು ಉತ್ತರ ಎಂದು ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ನುಡಿದರು. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರು ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ಬುಧವಾರ ಆರಂಭವಾದ ಐದು ದಿನಗಳ ‘ರಾಮಸೇತು’ ರಾಮಕಥಾ ಸರಣಿಯ ಮೊದಲ ದಿನದ ಪ್ರವಚನ … Continued

ಕುಮಟಾ: ಅದ್ಧೂರಿಯಾಗಿ ನಡೆದ ಬಾಡದ ಶ್ರೀಕಾಂಚಿಕಾ ಪರಮೇಶ್ವರಿ ದೇವಿಯ ರಥೋತ್ಸವ

ಕುಮಟಾ;ಉತ್ತರ ಕನ್ನಡ ಜಿಲ್ಲೆಯ ಹೆಸರುವಾಸಿ ಜಾತ್ರೆಗಳಲ್ಲೊಂದಾದ ಬಾಡದ ಶ್ರೀಕಾಂಚಿಕಾ ಪರಮೇಶ್ವರಿ ದೇವಿಯ ರಥೋತ್ಸವು ಶನಿವಾರ ನಡೆಯಿತು. ಇದು ಪ್ರತಿವರ್ಷ ಚೈತ್ರ ಶುದ್ಧ ಹುಣ್ಣಿಮೆ ದಿನದಂದು ನಡೆಯುತ್ತದೆ.ಕೊರೊನಾ ಕಾರಣದಿಂದ ಕಳೆದ ಎರಡು ವರ್ಷದಿಂದ ರಥೋತ್ಸವ ಸ್ಥಗಿತವಾಗಿತ್ತು.ಈ ವರ್ಷ ಯಾವುದೇ ಆತಂಕವಿಲ್ಲದೆ ರಥೋತ್ಸವ ಅದ್ಧೂರಿಯಾಗಿ ಸಂಪನ್ನವಾಯಿತು. ಸಾವಿರಾರು ಜನರು ರಥೋತ್ಸವದಲ್ಲಿ ಭಾಗವಹಿಸಿ ಶ್ರೀದೇವಿಗೆ ವಿವಿಧ ಹರಕೆ ಪೂಜೆಯನ್ನು ನೆರವೇರಿಸಿದರು. … Continued

ಕುಮಟಾ: ನಾಳೆ ಲಯನ್ಸ್ ರೇವಣಕರ್ ಕಣ್ಣಿನ ಆಸ್ಪತ್ರೆ ವಿಸ್ತೃತ ಕಟ್ಟಡ -ಆಧುನಿಕ ಸೌಲಭ್ಯಗಳ ಉದ್ಘಾಟನೆ, ಆರೋಗ್ಯ ಸಚಿವ ಡಾ.ಸುಧಾಕರ ಭಾಗಿ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಬಗ್ಗೋಣ ರಸ್ತೆ ವಿದ್ಯಾಗಿರಿಯಲ್ಲಿರುವ ಲಯನ್ಸ್ ರೇವಣಕರ ಚಾರಿಟೇಬಲ್ ಕಣ್ಣಿನ ಆಸ್ಪತ್ರೆ ವಿಸ್ತ್ರತ ಕಟ್ಟಡದ ಉದ್ಘಾಟನಾ ಸಮಾರಂಭ ಏಪ್ರಿಲ್‌ ೧೦ರಂದು ಸಂಜೆ ೪:೩೦ ಘಂಟೆಗೆ ನಡೆಯಲಿದ್ದು, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ ಹಾಗೂ ಲಯನ್ಸ್ ಅಂತರಾಷ್ಟ್ರೀಯದ ಮಾಜಿ ನಿರ್ದೇಶಕರಾದ ಕೆ. ವಂಶೀಧರ ಬಾಬು ಉದ್ಘಾಟಿಸಲಿದ್ದಾರೆ. ಕುಮಟಾದ … Continued

ಕುಮಟಾ: ಗ್ಯಾಸ್ ಟ್ಯಾಂಕರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ಸಮೀಪದ ಹೊನ್ಮಾವ್ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಒಂದು ಪಲ್ಟಿಯಾಗಿದ್ದು, ಸಮೀಪದ ಶಾಲೆಗಳಿಗೆ ರಜೆ ನೀಡಲಾಗಿದೆ. ಗ್ಯಾಸ್‌ ಟ್ಯಾಂಕರ್‌ ಲಾರಿಯಿಂದ ಪ್ರತ್ಯೇಕಗೊಂಡು ಕೆಳಗೆ ಉರುಳಿದೆ. ನಿಂದ ಸ್ವಲ್ಪಪ್ರಮಾಣದಲ್ಲಿ ಅನಿಲ ಸೋರಿಕೆಯಾಗುತ್ತಿರುವುದರಿಂದ ಅದರ ವಾಸನೆ ಕಿಮೀಗೂ ದೂರದ ವರೆಗೆ ವ್ಯಾಪಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. … Continued

ಕುಮಟಾ: ನಾಗೇಶ ಭಟ್ಟರ ಮುಕ್ತಾಯ ಕಥಾಸಂಕಲನ ಲೋಕಾರ್ಪಣೆ

ಕುಮಟಾ: ಭಾರತೀಯ ದೂರ ಸಂಚಾರ ನಿಗಮ(ಬಿಎಸ್ಎನ್ಎಲ್)ದ ನಿವೃತ್ತ ಉದ್ಯೋಗಿಗಳಾದ ನಾಗೇಶ ಭಟ್ಟ ಅವರು ಬರೆದ ‘ಮುಕ್ತಾಯ’ ಕಥಾಸಂಕಲನ ಲೋಕಾರ್ಪಣೆಗೊಂಡಿತು. ಇದು ಹತ್ತು ಚಿಕ್ಕ ಕಥೆಗಳ ಸಂಕಲನವಾಗಿದೆ. ಖ್ಯಾತ ಸಾಹಿತಿ ಶ್ರೀಧರ ಬಳಿಗಾರ ಅವರು ಪುಸ್ತಕವನ್ನು ಲೋಕಾರ್ಪಣೆಗೊಳಿಸಿದರು. ಹೊನ್ನಾವರದ ನಾಗರಿಕ ಪತ್ರಿಕೆಯ ಸಂಪಾದಕ ಹಾಗೂ ಸರಸ್ವತಿ ಪ್ರಕಾಶನದ ಪ್ರಕಾಶಕ ಕೃಷ್ಣಮೂರ್ತಿ ಹೆಬ್ಬಾರರು ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ಗಜಾನನ … Continued

ಕೂಜಳ್ಳಿಯಲ್ಲಿ ನಡೆದ ಪಂ.ಷಡಕ್ಷರಿ ಗವಾಯಿಗಳ ಪುಣ್ಯಸ್ಮರಣೆ ಕಾರ್ಯಕ್ರಮ

ಕುಮಟಾ: ಸಂಗೀತ ಕೇವಲ ಮನಸ್ಸಿಗೆ ನೆಮ್ಮದಿಯನ್ನಷ್ಟೇ ನೀಡುವುದಿಲ್ಲ, ಜೊತೆಗೆ ಮಹಾದಾನಂದವನ್ನೂ ನೀಡುತ್ತದೆ ಎಂದು ಎಂಟಿಎನ್ಎಲ್ ನಿವೃತ್ತ ಜಿಡಿಎಂ ರಮೇಶ ಎಸ್. ಹೆಗಡೆ ಹೇಳಿದರು. ಪಂ.ಷಡಕ್ಷರಿ ಗವಾಯಿ ಅಕಾಡೆಮಿ ವತಿಯಿಂದ ಕುಮಟಾ ತಾಲೂಕಿನ ಕೂಜಳ್ಳಿ ಕುಳಿಹಕ್ಕಲ ಶ್ರೀ ಶಾಂತಿಕಾ ಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ನಡೆದ ಪಂ. ಷಡಕ್ಷರಿ ಗವಾಯಿಗಳ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಂಗೀತ ಆಸ್ವಾದನೆಯೂ ಒಂದು … Continued

ಕೂಜಳ್ಳಿ: ನಾಳೆ ಷಡಕ್ಷರಿ ಗವಾಯಿಗಳ ಪುಣ್ಯಸ್ಮರಣೆ ಸಂಗೀತ ಕಾರ್ಯಕ್ರಮ

ಕುಮಟಾ: ಪಂಡಿತ ಷಡಕ್ಷರಿ ಗವಾಯಿಗಳ ಪುಣ್ಯಸ್ಮರಣೆ ಸಂಗೀತ ಕಾರ್ಯಕ್ರಮ ಕುಮಟಾ ತಾಲೂಕಿನ ಕೂಜಳ್ಳಿ ಕುಳಿಹಕ್ಕಲ ಶ್ರೀ ಶಾಂತಿಕಾ ಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ಡಿ. 25ರಂದು ಅಪರಾಹ್ನ 3. ಗಂಟೆಯಿಂದ 8ರ ವರೆಗೆ ಪಂ. ಷಡಕ್ಷರಿ ಗವಾಯಿ ಅಕಾಡೆಮಿ ವತಿಯಿಂದ ನಡೆಯಲಿದೆ. ನಾದ ನಮನ ಕಾರ್ಯಕ್ರಮದಲ್ಲಿ ಶ್ರೀಪಾದ ಹೆಗಡೆ ಸೋಮನಮನೆ, ಶ್ರೀಧರ ಹೆಗಡೆ ಕಲ್ಭಾಗ, ಶ್ರೀಲತಾ ಗುರುರಾಜ … Continued

ಕೆನರಾ ಕ್ರೆಡಿಟ್ ಸೌಹಾರ್ದ ಸಂಘಕ್ಕೆ ೧.೨೯ ಲಕ್ಷ ರೂ. ಲಾಭ

ಕುಮಟಾ: ಕೆನರಾ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತದ ವಾರ್ಷಿಕ ಸಭೆಯು ಬಗ್ಗೋಣದ ಲಯನ್ಸ್ ಭವನದಲ್ಲಿ ನಡೆಯಿತು. ಸಹಕಾರಿ ಸಂಘದ ಅಧ್ಯಕ್ಷರಾದ ಡಾ.ಜಿ.ಜಿ.ಹೆಗಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಂಘವು ೨೦೨೦-೨೧ ರಲ್ಲಿ ೧೨೯೭೦೧ ರೂ.ಗಳಷ್ಟು ಲಾಭ ಮಾಡಿದೆ. ಲಾಕ್ ಡೌನ್ ಇತ್ಯಾದಿ ಸಮಸ್ಯೆಯ ಮಧ್ಯೆಯೂ ಸಂಘವು ಲಾಭಗಳಿಸಿದ್ದು ಸಂತಸದ ವಿಷಯವಾಗಿದೆ. ಜನರು ಆರ್ಥಿಕ ಅಭಿವೃದ್ಧಿ ಹೊಂದಬೇಕಾದರೆ ಹಣಕಾಸು … Continued

ಕುಮಟಾ ಎ.ವಿ.ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯಕ್ಕೆ ಬಿ ಪ್ಲಸ್ ನ್ಯಾಕ್ ಮಾನ್ಯತೆ

ಕುಮಟಾ; ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಡಾ.ಎ.ವಿ.ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯಕ್ಕೆ ನವೆಂಬರ್ ೧೮ ಮತ್ತು ೧೯ ರಂದು ನ್ಯಾಕ್ ಸಮೀತಿ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದ್ದು, ಕಾಲೇಜು ಬಿ ಪ್ಲಸ್‌ ನ್ಯಾಕ್ ಶ್ರೇಣಿ ಉನ್ನತಿ ಪಡೆದುಕೊಂಡಿದೆ. ವಾಣಿಜ್ಯ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳೊಂದಿಗಿನ ಚರ್ಚೆ, ಆಡಳಿತ ಮಂಡಳಿಯೊಂದಿಗಿನ ಸಭೆ, ಪೂರ್ವ ವಿದ್ಯಾರ್ಥಿಗಳೊಂದಿಗಿನ ಸಂಭಾಷಣೆ ನಡೆಸಿ ನ್ಯಾಕ್ ಸಮಿತಿ ಮೆಚ್ಚುಗೆ … Continued

ಕುಮಟಾ: ನವೆಂಬರ್‌ 18-19ರಂದು ಡಾ.ಎ.ವಿ ಬಾಳಿಗಾ ವಾಣಿಜ್ಯ ಕಾಲೇಜಿಗೆ ನ್ಯಾಕ್ ಸಮಿತಿ

ಕುಮಟಾ; ರಾಜ್ಯದ ಪ್ರತಿಷ್ಠಿತ ಮಹಾವಿದ್ಯಾಲಯದಲ್ಲಿ ಒಂದಾಗಿರುವ ಕುಮಟಾದ ಕೆನರಾ ಕಾಲೇಜು ಸೊಸೈಟಿಯ ಡಾ.ಎ.ವಿ ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದ ಪರಿವೀಕ್ಷಣೆಗಾಗಿ ನ್ಯಾಕ್ ಸಮಿತಿಯು ಆಗಮಿಸಲಿದೆ. ಡಾ. ಎ. ವಿ. ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯವು ನ್ಯಾಕ್ ಮೌಲ್ಯಮಾಪನ ಮತ್ತು ಮರು-ಮಾನ್ಯತೆ ಪ್ರಕ್ರಿಯೆಗೆ ಒಳಪಡುತ್ತಿದ್ದು ನವೆಂಬರ್‌ ೧೮ ಮತ್ತು ೧೯ ೨೦೨೧ರಂದು ನ್ಯಾಕ್ ಸಮಿತಿಯ ಸದಸ್ಯರು ಮಹಾವಿದ್ಯಾಲಯಕ್ಕೆ ತಮ್ಮ ನಿಯೋಜಿತ … Continued