ಕುಮಟಾ : ಇಬ್ಬರು ಮಕ್ಕಳನ್ನು ಬಸ್ ನಿಲ್ದಾಣದಲ್ಲಿ ಬಿಟ್ಟು ಬಂದು ಸಮುದ್ರಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಹೆಡ್‌ಬಂದರ್ ಬಳಿ ಸಮುದ್ರಕ್ಕೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಕುಮಟಾ ತಾಲೂಕಿನ ಸಾಂತಗಲ್ ನಿವಾಸಿ ನಿವೇದಿತಾ ನಾಗರಾಜ ಭಂಡಾರಿ (46) ಎಂದು ಗುರುತಿಸಲಾಗಿದೆ. ಸಾಂತಗಲ್ ನಿವಾಸಿ ಯಾಗಿದ್ದ ಮಹಿಳೆ ನಿವೇದಿತಾ ಊರಿನಲ್ಲಿ ಕಿರಾಣಿ ಅಂಗಡಿ ನಡೆಸುತ್ತಿದ್ದರು … Continued

ಪ್ರಖ್ಯಾತ ಯಕ್ಷಗಾನ ಸ್ತ್ರೀ ವೇಷಧಾರಿ ಮುರೂರು ವಿಷ್ಣು ಭಟ್‌ ವಿಧಿವಶ

ಕುಮಟಾ : ಯಕ್ಷಗಾನದ ಬಡಗುತಿಟ್ಟಿನ ಖ್ಯಾತ ಸ್ತ್ರೀವೇಷಧಾರಿ ವಿಷ್ಣು ಗಜಾನನ ಭಟ್ಟ ಮೂರೂರು (65) ಇಂದು, ಭಾನುವಾರ (ಅಕ್ಟೋಬರ್‌ ೮) ನಿಧನರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಮುರೂರಿನ ಹೊನ್ನೆಕುಳಿಯವರಾದ ವಿಷ್ಣು ಭಟ್ಟರು ಸಿದ್ದಾಪುರದಲ್ಲಿ ನಿಧನರಾಗಿದ್ದಾರೆ. ಅವರು  ಪತ್ನಿ,ಪುತ್ರನನ್ನು ಅಗಲಿದ್ದಾರೆ. ಯಕ್ಷಗಾನ ಸ್ತ್ರೀ ವೇಷಧಾರಿಕೆಯಲ್ಲಿ ತಮ್ಮ ಭಾವಪೂರ್ಣ ಅಭಿನಯದ ಮೂಲಕ ಹೆಸರು ಪಡೆದಿದ್ದ ಅವರು ಮೂರೂರು ರಾಮ … Continued

ಗೋಕರ್ಣದಲ್ಲಿ ಪಿತೃಕಾರ್ಯ ನೆರವೇರಿಸಿದ ಮುಸ್ಲಿಂ ಕುಟುಂಬ…!

ಕಾರವಾರ : ಧಾರವಾಡದ ಮುಸ್ಲಿಂ ಕುಟುಂಬವು ಹಿಂದೂ ಧರ್ಮದ ಸಂಪ್ರದಾಯದಂತೆ ಗೋಕರ್ಣದಲ್ಲಿ ಪಿತೃಕಾರ್ಯ ಮಾಡಿರುವುದು ವರದಿಯಾಗಿದೆ. ಎರಡು ದಿನಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಕೋಟಿ ತೀರ್ಥದಲ್ಲಿ ಪಿತೃಪಕ್ಷದಲ್ಲಿ ಈ ಕುಟುಂಬವು ಪಿತೃಕಾರ್ಯ ನೆರವೇರಿಸಿದ್ದಾರೆ. ಮರಗೆಲಸ ಮಾಡುವ ಮಾಡುವ ಕುಟುಂಬವು ಧಾರವಾಡದ ಜ್ಯೋತಿಷಿ ಬಳಿ ಹೋದಾಗ ಅವರು ನೀಡಿದ ಸಲಹೆ ಮೇರೆಗೆ … Continued

ಕುಮಟಾ: ರಾಷ್ಟ್ರಧ್ವಜದಂತೆ ಕಾಣುವ ಧ್ವಜದಲ್ಲಿ ಬೇರೆ ಚಿಹ್ನೆ, ಗುರುತು ಬಳಸಿ ಈದ್ ಮಿಲಾದ್ ಮೆರವಣಿಗೆ, ಪ್ರಕರಣ ದಾಖಲು

 ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮಿರ್ಜಾನ್‌ ಸಮೀಪ ತ್ರಿವರ್ಣ ಧ್ವಜಕ್ಕೆ ಅಪಮಾನ ಮಾಡಿದ ಶಂಕೆ ವ್ಯಕ್ತವಾಗಿದ್ದು ಈ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈದ್‌ ಮಿಲಾದ್‌ ದಿನ ಕುಮಟಾ ತಾಲೂಕಿನ ಮಿರ್ಜಾನ್‌ ಸಮೀಪ ರಾಷ್ಟ್ರ ಧ್ವಜದಂತೆ ಹೋಲುತ್ತಿರುವ ರೀತಿಯ ಧ್ವಜದ ಮೇಲೆ ಅರ್ಧ ಚಂದ್ರ, ಸ್ಟಾರ್, ಇತ್ಯಾದಿ ಗುರುತನ್ನು ಪ್ರದರ್ಶಿಸಲಾಗಿತ್ತು. ಈ ಘಟನೆ … Continued

ಕುಮಟಾ: ಹೆಗಡೆಯಲ್ಲಿ ಅತಿ ದೊಡ್ಡ ಬಿಳಿ ಹೆಬ್ಬಾವು ಪ್ರತ್ಯಕ್ಷ – ರಕ್ಷಣೆ

ಕುಮಟಾ : ಸಮೀಪದ ಹೆಗಡೆ ಗ್ರಾಮದ ಗಾಂಧಿ ನಗರದ ಮನೆಯಂಗಳದಲ್ಲಿ ಬಿಳಿ ಹೆಬ್ಬಾವು ಕಾಣಿಸಿಕೊಂಡಿದ್ದು, ಅದನ್ನು ರಕ್ಷಣೆ ಮಾಡಲಾಗಿದೆ. ಆರ್ ಟಿ ಒ ಕಚೇರಿ ಹೋಮ್ ಗಾರ್ಡ್ ಗಣೇಶ ಮುಕ್ರಿ ಅವರ ಮನೆಯ ಅಂಗಳದಲ್ಲಿ ಕಾಣಿಸಕೊಂಡ ಹೆಬ್ಬಾವನ್ನು ಪವನ್ ನಾಯ್ಕ ರಕ್ಷಣೆ ಮಾಡಿದ್ದಾರೆ. ಗಣೇಶ ಮುಕ್ರಿ ಅವರು ಉರಗ ತಜ್ಞ ಪವನ್‌ ನಾಯ್ಕ ಅವರಿಗೆ ಮಾಹಿತಿ … Continued

ಕುಮಟಾ: ಸ್ವಾತಂತ್ರ್ಯೋತ್ಸವ ಧ್ವಜಾರೋಹಣಕ್ಕೆ ಹೊರಟ ಶಿಕ್ಷಕ ಅಪಘಾತದಲ್ಲಿ ಸಾವು

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ತಾಲೂಕಿನ ಗುಡೆ ಅಂಗಡಿಯ ಪ್ರಾಥಮಿಕ ಶಾಲಾ ಶಿಕ್ಷಕ ಗೋಪಾಲ ಪಟಗಾರ (50) ಅಪಘಾತದಲ್ಲಿ ನಿಧನರಾಗಿದ್ದಾರೆ. ಆಗಸ್ಟ್‌ ೧೫ರಂದು ಮುಂಜಾನೆ 7 ಗಂಟೆಗೆ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕಾಗಿ ಗುಡೆ ಅಂಗಡಿ ಶಾಲೆಗೆ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಅಘನಾಶನಿ ರಸ್ತೆಯ ಹಳಕಾರ ತಿರುವಿನ ಸಮೀಪ ಬೊಲೆರೊ ವಾಹನ ದ್ವಿಚಕ್ರ ವಾಹನಕ್ಕೆ … Continued

ಶ್ರೀ ಲಕ್ಷ್ಮೀ ನರಸಿಂಹ ದೇವರಿಗೆ ಲಕ್ಷಾಧಿಕ ತುಳಸಿ ದಳದಿಂದ ಅರ್ಚನೆ

ಕುಮಟಾ : ತಾಲೂಕಿನ ಹೊಲನಗದ್ದೆ ತೆಪ್ಪದಮಠದ ಶ್ರೀ ಲಕ್ಷ್ಮೀನರಸಿಂಹ ದೇವಾಲಯದಲ್ಲಿ ಭಾನುವಾರ ಲಕ್ಷಾಧಿಕ ತುಳಸಿ ದಳದಿಂದ ಪೂಜೆ ನಡೆಯಿತು. ಸತತವಾಗಿ 10 ವರ್ಷದಿಂದ ಪ್ರತಿವರ್ಷ ವಾರ್ಷಿಕವಾಗಿ ಲಕ್ಷಾಧಿಕ ತುಳಸಿದಳದಿಂದ ಪೂಜೆ ನಡೆಸಿಕೊಂಡು ಬರಲಾಗುತ್ತಿದೆ. ಈವರ್ಷ ಅಧಿಕ ಮಾಸ ಇರುವುದರಿಂದ ಈ ಸಂದರ್ಭದಲ್ಲಿ ನಾಡಿನ ಕ್ಷೇಮಕ್ಕಾಗಿ ನಡೆಸುವ ಈ ಪೂಜೆಯಿಂದ ಜನರಿಗೆ ಅಧಿಕ ಫಲ ಪ್ರಾಪ್ತಿಯಾಗುವದು ಎಂದು … Continued

ಕುಮಟಾ: ಬೇಟೆಯಾಡಿದ ಮುಳ್ಳುಹಂದಿ ಬೈಕಿನಲ್ಲಿ ಸಾಗಾಟ, ಇಬ್ಬರ ಬಂಧನ

ಹೊನ್ನಾವರ: ಮುಳ್ಳುಹಂದಿ ಬೇಟೆಯಾಡಿ ಅದನ್ನು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಅರಣ್ಯಾಧಿಕಾರಿಗಳ ತಂಡವು ಕಾರ್ಯಾಚರಣೆ ನಡೆಸಿ ಬಂಧಿಸಿದೆ. ಮುಳ್ಳು ಹಂದಿಯ ಮೃತದೇಹವನ್ನು ವಶಪಡಿಸಿಕೊಂಡಿದ್ದಾರೆ. ಓರ್ವ ಆರೋಪಿ ನಾಪತ್ತೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ. ದೀವಳ್ಳಿಯ ಸಂಜಯ ದಿನ್ನಿ ನೊರೊನಾ (25) ಹಾಗೂ ಪ್ರಕಾಶ ಫ್ರಾನ್ಸಿಸ್ (39) ಎಂಬವರು ಬಂಧಿತ ಆರೋಪಿಗಳು. ಮುಳ್ಳುಹಂದಿ ಬೇಟೆಯಾಡಿ ಬೈಕಿನಲ್ಲಿ ಸಾಗಿಸುತ್ತಿರುವಾಗ ತಾಲೂಕಿನ ಕತಗಾಲ … Continued

ಕುಮಟಾ: ಕುತೂಹಲಕ್ಕೆ ಕಾರಣವಾದ ಕಡಲತೀರದಲ್ಲಿ ಪತ್ತೆಯಾದ ಸಿಲಿಂಡರ್ ರೂಪದ ವಸ್ತು

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬಾಡ ಗ್ರಾಮದ ಕಡಲತೀರದಲ್ಲಿ ಸಿಲಿಂಡರ್ ರೂಪದ ವಸ್ತುವೊಂದು ಪತ್ತೆಯಾಗಿದೆ. ಇದು ಸ್ಥಳೀಯರಲ್ಲಿ ಆತಂಕ ಹಾಗೂ ಕುತೂಹಲಕ್ಕೆ ಕಾರಣವಾಗಿದೆ. ಭಾರೀ ಗಾತ್ರದ ಸಿಲಿಂಡರ್ ರೂಪದ ವಸ್ತು ತೇಲಿ ಬಂದು ಸಮುದ್ರ ತೀರಲ್ಲಿ ಬಿದ್ದಿತ್ತು. ಇದನ್ನು ನೋಡಿದ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಕರಾವಳಿ ಕಾವಲು ಪಡೆಯ … Continued

ಕುಮಟಾ: ಜುಲೈ 23ರಂದು ಗಂಧರ್ವ ಕಲಾಕೇಂದ್ರದ ವಾರ್ಷಿಕೋತ್ಸವ

ಕುಮಟಾ: ಇಲ್ಲಿನ ಗಂಧರ್ವ ಕಲಾಕೇಂದ್ರದ ವಾರ್ಷಿಕೋತ್ಸವ ಜುಲೈ 23, ಭಾನುವಾರ ಮೂರೂರು ರಸ್ತೆಯಲ್ಲಿರುವ ಹವ್ಯಕ ಸಭಾಭವನದಲ್ಲಿ ನಡೆಯಲಿದೆ. ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ವಿವಿಧ ಕಲಾವಿದರು ಹಾಗೂ ವಿದ್ಯಾರ್ಥಿಗಳಿಂದ ಕಾರ್ಯಕ್ರಮ ನಡೆಯಲಿದೆ. ಸಂಜೆ 4 ಗಂಟೆಗೆ ಸಭಾ ಕಾರ್ಯಕ್ರಮವಿದ್ದು, ವೈದ್ಯ ಡಾ.ಅನಿಲ ಹೆಗಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಅರೇಅಂಗಡಿಯ ಎಸ್‌.ಕೆ.ಪಿ.ಸಂಯುಕ್ತ ಪದವಿಪೂರ್ವ ಕಾಲೇಜಿನ ನಿವೃತ್ತ ಉಪನ್ಯಾಸಕರಾದ … Continued