ರಾಜ್ಯದಲ್ಲಿ ಮಹಾ ಮಳೆಗೆ 20 ಸಾವು : ಸಚಿವ ಕೃಷ್ಣ ಭೈರೇಗೌಡ

ಕುಮಟಾ : ರಾಜ್ಯದಲ್ಲಿ ಮಳೆಗೆ 20 ಜನರು ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಜಾನುವಾರುಗಳು ಮೃತಪಟ್ಟಿವೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಮಾಹಿತಿ ನೀಡಿದರು. ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಕೊಚ್ಚಿ ಹೋಗಿ ಇಬ್ಬರು ಮೃತಪಟ್ಟ ಸಂಬಂಧ ಜಿಲ್ಲೆಯ ಕುಮಟಾ ತಾಲೂಕಿನ ಬೆಟ್ಕುಳಿ ಗ್ರಾಮಕ್ಕೆ ಭೇಟಿ ನೀಡಿದ ಸಚಿವರು, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ … Continued

ಕುಮಟಾ: ಮಳೆ ಆರ್ಭಟಕ್ಕೆ ಇಬ್ಬರು ನೀರು ಪಾಲು

ಕಾರವಾರ: ಉತ್ತರಕನ್ನಡದಲ್ಲಿ ಮಳೆಯಬ್ಬರಕ್ಕೆ ಇಬ್ಬರು ಸಾವಿಗೀಡಾದ ಘಟನೆ ಜಿಲ್ಲೆಯ ಕುಮಟಾ ತಾಲೂಕಿನ ಬರ್ಗಿ ಗ್ರಾಮ ಪಂಚಾಯತ ವ್ಯಾಪ್ತಿಯ ಬೆಟ್ಕುಳಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಸತೀಶ ಪಾಂಡುರಂಗ ನಾಯ್ಕ(40), ಉಲ್ಲಾಸ ಗಾವಡಿ(50) ಎಂದು ಗುರುತಿಸಲಾಗಿದೆ. ವಿಪರೀತ ಮಳೆಯಿಂದ ಅಘನಾಶಿನಿ ನದಿ ತುಂಬಿ ಹರಿಯುತ್ತಿದ್ದು, ನೀರು ಗದ್ದೆಗಳಿಗೆ ನುಗ್ಗಿದೆ. ಹೀಗಾಗಿ ಗದ್ದೆಗಳು ಸಂಪೂರ್ಣ ನೀರಿನಿಂದ ತುಂಬಿವೆ. … Continued

ಕುಮಟಾ: ತಂಡ್ರಕುಳಿಯ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿ ಗುಡ್ಡ ಕುಸಿತ: ಮನೆಗೆ ಹಾನಿ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾದಿಂದ 10 ಕಿಮೀ ದೂರದ ತಂಡ್ರಕುಳೀಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಹೆದ್ದಾರಿ ಪಕ್ಕದ ಗುಡ್ಡ ಕುಸಿದಿದೆ. ಇದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಕಳೆದ ಎರಡು ದಿನಗಳಿಂದ ತಾಲೂಕಿನಲ್ಲಿ ಸುರಿದ ಮಳೆಯಿಂದಾಗಿ ಗುಡ್ಡ ಕುಸಿದು ಬೃಹತ್‌ ಬಂಡೆಗಲ್ಲು ರಾಷ್ಟ್ರೀಯ ಹೆದ್ದಾರಿಯ ಕೆಳಗೇ ಇರುವ ಗಣೇಶ ತುಳಸು ಅಂಬಿಗ ಎಂಬವರ ಮನೆಗೆ … Continued

ಕುಮಟಾ: ನೀರಿನ ಟ್ಯಾಂಕ್‌ನಲ್ಲಿ ಮುಳುಗಿಸಿ ಮಗನನ್ನು ಸಾಯಿಸಿದ ನಂತರ ತಾನೂ ಆತ್ಮಹತ್ಯೆಗೆ ಶರಣಾದ ತಂದೆ

ಕುಮಟಾ: ಮಗನನ್ನು ನೀರಿನ ಟ್ಯಾಂಕ್‌ನಲ್ಲಿ ಮುಳುಗಿಸಿ ಸಾಯಿಸಿದ ನಂತರ ಬಳಿಕ ತಂದೆಯೂ ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಉತ್ತರಕ್ನಡನ ಜಿಲ್ಲೆಯ ಕುಮಟಾ ಪಟ್ಟಣದಲ್ಲಿ ನಡೆದಿದೆ. ಕುಮಟಾ ಪಟ್ಟಣದ ಹಳೇ ಮೀನು ಮಾರುಕಟ್ಟೆ ಸಮೀಪದ ಪುರಸಭೆಯ ವಸತಿ ಗೃಹಹದಲ್ಲಿ ವಾಸಿಸುತ್ತಿದ್ದ ಪೌರಕಾರ್ಮಿಕ ಶ್ರೀಧರ ಹರಿಜನ (46) ಎಂಬವರೇ ತನ್ನ ವಿಕಲಚೇತನ ಮಗನನ್ನು ಕೊಂದು ಆತ್ಮಹತ್ಯೆಗೆ ಶರಣಾದವರು. … Continued

ಕುಮಟಾ: ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಮಟ್ಟದ 8 ರ‍್ಯಾಂಕ್‌ಗಳೊಂದಿಗೆ ನೂರಕ್ಕೆ ನೂರು ಸಾಧನೆ ಮಾಡಿದ ಕೊಂಕಣ ಎಜ್ಯುಕೇಶನ್‌ ಪ್ರೌಢಶಾಲೆ

ಕುಮಟಾ: ಸೋಮವಾರ ಪ್ರಕಟವಾದ 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ ಕುಮಟಾದ ಕೊಂಕಣ ಎಜ್ಯುಕೇಶನ್‌ ಟ್ರಸ್ಟ್‌ನ ಸಿವಿಎಸ್‌ಕೆ ಪ್ರೌಢಶಾಲೆಯು ನೂರಕ್ಕೆ ನೂರು ಫಲಿತಾಂಶ ಪಡೆದಿದೆ. ರಾಜ್ಯಕ್ಕೆ ಚತುರ್ಥ ಸ್ಥಾನ ಪಡೆದು, ರಾಜ್ಯ ಮಟ್ಟದಲ್ಲಿ ರ‍್ಯಾಂಕ್‌ ಗಳಿಸುವ ಪರಂಪರೆಯನ್ನು ಮುಂದುವರೆಸಿದೆ. ಪರೀಕ್ಷೆಗೆ ಕುಳಿತ 139 ವಿದ್ಯಾರ್ಥಿಗಳೂ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು, 8 ವಿದ್ಯಾರ್ಥಿಗಳು ರಾಜ್ಯಮಟ್ಟದ ಟಾಪ್‌-10 ರ‍್ಯಾಂಕ್‌ … Continued

ಕುಮಟಾ: ದಿಢೀರ್‌ ರಾಜಕೀಯ ನಿವೃತ್ತಿ ಘೋಷಿಸಿದ ಕಾಂಗ್ರೆಸ್‌ ಮಾಜಿ ಶಾಸಕಿ ಶಾರದಾ ಶೆಟ್ಟಿ..!

ಕುಮಟಾ : ಅತ್ಯಂತ ಮೃದು ಸ್ವಭಾವದ ಕಾಂಗ್ರೆಸ್‌ ನಾಯಕಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕುಮಟಾ-ಹೊನ್ನಾವರ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕಿ ಶಾರದಾ ಮೋಹನ ಶೆಟ್ಟಿ ಟಿಕೆಟ್ ಕೈ ತಪ್ಪಿದ್ದಕ್ಕೆ ನೊಂದು ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದಾರೆ. ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಟಿಕೆಟ್ ಅನ್ನು ಸ್ಥಳೀಯರಿಗೆ ನೀಡದೆ, ಕೇಂದ್ರದ ಮಾಜಿ ಸಚಿವೆ ಹಾಗೂ ಸೋನಿಯಾ ಗಾಂಧಿ ಅವರ … Continued

ದ್ವಿತೀಯ ಪಿಯುಸಿ ಪರೀಕ್ಷೆ : ಸತತ ಮೂರನೇ ಬಾರಿಗೆ ನೂರಕ್ಕೆ ೧೦೦ ಫಲಿತಾಂಶ ಪಡೆದ ಕುಮಟಾ ಸರಸ್ವತಿ ಪಿಯು ಕಾಲೇಜು

ಕುಮಟಾ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕುಮಟಾದ ಕೊಂಕಣ ಎಜುಕೇಷನ್ ಟ್ರಸ್ಟ್ ನ ಬಿ.ಕೆ. ಭಂಡಾರ್ಕರ್ಸ್ ಸರಸ್ವತಿ ಪದವಿ ಪೂರ್ವ ಕಾಲೇಜ್‌ ಪ್ರತಿಶತ ನೂರಕ್ಕೆ ನೂರು ಫಲಿತಾಂಶ ಪಡೆದಿದೆ. ವಿಜ್ಞಾನ ವಿಭಾಗದಲ್ಲಿ ರಂಜನಾ ಮಡಿವಾಳ ೫೮೮ (೯೮%) ಅಂಕ ಪಡೆದು ರಾಜ್ಯ ಮಟ್ಟದಲ್ಲಿ ೯ ನೇ ಸ್ಥಾನ ಪಡೆದಿದ್ದಾಳೆ ಹಾಗೂ ಕಾಲೇಜಿಗೆ ಪ್ರಥಮ ಸ್ಥಾನ ಗಳಿಸಿರುತ್ತಾಳೆ. ಶ್ರೀನಂದಾ … Continued

ಕುಮಟಾ: ದ್ವಿತೀಯ ಪಿಯು ಫಲಿತಾಂಶ; ಮೊದಲ ಬ್ಯಾಚಿನಲ್ಲೇ ಗೋರೆ ಕೆನರಾ ಎಕ್ಸಲೆನ್ಸ್ ಪಿಯು ಕಾಲೇಜು ೧೦೦ಕ್ಕೆ ನೂರು ಫಲಿತಾಂಶ

 ಕುಮಟಾ : ಈ ವರ್ಷದ ದ್ವಿತೀಯ ಪಿಯಿಸಿ ಪರೀಕ್ಷೆಯಲ್ಲಿ ಶ್ರೀ ಜಿ. ಎನ್. ಹೆಗಡೆ ಟ್ರಸ್ಟ್ (ರಿ) ಪ್ರಾಯೋಜಕತ್ವದಲ್ಲಿ ನಡೆಯುವ ಕುಮಟಾ ತಾಲೂಕು ಗೋರೆಯ ಕೆನರಾ ಎಕ್ಸಲೆನ್ಸ್ ಪದವಿ ಪೂರ್ವ ಕಾಲೇಜಿಗೆ ನೂರಕ್ಕೆ ನೂರು ಫಲಿತಾಂಶ ಬಂದಿದೆ. ಕಾಲೇಜಿಗೆ ಇದು ಮೊದಲನೇ ಬ್ಯಾಚ್‌ ಆಗಿದ್ದು, ಆದರೂ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ – … Continued

ನಿವೇದಿತ ಆಳ್ವಾಗೆ ಕುಮಟಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌: ಉತ್ತರ ಕನ್ನಡ ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಶಿವಾನಂದ ಹೆಗಡೆ ರಾಜೀನಾಮೆ

ಹೊನ್ನಾವರ: ಉತ್ತರ ಕನ್ನಡ ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ ಮುಖಂಡ ಹಾಗೂ ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದ ಶಿವಾನಂದ ಹೆಗಡೆ ಕಡತೋಕಾ ಅವರು ರಾಜೀನಾಮೆ ನೀಡಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಇಂದು, ಶನಿವಾರ ಕಾಂಗ್ರೆಸ್‌ ತನ್ನ ಮೂರನೇ ಅಭ್ಯರ್ಥಿಗಳ ಬಿಡುಗಡೆ ಮಾಡಿದ್ದು ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರಕ್ಕೆ ನಿವೇದಿತ … Continued

ಕುಮಟಾ: ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆ-ಷಡಕ್ಷರಿ ಅಕಾಡೆಮಿ ಭಜನಾ ಮಂಡಳಿ ಪ್ರಥಮ

ಕುಮಟಾ: ಯುಗಾದಿ ಉತ್ಸವದ ಅಂಗವಾಗಿ ಕುಮಟಾದ ಉಗಾದಿ ಉತ್ಸವ ಸಮಿತಿಯಿಂದ ಇಲ್ಲಿನ ನೆಲ್ಲೆಕೇರಿ ಮಹಾಸತಿ ಭವನದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಭಜನಾ ಸ್ಪರ್ಧೆಗಳು ನಡೆದವು. ಉತ್ತರ ಕನ್ನಡ ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಂಡಿತ ಗೌರೀಶ ಯಾಜಿ ಕೂಜಳ್ಳಿ ಅವರ ಸಂಯೋಜಿತ ಕುಮಟಾದ ಷಡಕ್ಷರಿ ಅಕಾಡೆಮಿ ಭಜನಾ ಮಂಡಳಿ ಪ್ರಥಮ ಸ್ಥಾನ … Continued