ಉಪನ್ಯಾಸಕರ ಪಾಠವು ಪ್ರೇರಣೆಯಾದಾಗ ಮಾತ್ರ ವಿದ್ಯಾಥಿಗಳಲ್ಲಿ ಜ್ಞಾನದ ಮಟ್ಟ ಹೆಚ್ಚಿಸಲು ಸಾಧ್ಯ; ಪ್ರೊ..ನಿಟ್ಟೂರ್

ಕುಮಟಾ; ವಿಷಯಗಳ ಆಳ ಜ್ಞಾನದೊಂದಿಗೆ ಕಲಾತ್ಮಕ ಬೋಧನೆಯಿಂದ ಉಪನ್ಯಾಸಕರು ಪಾಠಮಾಡಬೇಕು .ಕಲಿಸುವಿಕೆಯು ಆಕರ್ಷಕವಾಗಿ ವಿದ್ಯಾರ್ಥಿಗಳ ಮನ ಮುಟ್ಟುವಂತೆ ಇದ್ದಾಗ ಫಲಿತಾಂಶ ಗುಣಮಟ್ಟವು ಹೆಚ್ಚುತ್ತದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರಾದ ಪ್ರೊ..ಹನುಮಂತಪ್ಪ ನಿಟ್ಟೂರ್ ಹೇಳಿದರು. ಅವರು ಡಾ.ಎ.ವಿ.ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದಲ್ಲಿ ವಾಣಿಜ್ಯ ಮತ್ತು ಲೆಕ್ಕ ಶಾಸ್ತ್ರದ ವಿಷಯದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, … Continued

ಕುಮಟಾ: ಉಪ್ಪಿನಪಟ್ಟಣದ ಕೆರೆ ಹೂಳಿನಲ್ಲಿ ಸಿಲುಕಿಕೊಂಡಿದ್ದ ಕಡವೆ ರಕ್ಷಣೆ, ವೀಕ್ಷಿಸಿ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಉಪ್ಪಿನಪಟ್ಟಣದ ಕೆರೆಯ ಕೆಸರಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದ ಕಡವೆಯೊಂದನ್ನು ಅರಣ್ಯ ‌ಇಲಾಖೆ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಸುಮಾರು ನಾಲ್ಕು ವರ್ಷದ ಕಡವೆ ಇದಾಗಿದ್ದು ಕಾಡಿನಿಂದ ತೋಟಕ್ಕೆ ಬಂದು ನೀರಿನ ದಾಹ ತೀರಿಸಿಕೊಳ್ಳಲು ಕೆರೆಗೆ ಇಳಿದಿತ್ತು .ಆದರೆ ಕೆರೆಯಲ್ಲಿ ಹೂಳು ತುಂಬಿದ್ದರಿಂದ ಕೆಸರಲ್ಲಿ … Continued

ಕುಮಟಾದಲ್ಲಿ ದೂರವಾದ ಬಾಂಬ್‌ ಆತಂಕ ;ಜನತೆ ನಿಟ್ಟುಸಿರು

ಕಾರವಾರ : ಉತ್ತರ ಕನ್ನಡ ಜಿಲ್ಲೆ ಕುಮಟಾದ ವಿದ್ಯಾಧಿರಾಜ ಪಾಲಿಟೆಕ್ನಿಕ್ ಕಾಲೇಜು ಹಿಂಬದಿ ಆವರಣದಲ್ಲಿ ಬಾಂಬ್ ಮಾದರಿ ವಸ್ತು ಪತ್ತೆಯಾದ ಬೆನ್ನಲ್ಲೇ ಮಂಗಳೂರಿನಿಂದ ಆಗಮಿಸಿದ ಬಾಂಬ್ ನಿಷ್ಕ್ರಿಯ ದಳದವರು ತಪಾಸಣೆ ನಡೆಸಿ ವಸ್ತುವನ್ನು ನಿಷ್ಕ್ರಿಯ ಗೊಳಿಸಿದ್ದಾರೆ‌. ಹಾಗೂ ಇದು ಬಾಂಬ್‌ ಅಲ್ಲ, ಅದೇ ಮಾದರಿಯಲ್ಲಿರುವ ವಸ್ತು ಎಂದು ತಿಳಿಸಿದ್ದಾರೆ. ನಗರದ ವಿದ್ಯಾಧಿರಾಜ ಪಾಲಿಟೆಕ್ನಿಕ್ ಕಾಲೇಜು ಹಿಂಬದಿ … Continued

ಕುಮಟಾ ಪಾಲಿಟೆಕ್ನಿಕ್‌ ಕಾಲೇಜ್‌ ಹಿಂಭಾಗದಲ್ಲಿ ಬಾಂಬ್‌ ಮಾದರಿ ವಸ್ತು ಪತ್ತೆ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ವಿದ್ಯಾಧಿರಾಜ ಪಾಲಿಟೆಕ್ನಿಕ್ ಕಾಲೇಜಿನ ಹಿಂಭಾಗದಲ್ಲಿ ಬಾಂಬ್ ಮಾದರಿಯ ವಸ್ತು ಪತ್ತೆಯಾಗಿದ್ದು ಈ ಹಿನ್ನೆಲೆಯಲ್ಲಿ ಕಾಲೇಜಿನ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಸಂಜೆಯ ವಾಯು ವಿಹಾರಕ್ಕೆ ಬಂದಿರುವ ಕೆಲವು ಜನರು ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದು ನೋಡಲು ಬಾಂಬಿಗೆ ಇರುವ ಮಾದರಿಯಲ್ಲಿ … Continued

ಕುಮಟಾ :ಕುಡಿತದ ಅಮಲಿನಲ್ಲಿ ಕತ್ತಿಯಿಂದ ತಂದೆಯನ್ನೇ ಕಡಿದು ಸಾಯಿಸಿದ ಮಗ

ಕುಮಟಾ : ಕುಡಿದ ಅಮಲಿನಲ್ಲಿ ಮಗನೊಬ್ಬ ಕ್ಷುಲ್ಲಕ ಕಾರಣಕ್ಕೆ ತನ್ನ ತಂದೆಯನ್ನೇ ಕೊಚ್ಚಿ ಕೊಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಸಂತೆಗುಳಿಯ ಕುಳ್ವೆಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. 31 ವರ್ಷದ ಶ್ರೀಕಾಂತ ರಾಮಚಂದ್ರ ಗೌಡನೇ ಕೊಲೆ ಮಾಡಿದ ಆರೋಪಿ, ಮೃತ ತಂದೆಯನ್ನು ರಾಮಚಂದ್ರ ಕುಪ್ಪು ಗೌಡ (55 ವರ್ಷ) ಎಂದು ಗುರುತಿಸಲಾಗಿದೆ. … Continued

ಗೋಕರ್ಣ: ಈಜಲು ಸಮುದ್ರಕ್ಕೆ ಇಳಿದ ಬೆಂಗಳೂರಿನ ಯುವಕ ನಾಪತ್ತೆ

ಕುಮಟಾ: ಸಮುದ್ರದಲ್ಲಿ ಈಜಲು ಹೋಗಿದ್ದ ಪ್ರವಾಸಿಗನೊಬ್ಬ ಸಮುದ್ರದಲ್ಲಿ ನಾಪತ್ತೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಮುಖ್ಯ ಕಡಲ ತೀರದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ನಾಪತ್ತೆಯಾದ ಯುವಕನನ್ನು ಬೆಂಗಳೂರು ಮೂಲದ ರವಿ ನಂದನ್ (23) ಎಂದು ಗುರುತಿಸಲಾಗಿದೆ. ಆತನ ಪತ್ತೆಗಾಗಿ ಹುಡುಕಾಟ ನಡೆದಿದೆ. ಭಾನುವಾರ ಬೆಂಗಳೂರಿನಿಂದ ಐದು ಜನ ಯುವಕರು ಪ್ರವಾಸಕ್ಕೆಂದು ಗೋಕರ್ಣಕ್ಕೆ … Continued

ಬಾಡ :ಶ್ರೀ ಕಾಂಚಿಕಾ ಪರಮೇಶ್ವರಿ ದೇವಾಲಯದಲ್ಲಿ ನವರಾತ್ರಿ ಉತ್ಸವ ಸಂಪನ್ನ

ಕುಮಟಾ : ತಾಲೂಕಿನ ಪ್ರಸಿದ್ಧ ಶಕ್ತಿ ಸ್ಥಳ ಬಾಡದ ಶ್ರೀ ಕಾಂಚಿಕಾ ಪರಮೇಶ್ವರಿ ದೇವಾಲಯದಲ್ಲಿ ನವರಾತ್ರಿ ಉತ್ಸವ ಸಂಪನ್ನವಾಯಿತು. ವಿಜಯ ದಶಮಿ ದಿನವಾದ ಶುಕ್ರವಾರ ಮುಂಜಾನೆಯಿಂದ ವಿವಿಧ ಧಾರ್ಮಿಕ ಕಾರ್ಯ ಕ್ರಮಗಳ ಮೂಲಕ ನವರಾತ್ರಿ ಉತ್ಸವ ವೈಭವಯುತವಾಗಿ ನಡೆಯಿತು. ಮುಂಜಾನೆ ಪಲ್ಲಕಿ ಉತ್ಸವ ನಡೆಯಿತು. ಶ್ರೀ ಕಾಂಚಿಕಾ ಪರಮೇಶ್ವರಿ ಪಲ್ಲಕಿ ಮೂಲಕ ಭತ್ತದ ಗದ್ದೆಗೆ ಸಾಗಿ … Continued

ಕುಮಟಾ; ಬಾಳಿಗಾ ವಾಣಿಜ್ಯ ಕಾಲೇಜಿನಲ್ಲಿ ಸ್ವಚ್ಛತೆ -ಕರ್ತವ್ಯ ಮಾಸಾಚರಣೆಗೆ ಚಾಲನೆ

ಕುಮಟಾ;ಡಾ.ಎ.ವಿ.ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಸ್ವಚ್ಛತಾ ಮಾಸಾಚರಣೆಗೆ ಪ್ರಾಚಾರ್ಯ ಡಾ. ಎಸ್.ವಿ.ಶೇಣ್ವಿ ಚಾಲನೆ ಶನಿವಾರ ನೀಡಿದರು ಮಹಾತ್ಮ ಗಾಂಧಿ ಹಾಗೂ ಲಾಲಬಹಾದ್ದೂರ ಶಾಸ್ತ್ರೀ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿದರು. .ಮಹಾತ್ಮ ಗಾಂಧೀಜಿ ಮತ್ತು ಲಾಲಬಹುದ್ದೂರ ಶಾಸ್ತ್ರಿಗಳ ಜನ್ಮ ದಿನಾಚರಣೆ ನೆನಪಿಗಾಗಿ ಉತ್ತರಕನ್ನಡ ಜಿಲ್ಲೆಯಲ್ಲಿಯೇ ಸ್ವಚ್ಚತೆ ಮತ್ತು ಕರ್ತವ್ಯ ಮಾಸಾಚರಣೆಯನ್ನು ವೈಶಿಷ್ಟ್ಯವಾಗಿ ಆಚರಿಸಲು ನಿರ್ದರಿಸಿದ್ದೇವೆ. ಸ್ವತಂತ್ರ ಭಾರತದ ೭೬ ನೇ … Continued

ಶಿರಸಿ-ಕುಮಟಾದಲ್ಲಿ ಇಎಸ್‌ಐ ಡಿಸ್ಪೆನ್ಸರಿ ಸ್ಥಾಪನೆಗೆ ತಾತ್ವಿಕ ಒಪ್ಪಿಗೆ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ  ಶಿರಸಿ ಹಾಗೂ ಕುಮಟಾದಲ್ಲಿ ಇಎಸ್‌ಐ ಚಿಕಿತ್ಸಾಲಯ (ESI Dispensary)ಗಳ ಸ್ಥಾಪನೆಗೆ ಕೇಂದ್ರ ಕಾರ್ಮಿಕ ಸಚಿವಾಲಯ ತಾತ್ವಿಕ ಒಪ್ಪಿಗೆ ನೀಡಿದೆ. ಈ ಕುರಿತು ಕೇಂದ್ರ ಸಚಿವ ಭೂಪೇಂದ್ರ ಯಾದವ್‌ ಅವರು ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಅವರಿಗೆ ಪತ್ರ ಬರೆದಿದ್ದು, ಶಿರಸಿ ಹಾಗೂ ಕುಮಟಾದಲ್ಲಿಇಎಸ್‌ಐ ಚಿಕಿತ್ಸಾಲಯ (ESI Dispensary)ಗಳ ಸ್ಥಾಪನೆಗೆ … Continued

ಕುಮಟಾ : ಹೊಲನಗದ್ದೆ ಕಡ್ಲೆಯ ಅರಬ್ಬಿ ಸಮುದ್ರ ತೀರದಲ್ಲಿ ಡಾಲ್ಫಿನ್ ಕಳೇಬರ ಪತ್ತೆ..!

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆಯ ಕಡ್ಲೆಯ ಅರಬ್ಬಿ ಸಮುದ್ರ ತೀರದಲ್ಲಿ ಡಾಲ್ಫಿನ್ ಕಳೇಬರ ಪತ್ತೆಯಾಗಿದೆ. ಸುಮಾರು 3 ಮೀಟರುಗಳಷ್ಟು ಉದ್ದವಿರುವ ಡಾಲ್ಫಿನ್ ಯಾವಕಾರಣದಿಂದ ಮೃತಪಟ್ಟಿದೆ ಎನ್ನುವುದು ತಿಳಿದು ಬಂದಿಲ್ಲ. ಇದು ಗಂಡು ಡಾಲ್ಪಿನ್ ಆಗಿದ್ದು ಕಳೇಬರದ ಮೇಲೆ ಮೇಲ್ನೋಟಕ್ಕೆ ಯಾವುದೇ ಗಾಯದ ಗುರುತು ಕಂಡು ಬರುತ್ತಿಲ್ಲ. ಮೀನುಗಾರರು ಇದನ್ನು ಹಂದಿ … Continued