ಕುಮಟಾ: ಮೂರು ದಿನಗಳ ಕಾರ್ಯಾಚರಣೆ ನಂತರ ಸಮುದ್ರ ಪಾಲಾದ ಮತ್ತಿಬ್ಬರ ಶವ ಪತ್ತೆ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ತಾಲೂಕಿನ ಬಾಡದಲ್ಲಿ ಸಮುದ್ರದಲ್ಲಿ ನಾಪತ್ತೆಯಾಗಿದ್ದ ಮತ್ತಿಬ್ಬರು ಪ್ರವಾಸಿಗರ ಶವ ಮೂರನೇ ದಿನ ಪತ್ತೆಯಾಗಿದೆ. ನಾಪತ್ತೆಯಾಗಿದ್ದ ನಾಲ್ವರಲ್ಲಿ ಇಬ್ಬರ ಶವ ಮೂರು ದಿನಗಳ ಹಿಂದೆಯೇ ಪತ್ತೆಯಾಗಿತ್ತು. ಈಗ ಮತ್ತಿಬ್ಬರ ಶವವೂ ಸಮುದ್ರದ ಅರ್ಧ ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ. ಸಿಎ ವಿದ್ಯಾರ್ಥಿ ಬೆಂಗಳೂರಿನ ರಾಜಾಜಿನಗರದ ತೇಜಸ್ ದಾಮೋದರ ಮತ್ತು ಬೆಂಗಳೂರಿನ ಕನಕಪುರ … Continued

ಡಾ.ಬಾಳಿಗಾ ಕಾಮರ್ಸ್‌ ಕಾಲೇಜಿನಲ್ಲಿ ʼಕಾಮರ್ಸ್‌ ಫೆಸ್ಟ್’ ಕಾರ್ಯಕ್ರಮ, ವಾಣಿಜ್ಯ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ತೆರೆದ ಬಾಗಿಲು ಎಂದ ಉದ್ಯಮಿ ಮದನ ನಾಯಕ

ಕುಮಟಾ;ಭಾರತ ಬದಲಾಗುತ್ತಿದೆ. ಇಂದು ವಾಣಿಜ್ಯ ವ್ಯವಹಾರದಲ್ಲಿ ಭಾರತವು ಗುರುತಿಸಿಕೊಂಡಿದೆ. ಜಗತ್ತಿನಲ್ಲಿ ದೊಡ್ಡ ಪ್ರಮಾಣದಲ್ಲಿ ತರಬೇತುದಾರ ಉದ್ಯೋಗಿಗಳನ್ನು ಭಾರತ ನೀಡುತ್ತಿದೆ ಎಂದು ಉದ್ಯಮಿ ಮದನ ನಾಯಕ ಹೇಳಿದರು. ಡಾ.ಎ.ವಿ.ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದಲ್ಲಿ ವಾಣಿಜ್ಯ ‘ ಫೆಸ್ಟ್’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಹಾವಿದ್ಯಾಲಯವು ಸಮರ್ಥ ಮಾನವ ಸಂಪನ್ಮೂಲ ಬೆಳೆಸುವಲ್ಲಿ ತನ್ನ ಪ್ರಯತ್ನವನ್ನು ಹೆಚ್ಚಿಸಬೇಕಾಗಿದೆ. ಆರ್ಥಿಕ ವಲಯದಲ್ಲಿ ಬದಲಾವಣೆಯಾಗುತ್ತಿದೆ. … Continued

ಕುಮಟಾ: ಪ್ರವಾಸಕ್ಕೆ ಬಂದು ಈಜಲು ತೆರಳಿದ ನಾಲ್ವರು ಸಮುದ್ರ ಪಾಲು; ಇಬ್ಬರ ಶವ ಪತ್ತೆ

ಕುಮಟಾ; ಪ್ರವಾಸಕ್ಕೆ ಬಂದು ಸಮುದ್ರಕ್ಕಿಳಿದ ಇಬ್ಬರು ವಿದ್ಯಾರ್ಥಿಗಳು ಜಲ ಸಮಾಧಿಯಾಗಿ, ಮತ್ತಿಬ್ಬರು ನಾಪತ್ತೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಾಗಾಲ್ ನಲ್ಲಿ ನಡೆದಿದೆ. ವಿದ್ಯಾರ್ಥಿಗಳ ತಂಡ ಶನಿವಾರ ರೆಸಾರ್ಟಿಗೆ ಬಂದಿದ್ದರು. ಬೆಂಗಳೂರಿನ ಸುರೇಶ ಸಿ.ಎ ಫೌಂಡೇಶನ್‌ ಸಂಸ್ಥೆಯಿಂದ ೮೭ ಜನರು ಉತ್ತರಕನ್ನಡ ಜಿಲ್ಲೆಗೆ ಪ್ರವಾಸಕ್ಕೆ ಬಂದಿದ್ದ ವೇಳೆ ಜಿಲ್ಲೆಯ ಕುಮಟಾದ ಬಾಡದ ಅರಬ್ಬಿ … Continued

ದ್ವಿತೀಯ ಪಿಯು ಫಲಿತಾಂಶ: ಕುಮಟಾ ಬಾಳಿಗಾ ಕಲಾ-ವಿಜ್ಞಾನ ಪಿಯು ಕಾಲೇಜ್‌-ವಿಜ್ಞಾನದಲ್ಲಿ ಶುಭಾ ಭಟ್ಟ, ಕಲಾ ವಿಭಾಗದಲ್ಲಿ ಶಾಂಭವಿ ಶೆಟ್ಟಿ ಪ್ರಥಮ

ಕುಮಟಾ: ಡಾ.ಎ.ವಿ.ಬಾಳಿಗಾ ಪದವಿ ಪೂರ್ವ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿದೆ. ವಿಜ್ಞಾನ ವಿಭಾಗದಲ್ಲಿ ಒಟ್ಟು ೨೨ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, ೩೩ ವಿದ್ಯಾರ್ಥಿಗಳು ಪ್ರಥಮದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಶುಭಾ ಪರಮೇಶ್ವರ ಭಟ್ಟ ೬೦೦ಕ್ಕೆ ೫೯೦ (೯೮.೩೩%)ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂಜಾ ವಿನಾಯಕ ಭಟ್ಟ ೬೦೦ಕ್ಕೆ ೫೮೧(೯೬.೮೩%) … Continued

ಕುಮಟಾ : ದ್ವಿತೀಯ ಪಿಯು ವಿಜ್ಞಾನ, ಸರಸ್ವತಿ ಪಿಯು ಕಾಲೇಜು ರಾಜ್ಯಮಟ್ಟದ ರ‍್ಯಾಂಕ್‌ನೊಂದಿಗೆ ನೂರಕ್ಕೆ ನೂರು ಫಲಿತಾಂಶ

ಕುಮಟಾ: ಕುಮಟಾದ ಕೊಂಕಣ ಎಜ್ಯುಕೇಶ್ಯನ್ ಟ್ರಸ್ಟಿನ ವಿಧಾತ್ರಿ ಅಕಾಡೆಮಿ ಸಂಯೋಗದ ಬಿ.ಕೆ. ಭಂಡಾರ‍್ಕರ್ ಸರಸ್ವತಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಯಲ್ಲಿ ನೂರಕ್ಕೆ ನೂರು ಸಾಧನೆ ಮಾಡಿದೆ. ಈ ಬಾರಿಯು ರಾಜ್ಯ ಮಟ್ಟದ ರ‍್ಯಾಂಕ್‌ನೊಂದಿಗೆ ಶೇಕಡಾ ೧೦೦ಕ್ಕೆ ನೂರು ಫಲಿತಾಂಶ ದಾಖಲಿಸಿದೆ. ಕಾಲೇಜಿನ ವಿದ್ಯಾರ್ಥಿಗಳಾದ ರುಚಿತಾ ಮಂಜುನಾಥ ನಾಯಕ ೯೮.೩೩% … Continued

ಕುಮಟಾ: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅನುತ್ತೀರ್ಣ, ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ

ಕುಮಟಾ; ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆ ಕಡ್ಲೆಯ ವಿದ್ಯಾರ್ಥಿ ಪ್ರಣವ ಈಶ್ವರ ನಾಯಕ (೧೮) ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶನಿವಾರ ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಡಾ.ಎ.ವಿ ಬಾಳಿಗಾ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನದಲ್ಲಿ ವ್ಯಾಸಂಗ ಮಾಡಿದ್ದ … Continued

ಕುಮಟಾ; ಕುಡಿಯುವ ನೀರಿನ ಯೋಜನೆಗೆ 120 ಕೋಟಿ ರೂ ಮಂಜೂರು: .ಶಾಸಕ  ದಿನಕರ ಶೆಟ್ಟಿ

ಕುಮಟಾ; ತಾಲೂಕಿನ ಹೆಗಡೆ ಜಿಲ್ಲಾ ಪಂಚಾಯತವ್ಯಾಪ್ತಿಯ ೯ ಗ್ರಾ.ಪಂ ಸಂಬಂಧಿಸಿದಂತೆ ಪ್ರತ್ಯೇಕ ಕುಡಿಯುವ ನೀರಿನ ಯೋಜನೆಗೆ 120 ಕೋಟಿ ಮಂಜೂರಾಗಿದ್ದು ಸದ್ಯದಲ್ಲೇ ಟೆಂಡರ್ ಕರೆಯಲಾಗುತ್ತಿದೆ ಎಂದು ಶಾಸಕ ದಿನಕರ ಶೆಟ್ಟಿ ತಿಳಿಸಿದರು. ಅವರು ಹಾಳಾಗಿರುವ ಬರ್ಸಗುಣಿ ರಸ್ತೆಯನ್ನು ಕಾಂಕ್ರೀಟ್‌ ರಸ್ತೆ ನಿರ್ಮಾಣಕ್ಕಾಗಿ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹಾಳಾಗಿರುವ ರಸ್ತೆಯ ೧೨೦ ಮೀಟರ್‌ ಉದ್ದದ … Continued

ಕುಮಟಾ: ಜಿಪಂ ಸದಸ್ಯ, ವಕೀಲರ ಸಂಘದ ಅಧ್ಯಕ್ಷರು ಪ್ರಯಾಣಿಸುತ್ತಿದ್ದ ಕಾರು ಅಪಘಾತ, ಆಸ್ಪತ್ರೆಗೆ ದಾಖಲು, ಪ್ರಾಣಾಪಾಯದಿಂದ ಪಾರು

ಕುಮಟಾ; ತಾಲೂಕಿನ ಬಾಡದವರಾದ ಜಿಲ್ಲಾಪ ಪಂಚಾಯತ ಸದಸ್ಯ ರತ್ನಾಕರ ನಾಯ್ಕ ಮತ್ತು ಕುಮಟಾದ ವಕೀಲರ ಸಂಘದ ಅಧ್ಯಕ್ಷರಾದ ಆರ್.ಜಿ.ನಾಯ್ಕ ಅವರು ಪ್ರಯಾಣಿಸುತ್ತಿರುವ ಕಾರು ಅಪಘಾತಕ್ಕೀಡಾಗಿದ್ದು, ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಭಾನುವಾರ ಸಂಜೆ ಕುಂದಾಪುರದ ಸಮೀಪದ ನಾವುಂದದಲ್ಲಿ ಕಾರು ಡಿವೈಡರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಇಬ್ಬರನ್ನು ತಕ್ಷಣ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಕೀಲರಾದ … Continued

ಮೂರೂರು ಪ್ರಗತಿ ವಿದ್ಯಾಲಯದಲ್ಲಿ ‘ಸಾಗರಸೇತು’ ರಾಮಕಥೆ ಮಂಗಲ-ಸಜ್ಜನರ ಸಿಟ್ಟು ಲೋಕಕ್ಕೆ ಅಪಾಯಕಾರಿ; ರಾಘವೇಶ್ವರ ಶ್ರೀ

ಕುಮಟಾ: ಸಜ್ಜನರ ಸಮಾಧಾನ, ಕ್ಷಮೆ, ಸರಳತೆಯನ್ನು ಎಂದೂ ಅವರ ಅಸಾಮರ್ಥ್ಯ ದೌರ್ಲಲ್ಯ ಎಂದು ಭಾವಿಸಬಾರದು; ಏಕೆಂದರೆ ಅವರ ಸಿಟ್ಟು ಲೋಕದ ಪಾಲಿಗೆ ಅಷ್ಟೇ ಕಂಟಕ ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು. ಮೂರೂರು ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ಐದು ದಿನಗಳ ‘ಸಾಗರ ಸೇತು’ ರಾಮಕಥಾ ಸರಣಿಯ ಮಂಗಲ ಪ್ರವಚನ ಅನುಗ್ರಹಿಸಿದ ಅವರು, … Continued

ಕುಮಟಾ ಡಾ.ಬಾಳಿಗಾ ವಾಣಿಜ್ಯ ಕಾಲೇಜ್ ಮುಖ್ಯ ಗ್ರಂಥಪಾಲಕ‌ ಡಾ. ಶಿವಾನಂದ ಬುಳ್ಳಾಗೆ ಸೋಶಿಯಲ್ ಸೈಂಟಿಸ್ಟ್ ಪ್ರಶಸ್ತಿ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಡಾ. ಎ.ವಿ.ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದ ಮುಖ್ಯ ಗ್ರಂಥಪಾಲಕರಾದ ಡಾ. ಶಿವಾನಂದ ಬುಳ್ಳಾ ಅವರ ಪಿ.ಎಚ್.ಡಿ ಪ್ರಬಂಧ ಹಾಗೂ ಗ್ರಂಥಾಲಯ ವಿಜ್ಞಾನಕ್ಕೆ ನೀಡಿದ ಅಮೂಲ್ಯ ವೈಜ್ಞಾನಿಕ ಕೊಡುಗೆಗಾಗಿ, ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ “ಗ್ರಾಬ್ಸ್ ಬೆಸ್ಟ್ ಸೋಶಿಯಲ್ ಸೈಂಟಿಸ್ಟ್ ಪ್ರಶಸ್ತಿ” ನೀಡಲಾಗಿದೆ. ಚೆನ್ನೈನ ಆನಂದಭವನ ಸಭಾಂಗಣದಲ್ಲಿ ಅಸೋಸಿಯೇಶನ್ ಆಫ್ … Continued