ನಮ್ಮ ಹೃದಯವೇ ರಾಮಮಂದಿರ ಎಂದು ಅರಿತುಕೊಳ್ಳುವುದೇ ಬದುಕಿನ ಧರ್ಮ ; ರಾಘವೇಶ್ವರ ಶ್ರೀ

ಕುಮಟಾ: ಪ್ರತಿಯೊಬ್ಬರ ಅಂತರಾಳದಲ್ಲಿ ಆತ್ಮರೂಪದ ರಾಮನಿದ್ದಾನೆ. ನಮ್ಮ ಹೃದಯವೇ ರಾಮಮಂದಿರ ಎಂಬ ಸತ್ಯವನ್ನು ಅರಿತುಕೊಳ್ಳುವುದೇ ಬದುಕಿನ ಧರ್ಮ ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರು ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ಐದು ದಿನಗಳ ‘ರಾಮಸೇತು’ ರಾಮಕಥಾ ಸರಣಿಯ ನಾಲ್ಕನೇ ದಿನದ ಪ್ರವಚನ ನೀಡಿದ ಅವರು, … Continued

ಆಸೆ ಇದು ರಜೋಗುಣ-ಭಯ, ಚಿಂತೆ, ದ್ವೇಷ, ಕ್ರೋಧ ಎಲ್ಲವೂ ಆಸೆಯ ಸುತ್ತಲೇ ಜನ್ಮ ತಳೆಯುತ್ತವೆ: : ರಾಘವೇಶ್ವರ ಶ್ರೀ

ಕುಮಟಾ: ಆಸೆಯ ಪಾಶದಿಂದ ಮುಕ್ತಿ ಪಡೆದರೆ ಮಾತ್ರ ಮನಃಶಾಂತಿ ಸಾಧ್ಯ. ಆಸೆಯ ಪಾಶದಿಂದ ಏನು ಅನಾಹುತವಾಗುತ್ತದೆ ಎನ್ನುವುದಕ್ಕೆ ರಾವಣನೇ ನಿದರ್ಶನ ಎಂದು ರಾಂಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರು ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ಐದು ದಿನಗಳ ‘ರಾಮಸೇತು’ ರಾಮಕಥಾ ಸರಣಿಯ ಮೂರನೇ ದಿನದ ಪ್ರವಚನದಲ್ಲಿ … Continued

ರಾಮ- ಸೀತೆಯರ ಪ್ರೀತಿ ಅಲೌಕಿಕ, ಧರ್ಮಸಮ್ಮತ : ರಾಘವೇಶ್ವರ ಸ್ವಾಮೀಜಿ

ಕುಮಟಾ: ರಾಮ- ಸೀತೆಯರ ಪ್ರೀತಿಯನ್ನು ಕ್ಷುದ್ರ ದೃಷ್ಟಿಯಿಂದ ನೋಡದೇ ಅದನ್ನು ಮೂಲ ಪ್ರಕೃತಿ ಮತ್ತು ಪರಮ ಪುರುಷನ ಪ್ರೀತಿಯಾಗಿ ಲೌಕಿಕ ದೃಷ್ಟಿಯಿಂದ ನೋಡಬೇಕು ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರು ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ಐದು ದಿನಗಳ ನಡೆಯುತ್ತಿರುವ ‘ರಾಮಸೇತು’ ರಾಮಕಥಾ ಸರಣಿಯ … Continued

ಮಲ್ಲಾಪುರದಲ್ಲಿ ಏಪ್ರಿಲ್‌ 30ರಂದು ಭಾವಗೀತೆ-ಭಕ್ತಿಗೀತೆಗಳ ಪ್ರಸ್ತುತಿ ಭಾವಧಾರಾ ಕಾರ್ಯಕ್ರಮ

ಕುಮಟಾ: ಕೂಜಳ್ಳಿಯ ಷಡಕ್ಷರಿ ಗವಾಯಿಗಳ ಅಕಾಡೆಮಿ ವತಿಯಿಂದ ಭಾವಗೀತೆ ಹಾಗೂ ಭಕ್ತಿಗೀತೆಗಳ ಕಾರ್ಯಕ್ರಮ ಭಾವಧಾರಾ ಏಪ್ರಿಲ್‌  30ರಂದು ಕೂಜಳ್ಳಿ ಸಮೀಪದ ಮಲ್ಲಾಪುರದ ಗುರುಮಠದಲ್ಲಿ ನಡೆಯಲಿದೆ. ಏಪ್ರಿಲ್‌ 30ರಂದು ಮಧ್ಯಾಹ್ನ 3ರಿಂದ ರಾತ್ರಿ 8ರ ವರೆಗೆ ಕಾರ್ಯಕ್ರಮ ನಡೆಯಲಿದ್ದು ಅನೇಕ ಹಿರಿಯ-ಕಿರಿಯ ಕಲಾವಿದರು ಪಾಲ್ಗೊಳ್ಳಲಿದ್ದಾರೆ. ಶ್ರೀಲತಾ ಗುರುರಾಜ ಆಡುಕಳ, ಗಣೇಶ ಭಟ್‌ ಕಡತೋಕ, ಅಶ್ವಿನಿ ಕುಮಟಾ, ಧನ್ಯಾ … Continued

ಮುರೂರು ರಾಮಲೀಲಾ ಮೈದಾನದಲ್ಲಿ ಐದು ದಿನಗಳ ರಾಮಕಥೆಗೆ ಅದ್ಧೂರಿ ಚಾಲನೆ-ರಾಮನ ಸೀತಾ ಪ್ರೀತಿ ಪ್ರಶ್ನಾತೀತ: ರಾಘವೇಶ್ವರ ಶ್ರೀ

ಕುಮಟಾ: ಅಗ್ನಿಪರೀಕ್ಷೆ ಹಿನ್ನೆಲೆಯಲ್ಲಿ ಸೀತೆಯ ಬಗೆಗಿನ ರಾಮನ ಪ್ರೀತಿಯನ್ನು ಪ್ರಶ್ನಿಸುವವರಿದ್ದಾರೆ. ಆದರೆ ಈ ಎಲ್ಲ ಪ್ರಶ್ನೆಗಳಿಗೆ ರಾಮಸೇತು ಉತ್ತರ ಎಂದು ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ನುಡಿದರು. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರು ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ಬುಧವಾರ ಆರಂಭವಾದ ಐದು ದಿನಗಳ ‘ರಾಮಸೇತು’ ರಾಮಕಥಾ ಸರಣಿಯ ಮೊದಲ ದಿನದ ಪ್ರವಚನ … Continued

ಕುಮಟಾ: ಅದ್ಧೂರಿಯಾಗಿ ನಡೆದ ಬಾಡದ ಶ್ರೀಕಾಂಚಿಕಾ ಪರಮೇಶ್ವರಿ ದೇವಿಯ ರಥೋತ್ಸವ

ಕುಮಟಾ;ಉತ್ತರ ಕನ್ನಡ ಜಿಲ್ಲೆಯ ಹೆಸರುವಾಸಿ ಜಾತ್ರೆಗಳಲ್ಲೊಂದಾದ ಬಾಡದ ಶ್ರೀಕಾಂಚಿಕಾ ಪರಮೇಶ್ವರಿ ದೇವಿಯ ರಥೋತ್ಸವು ಶನಿವಾರ ನಡೆಯಿತು. ಇದು ಪ್ರತಿವರ್ಷ ಚೈತ್ರ ಶುದ್ಧ ಹುಣ್ಣಿಮೆ ದಿನದಂದು ನಡೆಯುತ್ತದೆ.ಕೊರೊನಾ ಕಾರಣದಿಂದ ಕಳೆದ ಎರಡು ವರ್ಷದಿಂದ ರಥೋತ್ಸವ ಸ್ಥಗಿತವಾಗಿತ್ತು.ಈ ವರ್ಷ ಯಾವುದೇ ಆತಂಕವಿಲ್ಲದೆ ರಥೋತ್ಸವ ಅದ್ಧೂರಿಯಾಗಿ ಸಂಪನ್ನವಾಯಿತು. ಸಾವಿರಾರು ಜನರು ರಥೋತ್ಸವದಲ್ಲಿ ಭಾಗವಹಿಸಿ ಶ್ರೀದೇವಿಗೆ ವಿವಿಧ ಹರಕೆ ಪೂಜೆಯನ್ನು ನೆರವೇರಿಸಿದರು. … Continued

ಕುಮಟಾ: ನಾಳೆ ಲಯನ್ಸ್ ರೇವಣಕರ್ ಕಣ್ಣಿನ ಆಸ್ಪತ್ರೆ ವಿಸ್ತೃತ ಕಟ್ಟಡ -ಆಧುನಿಕ ಸೌಲಭ್ಯಗಳ ಉದ್ಘಾಟನೆ, ಆರೋಗ್ಯ ಸಚಿವ ಡಾ.ಸುಧಾಕರ ಭಾಗಿ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಬಗ್ಗೋಣ ರಸ್ತೆ ವಿದ್ಯಾಗಿರಿಯಲ್ಲಿರುವ ಲಯನ್ಸ್ ರೇವಣಕರ ಚಾರಿಟೇಬಲ್ ಕಣ್ಣಿನ ಆಸ್ಪತ್ರೆ ವಿಸ್ತ್ರತ ಕಟ್ಟಡದ ಉದ್ಘಾಟನಾ ಸಮಾರಂಭ ಏಪ್ರಿಲ್‌ ೧೦ರಂದು ಸಂಜೆ ೪:೩೦ ಘಂಟೆಗೆ ನಡೆಯಲಿದ್ದು, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ ಹಾಗೂ ಲಯನ್ಸ್ ಅಂತರಾಷ್ಟ್ರೀಯದ ಮಾಜಿ ನಿರ್ದೇಶಕರಾದ ಕೆ. ವಂಶೀಧರ ಬಾಬು ಉದ್ಘಾಟಿಸಲಿದ್ದಾರೆ. ಕುಮಟಾದ … Continued

ಕುಮಟಾ: ಗ್ಯಾಸ್ ಟ್ಯಾಂಕರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ಸಮೀಪದ ಹೊನ್ಮಾವ್ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಒಂದು ಪಲ್ಟಿಯಾಗಿದ್ದು, ಸಮೀಪದ ಶಾಲೆಗಳಿಗೆ ರಜೆ ನೀಡಲಾಗಿದೆ. ಗ್ಯಾಸ್‌ ಟ್ಯಾಂಕರ್‌ ಲಾರಿಯಿಂದ ಪ್ರತ್ಯೇಕಗೊಂಡು ಕೆಳಗೆ ಉರುಳಿದೆ. ನಿಂದ ಸ್ವಲ್ಪಪ್ರಮಾಣದಲ್ಲಿ ಅನಿಲ ಸೋರಿಕೆಯಾಗುತ್ತಿರುವುದರಿಂದ ಅದರ ವಾಸನೆ ಕಿಮೀಗೂ ದೂರದ ವರೆಗೆ ವ್ಯಾಪಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. … Continued

ಕುಮಟಾ: ನಾಗೇಶ ಭಟ್ಟರ ಮುಕ್ತಾಯ ಕಥಾಸಂಕಲನ ಲೋಕಾರ್ಪಣೆ

ಕುಮಟಾ: ಭಾರತೀಯ ದೂರ ಸಂಚಾರ ನಿಗಮ(ಬಿಎಸ್ಎನ್ಎಲ್)ದ ನಿವೃತ್ತ ಉದ್ಯೋಗಿಗಳಾದ ನಾಗೇಶ ಭಟ್ಟ ಅವರು ಬರೆದ ‘ಮುಕ್ತಾಯ’ ಕಥಾಸಂಕಲನ ಲೋಕಾರ್ಪಣೆಗೊಂಡಿತು. ಇದು ಹತ್ತು ಚಿಕ್ಕ ಕಥೆಗಳ ಸಂಕಲನವಾಗಿದೆ. ಖ್ಯಾತ ಸಾಹಿತಿ ಶ್ರೀಧರ ಬಳಿಗಾರ ಅವರು ಪುಸ್ತಕವನ್ನು ಲೋಕಾರ್ಪಣೆಗೊಳಿಸಿದರು. ಹೊನ್ನಾವರದ ನಾಗರಿಕ ಪತ್ರಿಕೆಯ ಸಂಪಾದಕ ಹಾಗೂ ಸರಸ್ವತಿ ಪ್ರಕಾಶನದ ಪ್ರಕಾಶಕ ಕೃಷ್ಣಮೂರ್ತಿ ಹೆಬ್ಬಾರರು ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ಗಜಾನನ … Continued

ಕೂಜಳ್ಳಿಯಲ್ಲಿ ನಡೆದ ಪಂ.ಷಡಕ್ಷರಿ ಗವಾಯಿಗಳ ಪುಣ್ಯಸ್ಮರಣೆ ಕಾರ್ಯಕ್ರಮ

ಕುಮಟಾ: ಸಂಗೀತ ಕೇವಲ ಮನಸ್ಸಿಗೆ ನೆಮ್ಮದಿಯನ್ನಷ್ಟೇ ನೀಡುವುದಿಲ್ಲ, ಜೊತೆಗೆ ಮಹಾದಾನಂದವನ್ನೂ ನೀಡುತ್ತದೆ ಎಂದು ಎಂಟಿಎನ್ಎಲ್ ನಿವೃತ್ತ ಜಿಡಿಎಂ ರಮೇಶ ಎಸ್. ಹೆಗಡೆ ಹೇಳಿದರು. ಪಂ.ಷಡಕ್ಷರಿ ಗವಾಯಿ ಅಕಾಡೆಮಿ ವತಿಯಿಂದ ಕುಮಟಾ ತಾಲೂಕಿನ ಕೂಜಳ್ಳಿ ಕುಳಿಹಕ್ಕಲ ಶ್ರೀ ಶಾಂತಿಕಾ ಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ನಡೆದ ಪಂ. ಷಡಕ್ಷರಿ ಗವಾಯಿಗಳ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಂಗೀತ ಆಸ್ವಾದನೆಯೂ ಒಂದು … Continued