ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಅನಂತಕುಮಾರ ಹೆಗಡೆ ಬಳಸಿದ ಭಾಷೆ ಶೋಭೆ ತರುವಂಥದ್ದಲ್ಲ : ಹೈಕೋರ್ಟ್‌ ಅಸಮಾಧಾನ

ಬೆಂಗಳೂರು : “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಅವರು ಬಳಕೆ ಮಾಡಿರುವ ಭಾಷೆ ಶೋಭೆ ತರುವಂಥದ್ದಲ್ಲ. ಭಾಷೆ ಬಳಕೆ ಮೇಲೆ ನಿಯಂತ್ರಣ ಇರಬೇಕು ಎಂಬುದನ್ನು ನಿಮ್ಮ ಕ್ಷಕಿದಾರರಿಗೆ ಹೇಳಿ” ಎಂದು ಹೈಕೋರ್ಟ್‌ ಶುಕ್ರವಾರ ಮೌಖಿಕವಾಗಿ ಎಚ್ಚರಿಕೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಮಮಂದಿರ ವಿಚಾರದ ಕುರಿತು ಆಕ್ಷೇಪಾರ್ಹ ಹೇಳಿಕೆ … Continued

ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಫೆ.೧೬ರ ಬಜೆಟ್‌ ನಲ್ಲೇ ಹಣ ನೀಡಿ : ಪಾದಯಾತ್ರೆಯಲ್ಲಿ ಸಾಗಿ ಸಚಿವರಿಗೆ ಮನವಿ ನೀಡಿ ಅನಂತಮೂರ್ತಿ ಹೆಗಡೆ ಒತ್ತಾಯ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅತ್ಯಗತ್ಯವಾದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಅತಿ ಶೀಘ್ರದಲ್ಲಿ ಆರಂಭಿಸಬೇಕು, ಆಸ್ಪತ್ರೆ ನಿರ್ಮಾಣಕ್ಕೆ ಈ ವರ್ಷದ ಬಜೆಟ್‌ನಲ್ಲಿ ಹಣ ಮೀಸಲಿಡಬೇಕು ಎಂದು ಆಗ್ರಹಿಸಿ ಕುಮಟಾದಿಂದ ಭಟ್ಕಳದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರ ಕಚೇರಿ ವರೆಗೆ ಮೂರು ದಿನಗಳ ಕಾಲ ಪಾದಯಾತ್ರೆ ನಡೆಸಿದ ಸಾಮಾಜಿಕ ಹೋರಾಟಗಾರ ಬುಧವಾರ ಸಚಿವರಿಗೆ ಮನವಿ … Continued

ಬಜೆಟ್‌ ಅಧಿವೇಶನದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಹಣ ಬಿಡುಗಡೆ ಮಾಡದಿದ್ರೆ ಉಸ್ತುವಾರಿ ಸಚಿವರ ಕಚೇರಿ ಮುಂದೆಯೇ ಆಮರಣಾಂತ ಉಪವಾಸ : ಸರ್ಕಾರಕ್ಕೆ ಅನಂತಮೂರ್ತಿ ಹೆಗಡೆ ಎಚ್ಚರಿಕೆ

 ಕುಮಟಾ : ಭೌಗೋಳಿಕ ಪರಿಸ್ಥಿತಿ ಹಾಗೂ ಜಿಲ್ಲೆಯ ವಿಸ್ತಾರ ಗಮನಿಸಿದರೆ ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ತುರ್ತು ಅಗತ್ಯವಿದ್ದು, ಒಂದು ವೇಳೆ ಫೆಬ್ರವರಿ ೧೬ರಿಂದ ನಡೆಯುವ ಬಜೆಟ್ ಅಧಿವೇಶನದಲ್ಲಿ ನಮ್ಮ ಜಿಲ್ಲೆಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಹಣ ಬಿಡುಗಡೆ ಮಾಡದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯರ ಕಚೇರಿ ಮುಂದೆ ಕುಳಿತು ಆಮರಣಾಂತ … Continued

ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ : ನನ್ನ ಹೋರಾಟ ಜಿಲ್ಲೆಯ ಲಕ್ಷಾಂತರ ಜನರ ಹಕ್ಕೊತ್ತಾಯದ ಧ್ವನಿ- ಅನಂತಮೂರ್ತಿ ಹೆಗಡೆ

ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆಗಬೇಕು ಎಂದು ನಾನು ಮಾಡುತ್ತಿರುವ ಹೋರಾಟದಲ್ಲಿ ಲಕ್ಷಾಂತರ ಜನರ ಒಳಿತು ಹಾಗೂ ಹಿತಾಸಕ್ತಿ ಅಡಗಿದೆ. ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣವಾಗಬೇಕು ಎಂಬುದು ಈ ಜಿಲ್ಲೆಯ ಜನರ ಭಾವನೆ ಹಾಗೂ ಬಹುದಿನಗಳ ಬೇಡಿಕೆ. ಜನರ ಭಾವನೆಯ ಪ್ರತೀಕವಾಗಿಯೇ ನಾನು ಹೋರಾಟ ಮಾಡುತ್ತಿದ್ದೇನೆಯೇ ಹೊರತು ಇದರಲ್ಲಿ ಉಳಿದ ಯಾವುದೇ … Continued

ಕುಮಟಾ : ಹೆಗಲೆಯಲ್ಲಿ ಐದು ದಿನಗಳ ಕಾಲ ನಡೆದ ಅಪರೂಪದ ‘ಅಯುತ ಚಂಡಿಕಾ ಮಹಾಯಾಗ (ದಶಸಹಸ್ರ ಚಂಡಿಕಾ ಯಾಗ) ಸಂಪನ್ನ

ಕುಮಟಾ : ಭಾರತ ದೇಶದ ಇತಿಹಾಸದಲ್ಲೇ ಬೆರಳೆಣಿಕೆಯಷ್ಟು ಬಾರಿ ನಡೆದಿರುವ ಹಾಗೂ ಅಪರೂಪದಲ್ಲಿ ಅಪರೂಪ ಎನ್ನಬಹುದಾದ ‘ಅಯುತ ಚಂಡಿಕಾ ಮಹಾಯಾಗ (ದಶಸಹಸ್ರ ಚಂಡಿಕಾ ಯಾಗ)’ವು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೆಗಲೆಯ ಶ್ರೀ ದುರ್ಗಾಪರಮೇಶ್ವರೀ ದೇವಾಲಯದಲ್ಲಿ ಭಾನುವಾರ ಸಂಪನ್ನಗೊಂಡಿದೆ. ಜನವರಿ ೨೪ರಿಂದ ಜನವರಿ ೨೮ರ ಭಾನುವಾರದ ವರೆಗೆ ನಡೆದ ‘ಅಯುತ ಚಂಡಿಕಾ ಮಹಾಯಾಗ’ವನ್ನು ಒಂದೇ … Continued

ಕುಮಟಾ: ವಿನಾಯಕ ರೆಕ್ಸಿನ್ ಹೌಸ್ ನೂತನ ಕಟ್ಟಡ ಉದ್ಘಾಟಿಸಿದ ರಾಘವೇಶ್ವರ ಶ್ರೀಗಳು-ಶುಭ ಹಾರೈಕೆ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ  ಕುಮಟಾದ ರೈಲ್ವೆ ನಿಲ್ದಾಣದ ಸಮೀಪದ ನೂತನ ಕಟ್ಟಡದಲ್ಲಿ ವಿನಾಯಕ ರೆಕ್ಸಿನ್ ಹೌಸ್ ನೂತನ ಮಳಿಗೆಯನ್ನು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಉದ್ಘಾಟಿಸಿದರು. ನೂತನ ಕಟ್ಟಡ ಅನಾವರಣಗೊಳಿಸಿದರು. ಇದೇ ವೇಳೆ ಶ್ರೀಗಳ ಶ್ರೀಪಾದುಕಾ ಪೂಜೆ ಮತ್ತು ಭಿಕ್ಷಾಸೇವೆ ಸಹ ನಡೆಯಿತು. ವಿನಾಯಕ ಹೆಗಡೆ ಕಟ್ಟೆ ದಂಪತಿ … Continued

ಕುಮಟಾ: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಸಂಭ್ರಮ, ಕಡ್ಲೆ ಕಡಲತೀರದ ಮರಳಿನಲ್ಲಿ ಮೂಡಿದ ಶ್ರೀರಾಮ…

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಅರಬ್ಬಿ ಸಮುದ್ರದ ಕಡ್ಲೆಯ ತೀರದ ಮರಳಿನಲ್ಲಿ ವಿನಾಯಕ ಆಚಾರಿ ಎಂಬವರು ಶ್ರೀರಾಮನನ್ನು ಅರಳಿಸಿದ್ದಾರೆ. ಅಯೋಧ್ಯೆಯಲ್ಲಿ ಜನವರಿ 22ರಂದು ಸೋಮವಾರ ಬಾಲರಾಮನ ಮೂರ್ತಿಯ ಪ್ರತಿಷ್ಠಾಪನೆ ನಿಮಿತ್ತ ದೇಶಾದ್ಯಂತ ಸಂಭ್ರಮ ಮನೆ ಮಾಡಿದೆ. ಕಡ್ಲೆಯ ಜಟ್ಟಿ ಆಚಾರಿ ಕುಟುಂಬದ ವಿನಾಯಕ ಆಚಾರಿ ಸಮುದ್ರ ತೀರಕ್ಕೆ ಬಂದಾಗ ಮುಸ್ಸಂಜೆ ಹೊತ್ತಲ್ಲಿ … Continued

ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಪ್ರಕರಣ ದಾಖಲು

ಕಾರವಾರ: ಉತ್ತರ ಕನ್ನಡ ‌ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಕುಮಟಾ ಪೊಲೀಸರು ಸ್ವಯಂ ಪ್ರೇರಿತ (ಸುಮೋಟೋ) ಪ್ರಕರಣ ದಾಖಲಿಸಿದ್ದಾರೆ. ದ್ವೇಷ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸಂಸದ ಅನಂತಕುಮಾರ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲು ಮಾಡಲಾಗಿದೆ. ಐಪಿಸಿ ಸೆಕ್ಷನ್ 505 ಹಾಗೂ 153 (ಶಾಂತಿ ಕದಡಲು ಪ್ರಚೋದನೆ) ಅಡಿಯಲ್ಲಿ ಪೊಲೀಸರು ಪ್ರಕರಣ … Continued

ಮತ್ತೆ ವಿವಾದಕ್ಕೆ ಕಾರಣವಾದ ಅನಂತಕುಮಾರ ಹೆಗಡೆ ಹೇಳಿಕೆ : ಸಿದ್ದರಾಮಯ್ಯಗೆ ಏಕವಚನದಲ್ಲಿ ವಾಗ್ದಾಳಿ

ಕುಮಟಾ : ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಹೇಳಿಕೆ ನೀಡಿರುವುದು ಮತ್ತೆ ವಿವಾದಕ್ಕೆ ಕಾರಣವಾಗಿದೆ. ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಏಕವಚನದಲ್ಲಿಯೇ ಸಂಬೋಧಿಸಿ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಭಟ್ಕಳ, ಶಿರಸಿ ಹಾಗೂ ಶ್ರೀರಂಗಪಟ್ಟಣದಲ್ಲಿರುವ ಮಸೀದಿಗಳು ಈ ಹಿಂದೆ ದೇವಸ್ಥಾನಗಳೇ ಆಗಿದ್ದವು ಎಂದು ಅವರು ಹೇಳಿಕೆ … Continued

ನನಗೆ ನೀಡಿದ ʼಪಂ.ಷಡಕ್ಷರಿ ಪ್ರಶಸ್ತಿʼ ಹಾರ್ಮೋನಿಯಂಗೆ ಸಂದ ಸನ್ಮಾನ : ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಂ.ವಿಶ್ವನಾಥ ಕಾನ್ಹರೆ

ಕುಮಟಾ: ಪಂ. ಷಡಕ್ಷರಿ ಗವಾಯಿ ರಾಷ್ಟ್ರೀಯ ಪ್ರಶಸ್ತಿ ಇದು ಹಾರ್ಮೋನಿಯಂಗೆ ಸಂದ ಸನ್ಮಾನ ಎಂದು ನಾನು ಭಾವಿಸುತ್ತೇನೆ. ಹಾರ್ಮೋನಿಯಂ ಅನ್ನು ಒಂದು ಸ್ವತಂತ್ರ ವಾದ್ಯ ಎಂದು ಪರಿಗಣಿಸಿ ಈ ಪ್ರಶಸ್ತಿ ನೀಡಿರುವುದು ನನಗೆ ಖುಷಿ ತಂದಿದೆ ಎಂದು ಖ್ಯಾತ ಹಾರ್ಮೊನಿಯಂ ವಾದಕ ಪಂ. ವಿಶ್ವನಾಥ ಕಾನ್ಹರೆ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿ … Continued