ಕುಮಟಾ | ಗಣೇಶ ವಿಸರ್ಜನೆ ವೇಳೆ ಡಿಜೆ ಬಳಕೆಗೆ ವಿರೋಧ; ವ್ಯಕ್ತಿ ಮೇಲೆ ಹಲ್ಲೆ

ಕುಮಟಾ: ಪಟ್ಟಣದ ಹಳೆ ಬಸ್ ನಿಲ್ದಾಣದ ರಸ್ತೆಯಲ್ಲಿ ಬುಧವಾರ ಗಣೇಶ ವಿಸರ್ಜನೆ ವೇಳೆ ಸುಪ್ರೀಂ ಕೋರ್ಟ್ ಹಾಗೂ ಸರ್ಕಾರದ ಆದೇಶವನ್ನು ಲೆಕ್ಕಿಸದೇ ಡಿಜೆ ಬಳಕೆ ಮಾಡಿದ ಕಾರಣಕ್ಕೆ ಆಕ್ಷೇಪಿಸಿದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಡಿಜೆ ಬಳಕೆ … Continued

ಅಮೆರಿಕ ವೇದಿಕ್ ವೆಲ್ನೆಸ್ ವಿವಿ ವೈಬ್ರನ್ಸ್ 2025 ಟ್ಯಾಲೆಂಟ್‌ ಸ್ಪರ್ಧೆ : ಕುಮಟಾದ ಅದಿತಿ ಶಾನಭಾಗ ಕರ್ನಾಟಕಕ್ಕೆ ದ್ವಿತೀಯ

ಕುಮಟಾ : ಅಮೆರಿಕದ ಫ್ಲೋರಿಡಾದ ವೇದಿಕ್ ವೆಲ್ನೆಸ್ ವಿಶ್ವವಿದ್ಯಾಲಯ (ವಿಡಬ್ಲ್ಯೂಯು) ಆಯೋಜಿಸಿದ್ದ ಭಾರತೀಯ ಕಲೆ, ಸಂಗೀತದ ಟ್ಯಾಲೆಂಟ್‌ ಶೋ‌ ಸ್ಪರ್ಧೆ ವೈಬ್ರನ್ಸ್ 2025 ಸ್ಪರ್ಧೆಯಲ್ಲಿ ಕುಮಟಾದ ಅದಿತಿ ಶಾನಭಾಗ ಕರ್ನಾಟಕಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾಳೆ. ಫ್ಲೋರಿಡಾದ ವೇದಿಕ್ ವೆಲ್ನೆಸ್ ವಿಶ್ವವಿದ್ಯಾಲಯ ಆಯೋಜಿಸುವ ವೈಬ್ರನ್ಸ್ ಹೆಸರಿನ ಭಾರತೀಯ ಶಾಸ್ತ್ರೀಯ ಸಂಗೀತ ಹಾಗೂ ನೃತ್ಯ ಸೇರಿದಂತೆ ವಿವಿಧ ಪ್ರಕಾರಗಳಲ್ಲಿ … Continued

ವೀಡಿಯೊ..| ಶಿರಸಿ-ಕುಮಟಾ ಹೆದ್ದಾರಿಯ ದೇವಿಮನೆ ಘಟ್ಟದ ದೇವಸ್ಥಾನದ ಬಳಿ ಭೂ ಕುಸಿತ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ ಹೆದ್ದಾರಿಯ ದೇವಿಮನೆ ಘಟ್ಟದ ದೇವಸ್ಥಾನದ ಬಳಿ  ಭಾನುವಾರ ಭೂ ಕುಸಿತ ಉಂಟಾಗಿದೆ ಎಂದು ವರದಿಯಾಗಿದೆ. ನಿರಂತರವಾಗಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಭೂ ಕುಸಿತವಾಗಿದೆ. ದೇವಿ ಮನೆಯ ಕ್ಷೇತ್ರ ಪಾಲೇಶ್ವರ ದೇವಸ್ಥಾನಕ್ಕೆ ಇಳಿಯುವ ಮೆಟ್ಟಿಲುಗಳಿಗೆ ಸಮೀಪದಲ್ಲಿ ಭೂ ಕುಸಿತ ಉಂಟಾಗಿದೆ. ದೇವಸ್ಥಾನದ ಮೆಟ್ಟಿಲುಗಳಿಂದ ಸುಮಾರು 20-25 ಅಡಿಗಳಷ್ಟು ದೂರದಲ್ಲಿ ಭೂ … Continued

ಕುಮಟಾ : ಜುಲೈ 27ರಂದು ಗುರು ವಂದನೆ ಸಂಗೀತ ಕಾರ್ಯಕ್ರಮ

ಕುಮಟಾ : ಗುರು ಪೂರ್ಣಿಮೆ ಅಂಗವಾಗಿ ಪಂಡಿತ ಷಡಕ್ಷರಿ ಗವಾಯಿ ಅಕಾಡೆಮಿ ಕೂಳ್ಳಿ ವತಿಯಿಂದ ಗುರು ವಂದನೆ ಸಂಗೀತ ಕಾರ್ಯಕ್ರಮವನ್ನು ಕುಮಟಾದ ಗಿಬ್‌ ಹೈಸ್ಕೂಲಿನ ಆರ್‌.ಪಿ.ಸಭಾಂಗಣದಲ್ಲಿ ಜುಲೈ 27ರಂದು ಮಧ್ಯಾಹ್ನ 3ರಿಂದ ಆಯೋಜಿಸಲಾಗಿದೆ. ಹಲವಾರು ಉದ್ಯೋನ್ಮುಖ ಕಲಾವಿದರು ಸಂಗೀತ ಕಾರ್ಯಕ್ರಮ ನೀಡಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಗೌರೀಶ ಯಾಜಿ ಶಿಷ್ಯವೃಂದ ಮತ್ತು ಕುಮಟಾದ … Continued

ಕುಮಟಾ | ಹಿಂದೂಸ್ತಾನಿ ಗಾಯನ ; ಕೇಂದ್ರ ಸರ್ಕಾರದ ವಿದ್ಯಾರ್ಥಿ ವೇತನಕ್ಕೆ ರಿಷಾ ನಾಯಕ ಆಯ್ಕೆ

ಕುಮಟಾ : ಚಿಕ್ಕ ಪ್ರತಿಭಾವಂತ ಮಕ್ಕಳಿಗೆ ನೀಡುವ ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾದ ಸಾಂಸ್ಕೃತಿಕ ಸಂಪನ್ಮೂಲ ಮತ್ತು ತರಬೇತಿ ಕೇಂದ್ರ (CCRT)ದ ಸಾಂಸ್ಕೃತಿಕ ಪ್ರತಿಭಾ ಶೋಧ ವಿದ್ಯಾರ್ಥಿ ವೇತನಕ್ಕೆ (Cultural Talent Search Scholarship) ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಐದನೇ ತರಗತಿಯ ವಿದ್ಯಾರ್ಥಿನಿ ರಿಷಾ ನಾಯಕ ಆಯ್ಕೆಯಾಗಿದ್ದಾಳೆ. ರಿಷಾ ನಾಯಕ ಕಳೆದ … Continued

ಗೋಕರ್ಣ ಗುಹೆಯಲ್ಲಿದ್ದ ರಷ್ಯಾ ಮಹಿಳೆ ಗೋವಾ ಗುಹೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಳು ! ತಾನೇ ಹೆರಿಗೆ ಮಾಡಿಕೊಂಡಿದ್ದಳು..!! ಮಕ್ಕಳ ತಂದೆ ಇಸ್ರೇಲಿ ಉದ್ಯಮಿ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ಗುಹೆಯೊಳಗೆ ವಾಸಿಸುತ್ತಿದ್ದ ರಷ್ಯಾದ ಮಹಿಳೆ ನೀನಾ ಕುಟಿನಾ, ಗೋವಾದ ಗುಹೆಯಲ್ಲಿದ್ದಾಗ ಒಬ್ಬ ಮಗಳಿಗೆ ಜನ್ಮ ನೀಡಿರುವುದಾಗಿ ಹೇಳಿಕೊಂಡಿದ್ದು, ಇಸ್ರೇಲಿ ಉದ್ಯಮಿಯೊಬ್ಬರು ಈ ಇಬ್ಬರು ಮಕ್ಕಳ ತಂದೆ ಹೇಳಿದ್ದಾರೆ ಎಂದು ವರದಿಯೊಂದು ತಿಳಿಸಿದೆ. ನೀನಾ ಕುಟಿನಾ (40) ಮತ್ತು ಆರು ಮತ್ತು ನಾಲ್ಕು ವರ್ಷ ವಯಸ್ಸಿನ … Continued

ವೀಡಿಯೊ…| ಗೋಕರ್ಣ ರಾಮತೀರ್ಥ ಗುಡ್ಡದ ಮೇಲಿನ ಗುಹೆಯಲ್ಲಿ ಉಳಿದುಕೊಂಡಿದ್ದ ವಿದೇಶಿ ಮಹಿಳೆ-ಇಬ್ಬರು ಪುಟ್ಟ ಮಕ್ಕಳ ರಕ್ಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ರಾಮತೀರ್ಥ ಗುಡ್ಡದ ಮೇಲಿನ ಅಪಾಯಕಾರಿ ಗುಹೆಯಲ್ಲಿ ಉಳಿದುಕೊಂಡಿದ್ದ ವಿದೇಶಿ ಮಹಿಳೆ ಹಾಗೂ ಅವರ ಇಬ್ಬರು ಚಿಕ್ಕ ಹೆಣ್ಣು ಮಕ್ಕಳನ್ನು ಪೊಲೀಸರು ರಕ್ಷಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಿದ್ದಾರೆ. ಗೋಕರ್ಣ ಪಿಎಸ್‌ಐ ಶ್ರೀಧರ ಎಸ್‌.ಆರ್‌. ಹಾಗೂ ಸಿಬ್ಬಂದಿ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಜುಲೈ 9ರಂದು ರಾಮತೀರ್ಥ ಗುಡ್ಡದ ಮೇಲೆ … Continued

ವೀಡಿಯೊ | ಕುಮಟಾ : ಸಮುದ್ರ ತೀರದಲ್ಲಿ ಬೃಹತ್‌ ತಿಮಿಂಗಿಲದ ಮೃತದೇಹ ಪತ್ತೆ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ವಕ್ಕನಳ್ಳಿ ಬಂದರಿನ ಸಮುದ್ರ ತೀರದಲ್ಲಿ ಬೃಹತ್‌ ಗಾತ್ರದ ತಿಮಿಂಗಿಲದ ಮೃತದೇಹ ಬುಧವಾರ ಪತ್ತೆಯಾಗಿದೆ. ಸುಮಾರು 40 ಅಡಿಗಳಷ್ಟು ಉದ್ದವಿರುವ ಈ ತಿಮಿಂಗಿಲವು ಸತ್ತು 10-15 ದಿನಗಳಾಗಿರಬಹುದು ಎಂದು ಅಂದಾಜಿಸಲಾಗಿದೆ. ತಿಮಿಂಗಿಲದ ಮೃತದೇಹವು ಬುಧವಾರ (ಜೂನ್‌ 15) ಸಮುದ್ರ ತೀರಕ್ಕೆ ಬಂದು ಬಿದ್ದಿದ್ದರೂ ಅದು ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದ್ದು, … Continued

ಶಿರಸಿ-ಕುಮಟಾ ರಸ್ತೆಯಲ್ಲಿ ರಾತ್ರಿ ಸಂಚಾರ ನಿಷೇಧ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ ರಸ್ತೆಯ ದೇವಿಮನೆ ಘಟ್ಟ ಪ್ರದೇಶದಲ್ಲಿ ಮೂರ್ನಾಲ್ಕು ದಿನಗಳ ಅವಧಿಯಲ್ಲಿ ಮೂರ್ನಾಲ್ಕು ಬಾರಿ ಗುಡ್ಡ ಕುಸಿತ ಉಂಟಾಗಿದೆ. ಬಹುತೇಕ ರಾತ್ರಿ ವೇಳೆಯೇ ಗುಡ್ಡ ಕುಸಿತ ಆಗುವುದನ್ನು ಪರಿಗಣಿಸಿ ಈ ಮಾರ್ಗವಾಗಿ ರಾತ್ರಿ ಸಂಚಾರ ನಿಷೇಧಿಸಲಾಗಿದೆ. ಈ ಮಾರ್ಗದ ರಸ್ತೆ ನಿರ್ಮಾಣ ಕಾರ್ಯ ನಡೆಯುತ್ತಿರುವುದರಿಂದ ಹಾಗೂ ಮತ್ತೆ ಕುಸಿಯುವ ಆತಂಕವಿರುವುದರಿಂದ … Continued

ಕುಮಟಾ | ವಕೀಲರ ಸಂಘದ ಮಾಜಿ ಅಧ್ಯಕ್ಷ ಆರ್.ಎ. ಹೆಗಡೆ ನಿಧನ

ಕುಮಟಾ : ಖ್ಯಾತ ವಕೀಲರಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆಯ ಆರ್.ಎ. ಹೆಗಡೆ (84)ಅಲ್ಪ ಕಾಲದ ಅನಾರೋಗ್ಯದಿಂದ ಮಂಗಳವಾರ ನಿಧನರಾದರು. ಆರ್.ಎ. ಹೆಗಡೆ ಅವರು ಅನೇಕ ವರ್ಷಗಳ ಕಾಲ ಮುಂಬೈ ನ್ಯಾಯಾಲಯದಲ್ಲಿ ವಕೀಲರಾಗಿ ಸೇವೆ ಸಲ್ಲಿಸಿ ನಂತರ ಕುಮಟಾ ನ್ಯಾಯಾಲಯದಲ್ಲಿ ಸುಧೀರ್ಗ ಕಾಲ ವಕೀಲರಾಗಿ, ಕುಮಟಾ ವಕೀಲರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. … Continued