ಕುಮಟಾ | ಟಾಟಾ ಎಐಎ ಲೈಫ್‌ ಇನ್ಸುರೆನ್ಸ್‌ ನಿಂದ ಸಂಕಲ್ಪ ಯಾತ್ರೆ

ಕುಮಟಾ : ಟಾಟಾ ಎಐಎ ಲೈಫ್‌ ಇನ್ಸುರೆನ್ಸ್‌ ಕಂಪನಿ ವತಿಯಿಂದ ಜೀವ ವಿಮೆ ಬಗ್ಗೆ ಅರಿವು ಮೂಡಿಸುವ ಸಂಕಲ್ಪ ಯಾತ್ರೆ ಪಟ್ಟಣದಲ್ಲಿ ಶನಿವಾರ (ಜ.೨೫) ನಡೆಯಿತು. ಇಲ್ಲಿನ ಮಹಾಸತಿ ದೇವಸ್ಥಾನದಿಂದ ಶನಿವಾರ ಬೆಳಿಗ್ಗೆ ೧೦ ಗಂಟೆಗೆ ಆರಂಭವಾದ ಪಾದಯಾತ್ರೆ ಚಂಡೆ-ವಾದ್ಯಗಳೊಂದಿಗೆ ನೆಲ್ಲಿಕೇರಿ ಮಾರ್ಗದ ಮೂಲಕ ರಥಬೀದಿ, ಸುಭಾಷ ರಸ್ತೆ, ಕೋರ್ಟ್‌ ರಸ್ತೆ ಮೂಲಕ ಸಾಗಿ ಟಾಟಾ … Continued

ಕುಮಟಾ | ಖ್ಯಾತ ವಿದ್ವಾಂಸ, ಡಾ. ಬಾಳಿಗಾ ಕಾಲೇಜಿನ ನಿವೃತ್ತ ಪ್ರಾಚಾರ್ಯ ಡಾ.ಹಂಪಿಹೊಳಿ ನಿಧನ

ಕುಮಟಾ : ಖ್ಯಾತ ಸಂಸ್ಕೃತ ವಿದ್ವಾಂಸ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಡಾ. ಎ. ವಿ. ಬಾಳಿಗಾ ಕಲಾ ಮತ್ತು ವಿಜ್ಞಾನ ಮಹಾ ವಿದ್ಯಾಲಯದ ನಿವೃತ್ತ ಪ್ರಾಚಾರ್ಯರಾದ ಡಾ. ವಿ. ಕೆ. ಹಂಪಿಹೊಳಿ (71) ಗುರುವಾರ ವಿಧಿವಶರಾಗಿದ್ದಾರೆ. ಮೂಲತಃ ಬೆಳಗಾವಿ ಜಿಲ್ಲೆಯ ರಾಮದುರ್ಗದ ತಾಲೂಕಿನ ಹಂಪಿಹೊಳಿಯವರಾದ ಅವರು ಕುಮಟಾದ ಕೆನರಾ ಸಂಸ್ಥೆಯ ಡಾ. ಎ.ವಿ.ಬಾಳಿಗಾ … Continued

ವೀಡಿಯೊ…| ಕುಮಟಾ: ಅಪರೂಪಕ್ಕೆ ಬಲೆಗೆ ಬಿದ್ದ ಬೃಹತ್‌ ಬಿಳಿ ತೊರ್ಕೆ ಮೀನು..!

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆ ಕಡ್ಲೆಯ ಅರಬ್ಬೀ ಸಮುದ್ರ ತೀರದಲ್ಲಿ ಅಪರೂಪದ ಬಿಳಿ ತೊರ್ಕೆ ಮೀನು ಬಲೆಯಲ್ಲಿ ಸಿಕ್ಕಿಬಿದ್ದಿದೆ. ಅಪರೂಪಕ್ಕೆ ಸಿಗುವ ಈ ಮೀನು ಅತ್ಯಂತ ಬಲಶಾಲಿಯಾಗಿರುತ್ತದೆ. ಬಲೆಗೆ ಬಿದ್ದ ಮೀನಿನ ತೂಕ ಅಂದಾಜು ೩೦-೩೫ ಕೆಜಿ ಇರಬಹುದು ಎಂದು ಮೀನುಗಾರರು ತಿಳಿಸಿದ್ದಾರೆ. ಇದು ಸಾಮಾನ್ಯ ಮೀನು ಬಲೆಯನ್ನು ಇದು … Continued

ಕೂಜಳ್ಳಿ : ಖ್ಯಾತ ಗಾಯಕ ಪಂ.ವಿನಾಯಕ ತೊರವಿಗೆ ‘ಷಡಕ್ಷರಿ’ ರಾಷ್ಟ್ರೀಯ ಪುರಸ್ಕಾರ ಪ್ರದಾನ

ಕುಮಟಾ: ಕೂಜಳ್ಳಿಯಲ್ಲಿ ನಡೆದ ಪಂಡಿತ ಷಡಕ್ಷರಿ ಗವಾಯಿ ಪುಣ್ಯ ಸ್ಮರಣೆ ಸಂಗೀತೋತ್ಸವ ಕಾರ್ಯಕ್ರಮದಲ್ಲಿ ಪಂ.ವಿನಾಯಕ ತೊರವಿ ಅವರಿಗೆ ಷಡಕ್ಷರಿ ರಾಷ್ಟ್ರೀಯ ಸಂಗೀತ ಪುರಸ್ಕಾರ ಪ್ರದಾನ ಮಾಡಲಾಯಿತು. ಷಡಕ್ಷರಿ ಗವಾಯಿ ಅಕಾಡೆಮಿ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯಲ್ಲಿ ಭಾನುವಾರ ಇಡೀದಿನ ಪುಣ್ಯಸ್ಮರಣೆ ಸಂಗೀತೋತ್ಸವ ಕಾರ್ಯಕ್ರಮ ನಡೆಯಿತು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪಂಡಿತ ವಿನಾಯಕ … Continued

ಕೂಜಳ್ಳಿಯಲ್ಲಿ ಡಿಸೆಂಬರ್‌ 29ರಂದು ಪಂ. ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಸಂಗೀತೋತ್ಸವ, ಪ್ರಶಸ್ತಿ ಪ್ರದಾನ

ಕುಮಟಾ: ಪಂಡಿತ ಷಡಕ್ಷರಿ ಗವಾಯಿ ಅಕಾಡೆಮಿ ವತಿಯಿಂದ ಪಂ. ಷಡಕ್ಷರಿ ಗವಾಯಿ ಪುಣ್ಯಸ್ಮರಣೆ-2024 ಸಂಗೀತೋತ್ಸವ ಹಾಗೂ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರ ಪ್ರದಾನ ಸಮಾರಂಭ ಡಿ. 29ರಂದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಕುಳಿಹಕ್ಕಲಿನ ಶ್ರೀ ಶಾಂತಿಕಾ ಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ. ಪಂ. ವಿನಾಯಕ ತೊರ್ವಿ ಅವರಿಗೆ ಈ ಬಾರಿ ಷಡಕ್ಷರಿ ರಾಷ್ಟ್ರೀಯ … Continued

ಶಿರಸಿ, ಕುಮಟಾ ತಾಲೂಕಿನ ಪಶ್ಚಿಮ ಘಟ್ಟದ ಭಾಗದಲ್ಲಿ ಭೂಕಂಪನದ ಅನುಭವ

ಕಾರವಾರ : ಉತ್ತರ ಕನ್ನಡ (Uttar Kannada) ಜಿಲ್ಲೆಯಲ್ಲಿ ಕೆಲವಡೆ ಭೂ ಕಂಪನದ ಅನುಭವವಾಗಿದೆ ಎಂದು ವರದಿಯಾಗಿದೆ. ಜಿಲ್ಲೆಯ ಶಿರಸಿ ಹಾಗೂ ಕುಮಟಾ ತಾಲೂಕಿನ ದೇವಿಮನೆ ಘಟ್ಟ ಪ್ರದೇಶದ ಸುತ್ತಮುತ್ತ ಭೂಕಂಪನದ ಅನುಭವವಾಗಿದೆ ಎಂದು ಹೇಳಲಾಗಿದೆ. ಮೂರ್ನಾಲ್ಕು ಸೆಕೆಂಡುಗಳ ಕಾಲ​ ಭೂಮಿ ಕಂಪಿಸಿದ ಅನುಭವಾಗಿದೆ ಎಂದು ಹೇಳಲಾಗಿದೆ. ಶಿರಸಿ (Sirasi) ತಾಲೂಕಿನ ರಾಗಿಹೊಸಳ್ಳಿ, ಕಸಗೆ, ಬಂಡಲದಲ್ಲಿ … Continued

ಡಿಸೆಂಬರ್ 2ರಿಂದ ಶಿರಸಿ-ಕುಮಟಾ ರಸ್ತೆಯಲ್ಲಿ ವಾಹನ ಸಂಚಾರ ಬಂದ್‌

ಕಾರವಾರ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ರಾಷ್ಟ್ರೀಯ ಹೆದ್ದಾರಿ-766 ಕುಮಟಾ-ಶಿರಸಿ ರಸ್ತೆ ಅಗಲೀಕರಣ ಕಾಮಗಾರಿಯ ಕಾರಣದಿಂದ ಡಿಸೆಂಬರ್ 2 ರಿಂದ ಫೆಬ್ರವರಿ 25ರ ವರೆಗೆ ವಾಹನ ಸಂಚಾರ ಬಂದ್ ಆಗಲಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ. ಕಾಮಗಾರಿಯನ್ನು ನಿಗದಿತ ಸಮಯದೊಳಗೆ ಪೂರ್ಣ ಮಾಡಬೇಕಾಗಿರುವುದರಿಂದ ಅಗಲೀಕರಣ ನಡೆದಿರುವ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಬಂದ್‌ ಮಾಡಿ ಬದಲಿ ಮಾರ್ಗದಲ್ಲಿ ಸಂಚರಿಸಲು … Continued

ವೀಡಿಯೊ…| ಕುಮಟಾ : ಬರ್ಗಿ ಬಳಿ ಬೃಹತ್‌ ಗಾತ್ರದ ಕಾಳಿಂಗ ಸರ್ಪ ಸೆರೆ

ಕುಮಟಾ : ಮನೆ ಆವರಣದ ಬಳಿಯೇ ಇದ್ದ ಮಾವಿನ ಗಿಡ ಏರಿ ಕುಳಿತು ಕೆಲಕಾಲ ಆತಂಕ ಉಂಟು ಮಾಡಿದ್ದ ಬೃಹತ್‌ ಕಾಳಿಂಗ ಸರ್ಪವನ್ನು ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ ಎಂದು ವರದಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬರ್ಗಿ ಗ್ರಾಮದ ಮನೆಯೊಂದರ ಆವರಣದಲ್ಲಿದ್ದ ಮಾವಿನ ಗಿಡದ ಏರಿದ್ದ ಬೃಹತ್‌ ಕಾಳಿಂಗ ಸರ್ಪವನ್ನು ಉರಗ ತಜ್ಞ ಅಶೋಕ … Continued

ವೀಡಿಯೊಗಳು..| ಕುಮಟಾ : ಹಣ್ಣೇಮಠದಲ್ಲಿ ಮನೆಗೇ ಬಂದ ಬೃಹತ್‌ ಹೆಬ್ಬಾವು…!

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹಣ್ಣೇಮಠದ ಸಂಕನ ಕೇರಿಯ ಗೋಪಾಲ ಪಟಗಾರ ಎನ್ನುವವರ ಮನೆಗೆ ಭಾನುವಾರ ಮುಂಜಾನೆ ಬಂದಿದ್ದ ಹೆಬ್ಬಾವನ್ನು ಸ್ಥಳೀಯ ಉರಗ ತಜ್ಞ ಪವನ ನಾಯ್ಕ ಅವರು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಹೆಬ್ಬಾವು ಸುಮಾರು 12-13 ಅಡಿ ಉದ್ದ ಇದೆ. ಭಾನುವಾರ ಮುಂಜಾನೆ ಈ ಹಾವು ಹಣ್ಣೇಮಠದ ಸಂಕನ … Continued

ಕುಮಟಾ | ಲಾರಿಯಲ್ಲಿ ಸಾಗಿಸುತ್ತಿದ್ದ 27 ಕೋಣಗಳ ರಕ್ಷಣೆ ; ನಾಲ್ವರ ಬಂಧನ

ಕುಮಟಾ : ಲಾರಿಯೊಂದರಲ್ಲಿ ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 27 ಕೋಣಗಳನ್ನು ಉತ್ತರ ಕನ್ನಡ ಜಿಲ್ಲೆಯ ಕುಮಟಾ ಎಪಿಎಂಸಿ ಬಳಿ ರಕ್ಷಣೆ ಮಾಡಿರುವ ಪೊಲೀಸರು ಈ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಮಹಾರಾಷ್ಟ್ರದ ಕೊಲ್ಲಾಪುರದಿಂದ ಕೇರಳದ ಕಸಾಯಿಖಾನೆಗೆ ಸಾಗಾಟ ಮಾಡಲಾಗುತ್ತಿತ್ತು ಎಂದು ಹೇಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ವಾಹವನ್ನು ನಿಲ್ಲಿಸಿ ತಪಾಸಣೆ ಮಾಡಿದಾಗ … Continued