ಕುಮಟಾ: ಚಿತ್ರಗಿ ಸರ್ಕಾರಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟನೆ

ಕುಮಟಾ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಮಹತ್ವ ನೀಡಿವೆ ಎಂದು ಕುಮಟಾ-ಹೊನ್ನಾವರ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಹೇಳಿದರು. ಚಿತ್ರಗಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಉಚಿತ ಕೋವಿಡ್‌ ಲಸಿಕೆ ನೀಡಿ … Continued

ಕುಮಟಾ: ಹಿರಿಯ ಕಾಂಗ್ರೆಸ್‌ ನಾಯಕ ಮೋಂಟಿ ಫರ್ನಾಂಡಿಸ್‌ ನಿಧನ

ಕುಮಟಾ: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಮಾಜಿ ಪ್ರಧಾನ ಕಾರ್ಯದರ್ಶಿ ಮೋಂಟಿ ಫಾರ್ನಾಂಡಿಸ್ ಗುರುವಾರ ನಿಧನರಾಗಿದ್ದಾರೆ. ಸರಳ ವ್ಯಕ್ತಿತ್ವದ ಅವರು ಕಾಂಗ್ರೆಸ್‌ ಪಕ್ಷದಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಎಲ್ಲ ಸಮುದಾಯದವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಅವರು ಪಕ್ಷಾತೀತವಾಗಿ ಉತ್ತಮ ಸಂಬಂಧಹೊಂದಿದ್ದರು. ಅವರು ಪತ್ನಿ ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ಕುಮಟಾದಲ್ಲಿ ಆನ್‌ಲೈನ್ ಷೇರು ಮಾರುಕಟ್ಟೆಯು ಆರಂಭ … Continued

ಕೂಜಳ್ಳಿ: ಮೂವರು ಸಂಗೀತ-ಯಕ್ಷ ಸಾಧಕರಿಗೆ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರ ಪ್ರದಾನ, ಷಡಕ್ಷರಿ ಗವಾಯಿಗಳ ಪುತ್ಥಳಿ ನಿರ್ಮಿಸಿ ಎಂದ ಪ್ರಶಸ್ತಿ ಪುರಸ್ಕೃತ ಪಂ.ಮರಡೂರ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯಲ್ಲಿ ಭಾನುವಾರ ಸಂಜೆ ನಡೆದ ಸಮಾರಂಭದಲ್ಲಿ ಷಡಕ್ಷರಿ ಗವಾಯಿ ಅಕಾಡೆಮಿ ವತಿಯಿಂದ ಪ್ರತಿವರ್ಷ ಕೊಡಮಾಡುವ ಮೂರು ವರ್ಷಗಳ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರವನ್ನು ಮೂವರು ಸಾಧಕರಿಗೆ ಪ್ರದಾನ ಮಾಡಲಾಯಿತು. ೨೦೨೦-೨೧, ೨೦೨೧-೨೨ ಹಾಗೂ ೨೦೨೨-೨೩ನೇ ಸಾಲಿನ ಪ್ರಶಸ್ತಿಯನ್ನು ಕ್ರಮವಾಗಿ ಖ್ಯಾತ ತಬಲಾ ವಾದಕ ಹೊನ್ನಾವರ ತಾಲೂಕಿನ ದಿವಂಗತ ಎನ್‌.ಎಸ್‌.ಹೆಗಡೆ … Continued

ಕುಮಟಾ: ಕೂಜಳ್ಳಿಯಲ್ಲಿ ಡಿಸೆಂಬರ್‌ 25ರಂದು ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಸಂಗೀತೋತ್ಸವ, ಮೂವರಿಗೆ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರ ಪ್ರದಾನ

ಕುಮಟಾ:ಪಂ. ಷಡಕ್ಷರಿ ಗವಾಯಿ ಅಕಾಡೆಮಿ ವತಿಯಿಂದ ಪಂ. ಷಡಕ್ಷರಿ ಗವಾಯಿಗಳ ಪುಣ್ಯಸ್ಮರಣೆ ಸಂಗೀತೋತ್ಸವ ಹಾಗೂ ಷಡಕ್ಷರಿ ಗವಾಯಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರ ಪ್ರದಾನ ಸಮಾರಂಭ ಡಿಸೆಂಬರ್‌ 25ರಂದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಕುಳಿಹಕ್ಕಲ ಶ್ರೀ ಶಾಂತಿಕಾ ಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ. ಡಿಸೆಂಬರ್‌ 25ರಂದು ಬೆಳಗ್ಗೆ 9 ಗಂಟೆಗೆ ಉದ್ಘಾಟನೆ ನಡೆಯಲಿದ್ದು, … Continued

ಕುಮಟಾ: ಗೋ ಗ್ರೀನ್‌ನಲ್ಲಿ ಹವ್ಯಕ ಸೇವಾ ಪ್ರತಿಷ್ಠಾನದ ಸಮಾವೇಶ: ತಮ್ಮತನ ಉಳಿಸಿಕೊಳ್ಳಲು ಸಂಘಟನೆ ಬೇಕು- ಕಾಗೇರಿ

ಕುಮಟಾ: ನಮ್ಮ ಬದುಕಿನ ಮಧ್ಯೆ ಬರುವ ಸಮಸ್ಯೆ ನಿವಾರಣೆಗೆ  ಹಾಗೂ ತಮ್ಮತನ ಉಳಿಸಿಕೊಳ್ಳಲು ಸಂಘಟನೆ ಬೇಕು ಎಂದು ವಿಧಾಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಬಡಗಣಿಯ ಗೊ ಗ್ರೀನ್ ಮೈದಾನದಲ್ಲಿ ನಡೆದ ಹವ್ಯಕ ಸೇವಾ ಪ್ರತಿಷ್ಠಾನ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರು ವ್ಯವಹಾರಿಕ ಜಂಜಾಟದಲ್ಲಿ ಇರುತ್ತಾರೆ. ಇದರ ಮಧ್ಯೆ … Continued

ಕುಮಟಾ: ಕುತೂಹಲಕ್ಕೆ ಕಾರಣವಾದ ಮುಸ್ಗುಪ್ಪೆ ಗ್ರಾಮದಲ್ಲಿ ಪತ್ತೆಯಾದ ಗುಹೆ..!

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರಿನ ಮುಸ್ಗುಪ್ಪೆ ಗ್ರಾಮದ ಬಳಿ ಗುಹೆಯೊಂದು ಪತ್ತೆಯಾಗಿದ್ದು, ಇದು ಸ್ಥಳೀಯರಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಕುಮಟಾ ತಾಲೂಕಿನ ಮೂರೂರು ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಮುಸ್ಗುಪ್ಪೆಯಲ್ಲಿ ರಸ್ತೆ ಬದಿಯಲ್ಲಿ ಮಣ್ಣು ತೆಗೆಯುತ್ತಿರುವಾಗ ಇದು ಕಂಡುಬಂದಿದೆ. ಇದು ಮಣ್ಣಿನ ಮಧ್ಯೆ ಪೊಳ್ಳು ಇರಬಹುದು ಎಂದು ಮಣ್ಣನ್ನು ತೆಗೆಯುತ್ತ ಹೋದಾಗ ಈ … Continued

ಕುಮಟಾ: ನಿವೃತ್ತ ತಹಶೀಲ್ದಾರ ಮೇಘರಾಜ ನಾಯ್ಕ ನಿಧನ

ಕುಮಟಾ: ನಗರದ ಪೋಸ್ಟಲ್ ಕಾಲೋನಿ ಸಮೀಪದ ನಿವಾಸಿ ನಿವೃತ್ತ ತಹಸೀಲ್ದಾರ ಮೇಘರಾಜ್ ನಾಯ್ಕ್ (62) ಗುರುವಾರ ಮುಂಜಾನೆ ನಿಧನರಾದರು. ಅವರು ಕುಮಟಾದಲ್ಲಿ ತಹಸೀಲ್ದಾರ ಆಗಿದ್ದಾಗ ನೆರೆ ಹಾವಳಿ ಹಾಗೂ ಕೊರೊನಾ ಸಾಂಕ್ರಾಮಿಕ ರೋಗದಿಂದ ಉದ್ಭವಿಸಿದ ಪರಿಸ್ಥಿತಿಯ ನಿರ್ವಹಣೆಯಲ್ಲಿ ಹಗಲು ರಾತ್ರಿ ಕೆಲಸ ಮಾಡಿದ್ದರು. ಮೂಲತಃ ಕುಮಟಾ ತಾಲೂಕಿನ ಕಾಗಾಲ ಗ್ರಾಮದವರಾಗಿದ್ದ ಮೇಘರಾಜ ನಾಯ್ಕ ಅವರು ವಿಧಾನ … Continued

ಕುಮಟಾ: ಕೂಜಳ್ಳಿಯಲ್ಲಿ ಹೆತ್ತ ತಾಯಿಯನ್ನೇ ಕೊಂದ ಮಗ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ತಾಲೂಕಿನ ಕೂಜಳ್ಳಿಯಲ್ಲಿ ಮಗನಿಂದಲೇ ತಾಯಿಯ ಹತ್ಯೆ ನಡೆದ ಘಟನೆ ನಡೆದಿದೆ. ಗೀತಾ ಭಟ್ಟ (64) ಎಂಬ ಮಹಿಳೆ ಮಗನಿಂದಲೇ ಕೊಲೆಯಾದ ದುರ್ದೈವಿಯಾಗಿದ್ದಾಳೆ. ಈ ಘಟನೆ ಕುಮಟಾ ತಾಲೂಕಿನ ಮೇಲಿನ ಕೂಜಳ್ಳಿಯ ಬಚ್ಕಂಡ ಎಂಬಲ್ಲಿ ನಡೆದಿದ್ದು, ಮಗ ಕುಡಿತದ ಚಟಕ್ಕೆ ದಾಸನಾಗಿದ್ದ ಎಂದು ತಿಳಿದು ಬಂದಿದ್ದು, ಇದೇ ಕಾರಣಕ್ಕೆ ತಾಯಿಯ … Continued

ಕುಮಟಾ: ಹೊಳೆಗದ್ದೆ ಶಾಂತಿಕಾ ಪರಮೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಡಿ.ಕೆ.ಶಿವಕುಮಾರ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಶಕ್ತಿ ಸ್ಥಳಗಳಲ್ಲೊಂದಾದ ಕುಮಟಾ ತಾಲೂಕಿನ ಹೊಳೆಗದ್ದೆ ಶ್ರೀ ಶಾಂತಿಕಾ ಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ದೇವಿಗೆ ಪೂಜೆ ಸಲ್ಲಿಸಿದರು. ಕುಮಟಾ ಕಾಂಗ್ರೆಸ್‌ ಸಮಾವೇಶಕ್ಕೆ ಆಗಮಿಸಿದ್ದ ವೇಳೆ ಹೊಳೆಗದ್ದೆ ಶಾಂತಿಕಾ ಪರಮೇಶ್ವರಿ ದೇವಾಲಯಕ್ಕೆ ಆಗಮಿಸಿದ ಅವರು ಪೂಜೆ ಸಲ್ಲಿಸಿ ಶ್ರೀ ದೇವಿಯ ಆಶೀರ್ವಾದ ಬೇಡಿದರು. ದೇವಾಲಯದ ಆಡಳಿತ … Continued

ಕುಮಟಾ: ಐವರು ಯಕ್ಷಗಾನ ಕಲಾವಿದರಿಗೆ ಕೆರೆಮನೆ ‘ಮಹಾಬಲ’ ‌ಪ್ರಶಸ್ತಿ ಪ್ರಕಟ

ಕುಮಟಾ: ಕುಮಟಾದ ಶ್ರೀ ಮಹಾಬಲ ಶೋಧ ಸಂಸ್ಥಾನಮ್ ವತಿಯಿಂದ ಕೊಡಮಾಡುವ ಯಕ್ಷಗಾನದ ಭೀಷ್ಮ ಎಂದೇ ಹೆಸರಾಗಿದ್ದ ಮೇರು ಕಲಾವಿದ ಡಾ. ಮಹಾಬಲ ಹೆಗಡೆ ಕೆರೆಮನೆ ಹೆಸರಿನ ಪ್ರಶಸ್ತಿಯನ್ನು‌ ಕಳೆದ‌ ಮೂರು ದಶಕಗಳಿಗೂ ಹೆಚ್ಚು ಕಾಲದಿಂದ ಅನವರತವಾಗಿ ಯಕ್ಷಗಾನ ಕಲಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಮುಮ್ಮೇಳದ ಮೂವರು ಹಿರಿಯ ಕಲಾವಿದರಿಗೆ ಹಾಗೂ ಹಿಮ್ಮೇಳದ ಇಬ್ಬರು ಹಿರಿಯ ಕಲಾವಿದರಿಗೆ … Continued