ಕುಮಟಾ : ಕಣ್ಣುಗಳನ್ನು ದಾನ ಮಾಡಿ ಸಾವಿನ ನಂತರವೂ ಸಾರ್ಥಕ್ಯದ ಕಾರ್ಯ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿ ಕೆಳಗಿನಕೇರಿ ಭಟ್ಟರಮನೆಯ ಅನಸೂಯ ಗಣಪತಿ ಹೆಗಡೆ (84) ಅವರು ಶುಕ್ರವಾರ (ಮೇ 17)ರಂದು ನಿಧನರಾಗಿದ್ದಾರೆ. ಅವರು ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲಿಯೂ ಸಾರ್ಥಕತೆಯ ಕಾರ್ಯ ಮಾಡಿದ್ದಾರೆ. ಅನಸೂಯ ಅವರು ವಯೋಸಹಜ ಕಾಯಿಲೆಯಿಂದ ಶುಕ್ರವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ನಿಧನರಾದರು. ಅವರು ಮರಣಾನಂತರದಲ್ಲಿ … Continued

ಕುಮಟಾ : ‘ರಜತ ಸಂಭ್ರಮ ಸೌರಭ’ ಕಾರ್ಯಕ್ರಮದಲ್ಲಿ ಪಂ.ಗಣಪತಿ ಭಟ್ಟ ಹಾಸಣಗಿಗೆ ʼಸೌರಭ ರಾಷ್ಟ್ರೀಯ ಸಮ್ಮಾನ್‌ʼ ಪ್ರದಾನ

ಕುಮಟಾ : ಸೌರಭ ಸಂಸ್ಥೆ ವತಿಯಿಂದ ಆಯೋಜಿಸಿದ್ದ ‘ರಜತ ಸಂಭ್ರಮ ಸೌರಭ’ ಕಾರ್ಯಕ್ರಮದಲ್ಲಿ ತಾನಸೇನ್ ಪ್ರಶಸ್ತಿ ಪುರಸ್ಕೃತ ಹಿಂದುಸ್ತಾನೀ ಗಾಯಕ ಪಂ. ಗಣಪತಿ ಭಟ್ಟ ಹಾಸಣಗಿ ಅವರಿಗೆ ʼಸೌರಭ ರಾಷ್ಟ್ರೀಯ ಸಮ್ಮಾನʼ ಪುರಸ್ಕಾರ ನೀಡಿ ಗೌರವಿಸಲಾಯಿತು. ‘ರಜತ ಸಂಭ್ರಮ ಸೌರಭ’ ಕಾರ್ಯಕ್ರಮದ ನಿಮಿತ್ತ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಹವ್ಯಕ ಸಭಾ ಭವನದಲ್ಲಿ ಭಾನುವಾರ ದಿನವಿಡೀ … Continued

ಕುಮಟಾ: ‘ಸೌರಭ’ಕ್ಕೆ ರಜತ ಸಂಭ್ರಮ, ಮೇ 12ರಂದು ಬೆಳಿಗ್ಗೆಯಿಂದ ರಾತ್ರಿ ವರೆಗೆ ಸಾಂಸ್ಕೃತಿಕ ಕಾರ್ಯಕ್ರಮ

 ಕುಮಟಾ : ಸಾಂಸ್ಕೃತಿಕ ಸಂಘಟನೆ ‘ಸೌರಭ’ವು ರಜತ ಸಂಭ್ರಮವನ್ನು ಆಚರಿಸಿಕೊಳ್ಳುತ್ತಿದ್ದು, ಈ ನಿಮಿತ್ತ ಮೇ 12ರಂದು ಬೆಳಿಗ್ಗೆ 7 ರಿಂದ ರಾತ್ರಿ 9ರ ವರೆಗೆ ಉತ್ತರ ಕನ್ನಡ ಜಿಲ್ಲೆಯ   ‘ರಜತ ಸಂಭ್ರಮ ಸೌರಭ’ ಕಾರ್ಯಕ್ರಮವನ್ನು ನಗರದ ಮೂರೂರು ರಸ್ತೆಯಲ್ಲಿರುವ ಹವ್ಯಕ ಸಭಾಭವನದಲ್ಲಿ ಹಮ್ಮಿಕೊಂಡಿದೆ. 12ರಂದು ಬೆಳಿಗ್ಗೆ 7 ಗಂಟೆಗೆ ‘ಉದಯರಾಗ ಸೌರಭ’ ಕಾರ್ಯಕ್ರಮದಲ್ಲಿ ಹಿಂದುಸ್ತಾನಿ ಗಾಯಕ … Continued

ಎಸ್.ಎಸ್.ಎಲ್.ಸಿ ಫಲಿತಾಂಶ : ಕುಮಟಾ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ಪ್ರೌಢಶಾಲೆ ನೂರಕ್ಕೆ ನೂರು ಫಲಿತಾಂಶ, ರಾಜ್ಯಮಟ್ಟದಲ್ಲಿ 7 ರ‍್ಯಾಂಕ್‌

 ಕುಮಟಾ : ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸಿ.ವಿ.ಎಸ್.ಕೆ ಪ್ರೌಢಶಾಲಾ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಶಾಲೆಗೆ ನೂರಕ್ಕೆ ನೂರು ಫಲಿತಾಂಶ ಬಂದಿದ್ದು, ರಾಜ್ಯಕ್ಕೆ ಏಳು ರ‍್ಯಾಂಕ್‌ ಗಳಿಸಿದ್ದಾರೆ. ಪರೀಕ್ಷೆ ಬರೆದ ಒಟ್ಟೂ 154 ವಿದ್ಯಾರ್ಥಿಗಳಲ್ಲಿ, 105 ಮಂದಿ ಡಿಸ್ಟಿಂಕ್ಷನ್‌, … Continued

ವೀಡಿಯೊಗಳು..| ಕುಮಟಾ : ಬಾಡದಲ್ಲಿ 26 ಗಂಟೆಗಳ ನಂತರ ಮನೆಗೆ ನುಗ್ಗಿದ್ದ ಚಿರತೆ ಬಂಧಿ ; ಅರವಳಿಕೆ ಚುಚ್ಚು ಮದ್ದು ನೀಡಿ ಸೆರೆ ಹಿಡಿದರು…

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬಾಡದ ಮಾದರಿ ರಸ್ತೆಯ ನಾಗರಾಜ ನಾಯ್ಕ ಎಂಬವರ ಮನೆಗೆ ಶುಕ್ರವಾರ ನುಗ್ಗಿದ್ದ ಚಿರತೆಯನ್ನು ಕೊನೆಗೆ ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ. ಕುಮಟಾ ತಾಲೂಕಿನ ಬಾಡದ ಮಾದರಿ ರಸ್ತೆಯಲ್ಲಿರುವ ನಾಗರಾಜ ನಾಯ್ಕ ಎಂಬವರ ಮನೆಗೆ ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಅವಧಿಯಲ್ಲಿ ಅವಿತಿದ್ದ ಚಿರತೆಯನ್ನು ಕೊನೆಗೂ ಅರವಳಿಕೆ … Continued

ಕುಮಟಾ : ಬಾಡದಲ್ಲಿ ಚಿರತೆ ದಾಳಿಗೆ ಇಬ್ಬರಿಗೆ ಗಾಯ ; ಮನೆಯೊಳಗೆ ನುಗ್ಗಿ ಅವಿತುಕೊಂಡ ಚಿರತೆ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬಾಡದ ಮಾದರಿ ರಸ್ತೆಯ ನಾಗರಾಜ ನಾಯ್ಕ ಎಂಬವರ ಮನೆಗೆ ಶುಕ್ರವಾರ ಚಿರತೆ ನುಗ್ಗಿದ್ದು, ಮನೆಯೊಳಗೆ ಅಡಗಿ ಕುಳಿತದೆ. ಅದು ಇಬ್ಬರ ಮೇಲೆ ದಾಳಿ ನಡೆಸಿದ್ದು, ಒಬ್ಬರಿಗೆ ಗಂಭೀರವಾದ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರ ಮದ್ಯಾಹ್ನ 4 ಗಂಟೆ ಸುಮಾರಿಗೆ ಬಾಡದ ಮಾದರಿ ರಸ್ತೆ ಬಳಿ … Continued

ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಬೆಂಗಳೂರು: ಬಡಗು ತಿಟ್ಟು ಯಕ್ಷಗಾನದ ಖ್ಯಾತ ಭಾಗವತ, ಅಪಾರ ಅಭಿಮಾನಿಗಳನ್ನು ಹೊಂದಿರುವ ಸುಬ್ರಹ್ಮಣ್ಯ ಧಾರೇಶ್ವರ 67ನೇ ವಯಸ್ಸಿನಲ್ಲಿ ಬೆಂಗಳೂರಿನಲ್ಲಿ ಗುರುವಾರ (ಏ.25) ಬೆಳಗ್ಗೆ ನಿಧನರಾಗಿದ್ದಾರೆ. ಬೆಂಗಳೂರಿನ ತಮ್ಮ ಪುತ್ರನ ಮನೆಯಲ್ಲಿದ್ದ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಬೆಳಗ್ಗೆ 4:30ರ ಸುಮಾರಿಗೆ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಅವರು, ಪತ್ನಿ, ಪುತ್ರ ಹವ್ಯಾಸಿ ಕಲಾವಿದ ಕಾರ್ತಿಕ್ ಹಾಗೂ ಪುತ್ರಿಯನ್ನು ಅಗಲಿದ್ದಾರೆ. … Continued

ಕುಮಟಾ : ನಿವೃತ್ತ ಮುಖ್ಯಾಧ್ಯಾಪಕ ಹೊಲನಗದ್ದೆ ಆರ್.ಎನ್.ಹೆಗಡೆ ನಿಧನ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆಯ ಆರ್.ಎನ್.ಹೆಗಡೆ (66) ಅವರು ಮಂಗಳವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ಆರ್.ಎನ್.ಹೆಗಡೆ ಅವರು ಪ್ರಾಥಮಿಕ ಶಾಲಾ ಮುಖ್ಯಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಸಮಾಜ ಕಾರ್ಯದಲ್ಲಿಯೂ ಗುರುತಿಸಿ ಕೊಂಡಿದ್ದ ಅವರು ಕಾಂಚಿಕಾಂಬಾ ಹವ್ಯಕ ವಲಯದ ಅಧ್ಯಕ್ಷರಾಗಿ ಸೇವೆಸಲ್ಲಿಸಿದ್ದರು. ಕುಮಟಾ ಕನ್ನಡ ಸಂಘದ ಸದಸ್ಯರಾಗಿದ್ದ ಅನೇಕ ಸಾಮಾಜಿಕ ಕಾರ್ಯದಲ್ಲಿ … Continued

ದ್ವಿತೀಯ ಪಿಯುಸಿ ಪರೀಕ್ಷೆ: ಕುಮಟಾ ಸರಸ್ವತಿ ಪಿಯು ಕಾಲೇಜು ಶೇ.100 ಫಲಿತಾಂಶ; ನಾಲ್ವರು ವಿದ್ಯಾರ್ಥಿಗಳಿಂದ ರಾಜ್ಯಮಟ್ಟದ ಸಾಧನೆ

ಕುಮಟಾ: ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜುಕೇಶನ್ ಟ್ರಸ್ಟ್ ನ ಬಿ. ಕೆ. ಭಂಡಾರಕರ್ಸ್‌ ಸರಸ್ವತಿ ಪದವಿಪೂರ್ವ ಕಾಲೇಜಿನ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು 2023-24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳಿಸಿ ರಾಜ್ಯ ಮಟ್ಟದಲ್ಲಿ ನಾಲ್ಕು ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಶ್ರಾವ್ಯ ಭಟ್ಟ 592 ಅಂಕಗಳಿಸಿ ರಾಜ್ಯ ಮಟ್ಟದಲ್ಲಿ … Continued

ದ್ವಿತೀಯ ಪಿಯು : ಕುಮಟಾ ಡಾ. ಬಾಳಿಗಾ ವಾಣಿಜ್ಯ ಕಾಲೇಜ್‌ ಫಲಿತಾಂಶ ಶೇ.92, ಅನನ್ಯ ಕಾಮತ್‌ (ಶೇ.98) ಪ್ರಥಮ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಡಾ. ಎ. ವಿ. ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದ ದ್ವಿತೀಯ ಪಿಯುಸಿ ಫಲಿತಾಂಶ ಶೇ.92 ಆಗಿದ್ದು ಪರೀಕ್ಷೆಗೆ ಕುಳಿತವರಲ್ಲಿ 17 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಹಾಗೂ 40 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕಾಲೇಜು ವಿದ್ಯಾರ್ಥಿನಿ ಅನನ್ಯ ಕಾಮತ್ ಶೇ.98 (588)ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು … Continued