ಕುಂದಾಪುರ : ಗಂಗೊಳ್ಳಿಯಲ್ಲಿ ಬೋಟ್ ಮುಳುಗಡೆ; ಐವರು ಮೀನುಗಾರರ ರಕ್ಷಣೆ

ಕುಂದಾಪುರ : ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟ ಬೋಟೊಂದು ಕುಂದಾಪುರ ಹಾಗೂ ಗಂಗೊಳ್ಳಿ ಮಧ್ಯದ ಸಮುದ್ರದಲ್ಲಿ ನೀರು ತುಂಬಿ ಮುಳುಗಡೆಯಾಗಿದೆ ಎಂದು ವರದಿಯಾಗಿದ್ದು, ಬೋಟಿನಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ. ಐವರು ಮೀನುಗಾರರನ್ನು ಮತ್ತೊಂದು ಬೋಟಿನಲ್ಲಿದ್ದ ಮೀನುಗಾರರು ರಕ್ಷಿಸಿದ್ದಾರೆ. ಬೋಟಿನಲ್ಲಿದ್ದ ಮೀನುಗಾರರಾದ ಪ್ರಕಾಶ, ರಂಜಿತ್, ರಾಘವೇಂದ್ರ, ರಾಮ ಹಾಗೂ ಶ್ರೀನಿವಾಸ ಎಂಬವರನ್ನು ರಕ್ಷಿಸಲಾಗಿದೆ. ಫೆ.23ರ ರಾತ್ರಿ … Continued

ಕನ್ನಡದ ಖ್ಯಾತ ಪೋಷಕ ನಟ ದಿನೇಶ ಮಂಗಳೂರು ನಿಧನ

ಉಡುಪಿ : ಕೆಜಿಎಫ್‌ ಸೇರಿದಂತೆ ಅನೇಕ‌ ಸಿನಿಮಾಗಳಲ್ಲಿ ನಟಿಸಿದ್ದ ಪ್ರತಿಭಾನ್ವಿತ ನಟ, ಕಲಾನಿರ್ದೇಶಕ ದಿನೇಶ ಮಂಗಳೂರು ಇಂದು ಭಾನುವಾರ (ಆಗಸ್ಟ್‌ 25) ಬೆಳಗಿನ ಜಾವ ನಿಧನರಾಗಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ದಿನೇಶ ಮಂಗಳೂರು ಅವರು ಕಳೆದ ಐದು ದಿನಗಳಿಂದ ಪಾರ್ಶ್ವವಾಯುವಿಗೆ ಕುಂದಾಪುರದ ಸರ್ಜನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ಇಂದು … Continued

ಜಸ್ಟ್‌ ಪಾಸಾದ್ರೆ ಸಾಕು… ಪರೀಕ್ಷೆಯಲ್ಲಿ ನನಗೆ ಇಷ್ಟು ಮಾರ್ಕ್ಸ್‌ ಬರಲೇ ಬೇಕು ; ದೈವಕ್ಕೆ ಪತ್ರ ಬರೆದ ವಿದ್ಯಾರ್ಥಿ

ಉಡುಪಿ : ವಿದ್ಯಾರ್ಥಿಯೊಬ್ಬ ಪರೀಕ್ಷೆಯಲ್ಲಿ (exam) ಪಾಸ್‌ ಮಾಡಿಸುವಂತೆ ಪ್ರಾರ್ಥಿಸಿ ದೈವಕ್ಕೆ ಚೀಟಿ ಬರೆದಿದ್ದಾನೆ. ಪರೀಕ್ಷೆಯಲ್ಲಿ ನನಗೆ ಇಂತಿಷ್ಟು ಅಂಕ ಬರಬೇಕೆಂದು ಚೀಟಿ ಬರೆದು ಅದನ್ನು ಹುಂಡಿಗೆ ಹಾಕಿ ದೈವ ದೇವರಲ್ಲಿ ಜಸ್ಟ್‌ ಪಾಸ್‌ ಮಾಡಿಸಿದರೆ ಸಾಕು ಎಂದು ಪ್ರಾರ್ಥಿಸಿದ್ದಾನೆ. ಇದೀಗ ಈ ಚೀಟಿ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಜಿಲ್ಲೆಯ ಕುಂದಾಪುರ ಹೊಳ … Continued

ಪ್ರಾಂಶುಪಾಲರ ‘ಅತ್ಯುತ್ತಮ ಶಿಕ್ಷಕ ಪ್ರಶಸ್ತಿ’ಗೂ ತಟ್ಟಿದ ಹಿಜಾಬ್‌ ವಿವಾದ ; ತಾನೇ ಘೋಷಿಸಿ ಪ್ರಶಸ್ತಿ ತಡೆಹಿಡಿದ ಸರ್ಕಾರ…!

ಬೆಂಗಳೂರು: ಎರಡು ವರ್ಷಗಳ ಹಿಂದೆ ರಾಜ್ಯದಲ್ಲಿ ಹಿಜಾಬ್ ವಿರೋಧಿ ನಿಲುವು ತೋರಿದ ಆರೋಪದ ಮೇಲೆ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡುವ ನಿರ್ಧಾರವನ್ನು ಕರ್ನಾಟಕ ಸರ್ಕಾರ ತಡೆಹಿಡಿದಿದೆ ಎಂದು ವರದಿಯಾಗಿದೆ. ಶಿಕ್ಷಕರ ದಿನಾಚರಣೆಯಂದು ಉಡುಪಿ ಜಿಲ್ಲೆಯ ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಬಿ.ಜಿ. ಅವರು ಪ್ರಶಸ್ತಿ ಸ್ವೀಕರಿಸಬೇಕಿತ್ತು, ಆದರೆ … Continued

ಕುಂದಾಪುರ: ಬಾವಿಗೆ ಬಿದ್ದ ಇಬ್ಬರು ಮಕ್ಕಳು ಸಾವು, ತಾಯಿ ಸ್ಥಿತಿ ಗಂಭೀರ

ಕುಂದಾಪುರ: ಕಂಪೌಂಡ್‌ ಇಲ್ಲದ ಬಾವಿಗೆ ಬಿದ್ದು ಇಬ್ಬರು ಮಕ್ಕಳು ಮೃತಪಟ್ಟಿದ್ದು ತಾಯಿ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ಸೇರಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ಳಾಲ ಗ್ರಾಮದ ಹೊಟ್ನಬೈಲು ಎಂಬಲ್ಲಿ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ಮಕ್ಕಳನ್ನು ಧೀರಜ್‌ (13) ಹಾಗೂ ಛಾಯಾ (8) ಎಂದು ಗುರುತಿಸಲಾಗಿದೆ. ತಾಯಿ ಶೀಲಾ (43) ಎಂಬುವವರನ್ನು ರಕ್ಷಣೆ … Continued

ವೀಡಿಯೊ…..: ಬೃಹತ್ ಗಾತ್ರದ ಹೆಬ್ಬಾವು ಹಿಡಿದ 12 ವರ್ಷದ ಬಾಲಕ | ವೀಕ್ಷಿಸಿ

ಉಡುಪಿ : 12 ವರ್ಷದ ಏಳನೇ ತರಗತಿ ಓದುತ್ತಿರುವ ಬಾಲಕನೊಬ್ಬ ಬೃಹತ್ ಗಾತ್ರದ ಹೆಬ್ಬಾವು ಹಿಡಿದು ಎಲ್ಲರ ಗಮನ ಸೆಳೆದಿದ್ದಾನೆ. ಈ ಬಾಲಕ ಈಗ ಹೆಬ್ಬಾವು ಹಿಡಿದಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಉಡುಪಿ-ಕುಂದಾಪುರ ನಡುವಿನ ಸಾಲಿಗ್ರಾಮದ ದೇವಾಡಿಗರಬೆಟ್ಟು ಗ್ರಾಮದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಕಂಡು ಬಂದಿತ್ತು. ಹೆಬ್ಬಾವು ಬಂದ ಬಗ್ಗೆ ಮಾಹಿತಿ ಪಡೆದ … Continued

ಕುಂದಾಪುರ: ಸೀಮಂತ ಕಾರ್ಯಕ್ರಮಕ್ಕೆ ಬಂದ ಹೆಂಡತಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಗಂಡ

ಕುಂದಾಪುರ: ತವರು ಮನೆಯಿಂದ ಬಂದಿದ್ದ ಪತ್ನಿಯನ್ನು ಕುಡಿದ ಮತ್ತಿನಲ್ಲಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಉಡುಪಿ ಜಿಲ್ಲೆಯ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಮುಂದ ಸಮೀಪದಲ್ಲಿ ಭಾನುವಾರ ತಡರಾತ್ರಿ ನಡೆದ ಬಗ್ಗೆ ವರದಿಯಾಗಿದೆ. ಹಾಲಿ ಸೊರಬದಲ್ಲಿ ವಾಸಿಸುತ್ತಿದ್ದ ಪೂರ್ಣಿಮಾ ಆಚಾರ್ಯ(38) ಸಾವಿಗೀಡಾದ ಮಹಿಳೆ ಎಂದು ಗುರುತಿಸಲಾಗಿದೆ. ಕೋಗಾರ … Continued

ಮರವಂತೆ : ಸಮುದ್ರಕ್ಕೆ ಉರುಳಿದ ಕಾರು- ಓರ್ವನ ಸಾವು, ಇನ್ನೋರ್ವ ನಾಪತ್ತೆ

ಉಡುಪಿ:ಜಿಲ್ಲೆಯ ಬೈಂದೂರು ತಾಲೂಕಿನ ಮರವಂತೆ ಸಮುದ್ರಕ್ಕೆ ಕಾರೊಂದು ಉರುಳಿ ಬಿದ್ದು, ಓರ್ವ ಮೃತಪಟ್ಟಿದ್ದು, ಇನ್ನೋರ್ವ ಸಮುದ್ರದಲ್ಲಿ ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದವನಿಗೆ ಹುಡುಕಾಟ ನಡೆಯುತ್ತಿದೆ. ಮರವಂತೆಯ ಮಾರಸ್ವಾಮಿ ದೇವಸ್ಥಾನದ ಬಳಿ ಕಳೆದ ರಾತ್ರಿ ರಾಷ್ಟ್ರೀಯ ಹೆದ್ದಾರಿ ಮೇಲಿನಿಂದ ಕಾರು ಸಮುದ್ರಕ್ಕೆ ಬಿದ್ದಿದೆ. ಆ ಕಾರಿನಲ್ಲಿ ನಾಲ್ವರಿದ್ದರು. ಓರ್ವ ಕಾರಿನೊಳಗೆ ಮೃತಪಟ್ಟಿದ್ದು, ಮತ್ತೊಬ್ಬರು ಸಮುದ್ರ ನೀರಲ್ಲಿ ನಾಪತ್ತೆಯಾಗಿದ್ದಾರೆ. … Continued

ಕುಂದಾಪುರ: ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಶಾಸಕ ಎ.ಜಿ ಕೊಡ್ಗಿ ನಿಧನ

ಕುಂದಾಪುರ: ಕರಾವಳಿ ರಾಜಕೀಯ ರಂಗದ ಭೀಷ್ಮ ಎಂದೇ ಹೆಸರು ಪಡೆದಿದ್ದ ಹಿರಿಯ ರಾಜಕಾರಣಿ ಎ.ಜಿ.ಕೊಡ್ಗಿ (ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ) ಅವರು ಅನಾರೋಗ್ಯದಿಂದ ಇಂದು, ಸೋಮವಾರ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ಅವರಿಗೆ ಡೆಂಗೆ ಜ್ವರವಾಗಿತ್ತು ಎಂದು ಹೇಳಲಾಗಿದೆ. ಮೃತರು ಐವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸುಮಾರು 56 ವರ್ಷಗಳ … Continued

ಉದ್ಯಮಿ ಕಟ್ಟೆ ಭೋಜಣ್ಣ ಆತ್ಮಹತ್ಯೆ ಪ್ರಕರಣ: ಸ್ನೇಹಿತನ ಬಂಧನ

ಉಡುಪಿ: ಕುಂದಾಪುರದ ಖಾಸಗಿ ಆಸ್ಪತ್ರೆ ಮಾಲಕ ಹಾಗೂ ಉದ್ಯಮಿ ಕಟ್ಟೆ ಭೋಜಣ್ಣ ಆತ್ಮಹತ್ಯೆ ಪ್ರಕರಣದಲ್ಲಿ ಲೆಕ್ಕಪರಿಶೋಧಕ ಮೊಳಹಳ್ಳಿ ಗಣೇಶ ಶೆಟ್ಟಿ ಅವರನ್ನು ಬಂಧಿಸಲಾಗಿದೆ.ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧ ನಡೆಸಿದ್ದಾರೆ. ಉಡುಪಿ ಜಿಲ್ಲೆ ಕುಂದಾಪುರದಲ್ಲಿ ನಡೆದ ಪ್ರತಿಷ್ಠಿತ ವ್ಯಕ್ತಿಯೊಬ್ಬರ ಆತ್ಮಹತ್ಯೆ ಪ್ರಕರಣದಲ್ಲಿ ಗೆಳೆಯನಿಂದ ಮೋಸಕ್ಕೊಳಗಾದ ಉದ್ಯಮಿ ಕಟ್ಟೆ ಭೋಜಣ್ಣ, ಗೆಳೆಯನ ಮನೆಯ ಮುಂದೆ ಹೋಗಿ ಗುಂಡಿಕ್ಕಿಕೊಂಡು … Continued