ನನ್ನ ತಾಯಿ ಕೊರೊನಾದಿಂದ ಗಂಭೀರ ಸ್ಥಿತಿಯಲ್ಲಿದ್ದಾರೆ..ಆಸ್ಪತ್ರೆಗಳು ಬೆಡ್ ಇಲ್ಲ ಎನ್ನುತ್ತಿವೆ; ಕಾಂಗ್ರೆಸ್‌ ಸಭೆಯಲ್ಲಿ ಕಣ್ಣೀರಿಟ್ಟ ಶಾಸಕಿ

ಬೆಂಗಳೂರು: ಕೊರೊನಾ ಸೋಂಕಿನಿಂದ ಜನಪ್ರತಿನಿಧಿಗಳೇ ತಮ್ಮ ಕುಟುಂಬ ಸದಸ್ಯರಿಗೆ ಆಸ್ಪತ್ರೆಗಳಲ್ಲಿ ಬೆಡ್ ಒದಗಿಸಲಾಗದೇ ಕಣ್ಣೀರು ಹಾಕುತ್ತಿದ್ದಾರೆ. ತನ್ನ ತಾಯಿ ಕೊರೊನಾ ಸೋಂಕಿನಿಂದ ಪರದಾಡುತ್ತಿದ್ದಾರೆ. ಯಾವುದೇ ಆಸ್ಪತ್ರೆಗಳಿಗೆ ಕೇಳಿದರೂ ಬೆಡ್ ಇಲ್ಲ ಎಂದು ಹೇಳುತ್ತಿದ್ದಾರೆ. ಏನು ಮಾಡಬೇಕೆಂದೇ ತೋಚುತ್ತಿಲ್ಲ ಎಂದು ಧಾರವಾಡ ಜಿಲ್ಲೆಯ ಕುಂದಗೋಳ ಮತಕ್ಷೇತ್ರದ ಕಾಂಗ್ರೆಸ್ ಶಾಸಕಿ ಕುಸುಮಾ ಶಿವಳ್ಳಿ ಕಣ್ಣೀರು ಹಾಕಿರುವ ಘಟನೆ ನಡೆದಿದೆ. … Continued