ಕೊಡಗಿನಲ್ಲಿ ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಸಾವು

ಮಡಿಕೇರಿ: ಕೊಡಗಿನಲ್ಲಿ ಕಾಡಾನೆ ದಾಳಿಗೆ ಎಸ್ಟೇಟ್ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ. ತಿತಿಮತಿ ಸಮೀಪದ ಕೋಣನಕಟ್ಟೆ ಎಂಬಲ್ಲಿ ಶನಿವಾರ ಬೆಳಗಿನ ಜಾವ ಈ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಧನುಗಾಲ ಗ್ರಾಮದ ನಿವಾಸಿ ಯರವರ ಚಾಮ (48) ಸಾವಿಗೀಡಾದ ವ್ಯಕ್ತಿ. ಗ್ರಾಮಸ್ಥರು ಹಾಗೂ ರೈತ ಸಂಘದ ಸದಸ್ಯರು ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ಆನೆಯನ್ನು ಕೂಡಲೇ ಹಿಡಿಯುವಂತೆ ಒತ್ತಾಯಿಸಿದರು. … Continued