ಶಿರಾ : ಕೆರೆಗೆ ಬಿದ್ದ ಕಾರು ; ಒಂದೇ ಕುಟುಂಬದ ಮೂವರು ಸಾವು

ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ರಾಮಲಿಂಗಾಪುರದಲ್ಲಿ ಭಾನುವಾರ ಬೆಳಗ್ಗೆ ಕೆರೆಗೆ ಕಾರು ಬಿದ್ದು ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತಪಟ್ಟವರಲ್ಲಿ ಇಬ್ಬರು ಮಹಿಳೆಯರು ಇದ್ದಾರೆ ಎಂದು ಹೇಳಲಾಗಿದೆ. ಕಾರಿನಲ್ಲಿದ್ದವರಲ್ಲಿ ಒಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರು ಶಿರಾದ ಮೇಕೆರಹಳ್ಳಿ ಗ್ರಾಮದ ದೊಡ್ಡಣ್ಣ, ಸಣ್ಣಮ್ಮ ಮತ್ತು ಯಮುನಾ ಎಂದು ಗುರುತಿಸಲಾಗಿದೆ. ಪ್ರವೀಣ ಎಂಬವರು ಅಪಾಯದಿಂದ ಪಾರಾಗಿದ್ದಾರೆ. … Continued

ಕೆರೆ, ರಾಜಕಾಲುವೆ ಒತ್ತುವರಿ ತೆರವಿಗೆ ನ್ಯಾಯಾಂಗ ತನಿಖೆ: ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ಸೋಮವಾರ ವಿಧಾನಸಭೆಯಲ್ಲಿ ನಡೆದ ಅತಿವೃಷ್ಟಿ ಮೇಲಿನ ಚರ್ಚೆಗೆ ಉತ್ತರ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮುಂದೆ ಕೆರೆ, ರಾಜಕಾಲುವೆ ಹಾಗೂ ಬಫರ್ ಝೋನ್ ಒತ್ತುವರಿ ಆಗದಂತೆ ಕ್ರಮ ಕೈಗೊಳ್ಳಲು ನ್ಯಾಯಾಂಗ ತನಿಖೆಗೆ ಆದೇಶಿಸಲಾಗುವುದು. ನ್ಯಾಯಾಂಗ ಅಧಿಕಾರಿಯ ನೇತೃತ್ವದಲ್ಲಿ ತಾಂತ್ರಿಕ ಸದಸ್ಯರೊಂದಿಗೆ ತನಿಖಾ ಆಯೋಗ ರಚನೆ ಮಾಡಲಾಗುವುದು ಎಂದು ತಿಳಿಸಿದರು. ಕೆರೆ, ರಾಜಕಾಲುವೆ ಒತ್ತುವರಿ ತೆರವು … Continued