ಮೈಸೂರು | ಅವಹೇಳನಕಾರಿ ಪೋಸ್ಟ್ : ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ; ಲಾಠಿ ಚಾರ್ಜ್

ಮೈಸೂರು: ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಮಾಡಿದ ಅವಹೇಳನಕಾರಿ ಪೋಸ್ಟ್‌ ಮೈಸೂರಿನಲ್ಲಿ ಕೋಮು ಉದ್ವಿಗ್ನತೆ (Communal tension)ಗೆ ಕಾರಣವಾಗಿದೆ. ಒಂದು ಸಮುದಾಯದ ನೂರಾರು ಯುವಕರು ಪೊಲೀಸ್ ಠಾಣೆ ಹಾಗೂ ಡಿಸಿಪಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮೈಸೂರಿನ ಕಲ್ಯಾಣಿಗಿರಿ ನಿವಾಸಿ ಸುರೇಶ ಎಂಬವರನ್ನು ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದ ಮೇಲೆ ಬಂಧಿಸಲಾಗಿತ್ತು. ಈ ಪೋಸ್ಟ್‌ ಅನ್ನು … Continued

ಥಾಣೆಯಲ್ಲಿ 4 ವರ್ಷದ ಇಬ್ಬರು ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯದ ವಿರುದ್ಧ ಬೃಹತ್ ಪ್ರತಿಭಟನೆ ; ಪೊಲೀಸರಿಂದ ಲಾಠಿ ಚಾರ್ಜ್‌

ಮುಂಬೈ: ಶಾಲೆಯೊಂದರಲ್ಲಿ ನಾಲ್ಕು ವರ್ಷದ ಇಬ್ಬರು ಪುಟ್ಟ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಥಾಣೆಯಲ್ಲಿ ಬೃಹತ್ ಪ್ರತಿಭಟನೆ ನಡೆದಿದ್ದು, ಪೊಲೀಸರು ಲಾಠಿ ಮತ್ತು ಅಶ್ರುವಾಯು ಮೂಲಕ ಜನರ ಗುಂಪನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಪೊಲೀಸರ ಲಾಠಿ ಚಾರ್ಜ್‌ ನಂತರ ಆರು ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದ ಜನರಿಂದ ತುಂಬಿ ತುಳುಕುತ್ತಿದ್ದ … Continued

ಕೆರಗೋಡು ಹನುಮ ಧ್ವಜ ತೆರವಿಗೆ ಬೃಹತ್‌ ಪ್ರತಿಭಟನೆ : ಮಂಡ್ಯದಲ್ಲಿ ಕಲ್ಲು ತೂರಾಟ, ಲಾಠಿ ಪ್ರಹಾರ

ಮಂಡ್ಯ: ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ವಿವಾದ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಬೀದಿಗಿಳಿದು ಪ್ರತಿಭಟನೆ ನಡೆಸಿದೆ. ಮಂಡ್ಯದಲ್ಲಿ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟದ ತೀವ್ರತೆ ಜೋರಾಗಿತ್ತು. ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದನ್ನು ಖಂಡಿಸಿ ಬಿಜೆಪಿ, ಜೆಡಿಎಸ್‌ ಕಾರ್ಯಕರ್ತರು, ಹಿಂದೂ ಪರ ಸಂಘಟನೆಗಳ ಸಾವಿರಾರು ಸದಸ್ಯರು ಗ್ರಾಮದಿಂದ ಮಂಡ್ಯದ ಜಿಲ್ಲಾಧಿಕಾರಿ ಕಚೇರಿವರೆಗೆ ಸೋಮವಾರ ಬೃಹತ್‌ ಪಾದಯಾತ್ರೆ … Continued

ಇಮ್ರಾನ್ ಖಾನ್ ಕೋರ್ಟ್‌ಗೆ ತೆರಳಿದ ನಂತರ ಅವರ ಮನೆಗೆ ನುಗ್ಗಿದ ಪಾಕ್ ಪೊಲೀಸರು: ಬೆಂಬಲಿಗರ ಮೇಲೆ ಲಾಠಿ ಚಾರ್ಜ್‌ | ವೀಕ್ಷಿಸಿ

ಲಾಹೋರ್ : ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಗಾಗಿ ಇಸ್ಲಾಮಾಬಾದ್‌ಗೆ ತೆರಳಿದ ನಂತರ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಲಾಹೋರ್‌ನಲ್ಲಿರುವ ಮನೆಗೆ ಪಾಕಿಸ್ತಾನ ಪೊಲೀಸರು ಶನಿವಾರ ಪ್ರವೇಶಿಸಿದ್ದಾರೆ ಎಂದು ಅವರ ಪಕ್ಷದ ಪದಾಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರು ಬ್ಯಾರಿಕೇಡ್‌ಗಳನ್ನು ತೆಗೆದು ಅವರ ಮನೆಗೆ ನುಗ್ಗಿದಾಗ ಖಾನ್ ಅವರ ಪತ್ನಿ ಬುಶ್ರಾ ಬೇಗಂ ಅವರು ಮನೆಯಲ್ಲಿದ್ದರು. ಕಾರ್ಯಾಚರಣೆಯ … Continued

ಶಿವಮೊಗ್ಗದಲ್ಲಿ ಮತ್ತೆ ಭುಗಿಲೆದ್ದ ಫೋಟೋ ವಿವಾದ: ಇಬ್ಬರಿಗೆ ಚೂರಿ ಇರಿತ, ಉದ್ವಿಗ್ನ, ಶಿವಮೊಗ್ಗ ನಗರದಾದ್ಯಂತ ನಿಷೇಧಾಜ್ಞೆ ಜಾರಿ

ಶಿವಮೊಗ್ಗ: ವೀರ ಸಾವರ್ಕರ್ ಭಾವಚಿತ್ರ ವಿಚಾರದಲ್ಲಿ ಎರಡು ಕೋಮಿನ ನಡುವೆ ಜಟಾಪಟಿಯಾಗಿ  ಪ್ರಹಾರ ನಡೆದ ಘಟನೆ ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ಸೋಮವಾರ ನಡೆದಿದೆ. ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ ಎಂದು ಹೇಳಲಾಗಿದೆ. ಇಲ್ಲಿನ ಅಮೀರ್ ಅಹಮದ್ ಸರ್ಕಲ್‌ನಲ್ಲಿ ಎರಡು ಕೋಮುಗಳ ನಡುವೆ ಗಲಾಟೆ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯಲ್ಲಿ ಸೆಕ್ಷನ್ 144, ನಿಷೇದಾಜ್ಞೆ ಜಾರಿ … Continued

ಶಿವಲಿಂಗ ಶುದ್ಧೀಕರಣ ವಿಚಾರವಾಗಿ ಆಳಂದದಲ್ಲಿ ಕಲ್ಲು ತೂರಾಟ, ಲಾಠಿ ಚಾರ್ಜ್

ಕಲಬುರಗಿ: ಆಳಂದದ ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗದ ಶುದ್ಧೀಕರಣ ವಿಚಾರದ ಗದ್ದಲ ವಿಕೋಪಕ್ಕೆ ಹೋಗಿ ಪೊಲೀಸರು ಲಾಠಿಚಾರ್ಜ್‌ ಮಾಡಿದ ಘಟನೆ ನಡೆದಿದೆ. ಶಿವಲಿಂಗದ ಶುದ್ಧೀಕರಣಕ್ಕೆ ಹಿಂದೂಪರ ಸಂಘಟನೆಗಳು ಪಟ್ಟು ಹಿಡಿದಿದ್ದು, ಆಂದೋಲಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಕಲಬುರಗಿಯಿಂದ ಆಳಂದ ಚಲೋಗೆ ಕರೆ ಕೊಟ್ಟಿದ್ದರು. ಆದರೆ ಇದಕ್ಕೆ ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ. ಶಿವರಾತ್ರಿ … Continued