ವೀಡಿಯೊ..| ಏನು ಧೈರ್ಯ-ಸಮಯಪ್ರಜ್ಞೆ ; ಹಾಲ್‌ ಒಳಗೆ ನುಗ್ಗಿದ ಚಿರತೆ ನೋಡಿ ಗಾಬರಿಯಾಗದೆ ಲಾಕ್ ಮಾಡಿ ಬಂಧಿಸಿದ ದಿಟ್ಟ ಬಾಲಕ…!

ಮಾಲೆಗಾಂವ್ : ಮಹಾರಾಷ್ಟ್ರದ ಮಾಲೆಗಾಂವ್‌ನಲ್ಲಿ ಅಪ್ರಾಪ್ತ ಬಾಲಕನೊಬ್ಬ ತಾನು ಕುಳಿತಿದ್ದ ಬ್ಯಾಂಕ್ವೆಟ್ ಹಾಲ್‌ಗೆ ಚಿರತೆ ನುಗ್ಗಿದ ನಂತರ ಪವಾಡ ಸದೃಶವೆಂಬಂತೆ ಪಾರಾದ ವೀಡಿಯೊ ವೈರಲ್ ಆಗಿದೆ. 12 ವರ್ಷದ ಬಾಲಕ ಮೊಬೈಲ್‌ನಲ್ಲಿ ಗೇಮ್ ಆಡುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ಮದುವೆ ಹಾಲ್‌ನ ಮುಖ್ಯ ಬಾಗಿಲು ತೆರೆದಿತ್ತು.ಚಿರತೆ ಕೋಣೆಗೆ ನುಗ್ಗಿದ್ದನ್ನು ಕಂಡ ತಕ್ಷಣ ಬಾಲಕ ಕೂಗಿಕೊಳ್ಳದೆ ಸಮಯಪ್ರಜ್ಞೆ … Continued

ಬೆಂಗಳೂರಿನಲ್ಲಿ ಮತ್ತೊಂದು ಚಿರತೆ ಪ್ರತ್ಯಕ್ಷ

ಬೆಂಗಳೂರು : ಬೆಂಗಳೂರು ಭಾರಿ ಅತಂಕಕ್ಕೆ ಕಾರಣವಾಗಿದ್ದ ಚಿರತೆ ಸಾವಿಗೀಡಾದ ಬೆನ್ನಲ್ಲೇ ಇದೀಗ ಮತ್ತೊಂದು ಚಿರತೆ ಪ್ರತ್ಯಕ್ಷವಾಗಿದೆ. ಆಗ್ನೇಯ ಬೆಂಗಳೂರಿನ ನೈಸ್ ರಸ್ತೆಯ ಚಿಕ್ಕತೋಗೂರಿನ ಲಕ್ಷ್ಮಿ ದೇವಿ ದೇವಸ್ಥಾನದ ಬಳಿಯ ಮನೆಯ ಪಕ್ಕದಲ್ಲಿ ಮತ್ತೊಂದು ಚಿರತೆ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಶನಿವಾರ (ನವೆಂಬರ್ 4) ರ ಸಂಜೆ 7:40ರ ಸುಮಾರಿಗೆ ಚಿರತೆ ಮನೆ ಕಂಪೌಂಡ್​​ ಒಳಗೆ … Continued

ಬೆಂಗಳೂರಲ್ಲಿ ಆತಂಕ ಮೂಡಿಸಿದ್ದ ಚಿರತೆ ಕೊನೆಗೂ ಸೆರೆ ; ಜನರು ನಿರಾಳ

ಬೆಂಗಳೂರು: ಬೆಂಗಳೂರಿನ ಜನರ ನಿದ್ದೆಗೆಡಿಸಿದ್ದ ಚಿರತೆ ಬುಧವಾರ ಕೊನೆಗೂ ಸೆರೆ ಸಿಕ್ಕಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಸಿಂಗಸಂದ್ರದ ಎಇಸಿಎಸ್ ಲೇಔಟ್‌ನಲ್ಲಿ ಕಾಣಿಸಿಕೊಂಡಿದ್ದ ಚಿರತೆ ಮೂರು ದಿನಗಳ ನಂತರ ಬುಧವಾರ ಅರಣ್ಯ ಇಲಾಖೆಯ ಬಲೆಗೆ ಬಿದ್ದಿದೆ. ಅಕ್ಟೋಬರ್ 27 ರಂದು ರಾತ್ರಿ ಚಿರತೆ ಅಪಾರ್ಟ್‌ಮೆಂಟ್ ಸಮುಚ್ಚಯದ ಬಳಿ ತಿರುಗಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಅಂದಿನಿಂದ ಚಿರತೆ … Continued

ಬೆಂಗಳೂರಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ : ಓಡಿಸಿಕೊಂಡು ಹೋದ ಬೀದಿನಾಯಿಗಳು | ವೀಡಿಯೊ

ಬೆಂಗಳೂರು : ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ಎಂಎಸ್ ಧೋನಿ ಇಂಟರ್‌ನ್ಯಾಶನಲ್ ಸ್ಕೂಲ್ ಬಳಿ ಭಾನುವಾರ ಚಿರತೆ ಕಾಣಿಸಿಕೊಂಡ ನಂತರ ನಿವಾಸಿಗಳಿಗೆ ಮನೆಯೊಳಗೆ ಇರುವಂತೆ ಸೂಚಿಸಲಾಗಿದೆ. ಶಾಲೆಯು ಪೋಷಕರಿಗೆ ಇಮೇಲ್ ಕಳುಹಿಸಿದೆ, ತಮ್ಮ ಮಕ್ಕಳಿಗೆ ಎಲ್ಲಾ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ವಿನಂತಿಸಿದೆ. ಸಿಂಗಸಂದ್ರದ ಸುತ್ತಮುತ್ತಲ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿರುವುದು ನಮ್ಮ ಗಮನಕ್ಕೆ ಬಂದಿದೆ, ಆದರೆ ಇತ್ತೀಚಿನ ನವೀಕರಣದ ಪ್ರಕಾರ, … Continued

ನಾಯಿ ಬೇಟೆಗೆ ಬಂದ ಚಿರತೆ ಮನೆಯಲ್ಲಿ ಬಂಧಿ

ಉಡುಪಿ: ನಾಯಿ ಹಿಡಿಯಲು ಬಂದ ಚಿರತೆಯೊಂದು ಮನೆಯೊಳಗೆ ಪ್ರವೇಶಿಸಿ ತಾನೇ ಬಧಿಯಾದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡದಿದೆ. ಬ್ರಹ್ಮಾವರ ಬಳಿಯ ನೈಲಾಡಿಯಲ್ಲಿ ಈ ಘಟನೆ ನಡೆದಿದೆ. ಚಿರತೆ ಕುಟುಂಬದ ಸಾಕು ನಾಯಿ ಹಿಡಿಯಲು ಹೊರಟಿತ್ತು, ಆದರೆ ಅದು ತಪ್ಪಿಸಿಕೊಂಡು ಮನೆಯೊಳಗೆ ಓಡಿ ಹೋಯಿತು.ಚಿರತೆಯೂ ನಾಯಿಯನ್ನು ಹಿಂಬಾಲಿಸಿತು.ಶಬ್ದದಿಂದಾಗಿ ಎಚ್ಚರಗೊಂಡ ಮನೆಯ ಮಾಲೀಕರು ನೋಡಿದರೆ ಮನೆಯೊಳಗೆ ಚಿರತೆ ನುಗ್ಗಿದೆ. … Continued