ಜೊಯಿಡಾ ; ವೃದ್ಧೆ ಮೇಲೆ ಚಿರತೆ ದಾಳಿ

ಕಾರವಾರ : ಮುಂಜಾನೆ ಶೌಚಕ್ಕೆಂದು ಹೊರಬಂದ ವೃದ್ಧೆಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ಪಣಸೋಲಿ ವಲಯದಲ್ಲಿ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. 70 ವರ್ಷದ ವೃದ್ಧೆ ಸುಶೀಲಾ ದೇಸಾಯಿ ಪ್ರತಿರೋಧ ತೋರಿ ಪಾರಾಗಿ ಬಂದಿದ್ದಾರೆ ಎಂದು ಹೇಳಲಾಗಿದೆ. ಪಣಸೋಲಿ ವಲಯದ ಅವುರ್ಲಿ ದಾಬೆ ಗ್ರಾಮದ ನಿವಾಸಿ ಸುಶೀಲಾ … Continued

ವೀಡಿಯೊಗಳು…| ಬೆಂಗಳೂರು : ಬನ್ನೇರುಘಟ್ಟದಲ್ಲಿ ಸಫಾರಿ ಬಸ್ಸಿನ ಕಿಟಕಿ ಮೇಲೆ ಹಾರಿ ಪರಚಿದ ಚಿರತೆ ; ಮಹಿಳೆಗೆ ಗಾಯ

ಬೆಂಗಳೂರು : ಬೆಂಗಳೂರು ನಗರದ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ (Bannerghatta National Park) ಚಿರತೆ ಸಫಾರಿ ವೇಳೆ ಚಿರತೆಯೊಂದು ಸಫಾರಿ ಬಸ್ಸಿನ ಕಿಟಕಿಯ ಜಾಲರಿಯ ಮೂಲಕ ದಾಳಿ ಮಾಡಲು ಪ್ರಯತ್ನಿಸಿದ್ದು, ಘಟನೆಯಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸುಮಾರು 50 ವರ್ಷದ ಮಹಿಳೆ ವಹೀದಾ ಬಾನು ಎಂಬವರಿಗೆ ಗಾಯಗಳಾಗಿದ್ದು, ತಕ್ಷಣ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ … Continued

ಹಾವೇರಿ | ನೀರು ಹಾಯಿಸಲು ಹೋದ ಸಹೋದರರ ಮೇಲೆ ಚಿರತೆ ದಾಳಿ ; ಓರ್ವ ಸಾವು

ಹಾವೇರಿ: ಜಮೀನಿಗೆ ರಾತ್ರಿ ವೇಳೆ ನೀರು ಹಾಯಿಸಲು ತೆರಳಿದ್ದ ಸಹೋದರರ ಮೇಲೆ ಚಿರತೆ ದಾಳಿ ನಡೆಸಿದ್ದು, ಓರ್ವ ಮೃತಪಟ್ಟು, ಇನ್ನೊಬ್ಬ ಗಾಯಗೊಂಡ ಘಟನೆ ರಟ್ಟಿಹಳ್ಳಿ ತಾಲೂಕು ಕಣವಿಶಿದ್ಗೇರಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಚಿರತೆ ದಾಳಿಯಿಂದ ಬೀರಪ್ಪ ಹನುಮಂತಪ್ಪ ಬಳಗಾವಿ(30) ಎಂಬವರು ಮೃತಟ್ಟಿದ್ದಾರೆ ಎಂದು ಗುರುತಿಸಲಾಗಿದ್ದು, ಇನ್ನೊಬ್ಬ ಸಹೋದರ ಗಣೇಶ ಬಳಗಾವಿ ಎಂಬವರು ಗಂಭೀರ ಗಾಯಗೊಂಡಿದ್ದಾರೆ. … Continued

ದಾಳಿ ಮಾಡಿದ್ದ ಚಿರತೆಯನ್ನೇ ಕೊಂದು ಹಾಕಿದ ಗ್ರಾಮಸ್ಥರು

ರಾಯಚೂರು :ಜಿಲ್ಲೆಯ ದೇವದುರ್ಗ ತಾಲೂಕಿನ ಕರಡಿಗುಡ್ಡ ಪಕ್ಕದಲ್ಲಿ ಕಂಬದಾಳ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಮೂವರ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಸುತ್ತಲಿನ ಗ್ರಾಮಸ್ಥರು ಕೊಂದು ಹಾಕಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಭಾನುವಾರ ಬೆಳಿಗ್ಗೆ ಊರ ಹೊರಗಿನ ಗುಡ್ಡದಲ್ಲಿ ಚಿರತೆ ದಾಳಿ ಮಾಡಿತ್ತು. ಇದರಲ್ಲಿ ರಮೇಶ, ಮಲ್ಲಣ್ಣ, ರಂಗನಾಥ ಎಂಬವರಿಗೆ ಗಾಯಗಳಾಗಿದ್ದು, ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ … Continued

ಚಿರತೆ ಹೆದರಿಸಲು ಹೋದವರ ಮೇಲೆಯೇ ದಾಳಿ ಮಾಡಿದ ಚಿರತೆ ; ಮೂವರಿಗೆ ಗಾಯ

ರಾಯಚೂರು : ಜಿಲ್ಲೆಯ ದೇವದುರ್ಗ ತಾಲೂಕಿನ ಡಿ.ಕರಡಿಗುಡ್ಡ ಗ್ರಾಮದಲ್ಲಿ ಭಾನುವಾರ ಮೂವರ ಮೇಲೆ ಚಿರತೆ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿಯೊಬ್ಬರು ಭಾನುವಾರ ಬೆಳಿಗ್ಗೆ ಬಹಿರ್ದೆಸೆಗೆ ಹೋದಾಗ ಅವರಿಗೆ ಚಿರತೆ ಕಂಡಿದ್ದು, ಹೆದರಿ ಓಡಿ ಬಂದ ಅವರು ಗ್ರಾಮಸ್ಥರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಹೊರ ಹೋಗುವ ‌ಮಕ್ಕಳ ಮೇಲೆ … Continued

ವೀಡಿಯೊಗಳು..| ಕುಮಟಾ : ಬಾಡದಲ್ಲಿ 26 ಗಂಟೆಗಳ ನಂತರ ಮನೆಗೆ ನುಗ್ಗಿದ್ದ ಚಿರತೆ ಬಂಧಿ ; ಅರವಳಿಕೆ ಚುಚ್ಚು ಮದ್ದು ನೀಡಿ ಸೆರೆ ಹಿಡಿದರು…

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬಾಡದ ಮಾದರಿ ರಸ್ತೆಯ ನಾಗರಾಜ ನಾಯ್ಕ ಎಂಬವರ ಮನೆಗೆ ಶುಕ್ರವಾರ ನುಗ್ಗಿದ್ದ ಚಿರತೆಯನ್ನು ಕೊನೆಗೆ ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ. ಕುಮಟಾ ತಾಲೂಕಿನ ಬಾಡದ ಮಾದರಿ ರಸ್ತೆಯಲ್ಲಿರುವ ನಾಗರಾಜ ನಾಯ್ಕ ಎಂಬವರ ಮನೆಗೆ ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಅವಧಿಯಲ್ಲಿ ಅವಿತಿದ್ದ ಚಿರತೆಯನ್ನು ಕೊನೆಗೂ ಅರವಳಿಕೆ … Continued

ಕುಮಟಾ : ಬಾಡದಲ್ಲಿ ಚಿರತೆ ದಾಳಿಗೆ ಇಬ್ಬರಿಗೆ ಗಾಯ ; ಮನೆಯೊಳಗೆ ನುಗ್ಗಿ ಅವಿತುಕೊಂಡ ಚಿರತೆ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬಾಡದ ಮಾದರಿ ರಸ್ತೆಯ ನಾಗರಾಜ ನಾಯ್ಕ ಎಂಬವರ ಮನೆಗೆ ಶುಕ್ರವಾರ ಚಿರತೆ ನುಗ್ಗಿದ್ದು, ಮನೆಯೊಳಗೆ ಅಡಗಿ ಕುಳಿತದೆ. ಅದು ಇಬ್ಬರ ಮೇಲೆ ದಾಳಿ ನಡೆಸಿದ್ದು, ಒಬ್ಬರಿಗೆ ಗಂಭೀರವಾದ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರ ಮದ್ಯಾಹ್ನ 4 ಗಂಟೆ ಸುಮಾರಿಗೆ ಬಾಡದ ಮಾದರಿ ರಸ್ತೆ ಬಳಿ … Continued

ಚಿರತೆ ದಾಳಿಯಿಂದ ಗಾಯಗೊಂಡಿದ್ದ ಬಾಲಕಿ ಸಾವು

ಚಾಮರಾಜನಗರ: ಜಿಲ್ಲೆಯ ಕಗ್ಗಲಿಗುಂದಿ ಗ್ರಾಮದಲ್ಲಿ ಇತ್ತೀಚೆಗೆ ಚಿರತೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ ಎಂದು ವರದಿಯಾಗಿದೆ. ಚಿರತೆ ದಾಳಿಯಿಂದ ಬಾಲಕಿಯ ದವಡೆ ಮೂಳೆ ಮುರಿದಿತ್ತು ಹಾಗೂ ಮುಖ ಊದಿಕೊಂಡಿತ್ತು, 14 ದಿನಗಳಿಂದ ಮೈಸೂರಿನ ಕಾಮಗೆರೆಯ ಹೋಲಿ ಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಜು‌ಲೈ 11ರಂದು ಶಸ್ತ್ರಚಿಕಿತ್ಸೆ ಕೂಡ ಮಾಡಲಾಗಿತ್ತು. ಆದರೆ ಇಂದು, … Continued

ಬೆಳಗಾವಿ: ಮಗನ ಮೇಲೆ ಚಿರತೆ ದಾಳಿ ಮಾಡಿದ ಸುದ್ದಿ ಕೇಳಿ ಹೃದಯಾಘಾತದಿಂದ ತಾಯಿ ಸಾವು

ಬೆಳಗಾವಿ: ಮಗನ ಮೇಲೆ ಚಿರತೆ ದಾಳಿ ಸುದ್ದಿ ಕೇಳಿ ತಾಯಿ ಸಾವು ಹೃದಯಾಘಾತದಿಂದ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಬೆಳಗಾವಿ ತಾಲೂಕಿನ ಖನಗಾವಿ ಕೆ.ಎಚ್. ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಕಟ್ಟಡ ನಿರ್ಮಾಣ ಕಾಮಗಾರಿ ಮಾಡುತ್ತಿದ್ದ ಸಿದರಾಯಿ ಮಿರಜಕರ್‌ಗೆ ಎಂಬವರ ಮೇಲೆ ಇಂದು, ಶುಕ್ರವಾರ ಚಿರತೆ ದಾಳಿ ಮಾಡಿತ್ತು‌. ಕಟ್ಟಡ ಕಾರ್ಮಿಕನ ಬೆನ್ನಿಗೆ ಪರಚಿದ ಗಾಯವಾಗಿತ್ತು. … Continued