ಹೊರಬಿತ್ತು ಮತ್ತೊಂದು ಸಮೀಕ್ಷೆ : ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಹೆಚ್ಚಿನ ಸ್ಥಾನ-ಎಬಿಪಿ ನ್ಯೂಸ್-ಸಿ ವೋಟರ್ ಸಮೀಕ್ಷೆ ಭವಿಷ್ಯ

ನವದೆಹಲಿ :  ಲೋಕಸಭಾ ಚುನಾವಣೆಗಳು ಹತ್ತಿರವಾಗುತ್ತಿದ್ದು, ಯಾವುದೇ ಸಮಯದಲ್ಲಿಯೂ ಚುನಾವಣೆ ಘೋಷಣೆಯಾಗಬಹುದಾಗಿದೆ. ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿವೆ. ಲೋಕಸಭೆ ಚುನಾವಣೆಗೂ ಮುನ್ನ ಎಬಿಪಿ ನ್ಯೂಸ್-ಸಿ ವೋಟರ್ಸ್ ಚುನಾವಣಾ ಪೂರ್ವ ಒಪಿನಿಯನ್‌ ಪೋಲ್‌ ನಡೆಸಿದ್ದು, ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಜಯ ಸಾಧಿಸಲಿದೆ ಎಂಬುದು ಸಮೀಕ್ಷೆಯಲ್ಲಿ ಕಂಡುಬಂದಿದೆ. ಎಬಿಪಿ ನ್ಯೂಸ್-ಸಿವೋಟರ್ ಒಪಿನಿಯನ್ … Continued

ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ಸಿಗೆ ಮತ್ತೊಂದು ಹಿನ್ನಡೆ : ಮಹಾರಾಷ್ಟ್ರದ ಹಿರಿಯ ನಾಯಕ ಬಿಜೆಪಿಗೆ ಸೇರ್ಪಡೆ

ಮುಂಬೈ: ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ಸಿಗೆ ಮಹಾರಾಷ್ಟ್ರದಲ್ಲಿ ಮತ್ತೊಂದು ಹಿನ್ನಡೆಯಾಗಿದ್ದು, ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಪದ್ಮಾಕರ ವಾಲ್ವಿ ಬುಧವಾರ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಗೊಂಡಿದ್ದಾರೆ. ಮುಂಬೈನಲ್ಲಿ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಅಧ್ಯಕ್ಷ ಚಂದ್ರಶೇಖರ ಬವಾಂಕುಲೆ ಮತ್ತು ಪಕ್ಷದ ಮುಖಂಡ ಅಶೋಕ ಚವ್ಹಾಣ ಅವರ ಸಮ್ಮುಖದಲ್ಲಿ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. … Continued

ಲೋಕಸಭೆ ಚುನಾವಣೆ: ಕಾಂಗ್ರೆಸ್‌ 2ನೇ ಪಟ್ಟಿ ಬಿಡುಗಡೆ ; ಮೂರು ಮಾಜಿ ಸಿಎಂ ಮಕ್ಕಳಿಗೆ ಟಿಕೆಟ್‌

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ 43 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ಕಮಲನಾಥ ಮತ್ತು ಅಶೋಕ ಗೆಹ್ಲೋಟ್ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರ ಪುತ್ರರಿಗೆ ಟಿಕೆಟ್‌ ನೀಡಲಾಗಿದೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲನಾಥ ಅವರ ಪುತ್ರರಾಗಿರುವ ನಕುಲನಾಥ ಅವರನ್ನು ಮಧ್ಯಪ್ರದೇಶದ ಚಿಂದ್ವಾರದಿಂದ ಕಣಕ್ಕಿಳಿಸಲಾಗಿದೆ. ಅವರು ಕ್ಷೇತ್ರದಿಂದ ಹಾಲಿ ಸಂಸದರಾಗಿದ್ದಾರೆ. ರಾಜಸ್ಥಾನದ ಮಾಜಿ … Continued

ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ಸಿಗೆ ಸೇರ್ಪಡೆಯಾದ ರಾಜಸ್ಥಾನ ಸಂಸದ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ನಂತರ, ರಾಜಸ್ಥಾನದಿಂದ ಎರಡು ಬಾರಿಗೆ ಸಂಸದರಾಗಿ ಆಯ್ಕೆಯಾಗಿರುವ ಚುರು ಸಂಸದ ರಾಹುಲ್ ಕಸ್ವಾನ್ ಸೋಮವಾರ (ಮಾರ್ಚ್ 11) ಬಿಜೆಪಿ ಪ್ರಾಥಮಿಕ ಸದಸ್ಯತ್ವ ಮತ್ತು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಂತರ ಅವರು ನವದೆಹಲಿಯಲ್ಲಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ್ದಾರೆ. ಬಿಜೆಪಿಯು ರಾಹುಲ್‌ ಕಸ್ವಾನ್ … Continued

‘ಮಮತಾ ಬ್ಯಾನರ್ಜಿಗೆ ಪ್ರಧಾನಿ ಮೋದಿ ಅತೃಪ್ತರಾಗುತ್ತಾರೆ ಎಂಬ ಭಯ’: ತೃಣಮೂಲನಿಂದ ಅಭ್ಯರ್ಥಿಗಳ ಪಟ್ಟಿ ಘೋಷಣೆ ಬಗ್ಗೆ ಕಾಂಗ್ರೆಸ್‌

ಕೋಲ್ಕತ್ತಾ: ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಭಾನುವಾರ (ಮಾರ್ಚ್‌ 10) ಪಶ್ಚಿಮ ಬಂಗಾಳದ ಎಲ್ಲಾ 42 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಮುಂಬರುವ ಲೋಕಸಭೆ ಚುನಾವಣೆಗಳಿಗೆ ಸೀಟು ಹಂಚಿಕೆ ಮಾತುಕತೆಗೆ “ಬಾಗಿಲುಗಳು ಇನ್ನೂ ತೆರೆದಿವೆ” ಎಂದು ಕೆಲವೇ ದಿನಗಳ ಹಿಂದೆ ಹೇಳಿದ್ದ ಕಾಂಗ್ರೆಸ್ ಮಾತನ್ನು ತಳ್ಳಿಹಾಕಿದೆ. ಕಾಂಗ್ರೆಸ್ ಮತ್ತು ತೃಣಮೂಲಎರಡೂ ಪಕ್ಷಗಳು ವಿಪಕ್ಷಗಳ ಮೈತ್ರಿಕೂಟ … Continued

ಹೆತ್ತ ತಾಯಿಯನ್ನು ಬಿಡ್ಲಿಕ್ಕೆ ಆಗುತ್ತಾ..? : ಸುಮಲತಾ ಪರ ಪ್ರಚಾರ ಮಾಡುವ ಸುಳಿವು ನೀಡಿದ ನಟ ದರ್ಶನ್

ಮಂಗಳೂರು: ಸುಮಲತಾ ಅವರು ನಮ್ಮ ಅಮ್ಮ, ಹೆತ್ತ ತಾಯಿಯನ್ನು ಎಂದಾದರೂ ಬಿಟ್ಟುಕೊಡಲಿಕ್ಕೆ ಆಗುತ್ತದೆಯೇ ಎಂದು ನಟ ದರ್ಶನ್ ಹೇಳಿದ್ದು, ಈ ಮೂಲಕ ಈ ಸಲ ಕೂಡ ಲೋಕಸಭೆ ಚುನಾವಣೆಯಲ್ಲಿ ಸಂಸದೆ ಸುಮಲತಾ ಅಂಬರೀಷ ಪರ ಪ್ರಚಾರ ನಡೆಸುವ ಸುಳಿವು ನೀಡಿದ್ದಾರೆ. ಅವರು ಭಾನುವಾರ ಮಂಗಳೂರಿನ ಉಳ್ಳಾಲ ಸಮೀಪದ ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ಸ್ನೇಹಿತರೊಂದಿಗೆ ಭೇಟಿ ನೀಡಿದ್ದ … Continued

ಲೋಕಸಭೆ ಚುನಾವಣೆ : ಆಂಧ್ರಪ್ರದೇಶದಲ್ಲಿ ಟಿಡಿಪಿ-ಬಿಜೆಪಿ-ಜನಸೇನೆ ನಡುವೆ ಸೀಟು ಹಂಚಿಕೆ ಒಪ್ಪಂದ ಅಂತಿಮ

ನವದೆಹಲಿ : ಮುಂಬರುವ ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನಗಳನ್ನು ಗೆಲ್ಲುವ ಗುರಿ ಇಟ್ಟುಕೊಂಡಿರುವ ಎನ್‌ಡಿಎಯನ್ನು ಇನ್ನಷ್ಟು ವಿಸ್ತರಿಸಲು ಪ್ರಯತ್ನಿಸುತ್ತಿರುವ ಬಿಜೆಪಿಗೆ ಆಂಧ್ರಪ್ರದೇಶದಲ್ಲಿ ತೆಲುಗು ದೇಶಂ ಮತ್ತು ಜನಸೇನಾ ಪಕ್ಷದ ಬೆಂಬಲ ಘೋಷಿಸಿದ್ದು, ಈ ಮೂರೂ ಪಕ್ಷಗಳು ಮೈತ್ರಿಯನ್ನು ಅಂತಿಮಗೊಳಿಸಿದೆ. ಒಪ್ಪಂದಕ್ಕೆ ಅಂತಿಮ ಮುದ್ರೆ ಒತ್ತಲಾಗಿದೆ ಎಂದು ಘೋಷಿಸಿದ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು, ಲೋಕಸಭೆ ಚುನಾವಣೆ … Continued

ಲೋಕಸಭೆ ಚುನಾವಣೆ : ತಮಿಳುನಾಡಿನಲ್ಲಿ ನಟ ಶರತ್ ಕುಮಾರ ನೇತೃತ್ವದ ಎಐಎಸ್‌ಎಂಕೆ-ಬಿಜೆಪಿ ಮೈತ್ರಿ

ಚೆನ್ನೈ : ಖ್ಯಾತ ನಟ ಆರ್ ಶರತ್ ಕುಮಾರ ನೇತೃತ್ವದ ಅಖಿಲ ಭಾರತ ಸಮತುವ ಮಕ್ಕಳ್ ಕಚ್ಚಿ (ಎಐಎಸ್‌ಎಂಕೆ) ಪಕ್ಷವು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಗೆ ಬೆಂಬಲ ನೀಡುವುದಾಗಿ ಘೋಷಿಸಿದೆ. ಬಿಜೆಪಿಯೊಂದಿಗೆ ಮೈತ್ರಿ ಮಾತುಕತೆಯನ್ನು ಪೂರ್ಣಗೊಳಿಸಲಾಗಿದೆ ಮತ್ತು ತಮಿಳುನಾಡಿನಲ್ಲಿ ಬಿಜೆಪಿಯೊಂದಿಗೆ ‘ಜಂಟಿಯಾಗಿ’ ಕೆಲಸ … Continued

ಹೋಗಿ…ಗೆದ್ದು ಬನ್ನಿ…ಶೀಘ್ರದಲ್ಲೇ ನಿಮ್ಮನ್ನು ನೋಡುತ್ತೇನೆ…: ಲೋಕಸಭೆ ಚುನಾವಣೆಗೂ ಮುನ್ನ ಸಚಿವರಿಗೆ ಸಂದೇಶ ನೀಡಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಚಿವ ಸಂಪುಟದೊಂದಿಗೆ ನಡೆದ ಒಂದು ದಿನದ ಸಭೆಯ ನೇತೃತ್ವ ವಹಿಸಿದ್ದರು. ಈ ಸಭೆಯಲ್ಲಿ ಅವರು, ಮುಂಬರುವ ಲೋಕಸಭೆ ಚುನಾವಣೆ ಘೋಷಣೆಗೆ ಮುಂಚಿತವಾಗಿಯೇ ತಮ್ಮ ಸಚಿವರಿಗೆ “ಹೋಗಿ, ಗೆದ್ದುಬನ್ನಿ, ನಾನು ಶೀಘ್ರದಲ್ಲೇ ನಿಮ್ಮನ್ನು ನೋಡುತ್ತೇನೆ” ಎಂದು ಸಂದೇಶ ನೀಡಿದ್ದಾರೆ. ನಿರ್ಣಾಯಕ ಸಭೆಯಲ್ಲಿ ವಿಷನ್ ಡಾಕ್ಯುಮೆಂಟ್ ‘ವಿಕಸಿತ ಭಾರತ 2047’ … Continued

ಲೋಕಸಭೆ ಚುನಾವಣೆ 2024 : ಬಿಜೆಪಿ ಮೊದಲ ಅಭ್ಯರ್ಥಿಗಳ ಪಟ್ಟಿಯಲ್ಲಿ 33 ಹಾಲಿ ಸಂಸದರಿಗೆ ಕೊಕ್‌…!

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ 195 ಅಭ್ಯರ್ಥಿಗಳ ಹೆಸರುಗಳೊಂದಿಗೆ ಬಿಜೆಪಿ ತನ್ನ ಮೊದಲ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದ್ದು, ಅದರಲ್ಲಿ 33 ಹಾಲಿ ಸಂಸದರಿಗೆ ಟಿಕೆಟ್‌ ನೀಡಿಲ್ಲ…! ಪಟ್ಟಿಯಲ್ಲಿ ಬಿಜೆಪಿ ಅಸ್ಸಾಂನ 11 ಲೋಕಸಭಾ ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಅವರಲ್ಲಿ ಆರು ಅಭ್ಯರ್ಥಿಗಳು ಹಾಲಿ ಸಂಸದರಾಗಿದ್ದರೆ ಉಳಿದ ಐವರು ಹೊಸ ಮುಖಗಳಾಗಿವೆ. 2019ರ ಸಾರ್ವತ್ರಿಕ … Continued