ನಟಿ-ಸಂಸದೆ ಹೇಮಮಾಲಿನಿ ವಿರುದ್ಧ ಅವಹೇಳನಕಾರಿ ಹೇಳಿಕೆ : ಸುರ್ಜೆವಾಲಾ ವಿರುದ್ಧ ಪ್ರಕರಣ ದಾಖಲಿಸಿದ ರಾಷ್ಟ್ರೀಯ ಮಹಿಳಾ ಆಯೋಗ

ನವದೆಹಲಿ : ಮಥುರಾ ಕ್ಷೇತ್ರದ ಹಾಲಿ ಬಿಜೆಪಿ ಸಂಸದೆ ಹಾಗೂ ನಟಿ ಹೇಮಮಾಲಿನಿ ವಿರುದ್ಧ ಕಾಂಗ್ರೆಸ್ ಸಂಸದ ರಣದೀಪ ಸಿಂಗ್ ಸುರ್ಜೆವಾಲ ಅವರು ಅವಹೇಳನಕಾರಿ ಹೇಳಿಕೆ ನೀಡಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದ್ದು, ಈ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿದೆ. ಇದೇ ವೇಳೆ ಪ್ರಕರಣ ಸಂಬಂಧ ಹರಿಯಾಣದ ರಾಜ್ಯ … Continued

ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ಸಿಗೆ ಆಘಾತ : ಪಕ್ಷದ ರಾಷ್ಟ್ರೀಯ ವಕ್ತಾರ ಗೌರವ ವಲ್ಲಭ ರಾಜೀನಾಮೆ

ನವದೆಹಲಿ: ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಗೌರವ ವಲ್ಲಭ ಅವರು ಗುರುವಾರ ರಾಜೀನಾಮೆ ಸಲ್ಲಿಸಿದ್ದು, ಲೋಕಸಭೆ ಚುನಾವಣೆಗೆ ಮುನ್ನ ಇದನ್ನು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹೊಡೆತ ಎಂದು ಪರಿಗಣಿಸಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿರುವ ಗೌರವ ವಲ್ಲಭ ಅವರು, ಪಕ್ಷವು ‘ದಿಕ್ಕಿಲ್ಲದೆ’ ಸಾಗುತ್ತಿದೆ ಎಂದು ಕರೆದಿದ್ದಾರೆ ಮತ್ತು ತಮ್ಮ ನಿರ್ಗಮನಕ್ಕೆ ಜಾತಿ ಗಣತಿಯಂತಹ … Continued

ಹಿರಿಯ ನಾಯಕ ಸಂಜಯ ನಿರುಪಮ ಅವರನ್ನು ಪಕ್ಷದಿಂದ ಉಚ್ಚಾಟಿಸಿದ ಕಾಂಗ್ರೆಸ್‌

ನವದೆಹಲಿ: ‘ಅಶಿಸ್ತು’ ಮತ್ತು ‘ಪಕ್ಷ ವಿರೋಧಿ ಹೇಳಿಕೆ’ಗಾಗಿ ಹಿರಿಯ ನಾಯಕ ಸಂಜಯ ನಿರುಪಮ ಅವರನ್ನು ಕಾಂಗ್ರೆಸ್ ಬುಧವಾರ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ. ಅಶಿಸ್ತು ಮತ್ತು ಪಕ್ಷ ವಿರೋಧಿ ಹೇಳಿಕೆಗಳ ದೂರುಗಳನ್ನು ಗಮನಿಸಿ ಕಾಂಗ್ರೆಸ್ ಅಧ್ಯಕ್ಷರು ಸಂಜಯ ನಿರುಪಮ ಅವರನ್ನು ಆರು ವರ್ಷಗಳ ಅವಧಿಗೆ ಪಕ್ಷದಿಂದ ಉಚ್ಚಾಟಿಸಲು ತಕ್ಷಣದಿಂದಲೇ ಜಾರಿಗೆ ಬರುವಂತೆ ಅನುಮೋದಿಸಿದ್ದಾರೆ ಎಂದು … Continued

ಲೋಕಸಭೆ ಚುನಾವಣೆ : ಕರ್ನಾಟಕದಲ್ಲಿ 26 ಕೋಟಿ ರೂ. ನಗದು, 33 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಮದ್ಯ ವಶ

ಬೆಂಗಳೂರು : ಮಾರ್ಚ್ 16 ರಂದು ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ ಕರ್ನಾಟಕದಲ್ಲಿ 33 ಕೋಟಿ ರೂ.ಗೂ ಅಧಿಕ ಮೌಲ್ಯದ 26.68 ಕೋಟಿ ರೂಪಾಯಿ ನಗದು ಮತ್ತು ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಬುಧವಾರ ಬಹಿರಂಗಪಡಿಸಿದೆ. ಇವುಗಳಿಗೆ ಸಂಬಂಧಿಸಿದಂತೆ ಒಟ್ಟು 1,205 ಪ್ರಕರಣಗಳು ದಾಖಲಿಸಲಾಗಿದೆ ಎಂದು ಅದು ಹೇಳಿದೆ. ಕರ್ನಾಟಕದಲ್ಲಿ 28 ಕ್ಷೇತ್ರಗಳನ್ನು … Continued

ಮಂಡ್ಯ : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಸುಮಲತಾ ಘೋಷಣೆ ; ಮುಂದಿನ ನಡೆ ಬಗ್ಗೆ ಹೇಳಿದ್ದೇನು..?

ಮಂಡ್ಯ : ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಿಲ್ಲ ಎಂದು ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಶ ಘೋಷಣೆ ಮಾಡಿದ್ದಾರೆ. ಹಾಗೂ ಇದೇ ವೇಳೆ ಬಿಜೆಪಿ ಸೇರುವುದಾಗಿ ಪ್ರಕಟಿಸಿದ್ದಾರೆ. ಮೈತ್ರಿ ಧರ್ಮ ಪಾಲನೆಗೆ ಮುಂದಾಗಿರುವ ಸುಮಲತಾ ಅಂಬರೀಶ ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಬೆಂಬಲ ಘೋಷಿಸಿದ್ದಾರೆ. ಮಂಡ್ಯದಲ್ಲಿ ಬುಧವಾರ … Continued

ಲೋಕಸಭೆ ಚುನಾವಣೆ : 17 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ನವದೆಹಲಿ: ಕಾಂಗ್ರೆಸ್ ಪಕ್ಷ ಮಂಗಳವಾರ ಲೋಕಸಭೆ ಚುನಾವಣೆಗೆ 17 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಆಂಧ್ರಪ್ರದೇಶದ ಕಾಂಗ್ರೆಸ್‌ ರಾಜ್ಯಾಧ್ಯಕ್ಷೆ ವೈ.ಎಸ್. ಶರ್ಮಿಳಾ ರೆಡ್ಡಿ ಅವರಿಗೆ ಆಂಧ್ರಪ್ರದೇಶದ ಕಡಪಾ ಕ್ಷೇತ್ರದಿಂದ ಟಿಕೆಟ್‌ ನೀಡಲಾಗಿದೆ. ಇತ್ತೀಚಿನ ಪಟ್ಟಿಯಲ್ಲಿ ಒಡಿಶಾದಿಂದ ಎಂಟು ಅಭ್ಯರ್ಥಿಗಳು, ಆಂಧ್ರಪ್ರದೇಶದಿಂದ ಐದು ಅಭ್ಯರ್ಥಿಗಳು, ಬಿಹಾರದಿಂದ ಮೂವರು ಮತ್ತು ಪಶ್ಚಿಮ ಬಂಗಾಳದಿಂದ ಒಬ್ಬ ಅಭ್ಯರ್ಥಿ ಸೇರಿದ್ದಾರೆ. ಬಿಹಾರದಲ್ಲಿ … Continued

ಧಾರವಾಡ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ ; ಶ್ರೀಗಳು ಹೇಳಿದ್ದೇನು..?

ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸುವಂತೆ ಭಕ್ತರು ಒತ್ತಾಯಿಸಿದ್ದು, ಶೀಘ್ರದಲ್ಲಿ I ಈ ಬಗ್ಗೆ ನನ್ನ ನಿರ್ಧಾರ ತಿಳಿಸುತ್ತೇನೆ ಎಂದು ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ತಿಳಿಸಿದರು. ಧಾರವಾಡದಲ್ಲಿ ಮಂಗಳವಾರ ನಡೆದ ಭಕ್ತರ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಗೆ ನಾನೇ ಸ್ಪರ್ಧೆ ಮಾಡುವಂತೆ ಭಕ್ತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯಾವುದೇ ಆಮಿಷಕ್ಕೆ ಒಳಗಾಗುವುದಿಲ್ಲ, … Continued

ಲೋಕಸಭೆ ಚುನಾವಣೆ: ಬಾರಾಮತಿಯಲ್ಲಿ ಇದು ‘ಪವಾರ್’ ನಡುವೆ ಕದನ ; ಸುನೇತ್ರಾ ಪವಾರ್ vs ಸುಪ್ರಿಯಾ ಸುಳೆ

ಮುಂಬೈ : ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಶನಿವಾರ ಅಜಿತ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ವಿವಾದಿತ ಬಾರಾಮತಿ ಲೋಕಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಸುನೇತ್ರಾ ಪವಾರ್ ಅವರು ಅಜಿತ ಪವಾರ್ ಅವರ ಚಿಕ್ಕಪ್ಪ ಶರದ್ ಪವಾರ್ ಅವರ ಪುತ್ರಿ ಸುಪ್ರಿಯಾ ಸುಳೆ ವಿರುದ್ಧ ಸೆಣಸಲಿದ್ದಾರೆ. … Continued

ಲೋಕಸಭೆ ಚುನಾವಣೆ : ಏಪ್ರಿಲ್ 19 ರಿಂದ ಜೂನ್ 1 ರ ನಡುವೆ ಚುನಾವಣಾ ಸಮೀಕ್ಷೆಗಳಿಗೆ ನಿರ್ಬಂಧ

ನವದೆಹಲಿ : ಲೋಕಸಭೆ ಚುನಾವಣೆ 2024 ಮತ್ತು ಆಂಧ್ರಪ್ರದೇಶ, ಅರುಣಾಚಲಪ್ರದೇಶ, ಒಡಿಶಾ ಮತ್ತು ಸಿಕ್ಕಿಂದಲ್ಲಿ ನಿಗದಿಯಾಗಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಚುನಾವಣಾ (ಚುನಾವಣೋತ್ತರ) ಸಮೀಕ್ಷೆಗಳನ್ನು ನಡೆಸುವುದು, ಪ್ರಕಟಿಸುವುದು ಅಥವಾ ಪ್ರಚಾರ ಮಾಡುವುದನ್ನು ನಿಷೇಧಿಸಿ ಚುನಾವಣಾ ಆಯೋಗವು ಶುಕ್ರವಾರ (ಮಾರ್ಚ್ 29) ಅಧಿಸೂಚನೆ ಹೊರಡಿಸಿದೆ. ನಿಷೇಧದ ಅವಧಿಯು ಏಪ್ರಿಲ್ 19 ರಂದು ಬೆಳಿಗ್ಗೆ 7 ರಿಂದ ಪ್ರಾರಂಭವಾಗಲಿದೆ … Continued

ಲೋಕಸಭೆ ಚುನಾವಣೆ | 27 ಸದಸ್ಯರ ಪ್ರಣಾಳಿಕೆ ಸಮಿತಿ ಪ್ರಕಟಿಸಿದ ಬಿಜೆಪಿ ;ರಾಜನಾಥ ಸಿಂಗ್ ಚೇರ್ಮನ್‌ : ಪಟ್ಟಿ ಇಲ್ಲಿದೆ

ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಲೋಕಸಭೆ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆ ಸಮಿತಿಯ ಮುಖ್ಯಸ್ಥರಾಗಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಮಿತಿಯ ಸಂಚಾಲಕರಾಗಿದ್ದಾರೆ ಮತ್ತು ಕೇಂದ್ರ ಸಚಿವ ಪಿಯೂಷ್ ಗೋಯಲ್ ಸಹ ಸಂಚಾಲಕರಾಗಿರುತ್ತಾರೆ. ಅಲ್ಲದೆ, ಪ್ರಣಾಳಿಕೆ ಸಮಿತಿಗೆ 24 ಮಂದಿಯನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ. ಅರ್ಜುನ ಮುಂಡಾ, ಭೂಪೇಂದ್ರ ಯಾದವ, ಅರ್ಜುನರಾಮ ಮೇಘವಾಲ್, … Continued