ಲೋಕಸಭೆ ಚುನಾವಣೆ : 17 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ನವದೆಹಲಿ: ಕಾಂಗ್ರೆಸ್ ಪಕ್ಷ ಮಂಗಳವಾರ ಲೋಕಸಭೆ ಚುನಾವಣೆಗೆ 17 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಆಂಧ್ರಪ್ರದೇಶದ ಕಾಂಗ್ರೆಸ್‌ ರಾಜ್ಯಾಧ್ಯಕ್ಷೆ ವೈ.ಎಸ್. ಶರ್ಮಿಳಾ ರೆಡ್ಡಿ ಅವರಿಗೆ ಆಂಧ್ರಪ್ರದೇಶದ ಕಡಪಾ ಕ್ಷೇತ್ರದಿಂದ ಟಿಕೆಟ್‌ ನೀಡಲಾಗಿದೆ. ಇತ್ತೀಚಿನ ಪಟ್ಟಿಯಲ್ಲಿ ಒಡಿಶಾದಿಂದ ಎಂಟು ಅಭ್ಯರ್ಥಿಗಳು, ಆಂಧ್ರಪ್ರದೇಶದಿಂದ ಐದು ಅಭ್ಯರ್ಥಿಗಳು, ಬಿಹಾರದಿಂದ ಮೂವರು ಮತ್ತು ಪಶ್ಚಿಮ ಬಂಗಾಳದಿಂದ ಒಬ್ಬ ಅಭ್ಯರ್ಥಿ ಸೇರಿದ್ದಾರೆ. ಬಿಹಾರದಲ್ಲಿ … Continued

ಧಾರವಾಡ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ ; ಶ್ರೀಗಳು ಹೇಳಿದ್ದೇನು..?

ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸುವಂತೆ ಭಕ್ತರು ಒತ್ತಾಯಿಸಿದ್ದು, ಶೀಘ್ರದಲ್ಲಿ I ಈ ಬಗ್ಗೆ ನನ್ನ ನಿರ್ಧಾರ ತಿಳಿಸುತ್ತೇನೆ ಎಂದು ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ತಿಳಿಸಿದರು. ಧಾರವಾಡದಲ್ಲಿ ಮಂಗಳವಾರ ನಡೆದ ಭಕ್ತರ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಗೆ ನಾನೇ ಸ್ಪರ್ಧೆ ಮಾಡುವಂತೆ ಭಕ್ತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯಾವುದೇ ಆಮಿಷಕ್ಕೆ ಒಳಗಾಗುವುದಿಲ್ಲ, … Continued

ಲೋಕಸಭೆ ಚುನಾವಣೆ: ಬಾರಾಮತಿಯಲ್ಲಿ ಇದು ‘ಪವಾರ್’ ನಡುವೆ ಕದನ ; ಸುನೇತ್ರಾ ಪವಾರ್ vs ಸುಪ್ರಿಯಾ ಸುಳೆ

ಮುಂಬೈ : ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಶನಿವಾರ ಅಜಿತ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ವಿವಾದಿತ ಬಾರಾಮತಿ ಲೋಕಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಸುನೇತ್ರಾ ಪವಾರ್ ಅವರು ಅಜಿತ ಪವಾರ್ ಅವರ ಚಿಕ್ಕಪ್ಪ ಶರದ್ ಪವಾರ್ ಅವರ ಪುತ್ರಿ ಸುಪ್ರಿಯಾ ಸುಳೆ ವಿರುದ್ಧ ಸೆಣಸಲಿದ್ದಾರೆ. … Continued

ಲೋಕಸಭೆ ಚುನಾವಣೆ : ಏಪ್ರಿಲ್ 19 ರಿಂದ ಜೂನ್ 1 ರ ನಡುವೆ ಚುನಾವಣಾ ಸಮೀಕ್ಷೆಗಳಿಗೆ ನಿರ್ಬಂಧ

ನವದೆಹಲಿ : ಲೋಕಸಭೆ ಚುನಾವಣೆ 2024 ಮತ್ತು ಆಂಧ್ರಪ್ರದೇಶ, ಅರುಣಾಚಲಪ್ರದೇಶ, ಒಡಿಶಾ ಮತ್ತು ಸಿಕ್ಕಿಂದಲ್ಲಿ ನಿಗದಿಯಾಗಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಚುನಾವಣಾ (ಚುನಾವಣೋತ್ತರ) ಸಮೀಕ್ಷೆಗಳನ್ನು ನಡೆಸುವುದು, ಪ್ರಕಟಿಸುವುದು ಅಥವಾ ಪ್ರಚಾರ ಮಾಡುವುದನ್ನು ನಿಷೇಧಿಸಿ ಚುನಾವಣಾ ಆಯೋಗವು ಶುಕ್ರವಾರ (ಮಾರ್ಚ್ 29) ಅಧಿಸೂಚನೆ ಹೊರಡಿಸಿದೆ. ನಿಷೇಧದ ಅವಧಿಯು ಏಪ್ರಿಲ್ 19 ರಂದು ಬೆಳಿಗ್ಗೆ 7 ರಿಂದ ಪ್ರಾರಂಭವಾಗಲಿದೆ … Continued

ಲೋಕಸಭೆ ಚುನಾವಣೆ | 27 ಸದಸ್ಯರ ಪ್ರಣಾಳಿಕೆ ಸಮಿತಿ ಪ್ರಕಟಿಸಿದ ಬಿಜೆಪಿ ;ರಾಜನಾಥ ಸಿಂಗ್ ಚೇರ್ಮನ್‌ : ಪಟ್ಟಿ ಇಲ್ಲಿದೆ

ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಲೋಕಸಭೆ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆ ಸಮಿತಿಯ ಮುಖ್ಯಸ್ಥರಾಗಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಮಿತಿಯ ಸಂಚಾಲಕರಾಗಿದ್ದಾರೆ ಮತ್ತು ಕೇಂದ್ರ ಸಚಿವ ಪಿಯೂಷ್ ಗೋಯಲ್ ಸಹ ಸಂಚಾಲಕರಾಗಿರುತ್ತಾರೆ. ಅಲ್ಲದೆ, ಪ್ರಣಾಳಿಕೆ ಸಮಿತಿಗೆ 24 ಮಂದಿಯನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ. ಅರ್ಜುನ ಮುಂಡಾ, ಭೂಪೇಂದ್ರ ಯಾದವ, ಅರ್ಜುನರಾಮ ಮೇಘವಾಲ್, … Continued

ವಯನಾಡಿನಲ್ಲಿ ರಾಹುಲ್ ಗಾಂಧಿ ವಿರುದ್ಧ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಮೇಲಿವೆ 242 ಪ್ರಕರಣಗಳು…

ಕೊಚ್ಚಿ : ಕೇರಳದ ವಯನಾಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಎನ್‌ಡಿಎ ಅಭ್ಯರ್ಥಿಯೂ ಆಗಿರುವ ಕೇರಳದ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ವಿರುದ್ಧ 242 ಕ್ರಿಮಿನಲ್ ಪ್ರಕರಣಗಳಿವೆ. ಶಾಸನಬದ್ಧ ಅವಶ್ಯಕತೆಗಳ ಭಾಗವಾಗಿ, ಸುರೇಂದ್ರನ್ ಅವರು ಇತ್ತೀಚೆಗೆ ತಮ್ಮ ಪ್ರಕರಣಗಳ ವಿವರಗಳನ್ನು ಪಕ್ಷದ ಮುಖವಾಣಿಯಲ್ಲಿ ಮೂರು ಪೂರ್ಣ ಪುಟಗಳಲ್ಲಿ ಪ್ರಕಟಿಸಿದ್ದರು. ಅದೇ ರೀತಿ ಬಿಜೆಪಿ … Continued

ಶಿಂಧೆ ಬಣದ ಶಿವಸೇನೆ ಸೇರಿದ ಬಾಲಿವುಡ್‌ ನಟ ಗೋವಿಂದ : 14 ವರ್ಷಗಳ ವನವಾಸದ ನಂತರ ರಾಜಕೀಯಕ್ಕೆ

ಮುಂಬೈ: ಲೋಕಸಭೆ ಚುನಾವಣೆಗೆ ಮುನ್ನ ಗುರುವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಸಮ್ಮುಖದಲ್ಲಿ ಬಾಲಿವುಡ್‌ ಜನಪ್ರಿಯ ನಟ ಗೋವಿಂದ ಅವರು ಶಿವಸೇನೆ (ಶಿಂಧೆ ಬಣ) ಸೇರಿದ್ದಾರೆ. ಹಿಂದಿನ ದಿನ ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದ ಗೋವಿಂದ ಅವರು ಇಂದು, ಗುರುವಾರ (ಮಾರ್ಚ್‌ ೨೮) ಬಾಳಾಸಾಹೇಬ ಭವನದಲ್ಲಿ ಶಿವಸೇನೆಗೆ ಸೇರಿದರು. ಹಿಂದೂಸ್ತಾನ್ ಟೈಮ್ಸ್ ವರದಿ ಪ್ರಕಾರ, ಮುಂಬೈ ವಾಯವ್ಯ ಲೋಕಸಭಾ … Continued

ನಿಮ್ಮವನಾಗಿದ್ದೆ…ಯಾವಾಗಲೂ ನಿಮ್ಮವನಾಗಿಯೇ ಇರ್ತೇನೆ..: ಬಿಜೆಪಿ ಟಿಕೆಟ್ ನಿರಾಕರಣೆ ನಂತ್ರ ಪಿಲಿಭಿತ್‌ ಜನತೆಗೆ ʼಹೃದಯಸ್ಪರ್ಶಿʼ ಪತ್ರ ಬರೆದ ವರುಣ ಗಾಂಧಿ

ನವದೆಹಲಿ : ಮುಂಬರುವ ಲೋಕಸಭೆ ಚುನಾವಣೆಗೆ ಪಿಲಿಭಿತ್‌ನಿಂದ ಸ್ಪರ್ಧಿಸಲು ಬಿಜೆಪಿ ತಮಗೆ ಟಿಕೆಟ್ ನಿರಾಕರಿಸಿದ ಕೆಲವೇ ದಿನಗಳಲ್ಲಿ ಪಿಲಿಭಿತ್‌ ಹಾಲಿ ಸಂಸದ ವರುಣ ಗಾಂಧಿ ಅವರು ತಮ್ಮ ಕ್ಷೇತ್ರದ ಜನರಿಗೆ ಭಾವನಾತ್ಮಕ ಬರೆದಿದ್ದಾರೆ. “ನನ್ನ ಅಧಿಕಾರಾವಧಿ ಕೊನೆಗೊಳ್ಳುತ್ತಿದ್ದರೂ … ನನ್ನ ಸಂಬಂಧ (ನಿಮ್ಮೊಂದಿಗೆ) ನನ್ನ ಕೊನೆಯ ಉಸಿರು ಇರುವವರೆಗೂ ಕೊನೆಗೊಳ್ಳುವುದಿಲ್ಲ. ನಾನು ನಿಮ್ಮವನಾಗಿದ್ದೆ…ಯಾವಾಗಲೂ ನಿಮ್ಮವನಾಗಿಯೇ ಇರುತ್ತೇನೆ … Continued

ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ನನ್ನ ಬಳಿ ಹಣವಿಲ್ಲ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ : ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಅಗತ್ಯವಿರುವ ‘ನಿಧಿ’ ನನ್ನ ಬಳಿ ಇಲ್ಲ ಎಂದು ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಬಿಜೆಪಿ ನೀಡಿದ್ದ ಪ್ರಸ್ತಾಪವನ್ನು ನಿರಾಕರಿಸಿದ್ದೇನೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಆಂಧ್ರಪ್ರದೇಶ ಅಥವಾ ತಮಿಳುನಾಡಿನಿಂದ ಸ್ಪರ್ಧಿಸುವಂತೆ ನನಗೆ ಆಯ್ಕೆ ನೀಡಿದ್ದರು ಎಂದು ಅವರು ಹೇಳಿದರು. “ಒಂದು … Continued

ಎಎಪಿಗೆ ಆಘಾತ: ಪಕ್ಷದ ಏಕೈಕ ಲೋಕಸಭಾ ಸದಸ್ಯ ಬಿಜೆಪಿಗೆ ಸೇರ್ಪಡೆ

ನವದೆಹಲಿ: ಆಮ್‌ ಆದಮಿ ಪಕ್ಷಕ್ಕೆ ಆಘಾತದಲ್ಲಿ ಪಂಜಾಬಿನ ಆಮ್ ಆದ್ಮಿ ಪಕ್ಷದ ಏಕೈಕ ಲೋಕಸಭಾ ಸದಸ್ಯ ಸುಶೀಲಕುಮಾರ ರಿಂಕು ಅವರು ಪಕ್ಷದ ಶಾಸಕ ಶೀತಲ ಅಂಗುರಲ್ ಅವರೊಂದಿಗೆ ಬುಧವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಅಂಗುರಲ್ ಅವರು ಜಲಂಧರ್ ಪಶ್ಚಿಮ ಕ್ಷೇತ್ರದಿಂದ ರಾಜ್ಯ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ಜಲಂಧರ ಸಂಸದ ಸುಶೀಲಕುಮಾರ ರಿಂಕು ಅವರೊಂದಿಗೆ ಶಾಸಕರು ಕೇಂದ್ರ … Continued