ಲೋಕಸಭೆ ಚುನಾವಣೆ ಮೊದಲ ಹಂತದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ

ನವದೆಹಲಿ : ಏಪ್ರಿಲ್ 19 ರಂದು ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ ಮತದಾನ ನಡೆಯಲಿರುವ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರಿಕೆ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಬುಧವಾರ ಅಧಿಸೂಚನೆ ಹೊರಡಿಸಲಾಗಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಜಮ್ಮು … Continued

ವೀಡಿಯೊ…| ಚುನಾವಣಾ ರ‍್ಯಾಲಿಯಲ್ಲಿ ಬಿಜೆಪಿ ನಾಯಕನ ನೆನೆದು ಕಣ್ಣೀರಿಟ್ಟ ಪ್ರಧಾನಿ ಮೋದಿ ; ಭಾಷಣ ಕೆಲಕಾಲ ಸ್ಥಗಿತ

ಸೇಲಂ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತಮಿಳುನಾಡಿನ ಸೇಲಂನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಿದ್ದಾಗ 2013 ರಲ್ಲಿ ತಮಿಳುನಾಡಿನ ಸೇಲಂನಲ್ಲಿ ಹತ್ಯೆಗೀಡಾದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ‘ಆಡಿಟರ್‌’ ವಿ ರಮೇಶ ಅವರನ್ನು ನೆನಪಿಸಿಕೊಂಡು ಕಣ್ಣೀರು ಹಾಕಿದ ಪ್ರಸಂಗ ನಡೆಯಿತು. “ಇಂದು, ನಾನು ಆಡಿಟರ್ ರಮೇಶ ಅವರನ್ನು ನೆನಪಿಸಿಕೊಳ್ಳುತ್ತೇನೆ” ಎಂದು ಹೇಳಿದ ಪ್ರಧಾನಿ ಮೋದಿ ಭಾವುಕರಾಗಿ ಒಂದು … Continued

ಲೋಕಸಭೆ ಚುನಾವಣೆ: ತಮಿಳುನಾಡಿನಲ್ಲಿ ಎನ್‌ಡಿಎ ಸೀಟು ಹಂಚಿಕೆ ಅಂತಿಮ ; ಪಿಎಂಕೆಗೆ 10 ಸ್ಥಾನಗಳು

ಚೆನ್ನೈ: ಮುಂಬರುವ ಲೋಕಸಭೆ ಚುನಾವಣೆಗೆ ತಮಿಳುನಾಡಿನ ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ಪಕ್ಷದ ಜೊತೆ ಬಿಜೆಪಿ ಮಂಗಳವಾರ ತನ್ನ ಚುನಾವಣಾ ಪೂರ್ವ ಮೈತ್ರಿಯನ್ನು ಅಂತಿಮಗೊಳಿಸಿದೆ. ಮೈತ್ರಿಯ ಸೀಟು ಹಂಚಿಕೆಯ ಸೂತ್ರದ ಪ್ರಕಾರ, ಪಿಎಂಕೆಗೆ ತಮಿಳುನಾಡಿನಲ್ಲಿ 10 ಲೋಕಸಭಾ ಸ್ಥಾನಗಳನ್ನು ನೀಡಲಾಗಿದೆ.. ಪಿಎಂಕೆ ಪಕ್ಷವು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್‌ಡಿಎ)ಕ್ಕೆ ಸೇರ್ಪಡೆಗೊಳ್ಳುವ ಮತ್ತು ರಾಜ್ಯದಲ್ಲಿ ಸಂಸತ್ತಿನ … Continued

ಲೋಕಸಭೆ ಚುನಾವಣೆ : ಬಿಹಾರದಲ್ಲಿ ಎನ್‌ ಡಿ ಎ ಸೀಟು ಹಂಚಿಕೆ ಅಂತಿಮ ; ಈ ಬಾರಿ ಬಿಜೆಪಿಯೇ ದೊಡ್ಡಣ್ಣ…ಆ ಸ್ಥಾನ ಬಿಟ್ಟುಕೊಟ್ಟ ಜೆಡಿಯು…!

ನವದೆಹಲಿ: ಎನ್‌ಡಿಎ ಸೋಮವಾರ ಸಂಜೆ ಬಿಹಾರದಲ್ಲಿ ತನ್ನ ಸೀಟು ಹಂಚಿಕೆ ಸೂತ್ರವನ್ನು ಔಪಚಾರಿಕವಾಗಿ ಪ್ರಕಟಿಸಿದ್ದು, ರಾಜ್ಯದಲ್ಲಿ ಬಿಜೆಪಿ 17 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಅದನ್ನು ‘ದೊಡ್ಡಣ್ಣ’ನ ಸ್ಥಾನದಲ್ಲಿ ಇರಿಸಿದೆ. ಬಿಹಾರದಲ್ಲಿ ಈ ಹಿಂದೆ ಮೈತ್ರಿಕೂಟದಲ್ಲಿ ದೊಡ್ಡಣ್ಣನ ಸ್ಥಾನ ಪಡೆದಿದ್ದ ಮುಖ್ಯಮಂತ್ರಿ ನಿತೀಶಕುಮಾರ ಅವರ ಜೆಡಿಯು ಪಕ್ಷವು 16 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಚಿರಾಗ ಪಾಸ್ವಾನ್ ಅವರ ಲೋಕ ಜನಶಕ್ತಿ … Continued

ತೆಲಂಗಾಣ ರಾಜ್ಯಪಾಲರ ಹುದ್ದೆಗೆ ತಮಿಳಿಸೈ ಸೌಂದರರಾಜನ್ ರಾಜೀನಾಮೆ

ಹೈದರಾಬಾದ್‌ : ಲೋಕಸಭೆ ಚುನಾವಣೆಗೆ ಮುನ್ನ ತೆಲಂಗಾಣ ರಾಜ್ಯಪಾಲ ಮತ್ತು ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ತಮಿಳಿಸೈ ಸೌಂದರರಾಜನ್ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ. ಈ ಬೆಳವಣಿಗೆಯನ್ನು ಪುದುಚೇರಿ ರಾಜಭವನ ಖಚಿತಪಡಿಸಿದೆ. ವರದಿಗಳ ಪ್ರಕಾರ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ. “ತೆಲಂಗಾಣದ ಗೌರವಾನ್ವಿತ ರಾಜ್ಯಪಾಲರು ಮತ್ತು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಡಾ ತಮಿಳಿಸೈ ಸೌಂದರರಾಜನ್ … Continued

ತೆಲಂಗಾಣ ಚುನಾವಣೆಗೆ ಮುನ್ನ ಬಿಆರ್‌ಎಸ್ ಗೆ ಸಂಸದ ಡಾ.ರಂಜಿತ್ ರೆಡ್ಡಿ ರಾಜೀನಾಮೆ: ಕಾಂಗ್ರೆಸ್ಸಿಗೆ ಸೇರ್ಪಡೆ

ಹೈದರಾಬಾದ್‌ : ಭಾರತ್ ರಾಷ್ಟ್ರ ಸಮಿತಿಗೆ (ಬಿಆರ್‌ಎಸ್) ಮತ್ತೊಂದು ಹಿನ್ನಡೆಯಾಗಿದ್ದು, ಸಂಸದ (ಎಂಪಿ) ರಂಜಿತ್ ರೆಡ್ಡಿ ಅವರು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಹಾಗೂ ಕಾಂಗ್ರೆಸ್ಸಿಗೆ ಸೇರ್ಪಡೆಯಾಗಿದ್ದಾರೆ. ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆಗೊಂಡರು. ಬಿಆರ್‌ಎಸ್‌ಗೆ ರಾಜೀನಾಮೆ ನೀಡಲು ರಾಜಕೀಯ ಸನ್ನಿವೇಶಗಳು ಕಾರಣ ಎಂದು ಹೇಳಿದ್ದಾರೆ. X ನಲ್ಲಿ ಅವರು, “ವಿಕಸನಗೊಳ್ಳುತ್ತಿರುವ ರಾಜಕೀಯ ಪರಿಸ್ಥಿತಿಗಳಿಂದಾಗಿ, … Continued

ಲೋಕಸಭೆ ಚುನಾವಣೆ : ಎನ್‌ ಡಿಎ ಮೈತ್ರಿಕೂಟ 400 ಸ್ಥಾನಗಳ ಗಡಿ ದಾಟಲಿದೆ ಎಂದು ಭವಿಷ್ಯ ನುಡಿದ ನ್ಯೂಸ್‌ 18 ಒಪಿನಿಯನ್‌ ಪೋಲ್‌

ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ನೇತೃತ್ವದ ನ್ಯಾಷನಲ್ ಡೆಮಾಕ್ರಟಿಕ್ ಅಲೈಯನ್ಸ್ (ಎನ್‌ಡಿಎ) ಮುಂಬರುವ ಲೋಕಸಭೆ ಚುನಾವಣೆಯಲ್ಲಿ “400 ಸ್ಥಾನಗಳನ್ನು ಗೆಲ್ಲುವ ಹಾದಿಯಲ್ಲಿದೆ ಎಂದು ನೆಟ್‌ವರ್ಕ್ 18ರ ಮೆಗಾ ಒಪಿನಿಯನ್ ಪೋಲ್ ತಿಳಿಸಿದೆ. 543 ಸದಸ್ಯ ಬಲದ ಲೋಕಸಭೆಯಲ್ಲಿ ಎನ್‌ಡಿಎ 411 ಸ್ಥಾನಗಳನ್ನು ಗೆಲ್ಲಲಿದೆ ಎಂದು ಸಮೀಕ್ಷೆ ಅಂದಾಜಿಸಿದ್ದು, ಬಿಜೆಪಿ ಏಕಾಂಗಿಯಾಗಿ 350 ಸ್ಥಾನಗಳನ್ನು ಗೆಲ್ಲಬಹುದು … Continued

ನಾಳೆ ಲೋಕಸಭೆ ಚುನಾವಣೆಯ ದಿನಾಂಕದ ಘೋಷಣೆ

ನವದೆಹಲಿ : 2024ರ ಲೋಕಸಭೆ ಚುನಾವಣೆಯ ದಿನಾಂಕವನ್ನು ಶನಿವಾರ (ಮಾರ್ಚ್‌ 16) ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುವುದು ಎಂದು ಭಾರತೀಯ ಚುನಾವಣಾ ಆಯೋಗ ಶುಕ್ರವಾರ ಮಧ್ಯಾಹ್ನ ತಿಳಿಸಿದೆ. ಚುನಾವಣಾ ಆಯೋಗವು ಸಂಕ್ಷಿಪ್ತ ಹೇಳಿಕೆಯನ್ನು ಎಕ್ಸ್ (ಹಿಂದೆ ಟ್ವಿಟರ್)ನಲ್ಲಿ ಪೋಸ್ಟ್ ಮಾಡಿದ್ದು, ನಾಲ್ಕು ರಾಜ್ಯಗಳ ಅಸೆಂಬ್ಲಿ ಚುನಾವಣೆಗಳ ದಿನಾಂಕಗಳನ್ನು ಅದೇ ಸಮಯದಲ್ಲಿ ನಡೆಸಲು ನಿಗದಿಪಡಿಸಲಾಗಿದೆ ಎಂದು ಚುನಾವಣಾ … Continued

ಆಂಧ್ರ ಚುನಾವಣೆ : ನಟ ಪವನ ಕಲ್ಯಾಣ ವಿರುದ್ಧ ಸ್ಪರ್ಧಿಸುವುದಾಗಿ ಘೋಷಿಸಿದ ಸಿನಿ ನಿರ್ದೇಶಕ ರಾಮಗೋಪಾಲ ವರ್ಮಾ…!

ಹೈದರಾಬಾದ್‌ : ಚಿತ್ರ ನಿರ್ಮಾಪಕ ರಾಮಗೋಪಾಲ ವರ್ಮಾ ರಾಜಕೀಯಕ್ಕೆ ಪ್ರವೇಶ ಮಾಡುವುದಾಗಿ ಘೋಷಿಸಿದ್ದಾರೆ. ಮುಂಬರುವ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪಿಠಾಪುರಂ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಪ್ರಕಟಿಸಿದ್ದಾರೆ. ಈ ಬಗ್ಗೆ ಅವರು X ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಇದೇ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಾಗಿ ನಟ ಪವನ ಕಲ್ಯಾಣ ಸಹ ಪ್ರಕಟಿಸಿದ್ದು, ಅದರ ಬೆನ್ನಿಗೇ ರಾಮಗೋಪಾಲ ವರ್ಮಾ ಅವರು … Continued

ಲೋಕಸಭೆ ಚುನಾವಣೆ: ಬಿಡುಗಡೆಯಾದ ಬಿಜೆಪಿ 267 ಬಿಜೆಪಿಯ ಅಭ್ಯರ್ಥಿಗಳ ಪಟ್ಟಿಯಲ್ಲಿ 24%ರಷ್ಟು ಹಾಲಿ ಸಂಸದರಿಗೆ ಕೈತಪ್ಪಿದ ಟಿಕೆಟ್‌…!

ನವದೆಹಲಿ: ಬಿಜೆಪಿ ಇದುವರೆಗೆ ಬಿಡುಗಡೆ ಮಾಡಿರುವ ಎರಡು ಪಟ್ಟಿಗಳಲ್ಲಿ ಲೋಕಸಭೆ ಚುನಾವಣೆಗೆ ಪಕ್ಷವು 267 ಅಭ್ಯರ್ಥಿಗಳನ್ನು ಹೆಸರಿಸಿದೆ. ಅದರಲ್ಲಿ ಸುಮಾರು 24%ರಷ್ಟು ಹಾಲಿ ಸಂಸದರಿಗೆ ಟಿಕೆಟ್‌ ನೀಡಿಲ್ಲ ಎಂದು ವರದಿಯೊಂದು ಹೇಳಿದೆ. ಅವರ ಕ್ಷೇತ್ರದಲ್ಲಿ ಸಂಭಾವ್ಯ ವಿರೋಧಿ ಅಲೆಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯತಂತ್ರವನ್ನು ವಿನ್ಯಾಸಗೊಳಿಸಲಾಗಿದೆ ಮತ್ತು ಪಕ್ಷವು ತಳಮಟ್ಟದಿಂದ ಪಡೆದ ಪ್ರತಿಕ್ರಿಯೆಯನ್ನು ಆಧರಿಸಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು … Continued