ಲೋಕಸಭೆ ಚುನಾವಣೆ ಫಲಿತಾಂಶ : ಸ್ಪರ್ಧಿಸಿದ್ದ 12 ಮಾಜಿ ಸಿಎಂಗಳಲ್ಲಿ ಗೆದ್ದವರು ಯಾರು..? ಸೋತವರು ಯಾರು..?

ನವದೆಹಲಿ : ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ಹಲವಾರು ಮಾಜಿ ಮುಖ್ಯಮಂತ್ರಿಗಳು ಸ್ಪರ್ಧಿಸಿದ್ದರು. ಪ್ರಮುಖ ಸ್ಪರ್ಧಿಗಳಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಚರಂಜಿತ್ ಸಿಂಗ್ ಚನ್ನಿ, ಮನೋಹರ್ ಲಾಲ್ ಖಟ್ಟರ್, ಬಸವರಾಜ ಬೊಮ್ಮಾಯಿ, ಭೂಪೇಶ ಬಾಘೇಲ್, ಜಗದೀಶ ಶೆಟ್ಟರ್, ಅಖಿಲೇಶ ಯಾದವ್, ಶಿವರಾಜ್ ಸಿಂಗ್ ಚೌಹಾಣ್, ಎಚ್‌.ಡಿ.ಕುಮಾರಸ್ವಾಮಿ ಮತ್ತು ದಿಗ್ವಿಜಯ್ ಸಿಂಗ್ … Continued

ಲೋಕಸಭೆ ಚುನಾವಣೆ ಫಲಿತಾಂಶ : ಪಕ್ಷವಾರು ಗೆದ್ದ ಸ್ಥಾನಗಳ ವಿವರ….

ನವದೆಹಲಿ: ಭಾರತೀಯ ಚುನಾವಣಾ ಆಯೋಗ (ECI) ಎಲ್ಲಾ 543 ಲೋಕಸಭಾ ಕ್ಷೇತ್ರಗಳಿಗೆ ಫಲಿತಾಂಶವನ್ನು ಪ್ರಕಟಿಸಿದೆ. ಇದರಲ್ಲಿ ಬಿಜೆಪಿ 240 ಸ್ಥಾನಗಳನ್ನು ಮತ್ತು ಕಾಂಗ್ರೆಸ್ 99 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿಯ ಸೂರತ್ ಅಭ್ಯರ್ಥಿ ಮುಖೇಶ ದಲಾಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರಿಂದ 542 ಸ್ಥಾನಗಳಿಗೆ ಮಾತ್ರ ಮತಗಳನ್ನು ಎಣಿಕೆ ಮಾಡಲಾಗಿದೆ. ಕೆಲವು ಹಿಂದಿ ರಾಜ್ಯಗಳಲ್ಲಿ ಪಕ್ಷದ ಹೀನಾಯ ಪ್ರದರ್ಶನದ … Continued

ಎಕ್ಸಿಟ್ ಪೋಲ್‌ ಗಳ ಅಂದಾಜು ಹುಸಿ ; ಮಹಾಪತನ ಕಂಡ ಷೇರು ಮಾರುಕಟ್ಟೆ : ₹31 ಲಕ್ಷ ಕೋಟಿ ಕಳೆದುಕೊಂಡ ಹೂಡಿಕೆದಾರರು

ನವದೆಹಲಿ : ಭಾರತೀಯ ಷೇರು ಮಾರುಕಟ್ಟೆಗಳು ಮತ ಎಣಿಕೆ ದಿನವಾ ಮಂಗಳವಾರ (ಜೂನ್‌ 4) 4,000 ಪಾಯಿಂಟ್‌ಗಳ ಕುಸಿತ ಕಂಡಿವೆ, ಹಿಂದಿನ ಅವಧಿಯಲ್ಲಿ ತೀವ್ರ ರ್ಯಾಲಿ ನಂತರ, ಆರಂಭಿಕ ಚುನಾವಣಾ ಫಲಿತಾಂಶಗಳು ಪ್ರಧಾನಿ ನರೇಂದ್ರ ಮೋದಿ ಅವರ ಭಾರತೀಯ ಜನತಾ ಪಾರ್ಟಿ ನೇತೃತ್ವದ ಮೈತ್ರಿಕೂಟ 272 ಕ್ಕೂ ಕಡಿಮೆ ಸ್ಥಾನಗಳು ಸಿಗುತ್ತಿವೆ ಎಂದು ತೋರಿಸುತ್ತಿದ್ದಂತೆಯೇ ಶೇರು … Continued

ನಿತೀಶಕುಮಾರ ಎನ್‌ಡಿಎಗೆ ಬೆಂಬಲ ನೀಡ್ತಾರಾ? ಜೆಡಿಯು ಹೇಳಿದ್ದೇನು..?

ನವದೆಹಲಿ: ಲೋಕಸಭೆ ಚುನಾವಣೆ 2024ರ ಮತ ಎಣಿಕೆಯಲ್ಲಿ ಎನ್‌ಡಿಎ 300 ಸ್ಥಾನಗಳನ್ನು ಗೆಲ್ಲುವ ಸಮೀಪದಲ್ಲಿದೆ. ಇಂಡಿಯಾ ಮೈತ್ರಿಕೂಟವು 230ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇದರ ಬೆನ್ನಲ್ಲೇ ಬಿಹಾರದ ಮುಖ್ಯಮಂತ್ರಿ ನಿತೀಶಕುಮಾರ ಅವರೊಂದಿಗೆ ಇಂಡಿಯಾ ಮೈತ್ರಿಕೂಟದ ನಾಯಕ ಶರದ್ ಪವಾರ ಅವರು ಸಂಪರ್ಕದಲ್ಲಿದ್ದಾರೆ ಎಂಬ ವರದಿಗಳ ಹೊರಬಿದ್ದಿವೆ. ಕೇಂದ್ರದಲ್ಲಿ ಸರ್ಕಾರ ರಚಿಸಲು ನಿತೀಶಕುಮಾರ ಅವರ ಜೆಡಿಯು … Continued

ಏಕಾಧಿಪತ್ಯ ರಾಜಕಾರಣದಿಂದ ಮತ್ತೆ ಸಮ್ಮಿಶ್ರ ಧರ್ಮಕ್ಕೆ: ಹೊಸ ದಾರಿಯಲ್ಲಿ ಬಿಜೆಪಿ, ಪುನರುತ್ಥಾನದತ್ತ ಇಂಡಿಯಾ ಒಕ್ಕೂಟ

ನವದೆಹಲಿ : ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಇಂದು, ಮಂಗಳವಾರ ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ 300 ಸ್ಥಾನಗಳ ಗಡಿ ದಾಟಲು ಹೆಣಗಾಡುತ್ತಿರುವಾಗ, ಬಿಜೆಪಿಗೆ ಸ್ವಂತ ಬಲದಿಂದ ಬಹುಮತದ 272 ಅನ್ನು ತಲುಪುವುದು ಕಷ್ಟಕರವಾಗಿದೆ. ಅದು ಮುಂದಿನ ಸರ್ಕಾರವನ್ನು ರಚಿಸಿದರೆ, ಅದು ಅದರ ಮಿತ್ರಪಕ್ಷಗಳ ಸಹಾಯದಿಂದ. ಮುಖ್ಯವಾಗಿ ಚಂದ್ರಬಾಬು ನಾಯ್ಡು ಅವರ ಟಿಡಿಪಿ, ಪ್ರಸ್ತುತ … Continued

ವೀಡಿಯೊ..| ವೇದಿಕೆ ಮೇಲೆಯೇ ಮಂಡಿಯೂರಿ ಮಹಿಳೆ ಪಾದಕ್ಕೆ ನಮಸ್ಕರಿಸಿದ ಪ್ರಧಾನಿ ಮೋದಿ ; ಈ ಮಹಿಳೆ ಯಾರು..?

ಪ್ರಧಾನಿ ನರೇಂದ್ರ ಮೋದಿ (Narendra Modi) ಒಡಿಶಾದಲ್ಲಿ ಲೋಕಸಭಾ ಚುನಾವಣಾ(Lok Sabha Election) ಪ್ರಚಾರದ ಸಂದರ್ಭದಲ್ಲಿ ವೇದಿಕೆ ಮೇಲೆ ಮಹಿಳೆಯೊಬ್ಬರಿಗೆ ಮಂಡಿಯೂರಿ ನಮಸ್ಕರಿಸಿದ ವೀಡಿಯೊ ಈಗ ಎಲ್ಲೆಡೆ ವೈರಲ್ ಆಗಿದೆ. ಒಡಿಶಾದಲ್ಲಿ ನಡೆದ ಚುನಾವಣಾ ಸಭೆಯಲ್ಲಿ 66 ವರ್ಷದ ಮಹಿಳಾ ಕುಶಲಕರ್ಮಿ ಕಮಲಾ ಮೊಹರಾನಾ ಅವರ ಪಾದಗಳನ್ನು ಮುಟ್ಟಿ ಮೋದಿ ನಮಸ್ಕರಿಸಿದ್ದಾರೆ. ಮೋದಿ ಮಂಡಿಯೂರಿ ನಮಸ್ಕರಿಸಿದ … Continued

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಎಷ್ಟು ಸ್ಥಾನ ಗೆಲ್ಲುತ್ತದೆ ಎಂದು ಭವಿಷ್ಯ ನುಡಿದ ಅಮೆರಿಕದ ರಾಜಕೀಯ ವಿಜ್ಞಾನಿ; ಅವರ ಪ್ರಕಾರ ಬಿಜೆಪಿ ಗೆಲ್ಲುವ ಸ್ಥಾನಗಳೆಷ್ಟು ಗೊತ್ತೆ..?

ಮುಂಬೈ: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 305 (+/- 10) ಸ್ಥಾನಗಳನ್ನು ಗೆಲ್ಲಲಿದೆ ಎಂದು ಅಮೆರಿಕದ ರಾಜಕೀಯ ವಿಜ್ಞಾನಿ ಇಯಾನ್ ಬ್ರೆಮ್ಮರ್ ಮಂಗಳವಾರ ಹೇಳಿದ್ದಾರೆ. ರಿಸ್ಕ್‌ ಮತ್ತು ಸಂಶೋಧನಾ ಸಲಹಾ ಸಂಸ್ಥೆಯಾದ ಯುರೇಷಿಯಾ ಗ್ರೂಪ್‌ನ ಸಂಸ್ಥಾಪಕರಾದ ಬ್ರೆಮ್ಮರ್ ಅವರು ಎನ್‌ಡಿಟಿವಿ ಪ್ರಾಫಿಟ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ಜಾಗತಿಕ ರಾಜಕೀಯ ದೃಷ್ಟಿಕೋನದಿಂದ ಭಾರತೀಯ ಸಾರ್ವತ್ರಿಕ ಚುನಾವಣೆಯು “ಅಚಲವಾಗಿದೆ … Continued

ವೀಡಿಯೊ..: ಮುಸ್ಲಿಂ ಮೀಸಲಾತಿ ಬಗ್ಗೆ ಕಾಂಗ್ರೆಸ್‌ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ ಮೋದಿ : ರಾಹುಲ್ ಗಾಂಧಿ ವೈರಲ್ ವೀಡಿಯೊ ಉಲ್ಲೇಖ

ಪಶ್ಚಿಮ ಬಂಗಾಳದ ಜಾರ್‌ಗ್ರಾಮದಲ್ಲಿ ಸೋಮವಾರ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಮುಸ್ಲಿಮರಿಗೆ ಮೀಸಲಾತಿ ನೀಡುವ ಸಲುವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಕಸಿದುಕೊಳ್ಳಲು ಕಾಂಗ್ರೆಸ್ ಉದ್ದೇಶಿಸಿದೆ ಎಂದು ಆರೋಪಿಸಿದರು. ಕಾಂಗ್ರೆಸ್‌ ಪಕ್ಷವು ಇನ್ನೂ ಮುಸ್ಲಿಂ ಲೀಗ್‌ನ ಚಿಂತನೆ ಹೊಂದಿರುವ ಕೋಮುವಾದಿ ಪಕ್ಷವಾಗಿದೆ ಎಂದು ಪ್ರಧಾನಿ ಆರೋಪಿಸಿದರು. “ನನ್ನ ಇತ್ತೀಚಿನ ಸಂದರ್ಶನಗಳಲ್ಲಿ … Continued

ವೀಡಿಯೊ..| ಒಂದೇ ಮತಗಟ್ಟೆಯಲ್ಲಿ 8 ಸಲ ಮತದಾನ ಮಾಡಿದ ಯುವಕ ; ವೀಡಿಯೋ ವೈರಲ್ ಆದ ನಂತರ ಬಂಧನ

ಮೂರನೇ ಹಂತದ ಮತದಾನದ ವೇಳೆ ಉತ್ತರಪ್ರದೇಶದ ಇಟಾಹ್‌ನಲ್ಲಿ ಯುವಕನೊಬ್ಬ ಒಂದೇ ಬೂತ್ ನಲ್ಲಿ 8 ಬಾರಿ ಮತದಾನ ಮಾಡಿದ್ದಾನೆ. ತಾನು ಪ್ರತಿ ಬಾರಿ ಮತದಾನ ಮಾಡಿದ್ದನ್ನೂ ವೀಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ವೀಡಿಯೊ ವೈರಲ್ ಆದ ನಂತರ ಆತನನ್ನು ಬಂಧಿಸಲಾಗಿದೆ. ಅಲ್ಲದೆ, ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳು ಮತಗಟ್ಟೆಯ ಎಲ್ಲ ಸಿಬ್ಬಂದಿಯನ್ನೂ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. … Continued

ಕಾಂಗ್ರೆಸ್‌ ನಾಯಕ ಅಧೀರ್‌ ಹೇಳಿಕೆ ತಿರಸ್ಕರಿಸಿದ ನಂತರ ಪಶ್ಚಿಮ ಬಂಗಾಳ ಕಾಂಗ್ರೆಸ್ ಕಚೇರಿ ಮುಂದಿನ ಮಲ್ಲಿಕಾರ್ಜುನ ಖರ್ಗೆ ಪೋಸ್ಟರ್‌ಗಳಿಗೆ ಮಸಿ

ಕೋಲ್ಕತ್ತಾ : ಇಂಡಿಯಾ ಮೈತ್ರಿಕೂಟಕ್ಕೆ ಮಮತಾ ಬ್ಯಾನರ್ಜಿ ಅವರು ಸೇರುವ ಬಗ್ಗೆ ಅಧೀರ್ ರಂಜನ್ ಚೌಧರಿ ಅವರು ನಿರ್ಧಾರ ತೆಗೆದುಕೊಳ್ಳುವವರಲ್ಲ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ವಿರೋಧಿಸಿ ಖರ್ಗೆಯವರ ಚಿತ್ರಕ್ಕೆ ಕೋಲ್ಕತ್ತಾದಲ್ಲಿ ಮಸಿ ಬಳಿಯಲಾಗಿದೆ. ಕೋಲ್ಕತ್ತಾದಲ್ಲಿನ ಕಾಂಗ್ರೆಸ್ ರಾಜ್ಯ ಕಚೇರಿಯ ಮುಂಭಾಗದಲ್ಲಿದ್ದ ಹಲವು ಪೋಸ್ಟರ್ ಗಳಲ್ಲಿನ ಖರ್ಗೆ ಭಾವಚಿತ್ರಕ್ಕೆ ಮಸಿ ಬಳಿಯಲಾಗಿದೆ. … Continued